Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಶಿವಮೊಗ್ಗದಲ್ಲಿ ಮತ್ತೊಂದು ದುರಂತ: ನೀರಾನೆ ‘ಹಂಸಿಣಿ’ ಸಾವು

ಸಾಮಾಜಿಕ ಬದಲಾವಣೆಗೆ ರಂಗಭೂಮಿ ಪ್ರಮುಖ ಅಸ್ತ್ರ ; ಡಾ.ಜೆ.ಕರಿಯಪ್ಪ ಮಾಳಿಗೆ

ಅಂಬೇಡ್ಕರ್ ಚಿಂತನೆಗಳು ಇಂದಿಗೂ ಪ್ರಸ್ತುತ: ತಾರಿಣಿ ಶುಭದಾಯಿನಿ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಅಂಬೇಡ್ಕರ್ ಚಿಂತನೆಗಳು ಇಂದಿಗೂ ಪ್ರಸ್ತುತ: ತಾರಿಣಿ ಶುಭದಾಯಿನಿ
ಚಿತ್ರದುರ್ಗ

ಅಂಬೇಡ್ಕರ್ ಚಿಂತನೆಗಳು ಇಂದಿಗೂ ಪ್ರಸ್ತುತ: ತಾರಿಣಿ ಶುಭದಾಯಿನಿ

Times Of Bayaluseeme StaffBy Times Of Bayaluseeme StaffApril 14, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವ ಪ್ರೊ. ತಾರಿಣಿ ಶುಭದಾಯಿನಿ.
Share
WhatsApp Twitter Facebook Telegram

ಚಿತ್ರದುರ್ಗ: ದೇಶದ ಬಹುತ್ವ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಒಳಗೊಂಡ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ. ಅವುಗಳ ಬಲದಿಂದಲೇ ಆಡಳಿತ ವ್ಯವಸ್ಥೆ ಸುಸೂತ್ರವಾಗಿ ನಡೆಯುತ್ತಿದೆ ಎಂದು ನಗರದ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲೆ ಪ್ರೊ. ತಾರಿಣಿ ಶುಭದಾಯಿನಿ ಹೇಳಿದರು.

ನಗರದ ಸರ್ಕಾರಿ ಕಲಾ ಕಾಲೇಜಿನ ಅಂಬೇಡ್ಕರ್ ಸಭಾಂಗಣದಲ್ಲಿ ಮಂಗಳವಾರ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜದಲ್ಲಿ ದಲಿತರು ಮತ್ತು ಮಹಿಳೆಯರು ದ್ವಂದ್ವ ಶೋಷಣೆಗೆ ಒಳಗಾಗುತ್ತಿದ್ದಾರೆ. ಹಿಂದುಳಿದ ವರ್ಗಗಳು ಸಂಖ್ಯೆಯಲ್ಲಿ ಹೆಚ್ಚಾಗಿದ್ದರೂ ಅಧಿಕಾರದಿಂದ ವಂಚಿತರಾಗಿ ಅಸ್ಪೃಶ್ಯತೆಯ ಅನುಭವವನ್ನು ಎದುರಿಸುತ್ತಿರುವುದು ಕಳವಳಕಾರಿ ಸಂಗತಿ ಎಂದು ಅವರು ಹೇಳಿದರು.

ಪತ್ರಕರ್ತ ಪಿ. ಲಂಕೇಶ್ ಅವರ ‘ಮುಟ್ಟಿಸಿಕೊಂಡವರು’ ಕಥೆಯನ್ನು ಉಲ್ಲೇಖಿಸಿದ ಅವರು, ಜಾತಿ ವ್ಯವಸ್ಥೆಯನ್ನು ಒಂದು ಸಾಮಾಜಿಕ ರೂಪಕವಾಗಿ ಕಥೆಯಲ್ಲಿ ಚಿತ್ರಿಸಲಾಗಿದೆ ಎಂದರು. ಹೊರಗಡೆ ಕಾಣಿಸದ ಜಾತಿ ಭೇದಗಳು ಮನೆಯೊಳಗೇ ಆರಂಭವಾಗುತ್ತವೆ. ಆದ್ದರಿಂದ ಸಮಾಜಕ್ಕೆ ಅಂಟಿಕೊಂಡಿರುವ ಜಾತಿ, ಭ್ರಷ್ಟಾಚಾರ ಮತ್ತು ಶ್ರೇಷ್ಠತೆಯ ವ್ಯಸನದಂತಹ ರೋಗಗಳನ್ನು ನಿವಾರಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ರಾಜ್ಯಶಾಸ್ತ್ರ ಚಿಂತಕ ಪ್ರೊ. ಗಂಗಾಧರ ಮಾತನಾಡಿ, ಜಾತಿ ಭೇದ, ಅಸ್ಪೃಶ್ಯತಾ ಆಚರಣೆ, ಕೆರೆಯ ನೀರಿನ ನಿರಾಕರಣೆ, ಗಾಡಿಯಲ್ಲಿ ಪ್ರಯಾಣಕ್ಕೆ ತಡೆ, ಕ್ಷೌರಿಕ ಸೇವೆಯ ನಿರಾಕರಣೆ ಸೇರಿದಂತೆ ಅಂಬೇಡ್ಕರ್ ಅವರು ಅನುಭವಿಸಿದ ಘಟನೆಗಳೇ ಅವರ ಚಿಂತನೆಗೆ ಹೊಸ ದಿಕ್ಕು ನೀಡಿದವು ಎಂದು ಹೇಳಿದರು.

