Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಭದ್ರಾ ಮೇಲ್ದಂಡೆ ವೇಗಕ್ಕೆ ಪಟ್ಟು; ಯುಗಾದಿ ಆಚರಣೆ ತ್ಯಜಿಸಿದ ಸಿರಿಗೆರೆ ಶ್ರೀ

ಸರಕೆ ಚುನರಿಯಾ’ ಹಾಡು ನಿಷೇಧವಿಲ್ಲ: ಸಂಸತ್ತಿನಲ್ಲಿ ಸಚಿವರ ಸ್ಪಷ್ಟನೆ

₹16 ಸಾವಿರ ಕೋಟಿ ಮೌಲ್ಯಕ್ಕೆ RCB ಮಾರಾಟ? ಬಿಡ್ ಪ್ರಕ್ರಿಯೆ ಅಂತಿಮ ಹಂತದಲ್ಲಿ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ವಿಧಾನಸಭೆಯಲ್ಲಿ ವಿಧೇಯಕಗಳ ಅಂಗೀಕಾರ
ರಾಜ್ಯ

ವಿಧಾನಸಭೆಯಲ್ಲಿ ವಿಧೇಯಕಗಳ ಅಂಗೀಕಾರ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 16, 2026No Comments3 Mins Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}
Share
WhatsApp Twitter Facebook Telegram

ವಿಧಾನಸಭೆಯಲ್ಲಿ ವಿಧೇಯಕಗಳ ಅಂಗೀಕಾರ

2026ನೇ ಸಾಲಿನ ಕರ್ನಾಟಕ ಪೊಲೀಸ್ (ತಿದ್ದುಪಡಿ) ವಿಧೇಯಕವನ್ನು ಗೃಹ ಸಚಿವ ಡಾ: ಜಿ.ಪರಮೇಶ್ವರ್ ಅವರು ಪರ್ಯಾಲೋಚಿಸಿ ಅಂಗೀಕರಿಸಬೇಕೆಂದು ಕೋರಿದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಅತ್ಯಂತ ಪ್ರಮುಖವಾದ ‘ಕರ್ನಾಟಕ ಪೊಲೀಸ್ (ತಿದ್ದುಪಡಿ) ವಿಧೇಯಕ, 2026’ ಅನ್ನು ಮಂಡಿಸಿದರು
ಈ ವಿಧೇಯಕದ ಪ್ರಮುಖ ಅಂಶಗಳು :
ವರ್ಗಾವಣೆ ಅಧಿಕಾರದಲ್ಲಿ ಬದಲಾವಣೆ
ಈ ವಿಧೇಯಕದ ಮುಖ್ಯ ಉದ್ದೇಶವೆಂದರೆ, ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಗೆ ತಮ್ಮ ಕೆಳಗಿನ ಅಧಿಕಾರಿಗಳ ಮೇಲೆ ಹೆಚ್ಚಿನ ಶಿಸ್ತಿನ ನಿಯಂತ್ರಣವನ್ನು ನೀಡುವುದು.
ಡೈರೆಕ್ಟ್ ಆಕ್ಷನ್: ಕರ್ತವ್ಯ ಲೋಪ, ದುರ್ನಡತೆ ಅಥವಾ ಅಶಿಸ್ತು ತೋರುವ ಡಿವೈಎಸ್ಪಿ (DySP) ಶ್ರೇಣಿಯವರೆಗಿನ ಅಧಿಕಾರಿಗಳನ್ನು ಸರ್ಕಾರದ ಪೂರ್ವಾನುಮತಿಗಾಗಿ ಕಾಯದೆ ನೇರವಾಗಿ ವರ್ಗಾವಣೆ ಮಾಡುವ ಅಧಿಕಾರವನ್ನು ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಬೋರ್ಡ್ (PEB) ಗೆ ನೀಡಲು ಉದ್ದೇಶಿಸಲಾಗಿದೆ.
ಕನಿಷ್ಠ ಅವಧಿಯ ವಿನಾಯಿತಿ: ಈ ಮೊದಲು ಯಾವುದೇ ಅಧಿಕಾರಿಯನ್ನು ವರ್ಗಾಯಿಸಲು ಕನಿಷ್ಠ ಎರಡು ವರ್ಷಗಳ ಕಾಲಾವಕಾಶ ಇರಬೇಕಿತ್ತು. ಆದರೆ ಹೊಸ ತಿದ್ದುಪಡಿಯ ಪ್ರಕಾರ, ಗಂಭೀರ ಲೋಪಗಳು ಕಂಡುಬಂದಲ್ಲಿ ಈ ಕನಿಷ್ಠ ಅವಧಿಯ ನಿಯಮ ಅನ್ವಯಿಸುವುದಿಲ್ಲ.
ವಿಧೇಯಕದ ಉದ್ದೇಶಗಳು ಶಿಸ್ತು ಪಾಲನೆ :
ಇಲಾಖೆಯಲ್ಲಿ ಪಾರದರ್ಶಕತೆ ತರುವುದು ಮತ್ತು ಭ್ರಷ್ಟಾಚಾರ ಅಥವಾ ಕರ್ತವ್ಯದ ನಿರ್ಲಕ್ಷ್ಯವನ್ನು ತಡೆಯುವುದು.
ರಾಜಕೀಯ ಹಸ್ತಕ್ಷೇಪಕ್ಕೆ ಬ್ರೇಕ್:
ವರ್ಗಾವಣೆ ಪ್ರಕ್ರಿಯೆಯನ್ನುಲ ಸಂಪೂರ್ಣವಾಗಿ ಇಲಾಖೆಯ ಉನ್ನತ ಮಟ್ಟದ ಸಮಿತಿಯ (PEB) ಸುಪರ್ದಿಗೆ ನೀಡುವುದರಿಂದ ರಾಜಕೀಯ ಪ್ರಭಾವವನ್ನು ಕಡಿಮೆ ಮಾಡುವುದು.

