Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಕಲಾಸಿಪಾಳ್ಯ ಬಸ್ ನಿಲ್ದಾಣದ ಹೆಸರು ಬದಲಾವಣೆ; ಹೊಸ ಹೆಸರು ಏನು ಗೊತ್ತಾ..?

ಇನ್ನು ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಡಿಸಿಎಂ ಡಿಕೆಶಿ ಶಿವಕುಮಾರ್ ಗೆ ಬಾಂಬ್ ಬೆದರಿಕೆ ಸಂದೇಶ..!

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ
ಪ್ರಮುಖ ಸುದ್ದಿ

ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ನ್ಯಾಷನಲ್ ಹೆರಾಲ್ಡ್ ಗೆ ₹25 ಲಕ್ಷ ಕೊಟ್ಟಿದ್ದೇನೆ
Times of bayaluseemeBy Times of bayaluseemeMay 23, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
dk shivakumar and kumaraswamy
Share
Facebook Twitter LinkedIn Pinterest Email Copy Link
ವಿಜಯಪುರ (ಕೊಲ್ಹಾರ): ಮೇ 23: “ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿಡಿಕಾರಿದರು.
ವಿಜಯಪುರ ಜಿಲ್ಲೆ ಕೊಲ್ಹಾರದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.
ಚಿನ್ನ ಕಳ್ಳಸಾಗಣೆಯ ರನ್ಯಾ ರಾವ್ ಪ್ರಕರಣದ ಮಾಹಿತಿಯನ್ನು ನೀವೇ ನೀಡಿದ್ದೀರ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಒಬ್ಬ ಮೆಂಟಲ್. ಅವರ ಮಾನಸಿಕ ಆರೋಗ್ಯ ಹದಗೆಟ್ಟಿರ ಬೇಕು. ತಲೆ ಕೆಟ್ಟು ಹೋಗಿದೆ” ಎಂದು ಜರಿದರು.
ರಾಮನಗರದ ನಾಮಫಲಕಕ್ಕೆ ಚಿನ್ನದ ತಗಡು ಹೊಡೆಯಲಾಗುತ್ತದೆಯೇ ಎನ್ನುವ ಕುಮಾರಸ್ವಾಮಿ ಅವರ ಸರಣಿ ಟೀಕೆಗಳ ಕುರಿತು ಕೇಳಿದಾಗ, “ಕುಮಾರಸ್ವಾಮಿ ರಾಜಕೀಯ ಮಾಡಲು ರಾಮನಗರಕ್ಕೆ ಏಕೆ ಬಂದರು? ಹಾಸನದಲ್ಲಿಯೇ ಏಕೆ ರಾಜಕೀಯ ಮಾಡಲಿಲ್ಲ. ಮೊದಲು ಎಚ್.ಡಿ.ಕುಮಾರಸ್ವಾಮಿ ಎನ್ನುವ ಹೆಸರಿನಲ್ಲಿರುವ ಅವರ ಊರಿನ ಹೆಸರು ಹಾಗೂ ತಂದೆಯ ಹೆಸರನ್ನು ಏಕೆ ಇನ್ನು ಇಟ್ಟುಕೊಂಡಿದ್ದಾರೆ. ಮೊದಲು ಅದನ್ನು ಬದಲಾವಣೆ ಮಾಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.
“ನಾವು ಬೆಂಗಳೂರು ಜಿಲ್ಲೆಯವರು. ಒಂದೊಂದು ಊರಿನ ಹೆಸರಿಗೆ ತನ್ನದೇ ಆದ ಇತಿಹಾಸವಿರುತ್ತದೆ. ಮದ್ರಾಸ್ ಅನ್ನು ಮತ್ತೆ ಏಕೆ ಚೆನ್ನೈ ಎಂದು ಕರೆದರು‌. ಗುಲ್ಬರ್ಗಾವನ್ನು ಕಲಬುರ್ಗಿ ಎಂದು ಮರುನಾಮಕರಣ ಮಾಡಲಾಗಿದೆ. ನಮಗೂ ನಮ್ಮದೇ ಆದಂತಹ ಆಸೆ ಇರುತ್ತದೆ. ಅವರಿಗೆ ಏನು ತೊಂದರೆಯಾಗಿದೆ?” ಎಂದು ಪ್ರಶ್ನಿಸಿದರು.
ರಿಯಲ್ ಎಸ್ಟೇಟ್ ಗಾಗಿ ಹೆಸರು ಬದಲಾವಣೆ ಮಾಡಲಾಗಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಹೌದು, ನಮ್ಮ ಹಳ್ಳಿಯ ಜನ ಉದ್ದಾರವಾಗಬೇಕು. ಎಲ್ಲರಿಗೂ ಉದ್ಯೋಗ ಸಿಗಬೇಕು. ನಮ್ಮ ಜನರ ಆಸ್ತಿ ಮೌಲ್ಯ ಜಾಸ್ತಿಯಾಗಬೇಕು. ಪ್ರತಿಯೊಬ್ಬ ರೈತನಿಗೂ ಒಳ್ಳೆಯದಾಗಬೇಕು. ಹೊರಗಡೆ ದೇಶದಿಂದ ಜನರು ಬಂದು ಬಂಡವಾಳ ಹೂಡಿಕೆ ಮಾಡಬೇಕು. ಅಭಿವೃದ್ಧಿ ಆಗಬೇಕು ಎಂಬುದು ನಮ್ಮ ಆಸೆ” ಎಂದರು.
“ಸಂಸತ್ ಕ್ಷೇತ್ರವನ್ನು ಮೊದಲು ಕನಕಪುರ ಎಂದು ಕರೆಯಲಾಗುತ್ತಿತ್ತು. ಅದನ್ನು ಬೆಂಗಳೂರು ಗ್ರಾಮಾಂತರ ಎಂದು ಆನಂತರ ಏಕೆ ಮಾಡಿದರು? ರಾಮನಗರದ ಹೆಸರು ಬದಲಾವಣೆ ಮಾಡುತ್ತಿಲ್ಲ. ಜತೆಗೆ ರಾಮನಗರವೇ ಜಿಲ್ಲಾ ಕೇಂದ್ರವಾಗಿರುತ್ತದೆ. ನಾವು ಕೇವಲ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

