ಕಲಬುರಗಿ: ಮದುವೆ (Marriage) ವಿಚಾರಕ್ಕೆ ಮನನೊಂದು ಕೆರೆಗೆ ಹಾರಿದ ಮಗಳನ್ನು ರಕ್ಷಣೆ ಮಾಡಲು ಹೋದ ತಾಯಿ ಸಹ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಆಳಂದ ತಾಲೂಕಿನ ತಡಕಲ್ ಗ್ರಾಮದಲ್ಲಿ ನಡೆದಿದೆ.ಮಧುಮತಿ ಹಂಗರಗಿ (22), ತಾಯಿ ಜಗದೇವಿ ಹಂಗರಗಿ (45) ಮೃತ ದುರ್ದೈವಿಗಳು. ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವತಿಯ ಮದುವೆ ವಿಚಾರವನ್ನು ಮನೆಮಂದಿ ಪ್ರಸ್ತಾಪಿಸಿದ್ದರು. ವರನ ಹುಡುಕಾಟವೂ ನಡೆದಿತ್ತು ಎಂದು ಹೇಳಲಾಗಿದೆಸೆಪ್ಟೆಂಬರ್ 14ರ ರಾತ್ರಿ ಮದುವೆ ವಿಷಯದಲ್ಲಿ ಗಲಾಟೆ ನಡೆದಿತ್ತು. ಇದರಿಂದ ಮನನೊಂದ ಯುವತಿ ರಾತ್ರಿ 9ರ ಸುಮಾರಿಗೆ ಮನೆಯಿಂದ ಹೊರ ಹೋಗಿದ್ದಳು. ಆಕೆಯನ್ನು ಹುಡುಕಿಕೊಂಡು ತಾಯಿ ಕೂಡ ಹೋಗಿದ್ದರು. ತಡರಾತ್ರಿಯಾದರೂ ತಾಯಿ, ಮಗಳು ಇಬ್ಬರೂ ಮನೆಗೆ ಮರಳದೆ ಇದ್ದುದ್ದರಿಂದ ಕುಟುಂಬಸ್ಥರು ಆತಂಕಗೊಂಡು ಎಲ್ಲೆಡೆ ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ.ಬುಧವಾರ ಬೆಳಗ್ಗೆ ದೂರದ ಜಮೀನಿನ ಕೆರೆಯಲ್ಲಿ ಇಬ್ಬರ ಶವಗಳು ಪತ್ತೆಯಾಗಿದೆ. ಮಗಳ ಕೆರೆಗೆ ಹಾರಿರುವುದನ್ನು ಕಂಡ ತಾಯಿ, ಆಕೆಯ ರಕ್ಷಣೆಗೆ ಹೋಗಿ ತಾಯಿಯೂ ಮೃತಪಟ್ಟಿರಬೇಕು ಎಂದು ಶಂಕೆ ವ್ಯಕ್ತವಾಗಿದೆ.ಶರಣಬಸಪ್ಪಾ ಹಂಗರಗಿ ನೀಡಿದ ದೂರು ಆಧಾರದಲ್ಲಿ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







