Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಯೂರಿಯ ಗೊಬ್ಬರಕ್ಕಾಗಿ ಹೊಳಲ್ಕೆರೆ ತಾಲೂಕಿನಲ್ಲಿ ರೈತರ ಪ್ರತಿಭಟನೆ

ಸಿಎಂ ಹುದ್ದೆಗೆ ಮಲ್ಲಿಕಾರ್ಜುನ ಖರ್ಗೆ ಅವರೇ ಸೂಕ್ತ…ಹೀಗೆಂದ ಸಚಿವ ಯಾರು..?

ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಬೆಂಗಳೂರಿನಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ಸಂಚಾರಿ ಆರೋಗ್ಯ ಘಟಕ ವಾಹನಗಳಿಗೆ ಚಾಲನೆ
ಪ್ರಮುಖ ಸುದ್ದಿ

ಸಂಚಾರಿ ಆರೋಗ್ಯ ಘಟಕ ವಾಹನಗಳಿಗೆ ಚಾಲನೆ

ಸಂಚಾರಿ ಆರೋಗ್ಯ ಕ್ಲಿನಿಕ್‍ಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ
Times of bayaluseemeBy Times of bayaluseemeMay 9, 2025No Comments1 Min Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಚಿತ್ರದುರ್ಗ: ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಒದಗಿಸುವ ಸಂಚಾರಿ ಆರೋಗ್ಯ ಘಟಕದ ಎರಡು ವಾಹನಗಳಿಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಗುರುವಾರ ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಸಂಚಾರಿ ಆರೋಗ್ಯ ಕ್ಲಿನಿಕ್‍ಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಕಾರ್ಮಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕ್ರಮವಹಿಸಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯ ಕಟ್ಟಡ ನಿರ್ಮಾಣ ಕಾರ್ಮಿಕರನ್ನು ಅವರಿರುವ ಸ್ಥಳಕ್ಕೆ ತೆರಳಿ ಉಚಿತವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸುವುದು, ಚಿಕಿತ್ಸೆ ಹಾಗೂ ಸಲಹೆ ಸೇರಿದಂತೆ ಮೊದಲಾದ ಸೇವೆ ಒದಗಿಸಲು ಸಂಚಾರಿ ಆರೋಗ್ಯ ಕ್ಲಿನಿಕ್‍ಗಳು ಕಾರ್ಯಾರಂಭಗೊಂಡಿದ್ದು, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಅವರ ಅವಲಂಬಿತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಮಿಕ ಅಧಿಕಾರಿ ಅನಿಲ ಬಾಲಚಂದ್ರ ಬಗಟಿ ಮಾತನಾಡಿ, ಎರಡು ತಾಲ್ಲೂಕುಗಳಿಗೆ ಒಂದರಂತೆ ಜಿಲ್ಲೆಗೆ ಮೂರು ಸಂಚಾರಿ ಆರೋಗ್ಯ ಘಟಕ ವಾಹನಗಳು ಮಂಜೂರಾಗಿದ್ದು, ಸದ್ಯದ ಮಟ್ಟಿಗೆ ಎರಡು ವಾಹನಗಳು ಕಾರ್ಯನಿರ್ವಹಿಸಲಿವೆ ಎಂದು ಹೇಳಿದರು.

ಸಂಚಾರಿ ಆರೋಗ್ಯ ಘಟಕವು ರೂಟ್ ಮ್ಯಾಪ್‍ನಂತೆ ನಿಗಧಿತ ಸ್ಥಳಗಳಲ್ಲಿ ಕನಿಷ್ಟ 4 ಗಂಟೆ ಕಾರ್ಯನಿರ್ವಹಿಸಲಿದೆ. ಸಂಚಾರಿ ಆರೋಗ್ಯ ಘಟಕದಲ್ಲಿ ವೈದ್ಯರು ಒಳಗೊಂಡಂತೆ, ಒಟ್ಟು ಆರು ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. ಈ ಘಟಕದಲ್ಲಿ ವೈದ್ಯಕೀಯ ಉಪಕರಣಗಳು, ಪ್ರಯೋಗಾಲಯಗಳು ಹಾಗೂ ವೈದ್ಯಕೀಯ ಬಳಕೆಯ ವಸ್ತುಗಳು ಲಭ್ಯವಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕಾರ್ಮಿಕ ನಿರೀಕ್ಷಕರಾದ ರಾಜಣ್ಣ, ಕುಸುಮ, ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್ ಸೇರಿದಂತೆ ಕಾರ್ಮಿಕ ಸಂಘಟನೆಗಳ ಮುಖಂಡರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
Bayaluseeme News chitradurga News ಶಾಸಕ ಟಿ.ರಘುಮೂರ್ತಿ ಸಂಚಾರಿ ಆರೋಗ್ಯ ಸಚಿವ ಡಿ.ಸುಧಾಕರ್
Follow on Google News Follow on Instagram
Share. Facebook Twitter Telegram WhatsApp
Next Article ಒಳ ಮೀಸಲಾತಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಮಾದಿಗರು ಪಾಲ್ಗೊಳ್ಳಿ: ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್
Times of bayaluseeme
  • Website

Related Posts

ಸಿಎಂ ಹುದ್ದೆಗೆ ಮಲ್ಲಿಕಾರ್ಜುನ ಖರ್ಗೆ ಅವರೇ ಸೂಕ್ತ…ಹೀಗೆಂದ ಸಚಿವ ಯಾರು..?

July 29, 2025

ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಬೆಂಗಳೂರಿನಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ

July 29, 2025

ಒಂದೇ ಸಿನಿಮಾದಲ್ಲಿ ನಟಿಸಿ ಕೋಟಿ ಕೋಟಿ ಪಡೆದು ಚಿತ್ರರಂಗಕ್ಕೆ ಗುಡ್ ಬೈ ಹೇಳಿದ ನಟಿ..!

July 29, 2025
Add A Comment
Leave A Reply Cancel Reply

Advertisement
Latest Posts

ಯೂರಿಯ ಗೊಬ್ಬರಕ್ಕಾಗಿ ಹೊಳಲ್ಕೆರೆ ತಾಲೂಕಿನಲ್ಲಿ ರೈತರ ಪ್ರತಿಭಟನೆ

ಸಿಎಂ ಹುದ್ದೆಗೆ ಮಲ್ಲಿಕಾರ್ಜುನ ಖರ್ಗೆ ಅವರೇ ಸೂಕ್ತ…ಹೀಗೆಂದ ಸಚಿವ ಯಾರು..?

ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಬೆಂಗಳೂರಿನಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ಒಂದೇ ಸಿನಿಮಾದಲ್ಲಿ ನಟಿಸಿ ಕೋಟಿ ಕೋಟಿ ಪಡೆದು ಚಿತ್ರರಂಗಕ್ಕೆ ಗುಡ್ ಬೈ ಹೇಳಿದ ನಟಿ..!

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.