Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಚಿತ್ರದುರ್ಗ ನಗರದ ಮುಖ್ಯರಸ್ತೆ ಒತ್ತುವರಿ ತೆರವಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಟ್ಟುನಿಟ್ಟಿನ ಸೂಚನೆ

ಇಸ್ರೇಲ್ ದೇಶದ ದ್ವೇಷದ ಬೆಂಕಿ, ತನ್ನ ತಾನು ಸುಡುವುದಲ್ಲದೆ ಇತರರನ್ನೂ ಸುಡುತ್ತಿದೆ

ನಿತ್ಯ ಭವಿಷ್ಯ – 16/04/2026 (ಗುರುವಾರ)

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ದೇಶ-ವಿದೇಶ»ಇಸ್ರೇಲ್ ದೇಶದ ದ್ವೇಷದ ಬೆಂಕಿ, ತನ್ನ ತಾನು ಸುಡುವುದಲ್ಲದೆ ಇತರರನ್ನೂ ಸುಡುತ್ತಿದೆ
ದೇಶ-ವಿದೇಶ

ಇಸ್ರೇಲ್ ದೇಶದ ದ್ವೇಷದ ಬೆಂಕಿ, ತನ್ನ ತಾನು ಸುಡುವುದಲ್ಲದೆ ಇತರರನ್ನೂ ಸುಡುತ್ತಿದೆ

Times Of Bayaluseeme StaffBy Times Of Bayaluseeme StaffApril 16, 2026Updated:April 16, 2026No Comments4 Mins Read
Share WhatsApp Facebook Twitter Threads Telegram
Follow Us
Facebook Instagram
ಇಸ್ರೇಲ್ ಮತ್ತು ಬೆಂಜಮಿನ್ ನೆತನ್ಯಾಹು ಅವರ ಯುದ್ಧ ನೀತಿ ಹಾಗೂ ವಿಶ್ವ ಶಾಂತಿಯ ಮೇಲಾಗುತ್ತಿರುವ ಪರಿಣಾಮವನ್ನು ಬಿಂಬಿಸುವ ಸಾಂಕೇತಿಕ ಚಿತ್ರ
Share
WhatsApp Twitter Facebook Telegram

ಇಸ್ರೇಲ್ ತನ್ನ ಭದ್ರತೆ ಮತ್ತು ರಕ್ಷಣೆಯ ನೆಪವೊಡ್ಡಿ ಇಡೀ ವಿಶ್ವಕ್ಕೆ ಬೆಂಕಿ ಹಾಕುತ್ತಿದೆ. ತನ್ನ ವಿರೋಧಿಗಳನ್ನೆಲ್ಲಾ ಸರ್ವನಾಶ ಮಾಡಿ ತಾನು ಮಾತ್ರ ಅತ್ಯಂತ ಸುರಕ್ಷಿತವಾಗಿ ಇರಬೇಕು ಎನ್ನುವ ಸ್ವಾರ್ಥ ಮತ್ತು ಮಹತ್ವಕಾಂಕ್ಷೆ ಹೊಂದಿದೆ. ಅಂದರೆ ಸುಮಾರು ಒಂದು ಕೋಟಿ ಜನರ ಹಿತಕ್ಕಾಗಿ ಉಳಿದ ಸುಮಾರು 699 ಕೋಟಿ ಜನ ಕಷ್ಟ ಪಡಬೇಕಾಗಿದೆ. ಇದು ಕ್ರೌರ್ಯದ ಪರಾಕಾಷ್ಟೇ.

ಹೋಗಲಿ, ಇಸ್ರೇಲ್ ತನ್ನ ಸುರಕ್ಷತೆಗಾಗಿ ಮಾಡುತ್ತಿರುವ ಕಸರತ್ತುಗಳು ಶಾಂತಿ, ಸೌಹಾರ್ದತೆ, ಮಾತುಕತೆಯಿಂದಲ್ಲ, ಬದಲಾಗಿ ತನ್ನಲ್ಲಿರುವ ಬಾಂಬು, ಬಂದೂಕು, ದ್ರೋಣ್, ಮಿಸ್ಸೈಲ್, ಹಣ, ಆಧುನಿಕ ತಂತ್ರಜ್ಞಾನ ಮತ್ತು ಮೊಸಾದ್ ಎಂಬ ತನ್ನದೇ ಅತ್ಯಂತ ಬುದ್ಧಿವಂತ ಬೇಹುಗಾರಿಕೆ ಸಂಸ್ಥೆಯನ್ನು ಉಪಯೋಗಿಸಿಕೊಂಡು ತಾನು ಉಳಿಯಲು ಇತರರನ್ನು ನಾಶಪಡಿಸುತ್ತಿದೆ.

