ಚಿತ್ರದುರ್ಗ: ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಗಣತಿಯನ್ನು ರಾಜ್ಯದ 7 ಕೋಟಿ ಜನರ ಸಮೀಕ್ಷೆಯಾಗುವವರೆಗೂ ನಡೆಸಬೇಕು, ಇದಕ್ಕೆ ಯಾವುದೇ ರೀತಿಯಲ್ಲಿ ಕಾಲ ಮಿತಿಯನ್ನು ಹಾಕುವುದು ಬೇಡ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಒತ್ತಾಯಿಸಿದ್ದಾರೆ.ಚಿತ್ರದುರ್ಗ ನಗರದ ಹೊರವಲಯದ ಭೋವಿ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಾತಿಗಣತಿ ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ನೋಡಿಕೊಳ್ಳಬೇಕಿದೆ.ರಾಜ್ಯ ಸರ್ಕಾರ ಸಾಮಾಜಿಕ, ಶೈಕ್ಷಣಿಕ ಗಣತಿಯನ್ನು ರಾಜ್ಯದಲ್ಲಿ ನಡೆಸುತ್ತಿರುವುದನ್ನು ಸ್ವಾಗತ ಮಾಡುತ್ತೇವೆ. ಈ ಸಮೀಕ್ಷೆ ರಾಜ್ಯದಲ್ಲಿ ವಿವಿಧ ಜಾತಿಗಳ ಪ್ರಗತಿಗೆ ಕಾರಣವಾಗಿದೆ. ಈ ಸಮೀಕ್ಷೆಯನ್ನು ಯಾರೂ ನಿರ್ಲಕ್ಷ್ಯ ಮಾಡಬಾರದು, ಎಲ್ಲರು ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ನೀಡುವುದರ ಮೂಲಕ ನಿಮ್ಮ ನಿಮ್ಮ ಜಾತಿಯನ್ನು ಗುರುತಿಸಿಕೊಳ್ಳಬೇಕಿದೆ, ರಾಜ್ಯದ ಕೆಲವು ಪ್ರದೇಶಗಳಲ್ಲಿ ಕೆಲಸಕ್ಕಾಗಿ ನಮ್ಮ ರಾಜ್ಯವನ್ನು ಬಿಟ್ಟು ಬೇರೆ ಕಡೆಗಳಲ್ಲಿ ಹಲವಾರು ಜನ ವಲಸೆ ಹೋಗಿದ್ದಾರೆ. ಇಂತಹವರನ್ನು ಈ ಗಣತಿಯಲ್ಲಿ ಒಳಪಡಿಸಬೇಕಿದೆ ಎಂದರು.ಲಕ್ಷಾಂತರ ಮಂದಿ ಕಟ್ಟಡ ಕೆಲಸಕ್ಕಾಗಿ ಬೆಂಗಳೂರು ಸೇರಿದಂತೆ ಮಹಾ ನಗರಗಳಿಗೆ ಹೋಗಿದ್ದಾರೆ. ಉತ್ತರ ಕರ್ನಾಟಕದಿಂದ ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಹೋಗಿದ್ದಾರೆ ಕೊಪ್ಪಳ, ಬಳ್ಳಾರಿ ಸೇರಿದಂತೆ ನಾನಾ ಜಿಲ್ಲೆಗಳಿಂದ ಜಿಲ್ಲೆಯನ್ನು ಬಿಟ್ಟು ಹೊರಗಡೆ ಹೋಗಿರುತ್ತಾರೆ ಇಂತಹರನ್ನು ಸಮೀಕ್ಷೆ ಮಾಡಲು ಪ್ರತ್ಯೇಕವಾದ ತಂಡವನ್ನು ನೇಮಕ ಮಾಡುವಂತೆ ಸರ್ಕಾರವನ್ನು ಸ್ವಾಮೀಜಿ ಆಗ್ರಹಿಸಿದರು. ಮೈಸೂರಿನ ದಸರಾ ಹಬ್ಬ ನಾಡಹಬ್ಬವಾಗಿ ಪರಿಣಿಮಿಸಿದೆ. ಈ ಸಮಯದಲ್ಲಿ ಊರಿನಿಂದ ಹೊರಗೆ ಹೋದವರು ಸಹ ವಾಪಸ್ ಬರುತ್ತಾರೆ. ಇದೇ ಉತ್ತರ ಕರ್ನಾಟಕದಲ್ಲಿ ದೀಪಾವಳಿ ಹಬ್ಬ ನಾಡಹಬ್ಬವಾಗಿದೆ. ಈ ಸಮಯದಲ್ಲಿ ಊರಿನಿಂದ ಹೊರಗಡೆ ಹೋದವರು ವಾಪಾಸ್ ಬರುತ್ತಾರೆ ಇಂತಹ ಸಮಯದಲ್ಲಿ ಸರ್ಕಾರ ಮಾಡುವ ಸಮೀಕ್ಷೆ ಸರಿಯಿದೆ. ಇದನ್ನು ಸೂಕ್ಷ್ಮವಾಗಿ ಪರಿಗಣಿಸಿ ಸಮೀಕ್ಷೆಯನ್ನು ಮಾಡಬೇಕಿದೆ. ಈ ಹಿನ್ನಲೆಯಲ್ಲಿ ಸಮೀಕ್ಷೆಯನ್ನು ಮಾಡುವವರಿಗೆ ಕಾಲ ಮಿತಿಯನ್ನು ಹಾಕದೇ ಗಣತಿಯಲ್ಲಿ ರಾಜ್ಯದ 7 ಕೋಟಿ ಜನ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಕಾಲವನ್ನು ನೀಡಬೇಕಿದೆ. ರಾಜ್ಯದ ಎಲ್ಲಾ ಜನತೆ ಸಮೀಕ್ಷೆಯಲ್ಲಿ ಭಾಗವಹಿಸಿದ್ದಾರೆ ಎಂದು ಖಾತರಿಯಾದ ಮೇಲೆ ಸಮೀಕ್ಷೆಯನ್ನು ಪೂರ್ಣ ಮಾಡುವಂತೆ ಹೇಳಿದರು. 