ಕೇದಾರ ಪೀಠಕ್ಕೆ ಕಣ್ವಕುಪ್ಪೆ ಶ್ರೀಗಳು ಉತ್ತರಾಧಿಕಾರಿ
ಹಾನಗಲ್ಲ: ವೀರಶೈವ ಲಿಂಗಾಯತ ಪಂಚಪೀಠಗಳಲ್ಲಿ ಒಂದಾದ ಕೇದಾರ ಪೀಠಕ್ಕೆ ಹಾವೇರಿ ಜಿಲ್ಲೆ ಹಾನಗಲ್ಲ ತಾಲೂಕಿನ ಕೋಡಿಯಲ್ಲಾಪುರ ಹಾಗೂ ದಾವಣಗೆರೆ ಕಣ್ವಕುಪ್ಪೆ ಮಠದ ಶ್ರೀ ಡಾ.ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ನೇಮಕವಾಗಿದ್ದಾರೆ. ಮಹಾರಾಷ್ಟ್ರದ ನಾಂದೇಡದಲ್ಲಿ ನಡೆಯುತ್ತಿರುವ ಕೇದಾರ ಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರ 25ನೇ ಪಟ್ಟಾಧಿಕಾರ ರಜತ ಮಹೋತ್ಸವ ಸಮಾರಂಭದಲ್ಲಿ ಶ್ರೀಗಳನ್ನು ಸ್ವತಃ ಕೇದಾರ ಜಗದ್ಗುರು ಗಳೇ ಉತ್ತರಾಧಿಕಾರಿಯಾಗಿ ಘೋಷಣೆ ಮಾಡಿದರು