ಒಂದು ದೇಶ ಒಂದು ಹಂತಕ್ಕೆ ತನ್ನ ಭದ್ರತೆಗಾಗಿ ಮಾಡಿಕೊಳ್ಳುವ ಮುಂಜಾಗ್ರತಾ ಕ್ರಮಗಳನ್ನು ಒಪ್ಪಿಕೊಳ್ಳಬಹುದೇನೋ, ಆದರೆ ಅದು ತುಂಬಾ ಅತಿರೇಕಕ್ಕೆ ಹೋಗಿ ವಿಶ್ವದ ಬುಡಕ್ಕೇ ಬಂದಾಗ ಅದನ್ನು ಖಂಡಿಸಬೇಕಾಗಿರುವುದು ನಮ್ಮ ಕರ್ತವ್ಯವಲ್ಲವೇ. ಈಗ ಯುದ್ಧಕ್ಕಿಂತ ಮಾತುಕತೆ ಮತ್ತು ಹೊಂದಾಣಿಕೆ ಅನಿವಾರ್ಯವಲ್ಲವೇ.

ತನ್ನ ಸುತ್ತ ಇರುವ ಲೆಬನಾನ್ ಇರಾನ್, ಇರಾಕ್, ಟರ್ಕಿ, ಸಿರಿಯಾ, ಯೆಮನ್ ಮುಂತಾದ ಎಲ್ಲಾ ದೇಶಗಳನ್ನು ತನ್ನ ನಿಯಂತ್ರಣಕ್ಕೆ ಪಡೆದುಕೊಳ್ಳುವ ಹಪಾಹಪಿ ದುಷ್ಟತನ, ಸರ್ವಾಧಿಕಾರಿ ಮನೋಭಾವ ಮತ್ತು ವಾಸ್ತವವಲ್ಲದ ಚಿಂತನೆಯಲ್ಲದೇ ಮತ್ತೇನು ಅಲ್ಲ.

ಏಕೆಂದರೆ ಇಡೀ ವಿಶ್ವದಲ್ಲಿ ಎಂತಹುದೇ ಸಾಮ್ರಾಜ್ಯವೂ ಸಹ ಸದಾಕಾಲ ತನ್ನ ನಿಯಂತ್ರಣದಲ್ಲಿಟ್ಟುಕೊಂಡು ಮೆರೆಯಲು ಸಾಧ್ಯವಿಲ್ಲ. ಒಂದಲ್ಲಾ ಒಂದು ಹಂತದಲ್ಲಿ ಪ್ರತಿಕ್ಷಣವೂ ಶತ್ರುಗಳಿಂದಲೇ ಸುತ್ತುವರಿದ ಸಮಾಜದಲ್ಲಿ ಬದುಕಬೇಕಿದೆ. ಆಗ ಆಯುಧಗಳ ಜೊತೆಗೆ ಶಾಂತಿ, ಸೌಹಾರ್ದತೆಯ ಮಾತುಕತೆಗಳು ಅಷ್ಟೇ ಮುಖ್ಯವಾಗುತ್ತದೆ.

ಇಲ್ಲಿ ಇಸ್ರೇಲ್ ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುತ್ತಿಲ್ಲ. ತನ್ನ ಶೌರ್ಯ ಪ್ರದರ್ಶಿಸಲು ಕ್ರೌರ್ಯವನ್ನು ಮೆರೆಯುತ್ತಿದೆ. ಇದು ವಿಶ್ವಕ್ಕೇ ಮಾರಕವಾಗುತ್ತಿರುವುದರಿಂದ ಇಸ್ರೆಲ್ ವರ್ತನೆಯನ್ನು ವಿಶ್ವದ ಪ್ರತಿ ಶಾಂತಿ ಪ್ರಿಯ ನಾಗರಿಕರು ಖಂಡಿಸಲೇಬೇಕಾಗಿದೆ.

