Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋದು ಸರಿಯಲ್ಲ – ಆರ್‌.ಅಶೋಕ್

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಧಿಡೀರ್ ಅಮೇರಿಕಗೆ ಹೊರಟಿದ್ದೇಕೆ ಗೊತ್ತೆ..? ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಧಿಡೀರ್ ಅಮೇರಿಕಗೆ ಹೊರಟಿದ್ದೇಕೆ ಗೊತ್ತೆ..?

ನಗರಸಭೆ ನೂತನ ಉಪಾಧ್ಯಕ್ಷೆಯಾಗಿ ಶಕೀಲಾ ಬಾನು ಆಯ್ಕೆ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ಪ್ರತಿ ಮಹಿಳೆಯೂ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕು: ಹಿರಿಯ ವಕೀಲೆ ಡಿ.ಕೆ.ಶೀಲಾ
ಪ್ರಮುಖ ಸುದ್ದಿ

ಪ್ರತಿ ಮಹಿಳೆಯೂ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕು: ಹಿರಿಯ ವಕೀಲೆ ಡಿ.ಕೆ.ಶೀಲಾ

Times of bayaluseemeBy Times of bayaluseemeJune 2, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Pratibhotsava samarambha
Share
Facebook Twitter LinkedIn Pinterest Email Copy Link
ಚಿತ್ರದುರ್ಗ ಜೂ.02: ಸಮಾಜದಲ್ಲಿ ಪ್ರತಿ ಮಹಿಳೆಯು ತಮ್ಮದೇಯಾದ ಹಣಕಾಸಿನ ಸ್ವಾತಂತ್ರ್ಯ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕು ಎಂದು ಹಿರಿಯ ವಕೀಲೆ ಡಿ.ಕೆ.ಶೀಲಾ ಹೇಳಿದರು.
ನಗರದ ಸ್ಟೇಡಿಯಂ ರಸ್ತೆಯ ಜಿ.ಜಿ.ಸಮುದಾಯ ಭವನದಲ್ಲಿ ಸೋಮವಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಐಕ್ಯೂಎಸಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಪ್ರತಿಭೋತ್ಸವ ಸಮಾರಂಭ”ದಲ್ಲಿ ಅವರು ಮಾತನಾಡಿದರು.
ನಮ್ಮಿಂದ ಹಾಗೂ ನಮ್ಮ ಕುಟುಂಬದಿಂದಲೇ ಸಮಾನತೆ ಶುರುವಾಗಬೇಕು. ಪೋಷಕರು ಗಂಡು, ಹೆಣ್ಣು ಇಬ್ಬರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಬೇಕು. ನಮ್ಮನ್ನು ನಾವು ಬದಲಾಯಿಸಿಕೊಳ್ಳುವ ಮೂಲಕ ಬದಲಾವಣೆ ಪ್ರಾರಂಭವಾಗಬೇಕು ಎಂದು ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ ಮಾತನಾಡಿ, ವಿದ್ಯಾರ್ಥಿಗಳು ತಂದೆ-ತಾಯಿ ಹಾಗೂ ಕುಟುಂಬಕ್ಕೆ ಉತ್ತಮ ಹೆಸರು ತರುವ ಮೂಲಕ ಸ್ವಾವಲಂಬಿಗಳಾಗಿ, ಆರ್ಥಿಕ ಸ್ವಾತಂತ್ರ್ಯದಲ್ಲಿ ಯಶಸ್ವಿಗಳಾಗಬೇಕು. ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಕಂಡ ಮಹಿಳೆಯರು ನೀವಾಗಬೇಕು ಎಂದು ತಿಳಿಸಿದ ಅವರು, ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದರು.
ಮಹಿಳಾ ಕಾಲೇಜಿನ ನೂತನ ಕಟ್ಟಡಕ್ಕೆ ಕೆಎಂಇಆರ್‍ಸಿಯಿಂದ ರೂ.25 ಕೋಟಿಗೆ ಆಡಳಿತಾತ್ಮಕ ಅನುಮೋದನೆ ದೊರೆತ್ತಿದ್ದು, ಟೆಂಡರ್ ಪ್ರಕ್ರಿಯೆಗೆ ಆಯುಕ್ತರಿಗೆ ಅನುಮೋದನೆಗೆ ಕಳಿಸಲಾಗಿದೆ. ಸರ್ಕಾರದಿಂದ ವಿದ್ಯಾರ್ಥಿಗಳ ಮೂಲ ಸೌಕರ್ಯಕ್ಕೆ ರೂ.2 ಕೋಟಿ ಹಾಗೂ ವಿಶ್ರಾಂತಿ ಕೊಠಡಿಗೆ ರೂ.1 ಕೋಟಿ ಮಂಜೂರಾಗಿದೆ. ಇನ್ನೂ ಕೇವಲವೇ ದಿನಗಳಲ್ಲಿ ಅತ್ಯಂತ ಉತ್ತಮ ಕಾಲೇಜ್ ಆಗಿ ಮಹಿಳಾ ಕಾಲೇಜು ಮಾರ್ಪಾಡಲಾಗಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ “ಮಹಿಳಾ ಸಿರಿ” ವಾರ್ಷಿಕ ಸಂಚಿಕೆ ಬಿಡುಗಡೆ ಹಾಗೂ ಬಿ.ಕಾಂ ಪದವಿಯಲ್ಲಿ ಉನ್ನತ ಶ್ರೇಣಿ ಪಡೆದ ಎಂ.ಜೆ.ಸಿಂಧು ಹಾಗೂ ಬಿಎ ಪದವಿಯಲ್ಲಿ ಉನ್ನತ ಶ್ರೇಣಿ ಪಡೆದ ಎಂ.ಎಸ್.ದೀಪಾ ಅವರಿಗೆ ತಲಾ ಮೂರು ಸಾವಿರ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. 40 ಜನ ಉನ್ನತ ಶ್ರೇಣಿ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಲಾ 1 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು. ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ತೋರಿದ 180 ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
ಕಾರ್ಯಕ್ರದಲ್ಲಿ ಮಹಿಳಾ ಸಿರಿ ವಾರ್ಷಿಕ ಸಂಚಿಕೆ ಸಂಪಾದಕ ಡಾ.ಡಿ.ಓ.ಸಿದ್ದಪ್ಪ, ಸಾಂಸ್ಕøತಿಕ ಸಮಿತಿ ಸಂಚಾಲಕ ಡಾ.ಶಿವಣ್ಣ, ಅಧ್ಯಾಪಕರ ಸಂಘ ಕಾರ್ಯದರ್ಶಿ ಡಾ.ಪಿ.ಎನ್.ಮಧುಸೂದನ, ಐಕ್ಯೂಎಸಿ ಸಂಚಾಲಕ ಹಲಸಂದಿ ಸತೀಶ, ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಹೆಚ್.ಶಕುಂತಲ, ಎನ್‍ಎಸ್‍ಎಸ್ ಕಾರ್ಯಕ್ರಮಾಧಿಕಾರಿ ಎಂ.ಗಿರೀಶ್, ಕ್ರೀಡಾ ಸಮಿತಿ ಸಂಚಾಲಕ ಆರ್.ಶಿವಪ್ರಸಾದ್, ಪತ್ರಾಂಕಿತ ವ್ಯವಸ್ಥಾಪಕ ಆರ್.ವೆಂಕಟೇಶ್ ಸೇರಿದಂತೆ
ವಿದ್ಯಾರ್ಥಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
Follow on Google News Follow on Instagram
Share. Facebook Twitter Telegram WhatsApp
Previous Articleಎರಡು ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ
Next Article ಅರಣ್ಯ ಸಂರಕ್ಷಣೆ, ಸಂವರ್ದನೆಗೆ ಕುಂಬ್ಳೆ ಬಲ: ಈಶ್ವರ ಖಂಡ್ರೆ
Times of bayaluseeme
  • Website