2011ರ ಗಣತಿಯಲ್ಲಿ ಪ.ಜಾತಿ ಸಮಾಜದ ಜನಸಂಖ್ಯೆ 1.08 ಕೋಟಿ ಇತ್ತು ಆದರೆ ನಾಗ ಮೋಹನ್ ದಾಸ್ ಆಯೋಗದ ವರದಿಯಲ್ಲಿ ಪರಿಶಿಷ್ಟ ಜಾತಿಯವರ ಸಮೀಕ್ಷೆಯನ್ನು ಮಾಡುವಾಗ 1.05 ಕೋಟಿ ಎಂದು ತೋರಿಸಿದ್ದಾರೆ, ಇದು ಸರಿಯಾದ ಸಮೀಕ್ಷೆಯಲ್ಲ ಹತ್ತು ವರ್ಷದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರು ಕನಿಷ್ಠ 25 ಲಕ್ಷ ಹಾಗೂ ಭೋವಿ ಸಮುದಾಯ ಕನಿಷ್ಠ 3
ಲಕ್ಷದಿಂದ 5 ಲಕ್ಷದವರೆಗೆ ಜನಸಂಖ್ಯೆಯಷ್ಟದಾರೂ ಏರಿಕೆಯಾಗಿರುತ್ತದೆ. ಆದರೆ, ಆಯೋಗವೂ ಕಡಿಮೆ ಜನಸಂಖ್ಯೆಯನ್ನು
ತೋರಿಸಿದೆ. ಆದರೆ, ಈ ಬಾರಿಯ ಸಮೀಕ್ಷೆಯಲ್ಲಿ ಈ ರೀತಿಯಾಗದಂತೆ ನೋಡಿಕೊಳ್ಳಬೇಕಿದೆ. ನಮ್ಮ ಸಮುದಾಯದವರೆಲ್ಲರೂ
ಸಹ ಜಾತಿ ಭೋವಿ ಅಥವಾ ವಡ್ಡರ ಎಂದು ಬರೆಸುವುದರ ಮೂಲಕ ನಮ್ಮ ಸಂಘಟನೆಯನ್ನು ಪ್ರದರ್ಶನ ಮಾಡಬೇಕಿದೆ, ನಮ್ಮ
ಸಮುದಾಯ ಅರೆ ಅಲೆಮಾರಿಯಾಗಿದ್ದು ಕೆಲಸದ ನಿಮ್ಮಿತ್ತ ಊರನ್ನು ಬಿಟ್ಟು ಹೋಗಿರುತ್ತಾರೆ. ಈ ಸಮಯದಲ್ಲಿ ಊರಿನಲ್ಲಿ ಇರುವುದರ
ಮೂಲಕ ಗಣತಿದಾರರು ಬಂದಾಗ ಸರಿಯಾದ ರೀತಿಯಲ್ಲಿ ಮಾಹಿತಿಯನ್ನು ನೀಡುವುದರ ಮೂಲಕ ಭೋವಿ ಸಮುದಾಯದ
ಸರಿಯಾದ ರೀತಿಯಲ್ಲಿ ಸಂಖ್ಯೆಯನ್ನು ನಮೂದಿಸಬೇಕಿದೆ ಎಂದು ಸಮುದಾಯವರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಭೋವಿ ಸಂಘದ ಕಾರ್ಯದರ್ಶಿ ಹೆಚ್.ಲಕ್ಷ್ಮಣ್, ಭೋವಿ ಗುರುಪೀಠದ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ
ಗೌನಹಳ್ಳಿ ಗೋವಿಂದಪ್ಪ ಹಾಜರಿದ್ದರು.
ಬಾಕ್ಸ್
48 ಕ್ರೈಸ್ತ ಜಾತಿಗಳಲ್ಲಿ 33 ಜಾತಿಗಳನ್ನು ಕೈ ಬಿಡಲು ಆಯೋಗದ ನಿರ್ಧಾರವಾಗಿದೆ. ವೊಡ್ಡ ಕ್ರಿಶ್ಚಿಯನ್ ಹಾಗೂ ಪರಿಶಿಷ್ಟ
ಜಾತಿಗಳನ್ನು ಕ್ರೈಸ್ತ ಪಟ್ಟಿಯಿಂದ ಕೈಬಿಡಲು ಶ್ರೀಗಳ ಅಗ್ರಹ.
ಬಾಕ್ಸ್
ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಅಡಿಯಲ್ಲಿ ಹಿಂದೂ ಬಿಲ್ ಕೋಡ್ ನಲ್ಲಿ ಬರುವ ಭೋವಿ ಜನಾಂಗವನ್ನು
ಧರ್ಮ-ಹಿಂದೂ, ಜಾತಿ- ಭೋವಿ, ಉಪಜಾತಿ-ವಡ್ಡರ ಎಂದು ಬರೆಯಿಸಿ, ಜಾತಿಯ ಪರ್ಯಾಯ ಪದಗಳನ್ನು ಕೋಡ್ ನಂ ಬಿ.23.2
ರಿಂದ ಬಿ.23.10 ರವರಿಗೆ ನಮೂದಿಸಬೇಕು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