ಅದರ ಜೊತೆಗೆ ಡೊನಾಲ್ಡ್ ಟ್ರಂಪ್ ಎಂಬ ವಿಕೃತ ವ್ಯಕ್ತಿಯೊಬ್ಬ ಇಸ್ರೇಲ್ ಜೊತೆ ಸಹಕರಿಸುತ್ತಿರುವುದರಿಂದ ಅದು ಇನ್ನಷ್ಟು ವಿಕೋಪಕ್ಕೆ ಹೋಗುತ್ತಿದೆ. ಇಲ್ಲಿಯವರೆಗೂ ಇಸ್ರೇಲ್ ನ ಶೌರ್ಯ ಸಾಹಸಗಳನ್ನು, ಆಧುನಿಕ ತಂತ್ರಜ್ಞಾನವನ್ನು ವಿಶ್ವ ಕೊಂಡಾಡುತ್ತಿತ್ತು. ಇದೀಗ ಅದರ ಕ್ರೌರ್ಯದ ಮುಖವಾಡ ಬಯಲಾಗಿದೆ.

ತನ್ನನ್ನು ತಾನು ಶಾಂತಿದೂತ ಜೀಸಸ್ ಎಂದು ಸ್ವತಃ ತನ್ನ ಸಾಮಾಜಿಕ ಜಾಲತಾಣ ಟ್ರುತ್ನಲ್ಲಿ ಹೇಳಿಕೊಳ್ಳುವ, ಪ್ರಚಾರ ಮಾಡುವ ಡೊನಾಲ್ಡ್ ಟ್ರಂಪ್ ಒಬ್ಬ ಮಾನಸಿಕ ಅಸ್ವಸ್ಥ ಎನ್ನಲು ಬೇರೆ ಕಾರಣ ಬೇಕಿಲ್ಲ. ಎಲ್ಲಿಯ ಜೀಸಸ್?ಎಲ್ಲಿಯ ಟ್ರಂಪ್? ಎರಡು ಸಂಪೂರ್ಣ ವಿರುದ್ಧ ದಿಕ್ಕಿನ ವ್ಯಕ್ತಿತ್ವಗಳು….

ಕೆಲವೊಮ್ಮೆ ಡೊನಾಲ್ಡ್ ಟ್ರಂಪ್ ಗೆ ಸಂಧಾನದ ಆಸಕ್ತಿ ಇದ್ದರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಾತ್ರ ಕೇವಲ ತನ್ನ ಶಕ್ತಿಯ ಮೇಲೆ ನಂಬಿಕೆ ಇಟ್ಟುಕೊಂಡು ಸರ್ವನಾಶದ ಪ್ರಯತ್ನಕ್ಕೆ ಮುನ್ನಡಿ ಬರೆಯುತ್ತಿದ್ದಾರೆ. ಅವರ ದಾಳಿಗಳು ಅತ್ಯಂತ ಭೀಕರವಾಗಿದೆ.

ಇಸ್ರೇಲ್ ಸುರಕ್ಷಿತವಾಗಿರಬೇಕಿದ್ದರೆ ತನ್ನ ಸುತ್ತಲಿನ ಎಲ್ಲ ಇಸ್ಲಾಮಿಕ್ ರಾಷ್ಟ್ರಗಳನ್ನು ಸರ್ವನಾಶ ಮಾಡಬೇಕು ! ಅದು ಸಾಧ್ಯವೇ ?ಅಥವಾ ಎಲ್ಲಾ ಇಸ್ಲಾಮಿಕ್ ರಾಷ್ಟ್ರಗಳು ಇಸ್ರೇಲನ್ನು ನಾಶ ಮಾಡಬೇಕು ! ಅದು ಒಳ್ಳೆಯದೇ ?ಖಂಡಿತ ಎರಡೂ ತಪ್ಪು. ಎಲ್ಲರೂ ಹೊಂದಾಣಿಕೆಯಿಂದ ಬದುಕಬೇಕಾಗಿರುವುದೇ ಈ ಕ್ಷಣದ ವಾಸ್ತವ.

ಕೆಲವೊಂದು ಮಿತಿಯನ್ನು ಹಾಕಿಕೊಳ್ಳದಿದ್ದರೆ ಮೂರನೇ ಮಹಾಯುದ್ಧಕ್ಕೆ ನೇರ ಹೊಣೆ ಇಸ್ರೇಲ್ ಮತ್ತು ಅದರ ಪ್ರಧಾನಿ
ನೆತನ್ಯಾಹು ಹೊರಬೇಕಾಗುತ್ತದೆ. ಜೊತೆಗೆ ಇಸ್ರೇಲ್ ಕೂಡ ಸರ್ವನಾಶದ ಭೀತಿಯನ್ನು ಎದುರಿಸಬೇಕಾಗುತ್ತದೆ.