ಅಂಬೇಡ್ಕರ್ ಅವರ ಆತ್ಮಕಥನ ‘ವೀಸಾಗಾಗಿ ಕಾಯುವಿಕೆ’ ಹಾಗೂ ಗೌತಮ ಬುದ್ಧ ಅವರ ಚಿಂತನೆಗಳು ಸಂವಿಧಾನ ರಚನೆಗೆ ಪ್ರೇರಣೆ ನೀಡಿವೆ. ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ಓದಿದಾಗ ಮಾತ್ರ ಅಂಬೇಡ್ಕರ್ ಅವರ ನಿಜವಾದ ಮಹತ್ವ ಅರ್ಥವಾಗುತ್ತದೆ ಎಂದು ತಿಳಿಸಿದರು.

ಎನ್‌ಎಸ್‌ಎಸ್ ಅಧಿಕಾರಿ ಪ್ರೊ. ಪ್ರಸಾದ್ ಹಾಗೂ ಕನ್ನಡ ಸಹ ಪ್ರಾಧ್ಯಾಪಕ ಪ್ರೊ. ಚಿತ್ತಯ್ಯ ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಅರ್ಪಿಸಲಾಯಿತು.

ಪರೀಕ್ಷಾ ನಿಯಂತ್ರಣ ಅಧಿಕಾರಿ ಪ್ರೊ. ಎಸ್.ಬಿ. ಶಿವಪ್ರಸಾದ್, ಐಕ್ಯೂಎಸಿ ಸಮಿತಿ ಸಂಚಾಲಕಿ ಪ್ರೊ. ಕೆ. ಲೀಲಾವತಿ, ಪ್ರಾಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ. ಹನುಮಂತಪ್ಪ, ಮುಖ್ಯ ಅಧೀಕ್ಷಕ ಹರೀಶ್ ಬಾಬುರೆಡ್ಡಿ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಪ್ರೊ. ಸೌಮ್ಯ ಉಪಸ್ಥಿತರಿದ್ದರು.

Follow on Facebook Follow on Instagram
Share. Facebook Twitter WhatsApp Telegram
Previous Articleಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬಣ್ಣನೆ; ಮನುಸ್ಮೃತಿಯ ಮನಸ್ಥಿತಿ ಹೋಗಲಾಡಿಸಿದ ಕ್ರಾಂತಿ ಪುರುಷ ಡಾ.ಬಿ.ಆರ್.ಅಂಬೇಡ್ಕರ್
Next Article ಸಾಮಾಜಿಕ ಬದಲಾವಣೆಗೆ ರಂಗಭೂಮಿ ಪ್ರಮುಖ ಅಸ್ತ್ರ ; ಡಾ.ಜೆ.ಕರಿಯಪ್ಪ ಮಾಳಿಗೆ
Times Of Bayaluseeme Staff
  • Website

Related Posts

ಸಾಮಾಜಿಕ ಬದಲಾವಣೆಗೆ ರಂಗಭೂಮಿ ಪ್ರಮುಖ ಅಸ್ತ್ರ ; ಡಾ.ಜೆ.ಕರಿಯಪ್ಪ ಮಾಳಿಗೆ

April 14, 2026

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬಣ್ಣನೆ; ಮನುಸ್ಮೃತಿಯ ಮನಸ್ಥಿತಿ ಹೋಗಲಾಡಿಸಿದ ಕ್ರಾಂತಿ ಪುರುಷ ಡಾ.ಬಿ.ಆರ್.ಅಂಬೇಡ್ಕರ್

April 14, 2026

ಆಧುನಿಕ ಭಾರತದ ಶಿಲ್ಪಿ ಅಂಬೇಡ್ಕರ್: ಬಹುಮುಖ ಸಾಧನೆಗಳ ಸ್ಮರಣೆ

April 14, 2026
Add A Comment
Leave A Reply Cancel Reply

Advertisement
Latest Posts

ಶಿವಮೊಗ್ಗದಲ್ಲಿ ಮತ್ತೊಂದು ದುರಂತ: ನೀರಾನೆ ‘ಹಂಸಿಣಿ’ ಸಾವು

ಸಾಮಾಜಿಕ ಬದಲಾವಣೆಗೆ ರಂಗಭೂಮಿ ಪ್ರಮುಖ ಅಸ್ತ್ರ ; ಡಾ.ಜೆ.ಕರಿಯಪ್ಪ ಮಾಳಿಗೆ

ಅಂಬೇಡ್ಕರ್ ಚಿಂತನೆಗಳು ಇಂದಿಗೂ ಪ್ರಸ್ತುತ: ತಾರಿಣಿ ಶುಭದಾಯಿನಿ

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬಣ್ಣನೆ; ಮನುಸ್ಮೃತಿಯ ಮನಸ್ಥಿತಿ ಹೋಗಲಾಡಿಸಿದ ಕ್ರಾಂತಿ ಪುರುಷ ಡಾ.ಬಿ.ಆರ್.ಅಂಬೇಡ್ಕರ್

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.