ಸಾರ್ವಜನಿಕ ಸಂಬಂಧ: ಪೊಲೀಸ್ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಉತ್ತಮ ಸಂಬಂಧ ಹೊಂದಲು ಮತ್ತು ಅಪರಾಧ ತಡೆಗಟ್ಟುವಿಕೆಯಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸಲು ಈ ಕ್ರಮ ಪೂರಕವಾಗಲಿದೆ ಎಂದು ಸಚಿವರು ತಿಳಿಸಿದರು.
ಚರ್ಚೆಯ ನಂತರ ವಿಧೇಯಕವು ಒಮ್ಮತದಿಂದ ಅಂಗೀಕಾರವಾಯಿತು.
ಕರ್ನಾಟಕ ಮುನ್ಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ ಅಂಗೀಕಾರ
2026ನೇ ಸಾಲಿನ ಕರ್ನಾಟಕ ಮುನ್ಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಅವರು ಪರ್ಯಾಲೋಚಿಸಿ ಅಂಗೀಕರಿಸಬೇಕೆಂದು ಸದನದಲ್ಲಿ ಕೋರಿದರು.
ಈ ವಿಧೇಯಕ ಉದ್ದೇಶವು ಜಾಹೀರಾತುಗಳ ಮೇಲೆ ಶುಲ್ಕವನ್ನು ವಿಧಿಸುವುದು ಮತ್ತು ಸಂಗ್ರಹಿಸುವುದು, ಅನಧಿಕೃತ ಜಾಹೀರಾತುಗಳನ್ನು ನಿಯಂತ್ರಿಸುವುದು ಮತ್ತು ಹಾಗೆ ಸಂಗ್ರಹಿಸಲಾದ ಅಂಥ ಶುಲ್ಕ ಮತ್ತು ದಂಡಗಳನ್ನು ಸಿಂದುಗೊಳಿಸುವುದಾಗಿದೆ ಎಂದು ವಿಧೇಯಕದ ಬಗ್ಗೆ ಸದನದಲ್ಲಿ ವಿವರಿಸಿದರು. ಚರ್ಚೆಯ ಬಳಿಕ ವಿಧೇಯಕವು ಅಂಗೀಕಾರವಾಯಿತು.
*****
ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳಿಗೆ ನಿಗದಿತ ಸಮಯಕ್ಕೆ ಉತ್ತರ ಒದಗಿಸದವರ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ-ಡಾ: ಜಿ.ಪರಮೇಶ್ವರ
ಬೆಂಗಳೂರು, ಮಾರ್ಚ್ 16 (ಕರ್ನಾಟಕ ವಾರ್ತೆ):

