ಸದ್ಯಕ್ಕೆ ಬಸ್ ಪ್ರಯಾಣ ದರ ಹೆಚ್ಚಳ ಮಾಡಲ್ಲ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಸರ್ಕಾರಿ ಸಾರಿಗೆ ಬಸ್ ಪ್ರಯಾಣ ದರದಲ್ಲಿ ಏರಿಕೆಯಾಗುವುದಿಲ್ಲ. ಇನ್ನು ಆಟೋ ಗ್ಯಾಸ್ ಸೇರಿ ಪೆಟ್ರೋಲಿಯಂ ಉತ್ಪನ್ನಗಳ ಅಭಾವ ಸರಿಪಡಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಸೋಮ ವಾರಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರಸಾರಿಗೆ ಬಸ್ಗಳಿಗೆ ಪೂರೈಸಲಾಗುತ್ತಿರುವ ಡೀಸೆಲ್ ಬೆಲೆಯಲ್ಲೂ ಹೆಚ್ಚಳವಾಗುತ್ತದೆ ಎಂಬ ಊಹಾ ಪೋಹಗಳಿದ್ದವು. ಅದಕ್ಕಾಗಿ ಸಿಎಂರಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಸಿ, ಸಾರಿಗೆ ಬಸ್ಗಳಿಗೆ ಪೂರೈ ಸಲಾಗುತ್ತಿರುವ ಡೀಸೆಲ್ ಬೆಲೆ ಹೆಚ್ಚಿಸದಂತೆ ಕೋರ ಲಾಗಿತ್ತು. ಇನ್ನು, ಯುದ್ಧ ತಾತ್ಕಾಲಿಕವಾಗಿದ್ದು, ಅದರಿಂದ ಹೆಚ್ಚಿನ ಪರಿಣಾಮ ಬೀರುತ್ತಿಲ್ಲ, ಅಲ್ಲದೆ, ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದರು.