ಇಸ್ರೇಲ್ ಎಂಬ ಜಗತ್ತಿನ ಅದ್ಬುತ ದೇಶ ಮತ್ತು ಭಾರತಕ್ಕೆ ಎಂದೂ ಮಾದರಿಯಾಗಲು ಸಾಧ್ಯವಿಲ್ಲದ ‌ದೇಶ….

ಭಾರತದ ಬಹಳಷ್ಟು ಜನರಿಗೆ ಇಸ್ರೇಲ್ ಎಂಬ ದೇಶದ ಬಗ್ಗೆ ತುಂಬಾ ಅಭಿಮಾನ, ಮೆಚ್ಚುಗೆ ಮತ್ತು ಪ್ರೀತಿ ಇದೆ. ಭಾರತ ಇಸ್ರೇಲ್ ಮಾದರಿಯಲ್ಲಿ ಬೆಳೆಯಬೇಕು ಎಂಬ ಆಸೆ ಇದೆ.

ಅದಕ್ಕೆ ವಿರುದ್ಧವಾಗಿ ಅದೇರೀತಿ ಮುಸ್ಲಿಮರು ವಿಶ್ವದಲ್ಲಿ ಅತ್ಯಂತ ಹೆಚ್ಚು ದ್ವೇಷಿಸುವ ದೇಶ ಕೂಡ ಇಸ್ರೇಲ್ ಆಗಿದೆ. ಅದು ಸಂಪೂರ್ಣ ನಾಶವಾಗಲಿ ಎಂದು ಅವರ ಒಳ ಮನಸ್ಸು ಹೇಳುತ್ತದೆ.

ಹಾಗಾದರೆ ಏನಿದು ಇಸ್ರೇಲ್ ಎಂಬ ದೇಶದ ವಿಶೇಷತೆ.

ಇಸ್ರೇಲ್ ದೇಶದ ಮೂಲ, ಅದರ ಉಗಮ, ಧರ್ಮ, ಅಲ್ಲಿನ ಜನಜೀವನ, ವಿಶ್ವಸಂಸ್ಥೆಯ ಮಾನ್ಯತೆ, ಪ್ಯಾಲಿಸ್ಟೈನ್ ಸಂಘರ್ಷ ಎಲ್ಲವನ್ನೂ ಗೂಗಲ್ ನಲ್ಲಿ ಓದಬಹುದು. ಆದರೆ ಇಲ್ಲಿ ಮುಖ್ಯವಾಗಿ ಇಸ್ರೇಲ್ ಮತ್ತು ಅದರ ಈಗಿನ ಪ್ರಭಾವವನ್ನು ನಾವು ಹೇಗೆ ಗ್ರಹಿಸಬಹುದು ಎಂಬುದರ ಸುತ್ತ ಒಂದು ನೋಟ…..

ಹೌದು, ಸುಮಾರು 90 ಲಕ್ಷ ಜನಸಂಖ್ಯೆ, ಸುಮಾರು 8000 ಚದರ ಮೈಲಿಯ ಚಿಕ್ಕ ದೇಶ ಇಸ್ರೇಲ್. ಆದರೆ ಅದರ ಸೈನಿಕ ಶಕ್ತಿ, ಅರ್ಥಿಕ ಶಕ್ತಿ, ತಂತ್ರಜ್ಞಾನ ವಿಶ್ವ ಶ್ರೇಷ್ಠ ಮಟ್ಟದಲ್ಲಿದೆ.

ಅಮೆರಿಕದ ಸಿಐಎ, ರಷ್ಯಾದ ಕೆಜಿಬಿ, ಭಾರತದ ರಾ, ಪಾಕಿಸ್ತಾನದ ಐಏಸ್ಐ ಏಜೆನ್ಸಿಗಳಿಗಿಂತ ಇಸ್ರೇಲ್ ನ ಮೊಸಾದ್ ಅತ್ಯುತ್ತಮ ಸಾಮರ್ಥ್ಯ ಹೊಂದಿದೆ ಮತ್ತು ಸಾಬೀತು ಪಡಿಸಿದೆ.

