Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ದರ್ಶನ್ ಅಭಿಮಾನಿಗಳಿಂದ ಟ್ರೋಲ್; ಡಿ ಗ್ಯಾಂಗ್ ಬಳಗಕ್ಕೆ ರಮ್ಯಾ ಖಡಕ್ ವಾರ್ನಿಂಗ್

ಕಲಾಸಿಪಾಳ್ಯ ಬಸ್ ನಿಲ್ದಾಣದ ಹೆಸರು ಬದಲಾವಣೆ; ಹೊಸ ಹೆಸರು ಏನು ಗೊತ್ತಾ..?

ಇನ್ನು ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ಶಾಸಕರ ಜತೆ ಸುರ್ಜೆವಾಲ ಮಾತುಕತೆ ಪಕ್ಷ ಸಂಘಟನೆ, ಅಹವಾಲು ಸ್ವೀಕಾರಕ್ಕೆ ಸೀಮಿತ, ನಾಯಕತ್ವ ಬದಲಾವಣೆ ಬಗ್ಗೆ ಅಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
ಪ್ರಮುಖ ಸುದ್ದಿ

ಶಾಸಕರ ಜತೆ ಸುರ್ಜೆವಾಲ ಮಾತುಕತೆ ಪಕ್ಷ ಸಂಘಟನೆ, ಅಹವಾಲು ಸ್ವೀಕಾರಕ್ಕೆ ಸೀಮಿತ, ನಾಯಕತ್ವ ಬದಲಾವಣೆ ಬಗ್ಗೆ ಅಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

Times of bayaluseemeBy Times of bayaluseemeJuly 1, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
d k shivakumar
Share
Facebook Twitter LinkedIn Pinterest Email Copy Link

“ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ರಣದೀಪ್ ಸಿಂಗ್ ಸುರ್ಜೆವಾಲ ಅವರು ಕಾಂಗ್ರೆಸ್ ಶಾಸಕರ ಜೊತೆ ಮಾಡುತ್ತಿರುವ ಸಭೆ ಬಗ್ಗೆ ಕೇಳಿದಾಗ, “ಈ ಸಭೆ ಬಗ್ಗೆ ಯಾರಿಗೂ ಆತಂಕ ಬೇಡ. ರಾಷ್ಟ್ರಾದ್ಯಂತ ನಾವು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದು, ಸಂಘಟನೆ ಹಿನ್ನೆಲೆಯಲ್ಲಿ ಈ ಸಭೆ ಮಾಡಲಾಗುತ್ತಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಸಂಘಟನೆ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಶಕ್ತಿ ತುಂಬಲು ಹೇಳಿದ್ದಾರೆ. ಖರ್ಗೆ ಅವರು, ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಕರೆಸಿ ನವದೆಹಲಿಯಲ್ಲಿ ಸಭೆ ಮಾಡಲಾಗಿದೆ. ಆಮೂಲಕ ಕಾಂಗ್ರೆಸ್ ಕಚೇರಿ ನಿರ್ಮಾಣದಿಂದ, ಪಕ್ಷ ಸಂಘಟನೆವರೆಗೂ ಎಲ್ಲಾ ಜವಾಬ್ದಾರಿಯನ್ನು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶಾಸಕರು ಇಲ್ಲದಿರುವ ಕ್ಷೇತ್ರಗಳ ಜವಾಬ್ದಾರಿಯನ್ನು ಒಬ್ಬೊಬ್ಬ ಶಾಸಕರಿಗೆ ನೀಡಲಾಗಿದೆ” ಎಂದು ವಿವರಿಸಿದರು.