ವಿಧಾನಸಭೆಯಲ್ಲಿ ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳಿಗೆ ಉತ್ತರಗಳನ್ನು ಕಡಿಮೆ ಸಂಖ್ಯೆಯಲ್ಲಿ ಉತ್ತರಿಸಲಾಗುತ್ತಿದೆ. ಹಲವು ಇಲಾಖೆಗಳಿಂದ ಉತ್ತರಗಳು ನಿಗದಿತ ಸಂಖ್ಯೆಯಲ್ಲಿ ಒದಗಿಸುತ್ತಿಲ್ಲದಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಸಭೆ ನಡೆಸಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ವಿಧಾನಸಭೆಯಲ್ಲಿ ತಿಳಿಸಿದರು.
ಇಂದು ವಿಧಾನಸಭೆಯ ಅಧಿವೇಶನದಲ್ಲಿ ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ರವರು ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳಿಗೆ ನಿಗದಿತ ಸಂಖ್ಯೆಯಲ್ಲಿ ಉತ್ತರಗಳನ್ನು ಒದಗಿಸದೇ ಇರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಸಭಾಧ್ಯಕ್ಷರು ಗಮನಹರಿಸಬೇಕೆಂದು ಕಳೆದ 4-5 ವಿಧಾನಸಭೆಯ ಅಧಿವೇಶನದಲ್ಲಿ ಕೋರಿದ್ದಾಗ್ಯೂ ನಿಗದಿತ ಸಂಖ್ಯೆಯಲ್ಲಿ ಉತ್ತರಗಳು ಬರುತ್ತಿಲ್ಲ. ಈ ಬಗ್ಗೆ ಸಭಾಧ್ಯಕ್ಷರು ನಿರ್ದೇಶನ ನೀಡಬೇಕೆಂದು ಸದನವನ್ನು ಕೋರಿದ್ದರು.

ಇಂದಿನ ಸದನದ ಕಲಾಪದಲ್ಲಿ ಮತ್ತೆ ನಿರೀಕ್ಷಿತ ಸಂಖ್ಯೆಯಲ್ಲಿ ಉತ್ತರಗಳು ಬಾರದ ಹಿನ್ನೆಲೆಯಲ್ಲಿ ಸದನಕ್ಕೆ ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳಿಗೆ ಉತ್ತರಿಸುವ ಮಂತ್ರಿಗಳ ಹಾಗೂ ಇಲಾಖೆಯ ಅಧಿಕಾರಿಗಳ ಆದ್ಯ ಕರ್ತವ್ಯವಾಗಿರುತ್ತದೆ. ಇದು ಗಂಭೀರವಾದ ವಿಷಯವಾಗಿದ್ದು ಈ ಬಗ್ಗೆ ಚರ್ಚೆ ಅಗತ್ಯವೆಂದು ಸದನವನ್ನು ಸಭಾಧ್ಯಕ್ಷರು ಮೊಟಕುಗೊಳಿಸಿರುವುದು ಇತಿಹಾಸ ಎಂದು ಡಾ: ಜಿ.ಪರಮೇಶ್ವರ್ ತಿಳಿಸಿದರು.
ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಈ ಕುರಿತು ಸಭಾಧ್ಯಕ್ಷರು ಸಭೆ ನಡೆಸಿ, ಮುಖ್ಯಮಂತ್ರಿಗಳು, ಸರ್ಕಾರದ ಕಾರ್ಯದರ್ಶಿಗಳು, ವಿರೋಧ ಪಕ್ಷದ ನಾಯಕರೊಂದಿಗೆ ಸಭೆ ನಡೆಸಲಾಯಿತು. ಲಿಖಿತ ರೂಪದ ಪ್ರಶ್ನೆಗಳಿಗೆ ಸಭೆಯಲ್ಲಿ ನಿಗದಿತ ಸಮಯದಲ್ಲಿ ಉತ್ತರವನ್ನು ಒದಗಿಸದ ಅಧಿಕಾರಿಗಳ ವಿರುದ್ಧ ಕೂಡಲೇ ಶಿಸ್ತಿನ ಕ್ರಮ ಕೈಗೊಳ್ಳಬೇಕೆಂದು ತೀರ್ಮಾನಿಸಲಾಗಿದೆ.
ಸರ್ಕಾರದ ಎಲ್ಲಾ ಕಾರ್ಯದರ್ಶಿಗಳಿಗೆ ಈ ಕುರಿತು ಪರಿಶೀಲನೆ ಮಾಡಿ ಯಾವ ಯಾವ ಇಲಾಖೆಯಲ್ಲಿ ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಬಾಕಿ ಉಳಿದಿವೆ ಎಂಬುದರ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ನಿರ್ದೇಶನ ನೀಡಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಕ್ರಮ ವಹಿಸಲಾಗುವುದು ಎಂದು ಡಾ: ಜಿ.ಪರಮೇಶ್ವರ್ ಸದನದಲ್ಲಿ ಉತ್ತರಿಸಿದರು.
ಸಭಾಧ್ಯಕ್ಷರ ಈ ನಡೆಗೆ ವಿರೋಧಪಕ್ಷದ ನಾಯಕರು ಹಾಗೂ ಶಾಸಕರಿಂದ ಸಭಾಧ್ಯಕ್ಷರಿಗೆ ಸದನದಲ್ಲಿ ಅಭಿನಂದನೆಯನ್ನು ಸಲ್ಲಿಸಲಾಯಿತು.
*****