ಮ್ಯೂನಿಚ್ ಒಲಂಪಿಕ್ಸ್ ನಲ್ಲಿ ಅದರ ಪುಟ್ಬಾಲ್ ಆಟಗಾರರನ್ನು ಪ್ಯಾಲಿಸ್ಟೈನ್ ಉಗ್ರರು ಮಾಡಿದ ಹತ್ಯಾಕಾಂಡ, ಮಾನವ ಇತಿಹಾಸದ ಭಯಾನಕ ಘಟನೆಗಳಲ್ಲಿ ಒಂದಾಗಿ ದಾಖಲಾಗಿದೆ.

ಅದೇರೀತಿ ಭಯೋತ್ಪಾದಕರಿಂದ ಇಸ್ರೇಲ್ ವಿಮಾನ ಅಪಹರಣವಾದಾಗ ಅದನ್ನು ಅದ್ಬುತ ಸಾಹಸ ಮಾಡಿ ಸಿನಿಮಾವನ್ನು ಮೀರಿಸುವ ರೀತಿಯಲ್ಲಿ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಿದ್ದು ಅದರ ಸಾಮರ್ಥ್ಯಕ್ಕೆ ಸಾಕ್ಷಿ.

ಇಡೀ ಇಸ್ರೇಲ್ ದೇಶವನ್ನು ಅದರ ಅಜನ್ಮ ಶತ್ರುಗಳಾದ ಮುಸ್ಲಿಂ ದೇಶಗಳು ಸುತ್ತುವರಿದಿವೆ. ಭಯೋತ್ಪಾದನೆಯ ಉತ್ತುಂಗದ್ದಾಗ ಐಸಿಸ್ ಕೂಡ ಅದರ ಮೇಲೆ ದಾಳಿ ಮಾಡಲು ಸಾಧ್ಯವಾಗಿಲ್ಲ. ಅದು ಇಸ್ರೇಲ್ ದೇಶದ ಬಹುದೊಡ್ಡ ಸಾಮರ್ಥ್ಯ.

ಹಾಗಾದರೆ ಇಸ್ರೇಲ್ ಒಂದು ಶ್ರೇಷ್ಠ ದೇಶ ಮತ್ತು ಭಾರತಕ್ಕೆ ಅನುಕರಣೀಯ ದೇಶ ಎಂದು ಪರಿಗಣಿಸಬಹುದೆ ?

ಇಲ್ಲ, ಖಂಡಿತ ಇಲ್ಲ. ಇಸ್ರೇಲ್ ದೇಶದ ಅಸ್ತಿತ್ವವೇ ಒಂದು ವಿವಾದಾತ್ಮಕ ವಿಷಯ. ಅದನ್ನು ಹೊರತುಪಡಿಸಿ ಕಡಿಮೆ ಜನಸಂಖ್ಯೆಯ ಇಸ್ರೇಲ್ ಜ್ಯೂಯಿಷ್ ಜನಾಂಗವೇ ಒಂದು ಬಲಿಷ್ಠ ಅನುವಂಶೀಯ ಗುಣಗಳನ್ನು ಹೊಂದಿದೆ. ದೈಹಿಕ ಮತ್ತು ಮಾನಸಿಕ ಗಟ್ಟಿತನ ಅಪರೂಪವಾಗಿದೆ. ಅದರ ವಿದೇಶಾಂಗ ನೀತಿ ಆ ದೇಶ ಮಾತ್ರ ಅನುಸರಿಸಬಹುದಾದ ಅತ್ಯಂತ ಕಠಿಣ ನಿಯಮಗಳನ್ನು ಒಳಗೊಂಡಿದೆ. ನ್ಯಾಯ. ನೀತಿ. ಧರ್ಮಕ್ಕಿಂತ ಉಳಿವಿಗಾಗಿ ಎಂತಹ ಕೃತ್ಯಕ್ಕೂ ಸಿದ್ದವಾಗಿರುವುದು ಅದರ ಕಠೋರ ವಿದೇಶಾಂಗ ನೀತಿ.

ಅದನ್ನು ವಿಶ್ವದ ಅತ್ಯಂತ ಪ್ರಾಚೀನ ಇತಿಹಾಸ ಹೊಂದಿರುವ, ಆಧ್ಯಾತ್ಮಿಕ ವಿಷಯದಲ್ಲಿ ಆಳವಾದ ನಂಬಿಕೆ ಇಟ್ಟಿರುವ, ಅನೇಕ ಪರಕೀಯರ ದಾಳಿಗೆ ಒಳಗಾಗಿರುವ, ವೈವಿಧ್ಯತೆ ಹೊಂದಿರುವ, ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವ, ಬೃಹತ್ ಜನಸಂಖ್ಯೆಯ, ಅಲಿಪ್ತ ನೀತಿಯ ಭಾಗವಾಗಿರುವ ಭಾರತ ಯಾವ ಕೋನದಿಂದಲೂ ಅನುಸರಿಸಲು ಸಾಧ್ಯವಿಲ್ಲ.