 ನ್ಯಾಷನಲ್ ಹೆರಾಲ್ಡ್ ಗೆ ರಾಜಾರೋಷವಾಗಿ 25 ಲಕ್ಷ‌ ಕೊಟ್ಟಿದ್ದೇವೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಿಮ್ಮ ಹೆಸರು ಡಿ.ಕೆ.ಸುರೇಶ್ ಅವರ ಹಾಗೂ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರ ಹೆಸರು ಇರುವುದರ ಬಗ್ಗೆ ಕೇಳಿದಾಗ, “ನಮ್ಮ ಪಕ್ಷ ನಡೆಸುವಂತಹ ಪತ್ರಿಕೆ‌. ಅದಕ್ಕೆ ನಾನು ಹಾಗೂ ಸುರೇಶ್ 25 ಲಕ್ಷ ದುಡ್ಡು ಕೊಟ್ಟಿದ್ದೇವೆ. ‌ನಮ್ಮ ಟ್ರಸ್ಟ್‌ ನಿಂದಲೂ ದೇಣಿಗೆ ನೀಡಿದ್ದೇವೆ” ಎಂದರು.
ದೇಣಿಗೆ ನೀಡಿರುವುದರಿಂದ ನಿಮಗೆ ತೊಂದರೆಯಾಗುತ್ತದೆಯೇ ಎಂದಾಗ, “ನಾವು ದುಡಿದಂತಹ ಆಸ್ತಿಯಿಂದ ರಾಜರೋಷವಾಗಿ ಹಣ ನೀಡಿದ್ದೇವೆ. ನಾವು ಕದ್ದುಮುಚ್ಚಿ ಹಣ ನೀಡಿಲ್ಲ” ಎಂದು ಹೇಳಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
dk shivakumar kumaraswamy
Follow on Google News Follow on Instagram
Share. Facebook Twitter Telegram WhatsApp
Previous Articleಕಾಂಗ್ರೆಸ್‌ನ ಗೂಂಡಾಗಳಿಂದ ದಾಳಿ, ಇದರ ಹಿಂದೆ ಸಚಿವ ಪ್ರಿಯಾಂಕ್‌ ಖರ್ಗೆ ಇದ್ದಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ
Next Article ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣ: ರಾಜ್ಯ ಸರ್ಕಾರಕ್ಕೆ ತೀರ್ಮಾನಿಸುವ ಅಧಿಕಾರವಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
Times of bayaluseeme
  • Website

Related Posts

ಕಲಾಸಿಪಾಳ್ಯ ಬಸ್ ನಿಲ್ದಾಣದ ಹೆಸರು ಬದಲಾವಣೆ; ಹೊಸ ಹೆಸರು ಏನು ಗೊತ್ತಾ..?

July 28, 2025

ಇನ್ನು ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

July 28, 2025

ಡಿಸಿಎಂ ಡಿಕೆಶಿ ಶಿವಕುಮಾರ್ ಗೆ ಬಾಂಬ್ ಬೆದರಿಕೆ ಸಂದೇಶ..!

July 28, 2025
Add A Comment
Leave A Reply Cancel Reply

Advertisement
Latest Posts

ಕಲಾಸಿಪಾಳ್ಯ ಬಸ್ ನಿಲ್ದಾಣದ ಹೆಸರು ಬದಲಾವಣೆ; ಹೊಸ ಹೆಸರು ಏನು ಗೊತ್ತಾ..?

ಇನ್ನು ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಡಿಸಿಎಂ ಡಿಕೆಶಿ ಶಿವಕುಮಾರ್ ಗೆ ಬಾಂಬ್ ಬೆದರಿಕೆ ಸಂದೇಶ..!

ಬಾದಾಮಿ ತಿನ್ನುವುದರಿಂದ ಚರ್ಮ, ಕೂದಲು ಮತ್ತು ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನ..? ಇಲ್ಲಿದೆ ಮಾಹಿತಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.