ಒಳ ಮೀಸಲಾತಿ ವರದಿ ಸರ್ಕಾರದ ಕೈಗೆ ಸೋಮವಾರ ಸೇರಲಿದೆ. ಮುಂದಿನ 15 ದಿನಗಳಲ್ಲಿ ರಾಜ್ಯದಲ್ಲಿ ಒಳ ಮೀಸಲಾತಿ
ಜಾರಿಯಾಗಲಿದೆ, ಕಳೆದ 35 ವರ್ಷಗಳ ಹೋರಾಟಕ್ಕೆ ಅಂತ್ಯವನ್ನು ಹಾಡಲಿದೆ. 2024 ಆ. 1ರ ನಂತರ ನಡೆದ ವಿವಿಧ ರೀತಿಯ
ಹೋರಾಟಕ್ಕೆ ಯಾವುದೆ ಬೆಲೆ ಇಲ್ಲ ಎಂದು ಮಾಜಿ ಸಚಿವ ಹೆಚ್ ಆಂಜನೇಯ ಹೇಳಿದ್ದಾರೆ.ಚಿತ್ರದುರ್ಗ ನಗರದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ರಾಜ್ಯ ಸರ್ಕಾರಗಳಿಗೆ ಒಳ
ಮೀಸಲಾತಿ ಜಾರಿ ಮಾಡುವ ಅಧಿಕಾರ ಇರಲಿಲ್ಲ ಬರೀ ಒಳ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು
ಮಾಡಬಹುದಾಗಿತ್ತು ಆದರೆ ಆ 1 2024ರಂದು ಸುಪ್ರಿಂ ಕೋರ್ಟ್ ಒಳ ಮೀಸಲಾತಿಯನ್ನು ರಾಜ್ಯ ಸರ್ಕಾರ ಜಾರಿ ಮಾಡಬಹುದೆಂದುತೀರ್ಪು ನೀಡಿದ ನಂತರ ರಾಜ್ಯ ಸರ್ಕಾರ ಚುರುಕಾಗಿ ಜಾರಿ ಮಾಡಲು ಮುಂದಾಯಿತು ಆದರೆ ಸರಿಯಾದ ಜಾತಿಯ ಮಾಹಿತಿಇಲ್ಲದಿರುವುದರಿಂದ ಮತ್ತೇ ಹೋಸದಾಗಿ ಮಾದಿಗ ನಾಗ ಮೋಹನ್ ದಾಸ್ ಆಯೋಗ ಜಾತಿ ಗಣತಿಯನ್ನು ಮಾಡುವುದರ ಮೂಲಕವರದಿಯನ್ನು ಸಿದ್ದಪಡಿಸಿದೆ ಇದನ್ನು ಆಗಸ್ಟ್ 4 ರಂದು ಸರ್ಕಾರಕ್ಕೆ ತಲುಪಲಿದೆ ಇದಾದ ನಂತರ 20 ದಿನಗಳೊಗಾಗಿ ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾಗಲಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಧಿಕಾರಕ್ಕೆ ಬಂದು ಮೊದಲ ಸಚಿವ ಸಂಪುಟದಲ್ಲಿ ಒಳ ಮೀಸಲಾತಿಯನ್ನು ಜಾರಿ ಮಾಡುತ್ತೇವೆಎಂದು ಎಲ್ಲೂ ಸಹಾ ಹೇಳಿಲ್ಲ ಒಳ ಮೀಸಲಾತಿ ಜಾರಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ತಿಳಿಸಲಾಗಿತ್ತು ಆದರೆಕೆಲವು ಜನ ಮಾದಿಗ ಸಮುದಾಯವನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಒಳ ಮೀಸಲಾತಿ ಜಾರಿಯಾಗಬೇಕೆಂದು ಕಳೆದ 35ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಲಾಗಿತ್ತು, ಸಮಾಜದಲ್ಲಿ ಇದಕ್ಕೆ ಬೆಲೆ ಇದೆ ಆದರೆ ಸುಪ್ರಿಂ ಕೋರ್ಟ್ ತೀರ್ಪು ನೀಡದನಂತರ ನಡೆದ ಹೋರಾಟಗಳಿಗೆ ಯಾವುದೆ ಬೆಲೆ ಇಲ್ಲ ಒಳ ಮೀಸಲಾತಿಯನ್ನು ಜಾರಿ ಮಾಡಲು ಸರ್ಕಾರಕ್ಕೆ ಕಾಲಾವಕಾಶವನ್ನುನೀಡಬೇಕಿದೆ ಅದನ್ನು ಮಾಡದೆ ಒಳ ಮಿಸಲಾತಿ ಜಾರಿಯಾಗಿಲ್ಲ ಎಂದು ಬೊಬ್ಬೆ ಹೊಡೆಯುವುದು ಪ್ರತಿಭಟನೆ ಮಾಡುವುದುಸರಿಯಲ್ಲ ಇದರ ಬದಲಿಗೆ ಸರ್ವೆ ಪ್ರಾರಂಭವಾದಾಗ ನಮ್ಮ ಸಮುದಾಯ ಇರುವ ಜಾಗಕ್ಕೆ ಹೋಗಿ ಮಾದಿಗ ಎಂದು ಬರೆಸುವಂತೆಜಾಗೃತಿಯನ್ನು ಮೂಡಿಸುವಂತ ಕಾರ್ಯವನ್ನು ಮಾಡಬೇಕಿತ್ತು ಇದು ಬಿಟ್ಟು ಈಗ ಹೋರಾಟ, ಪ್ರತಿಭಟನೆಯನ್ನು ಮಾಡುವುದುಸರಿಯಲ್ಲ ಎಂದು ವಿರೋಧಿಗಳಿಗೆ ಟಾಂಗ್ ನೀಡಿದರು.
