ಬೀದರ್: ಕಳೆದ ಕೆಲ ದಿನಗಳಿಂದ ಗಡಿಜಿಲ್ಲೆ ಬೀದರ್ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನೂರಾರು ಎಕರೆ ಬೆಳೆ ನೀರುಪಾಲಾಗಿದೆ.ಬೀದರ್ ತಾಲೂಕಿನ ಕೊಳ್ಳಾರ ಮತ್ತು ಅಣದೂರು ಗ್ರಾಮದ ಸುತ್ತಮುತ್ತ ನೂರಾರು ಎಕರೆಯಲ್ಲಿ ಬೆಳೆದಿದ್ದ ಸೋಯಾ, ಉದ್ದು, ತೊಗರಿ, ಕಬ್ಬುಸೇರಿದಂತೆವಿವಿಧಬೆಳೆಗಳುಸಂಪೂರ್ಣವಾಗಿಜಲಾವೃತಗೊಂಡಿವೆ.ಜಮೀನಿನಲ್ಲಿ 3 ರಿಂದ 4 ಅಡಿ ನೀರು ನಿಂತಿದ್ದು, ಇಡೀ ಜಮೀನು ಅಕ್ಷರಶಃ ಕೆರೆಯಂತಾಗಿವೆ. ಪರಿಣಾಮ ನೀರಿನಲ್ಲಿ ಮುಳುಗಡೆಯಾದ ಬೆಳೆಗಳು ಕೊಳೆತು ಹೋಗಿವೆ. ಒಂದು ವಾರದ ಹಿಂದೆಯೇ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿತ್ತು. ಈವರೆಗೂ ಮಳೆ ಕಡಿಮೆಯಾಗದೇ ಜಿಲ್ಲೆಯ ಜನರು ಪರದಾಡುವಂತಾಗಿದೆ.ಸಾಲ ಮಾಡಿ, ಸಾವಿರಾರು ರೂಪಾಯಿ ಹಣ ಖರ್ಚು ಮಾಡಿ ಬಿತ್ತನೆ ಮಾಡಿದ್ದ ಬೆಳೆ, ಮಳೆಯಿಂದಾಗಿ ಸಂಪೂರ್ಣ ನಾಶವಾಗಿದೆ. ಇದರಿಂದ ರೈತರು ಕಣ್ಣೀರು ಹಾಕುತ್ತಿದ್ದು, ಯಾವ ಶಾಸಕರು, ಅಧಿಕಾರಿಗಳು ನಮಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ಇನ್ಶೂರೆನ್ಸ್ ಕಟ್ಟಿದ್ರು ಯಾವುದೇ ಪ್ರಯೋಜನವಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







