ನವದೆಹಲಿ: ಭಾರತದ ತಾರಾ ಕ್ರಿಕೆಟರ್, ಕರ್ನಾಟಕದ ವೇದಾ ಕೃಷ್ಣಮೂರ್ತಿ ವೃತ್ತಿಪರ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ವೇದ ಅವರು 2020ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತವನ್ನು ಕೊನೆ ಬಾರಿ ಪ್ರತಿನಿಧಿಸಿದ್ದರು. ಆ ಬಳಿಕ ಅವಕಾಶಕ್ಕಾಗಿ ಕಾಯುತ್ತಿದ್ದರೂ ತಂಡಕ್ಕೆ ಆಯ್ಕೆಯಾಗಿರ ಲಿಲ್ಲ. ದೇಸಿ ಕ್ರಿಕೆಟ್ನಲ್ಲಿ ಕರ್ನಾಟಕ ಹಾಗೂ ರೈಲ್ವೇಸ್ ತಂಡಗಳಿಗೆ ನಾಯಕಿಯಾಗಿದ್ದ ವೇದಾ, ಕಳೆದ ವರ್ಷ ಡಬ್ಲ್ಯುಪಿಎಲ್ ನಲ್ಲಿ ಯುಪಿ ವಾರಿಯರ್ಸ್ ಪರ ಆಡಿದ್ದರು. ಚಿಕ್ಕಮಗಳೂರಿನ ಕಡೂರಿನವರಾದ ವೇದ ಕರ್ನಾಟಕದ ಮಾಜಿ ಕ್ರಿಕೆಟರ್ ಅರ್ಜುನ್ ಹೊಯ್ಸಳ ಅವರನ್ನು ವಿವಾಹವಾಗಿದ್ದಾರೆ. ಕೋವಿಡ್ ವೇಳೆ ತಮ್ಮ ತಾಯಿ, ಸಹೋದರಿ ಯನ್ನು ಕಳೆದುಕೊಂಡಿದ್ದರು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