Related Posts

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋದು ಸರಿಯಲ್ಲ – ಆರ್‌.ಅಶೋಕ್

July 28, 2025

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಧಿಡೀರ್ ಅಮೇರಿಕಗೆ ಹೊರಟಿದ್ದೇಕೆ ಗೊತ್ತೆ..? ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಧಿಡೀರ್ ಅಮೇರಿಕಗೆ ಹೊರಟಿದ್ದೇಕೆ ಗೊತ್ತೆ..?

July 28, 2025

ರಂಭಾಪುರಿ ಶ್ರೀಗಳ ಹೇಳಿಕೆಗೆ ಸಿಡಿದೆದ್ದ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ

July 28, 2025
Add A Comment
Leave A Reply Cancel Reply

Advertisement
Latest Posts

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋದು ಸರಿಯಲ್ಲ – ಆರ್‌.ಅಶೋಕ್

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಧಿಡೀರ್ ಅಮೇರಿಕಗೆ ಹೊರಟಿದ್ದೇಕೆ ಗೊತ್ತೆ..? ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಧಿಡೀರ್ ಅಮೇರಿಕಗೆ ಹೊರಟಿದ್ದೇಕೆ ಗೊತ್ತೆ..?

ನಗರಸಭೆ ನೂತನ ಉಪಾಧ್ಯಕ್ಷೆಯಾಗಿ ಶಕೀಲಾ ಬಾನು ಆಯ್ಕೆ

ರಂಭಾಪುರಿ ಶ್ರೀಗಳ ಹೇಳಿಕೆಗೆ ಸಿಡಿದೆದ್ದ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.