ಒಬ್ಬ ಹಿಂದು ಧರ್ಮದ ವ್ಯಕ್ತಿ, ಮುಸ್ಲಿಮರನ್ನು ನಾನಾ ಕಾರಣಗಳಿಗಾಗಿ ದ್ವೇಷಿಸುವವರಾಗಿದ್ದರೆ,
ಮುಸ್ಲಿಮರ ಪ್ರಬಲ ವೈರಿಯಾದ ಕಾರಣಕ್ಕೆ ಇಸ್ರೇಲ್ ಅನ್ನು ಇಷ್ಟಪಡುವುದು ಒಂದು ರೀತಿಯ ಯೋಚನೆಯಾದರೆ,
ತನ್ನ ಧರ್ಮದ ಜನರು ವಾಸಿಸುವ ಪ್ರದೇಶವನ್ನು ಅತಿಕ್ರಮಣ ಮಾಡಿರುವ ಮತ್ತು ಅವರ ಮೇಲೆ ನಿರಂತರ ದೌರ್ಜನ್ಯ ಮಾಡುತ್ತಿರುವ ಕಾರಣಕ್ಕಾಗಿ ಮುಸ್ಲಿಮರು ಇಸ್ರೇಲನ್ನು ದ್ವೇಷಿಸುವುದು ಇನ್ನೊಂದು ರೀತಿಯದು.

ನ್ಯಾಯ ನೀತಿ ಧರ್ಮದ ಆಧಾರದಲ್ಲಿ, ಇಸ್ರೇಲ್ ಎಂಬ ದೈತ್ಯ ಶಕ್ತಿಯ ದೇಶವನ್ನು, ಅದರ ದೌರ್ಜನ್ಯ, ಭೂಪ್ರದೇಶದ ಅತಿಕ್ರಮಣ ಮಾಡಿ ತಮ್ಮ ಅಧಿಪತ್ಯ ಸ್ಥಾಪಿಸಿರುವ, ಈಗಲೂ ಎರಡೂ ಕಡೆಯ ಹಿಂಸಾತ್ಮಕ ಘರ್ಷಣೆಗಳಿಗೆ ಕಾರಣವಾಗಿರುವ ವಿವಾದಾತ್ಮಕ ದೇಶವನ್ನು ಭಾರತ ಯಾವ ಕಾರಣಕ್ಕೂ ಅನುಕರಿಸಬಾರದು ಮತ್ತು ಅದು ಸಾಧ್ಯವೂ ಇಲ್ಲ. ಆದರೆ ಅದರ ಶಕ್ತಿ ಸಾಮರ್ಥ್ಯಗಳನ್ನು, ತಂತ್ರಜ್ಞಾನದ ಬಳಕೆಯನ್ನು, ಶ್ರಮಜೀವನವನ್ನು ಒಳ್ಳೆಯ ಉದ್ದೇಶಗಳಿಗಾಗಿ ನಾವು ಕಲಿಯಬಹುದು.

ಕೆಲವು ವಿಷಯಗಳಲ್ಲಿ ಇಸ್ರೇಲ್ ಅತ್ಯಂತ ಸ್ಪೂರ್ತಿದಾಯಕ ಮತ್ತು ಕೆಲವು ವಿಷಯಗಳಲ್ಲಿ ಅತ್ಯಂತ ಕಠೋರ ನೀತಿ ನಿಯಮಗಳನ್ನು ಹೊಂದಿದೆ.

ಕೆಲವು ಪ್ರತಿಭೆಗಳು, ಸಾಮರ್ಥ್ಯಗಳು ಸ್ವಾಭಾವಿಕವಾಗಿ ಕೆಲವರಿಗೆ ಒಲಿದಿರುತ್ತವೆ. ಅದು ಕ್ರೀಡೆ, ಸಂಗೀತ, ರಾಜಕೀಯ, ವಿಜ್ಞಾನ, ಕಲೆ, ನಟನೆ ಏನೇ ಇರಲಿ ಅದನ್ನು ಅನುಕರಣೆ ಮಾಡುವುದಕ್ಕೆ ಬದಲಾಗಿ ಒಂದಷ್ಟು ಅಂಶಗಳನ್ನು ಅಳವಡಿಸಿಕೊಳ್ಳಬಹುದು. ಆದರೆ ನಮ್ಮದೇ ದಾರಿಯಲ್ಲಿ ಸಾಗುವುದು ಯಾವಾಗಲೂ ಉತ್ತಮ.