ಒಳ ಮೀಸಲಾತಿ ಜಾರಿಯಾಗುವವರೆಗೂ ರಾಜ್ಯದಲ್ಲಿ ಯಾವ ಹುದ್ದೆಗಳು ತುಂಬಿಲ್ಲ, ಜಾರಿ ಅಂದ ಮೇಲೆ ಹುದ್ದೆಗಳು ತುಂಬುವಂತಕಾರ್ಯವಾಗಲಿದೆ ಅಲ್ಲಿಯವರೆಗೂ ಮಾದಿಗರನ್ನು ದಾರಿ ತಪ್ಪಿಸುವಂತ ಕೆಲಸ ಮಾಡಬಾರದು.ನಾವು ಬೇಡ ಅಂದ್ರೂ ಕೂಡ ಜಾರಿಗೆತರುವೆ ಎಂದು ಸಿಎಂ ಹೇಳಿದ್ದಾರೆ.ಹಳ್ಳಿ ಹಳ್ಳಿಗೆ ಹೋಗಿ ಮಾದಿಗರಿಗೆ ಮಾಹಿತಿಯನ್ನು ಮೂಡಿಸಲಾಗಿದೆ ಯಾವ ಪಾರ್ಟಿಯನ್ನುನಾನು ಟೀಕೆಯನ್ನು ಮಾಡುವುದಿಲ್ಲ ಒಳ ಮೀಸಲಾತಿ ಜಾರಿ ಮಾಡುತ್ತಾರೆ.ಪಾದಯಾತ್ರೆ ಮಾಡುವವರು ಹಿಂದೆ ನಮ್ಮ ಜನರುಹೋಗಬಾರದು ಎಂದ ಅವರು, ಹೋರಾಟ ಮಾಡಿ ನ್ಯಾಯ ರೀತಿಯಲ್ಲಿ ಮಾತಾಡಬೇಕು ಹಿಂದೆ ಹೋರಾಟ ಮಾಡಿದವರಿಗೆ ನಾನುಗೌರವ ಸೂಚಿಸುತ್ತೇನೆ ಒಳ ಮೀಸಲಾತಿ ವರದಿ ಸರ್ಕಾರದ ಕೈಗೆ ಸೋಮವಾರ ಸೇರಲಿದೆ.15 ದಿನಗಳ ಕಾಲದಲ್ಲಿಜಾರಿಯಾಗಲಿದೆ. ಸರ್ಕಾರದ ಯಾವುದೇ ಮೋಸಮಾಡಿಲ್ಲ. ನೈಜ ಹೋರಾಟಗಾರರು ಶಾಂತಿಯುತವಾಗಿ ಸುಮ್ಮನೆ ಇದ್ದರೆ, ಆದರೆಮಧ್ಯೆ ಬಂದ ಕೆಲ ಹೋರಾಟಗಾರರು ಸಮುದಾಯವನ್ನು ದಾರಿ ತಪ್ಪಿಸುವ ಕಾರ್ಯವನ್ನು ಮಾಡುತ್ತಿದ್ದಾರೆ ನಿರುದ್ಯೋಗಿಯುವಜನತೆಗೆ ಉದ್ಯೋಗನೇಮಕಾತಿಯಲ್ಲಿ ಒಂದು ವರ್ಷ ಸಡಿಲಿಕೆ ಮಾಡುವುದಕ್ಕೆ ಸರ್ಕಾರಕ್ಕೆ ಮನವಿ ಮಾಡಲಾಗುವುದು
ಎಂದು ಅಂಜನೇಯ ತಿಳಿಸಿದರು.ಸುದ್ದಿಗೋಷ್ಟಿಯಲ್ಲಿ ಜಿ.ಪಂ.ಮಾಜಿ ಸದಸ್ಯ ನರಸಿಂಹರಾಜು, ನ್ಯಾಯಾವಾದಿಗಳಾದ ಶರಣಪ್ಪ, ರವಿಂದ್ರ, ಕೋಟಿ, ವಿಜಯಕುಮಾರ್
ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