“ಸಂಘಟನೆ ಕುರಿತು ಮಾರ್ಗದರ್ಶನ ನೀಡಲು ರಣದೀಪ್ ಸಿಂಗ್ ಸುರ್ಜೆವಾಲ ಅವರು ಆಗಮಿಸಿದ್ದು, ಅವರ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದೆ. ಕೆಲವು ಶಾಸಕರ ಹೇಳಿಕೆಗಳ ಮಧ್ಯೆ ಪಕ್ಷದಲ್ಲಿ ಶಿಸ್ತು ತರಲು ಪ್ರಯತ್ನಿಸುತ್ತಿದ್ದಾರೆ. ಇದರ ಹೊರತಾಗಿ ನಾಯಕತ್ವ ಬದಲಾವಣೆ, ಸಚಿವಸಂಪುಟ ವಿಸ್ತರಣೆ ಕುರಿತು ಯಾವುದೇ ಚರ್ಚೆ ಇಲ್ಲ. ನಾವುಗಳು ಯಾರೂ ಈಗ ಆತುರದಲ್ಲಿ ಇಲ್ಲ. ನಮಗೆ 2028 ಬಹಳ ಮುಖ್ಯ. ಅದೇ ಮುಖ್ಯ” ಎಂದು ಸ್ಪಷ್ಟಪಡಿಸಿದರು.

ಇಕ್ಬಾಲ್ ಹುಸೇನ್ ಗೆ ನೋಟೀಸ್ ನೀಡುವೆ

ಇಕ್ಬಾಲ್ ಹುಸೇನ್ ನೀವು ಸಿಎಂ ಆಗುವುದಾಗಿ ಹೇಳಿದ್ದಾರೆ ಎಂದು ಕೇಳಿದಾಗ, “ಅವರಿಗೆ ನಾನೇ ನೋಟೀಸ್ ನೀಡುತ್ತೇನೆ. ನಾನು ಸಿಎಂ ಆಗುತ್ತೇನೆ ಎಂದು ಯಾರೂ ಹೇಳುವ ಅಗತ್ಯವಿಲ್ಲ. ಯಾರೊಬ್ಬರೂ ಮಾಧ್ಯಮಗಳ ಮುಂದೆ ಮಾತನಾಡುವಂತಿಲ್ಲ. ಇಕ್ಬಾಲ್ ಹುಸೇನ್, ಬಿ.ಆರ್ ಪಾಟೀಲ್, ಬಾಲಕೃಷ್ಣ ಯಾರೇ ಆಗಲಿ, ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಯಾರೂ ಮಾತನಾಡಬಾರದು. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರಿದ್ದು, ನಾವೆಲ್ಲರೂ ಅವರ ಕೈ ಬಲಪಡಿಸಬೇಕು” ಎಂದು ತಿಳಿಸಿದರು.

ಅಭಿವೃದ್ಧಿ ಯೋಜನೆಗಳಿಗಾಗಿ ಬಜೆಟ್ ನಲ್ಲಿ 1 ಲಕ್ಷ ಕೋಟಿ ಅನುದಾನ

ಬಿ.ಆರ್ ಪಾಟೀಲ್ ಅವರು ಅನುದಾನ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಕೇಳಿದಾಗ, “ರಾಜ್ಯ ಸರ್ಕಾರ ಬಜೆಟ್ ನಲ್ಲಿ ಅಭಿವೃದ್ಧಿ ಕೆಲಸಗಳಿಗಾಗಿಯೇ 1 ಲಕ್ಷ ಕೋಟಿ ಅನುದಾನ ಮೀಸಲಿಟ್ಟಿದೆ. 54 ಸಾವಿರ ಕೋಟಿ ಗ್ಯಾರಂಟಿ ಯೋಜನೆಗೆ, 19 ಸಾವಿರ ಕೋಟಿ ರೈತರಿಗೆ ವಿದ್ಯುತ್ ನೀಡಲು ವ್ಯಯಿಸಲಾಗುತ್ತಿದೆ. ಸಾಮಾಜಿಕ ಕಲ್ಯಾಣ ಯೋಜನೆ ಸೇರಿದಂತೆ ಇತರೆ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಇದು ಜನರು ಹಾಗೂ ಕ್ಶೇತ್ರದ ಅಭಿವೃದ್ಧಿಗಳಿಗೆ ಅಲ್ಲವೇ? ನಮ್ಮ ರಾಜ್ಯದಲ್ಲಿ ಆಗುತ್ತಿರುವ ಕಲ್ಯಾಣ ಯೋಜನೆಗಳು ಬೇರೆ ಯಾವುದೇ ರಾಜ್ಯದಲ್ಲಿ ಆಗುತ್ತಿಲ್ಲ” ಎಂದು ತಿಳಿಸಿದರು.