ವರ್ಷದ 24 ಗಂಟೆಯೂ ಯುದ್ಧ ಮಾಡುತ್ತಾ, ತನಗಾದ ಹಿಂಸೆಯ ಅನುಭವವನ್ನೇ ಇತರರಿಗೂ ನೀಡುತ್ತಿರುವ ಇಸ್ರೇಲ್ ಮಾನಸಿಕತೆ ಸ್ವೀಕಾರಾರ್ಹವಲ್ಲ….

ಅದೇರೀತಿ ಇಸ್ರೇಲ್ ನಮಗೆ ಆದರ್ಶ ಮತ್ತು ಎಚ್ಚರಿಕೆ ಎರಡನ್ನೂ ಹೇಳುತ್ತದೆ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಎಚ್. ಕೆ.
9663750451…….
9844013068…….

ಇಸ್ರೇಲ್ ವಿದೇಶಾಂಗ ನೀತಿ ಇಸ್ರೇಲ್ ಸಂಘರ್ಷ ಡೊನಾಲ್ಡ್ ಟ್ರಂಪ್ ಪ್ಯಾಲೆಸ್ತೀನ್ ವಿವಾದ ಬೆಂಜಮಿನ್ ನೆತನ್ಯಾಹು ಭಾರತ ಮತ್ತು ಇಸ್ರೇಲ್ ಸಂಬಂಧ ಮೂರನೇ ಮಹಾಯುದ್ಧದ ಭೀತಿ ಮೊಸಾದ್ ಶಕ್ತಿ ವಿಶ್ವ ಶಾಂತಿ ಹಮಾಸ್ ಮತ್ತು ಇಸ್ಲಾಮಿಕ್ ರಾಷ್ಟ್ರಗಳು
Follow on Facebook Follow on Instagram
Share. Facebook Twitter WhatsApp Telegram
Previous Articleನಿತ್ಯ ಭವಿಷ್ಯ – 16/04/2026 (ಗುರುವಾರ)
Next Article ಚಿತ್ರದುರ್ಗ ನಗರದ ಮುಖ್ಯರಸ್ತೆ ಒತ್ತುವರಿ ತೆರವಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಟ್ಟುನಿಟ್ಟಿನ ಸೂಚನೆ
Times Of Bayaluseeme Staff
  • Website

Related Posts

ಕೇಂದ್ರಿಯ ವಿದ್ಯಾಲಯ: ಬೋಧಕ ಹಾಗೂ ಬೋಧಕೇತರ ಹುದ್ದೆ ಭರ್ತಿಗೆ ನೇರ ಸಂದರ್ಶನ

April 2, 2026

ಆರ್‌ಐಎಂಸಿ ಪ್ರವೇಶಕ್ಕೆ ಅರ್ಜಿ ಅವಧಿ ವಿಸ್ತರಣೆ

April 2, 2026

ಡಿಜಿಟಲ್ ಜನಗಣತಿ; ನ್ಯಾಯಾಧೀಶರಿಂದ ಚಾಲನೆಗೆ ಸಿದ್ಧತೆ

April 1, 2026
Add A Comment
Leave A Reply Cancel Reply

Advertisement
Latest Posts

ಚಿತ್ರದುರ್ಗ ನಗರದ ಮುಖ್ಯರಸ್ತೆ ಒತ್ತುವರಿ ತೆರವಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಟ್ಟುನಿಟ್ಟಿನ ಸೂಚನೆ

ಇಸ್ರೇಲ್ ದೇಶದ ದ್ವೇಷದ ಬೆಂಕಿ, ತನ್ನ ತಾನು ಸುಡುವುದಲ್ಲದೆ ಇತರರನ್ನೂ ಸುಡುತ್ತಿದೆ

ನಿತ್ಯ ಭವಿಷ್ಯ – 16/04/2026 (ಗುರುವಾರ)

ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ: ಸಿಪಿಐ ಸ್ಥಳದಲ್ಲೇ ಸಾವು

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.