chitradurga goverment karanataka ಡಾ.ಪರಮೇಶ್ವರ್
Follow on Facebook Follow on Instagram
Share. Facebook Twitter WhatsApp Telegram
Previous Articleಚಿತ್ರದುರ್ಗ. ಪತಿ-ಪತ್ನಿ ಜಗಳ ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ
Next Article ಗಮನ ಸೆಳೆಯುವ ಸೂಚನೆಗಳಿಗೆ ನಿಗದಿತ ಸಮಯದಲ್ಲಿ ಉತ್ತರ ನೀಡವಂತೆ ಅಧಿಕಾರಿಗಳಿಗೆ ಸೂಚಿನೆ – ಸಭಾಧ್ಯಕ್ಷ ಯು.ಟಿ. ಖಾದರ್*
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಭದ್ರಾ ಮೇಲ್ದಂಡೆ ವೇಗಕ್ಕೆ ಪಟ್ಟು; ಯುಗಾದಿ ಆಚರಣೆ ತ್ಯಜಿಸಿದ ಸಿರಿಗೆರೆ ಶ್ರೀ

March 18, 2026

₹16 ಸಾವಿರ ಕೋಟಿ ಮೌಲ್ಯಕ್ಕೆ RCB ಮಾರಾಟ? ಬಿಡ್ ಪ್ರಕ್ರಿಯೆ ಅಂತಿಮ ಹಂತದಲ್ಲಿ

March 18, 2026

ಯುಗಾದಿ ವಿಶೇಷ: ಆರೋಗ್ಯದ ಗುಟ್ಟು ‘ಅಭ್ಯಂಗ’ದಲ್ಲಿದೆ – ಆಯುಷ್ ಅಧಿಕಾರಿ ಸಲಹೆ

March 18, 2026
Add A Comment
Leave A Reply Cancel Reply

Advertisement
Demo
Latest Posts

ಭದ್ರಾ ಮೇಲ್ದಂಡೆ ವೇಗಕ್ಕೆ ಪಟ್ಟು; ಯುಗಾದಿ ಆಚರಣೆ ತ್ಯಜಿಸಿದ ಸಿರಿಗೆರೆ ಶ್ರೀ

ಸರಕೆ ಚುನರಿಯಾ’ ಹಾಡು ನಿಷೇಧವಿಲ್ಲ: ಸಂಸತ್ತಿನಲ್ಲಿ ಸಚಿವರ ಸ್ಪಷ್ಟನೆ

₹16 ಸಾವಿರ ಕೋಟಿ ಮೌಲ್ಯಕ್ಕೆ RCB ಮಾರಾಟ? ಬಿಡ್ ಪ್ರಕ್ರಿಯೆ ಅಂತಿಮ ಹಂತದಲ್ಲಿ

ಯುಗಾದಿ ವಿಶೇಷ: ಆರೋಗ್ಯದ ಗುಟ್ಟು ‘ಅಭ್ಯಂಗ’ದಲ್ಲಿದೆ – ಆಯುಷ್ ಅಧಿಕಾರಿ ಸಲಹೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.