ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ಗುರುವಾರ ವಿಚಾರಣೆಗೆ ಬರಲಿದೆ.. ನ್ಯಾಯಮೂರ್ತಿ ಜೆ.ಬಿ.ಪಾರ್ದಿವಾಲಾ ನೇತೃತ್ವದ ಪೀಠವಲ್ಲಿ ವಿಚಾರಣೆ ನಡೆಯಲಿದೆ.2024ರ ಜೂ.8ರಂದು ರೇಣುಕಾಸ್ವಾಮಿ-ಅವರನ್ನು ಅಪಹರಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಬಂಧನವಾಗಿ 6 ತಿಂಗಳ ಬಳಿಕ, 2024ರ ಡಿ.13 ರಂದು ಕರ್ನಾಟಕ ಹೈಕೋರ್ಟ್ ಅವಳಿಗೆ ಜಾಮೀನು ನೀಡಿತ್ತು. ಈ ಜಾಮೀನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಯ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಮೇ 21ರಂದು ನ್ಯಾಯಮೂರ್ತಿ ಪಾರ್ದೀವಾಲ ಪೀಠದಮುಂದೆ ಅರ್ಜಿ ವಿಚಾರಣೆಗೆ ಬಂದಿತ್ತು. ನ್ಯಾಯಪೀಠ ಅರ್ಜಿಯ ವಿಚಾರಣೆಯನ್ನು ಜು.17ಕ್ಕೆ ಮುಂದೂಡಿತ್ತು. ಹೀಗಾಗಿ, ಅರ್ಜಿಯ ವಿಚಾರಣೆ ಇಂದು ನಡೆಯಲಿದೆ
ಈ ಮಧ್ಯೆ, ಮೇ 26ರಿಂದ ಸುಪ್ರೀಂಕೋರ್ಟ್ಗೆ ಬೇಸಿಗೆ ರಜೆ ಶುರುವಾಗಿದ್ದು, ಜುಲೈ 13ರ ತನಕ ಸುಪ್ರೀಂಕೋರ್ಟ್ಗೆ ರಜೆ ಇತ್ತು. ಈಗ ರಜೆಯ ಬಳಿಕ ಅರ್ಜಿ ವಿಚಾರಣೆಗೆ ಬರಲಿದೆ. ಈ ಮಧ್ಯೆ, ಹಿಂದೆ 262 ಸಾಕ್ಷಿಗಳಿದ್ದ ಪಟ್ಟಿಗೆ ಈಗ 10 ಹೆಚ್ಚುವರಿ ಸಾಕ್ಷಿದಾರರ ಹೇಳಿಕೆಗಳನ್ನು ಸೇರಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