ಮಾಲೂರು ಶಾಸಕರಾದ ನಂಜೇಗೌಡರಿಗೆ ನೀವು ಕೆಎಂಎಫ್ ಸ್ಥಾನ ಕೊಡಿಸುವುದಾಗಿ ಹೇಳಿದ್ದೀರಿ ಎಂದು ಸ್ವತಃ ಶಾಸಕರೇ ಹೇಳಿದ್ದಾರೆ ಎಂದು ಕೇಳಿದಾಗ, “ರಾಜಕೀಯ ಬೆಳವಣಿಗೆಗಳೇ ಬೇರೆ, ಸಹಕಾರ ಕ್ಷೇತ್ರವೇ ಬೇರೆ. ಅದರ ಬಗ್ಗೆ ಈಗ ಚರ್ಚೆ ಮಾಡುವುದಿಲ್ಲ” ಎಂದು ತಿಳಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
bengalore dk shivakumar leadership
Follow on Google News Follow on Instagram
Share. Facebook Twitter Telegram WhatsApp
Previous Articleರಾಜ್ಯದಲ್ಲಿ ಹೆಚ್ಚಾದ ಹೃದಯಾಘಾತ ಪ್ರಕರಣ – ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಪ್ರಕರಣ ದಾಖಲು
Next Article ಆರ್ ಸಿ ಬಿ ವಿಜಯೋತ್ಸವದ ಕಾಲ್ತುಳಿತ ಪ್ರಕರಣ ಅಧಿಕಾರಿಗಳ ಅಮಾನತು ರದ್ದು ಮಾಡಿದ ಸಿಎಟಿ
Times of bayaluseeme
  • Website

Related Posts

ದರ್ಶನ್ ಅಭಿಮಾನಿಗಳಿಂದ ಟ್ರೋಲ್; ಡಿ ಗ್ಯಾಂಗ್ ಬಳಗಕ್ಕೆ ರಮ್ಯಾ ಖಡಕ್ ವಾರ್ನಿಂಗ್

July 28, 2025

ಕಲಾಸಿಪಾಳ್ಯ ಬಸ್ ನಿಲ್ದಾಣದ ಹೆಸರು ಬದಲಾವಣೆ; ಹೊಸ ಹೆಸರು ಏನು ಗೊತ್ತಾ..?

July 28, 2025

ಇನ್ನು ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

July 28, 2025
Add A Comment
Leave A Reply Cancel Reply

Advertisement
Latest Posts

ದರ್ಶನ್ ಅಭಿಮಾನಿಗಳಿಂದ ಟ್ರೋಲ್; ಡಿ ಗ್ಯಾಂಗ್ ಬಳಗಕ್ಕೆ ರಮ್ಯಾ ಖಡಕ್ ವಾರ್ನಿಂಗ್

ಕಲಾಸಿಪಾಳ್ಯ ಬಸ್ ನಿಲ್ದಾಣದ ಹೆಸರು ಬದಲಾವಣೆ; ಹೊಸ ಹೆಸರು ಏನು ಗೊತ್ತಾ..?

ಇನ್ನು ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಡಿಸಿಎಂ ಡಿಕೆಶಿ ಶಿವಕುಮಾರ್ ಗೆ ಬಾಂಬ್ ಬೆದರಿಕೆ ಸಂದೇಶ..!

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.