ಶ್ರೀರಾಮನವಮಿ ಸಂಭ್ರಮ; ವಿಶೇಷ ಕ್ಷಣಕ್ಕೆ ಸಜ್ಜು
ಟಿಒಬಿ ನ್ಯೂಸ್ ಚಿತ್ರದುರ್ಗ
ನಗರದ ಬುರುಜನಹಟ್ಟಿ ಕೋಣನಹಟ್ಟಿ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಾರ್ಚ್ 27ರಂದು ಶ್ರೀರಾಮನವಮಿ ಅಂಗವಾಗಿ ವಿಶೇಷ ರಾಮತಾರಕ ಹೋಮ ಹಾಗೂ ಗಣಪತಿ ಹೋಮ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9ಕ್ಕೆ ರಾಮತಾರಕ ಹೋಮ ಆರಂಭವಾಗಲಿದ್ದು, ಮಹಾಮಂಗಳಾರತಿ ನಂತರ ಪಾನಕ ಕೋಸುಂಬರಿ ಪ್ರಸಾದ ವಿತರಣೆ ನಡೆಯಲಿದೆ. ಮಾ. 28ರಂದು ಶ್ರೀರಾಮನ ಭಾವಚಿತ್ರದ ಜೊತೆಗೆ ಕುಂಭಮೇಳ ಗಂಗಾ ಪೂಜಾ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದೇ ದಿನ ಮಧ್ಯಾಹ್ನ 12.30ಕ್ಕೆ ಸರ್ವರಿಗೂ ಅನ್ನಸಂತರ್ಪಣೆ ಆಯೋಜಿಸಲಾಗಿದೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಎನ್.ಅಶ್ವಥ ರಾವ್, ಕಾರ್ಯದರ್ಶಿ ಎಚ್.ಯೋಗೇಶ್ ತಿಳಿಸಿದ್ದಾರೆ.
