Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ

ರಾಜಮೌಳಿ ಮುಂದಿನ ಸಿನಿಮಾದ ಪೋಸ್ಟರ್ ಬಿಡುಗಡೆ; ಆ ಸಿನಿಮಾಗೆ ಇವರೇ ನಾಯಕ ನೋಡಿ..?

ಬೆಂಗಳೂರಿನಲ್ಲಿ ಮತ್ತೊಂದು ನೂತನ ಸ್ಟೇಡಿಯಂ ನಿರ್ಮಾಣಕ್ಕೆ ಸಿದ್ಧತೆ 

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ನಮ್ಮ ಚಿತ್ರದುರ್ಗ»ಇಂದಿನಿಂದ ಚಿತ್ರದುರ್ಗ ನಗರದಲ್ಲಿ ‘ಅಕ್ಕ ಕೆಫೆ’ ಆರಂಭ; ಕೆಫೆಯಲ್ಲಿ ಏನೆಲ್ಲ ಸಿಗುತ್ತೆ ಗೊತ್ತೇ…?
ನಮ್ಮ ಚಿತ್ರದುರ್ಗ

ಇಂದಿನಿಂದ ಚಿತ್ರದುರ್ಗ ನಗರದಲ್ಲಿ ‘ಅಕ್ಕ ಕೆಫೆ’ ಆರಂಭ; ಕೆಫೆಯಲ್ಲಿ ಏನೆಲ್ಲ ಸಿಗುತ್ತೆ ಗೊತ್ತೇ…?

Times of bayaluseemeBy Times of bayaluseemeAugust 4, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಚಿತ್ರದುರ್ಗ: ಹೋಟೆಲ್ ಉದ್ದಿಮೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಅಕ್ಕ ಕೆಫೆ ಉತ್ತೇಜನ ನೀಡಲಿದೆ ಎಂದು ಯೋಜನಾ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ, ಜಿಲ್ಲಾ ಪಂಚಾಯತ್ ವತಿಯಿಂದ ನೂತನವಾಗಿ ಆರಂಭಿಸಲಾಗಿರುವ “ಅಕ್ಕ ಕೆಫೆ” ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ ಅಕ್ಕ ಕೆಫೆ ಆರಂಭಿಸುವ ಕುರಿತು ಘೋಷಣೆ ಮಾಡಿದ್ದರು. 2024 ಮಾರ್ಚ್ 8 ರಂದು ರಾಜ್ಯದಲ್ಲಿ ಮೊದಲ ಅಕ್ಕ ಕೆಫೆಗೆ ಚಾಲನೆ ನೀಡಲಾಗಿತ್ತು. ತದ ನಂತರ ರಾಜ್ಯದ ಇತರೆಡೆ ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳ ನಿರ್ವಹಣೆಯಲ್ಲಿ ಆರಂಭಿಸಿದ ಅಕ್ಕ ಕೆಫೆಗಳು ಯಶಸ್ವಿಯಾಗಿವೆ. ಸಂಪೂರ್ಣವಾಗಿ ಮಹಿಳೆಯರಿಂದಲೇ ಅಕ್ಕ ಕೆಫೆಗಳು ಕಾರ್ಯನಿರ್ವಹಿಸುತ್ತವೆ. ಶುಚಿ ಮತ್ತು ರುಚಿಯಾದ ಆಹಾರವನ್ನು ಸಾರ್ವಜನಿಕರು ಅಕ್ಕ ಕೆಫೆಯಲ್ಲಿ ಸವಿಯಬಹುದು. ಮುಂದಿನ ದಿನಗಳಲ್ಲಿ ಜಿಲ್ಲೆಯ ಇತರೆಡೆ ಅಕ್ಕ ಕೆಫೆಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದರು.
ಈ ವೇಳೆ ಅಕ್ಕ ಕೆಫೆಯಲ್ಲಿ ಉಪ್ಪಿಟ್ಟು, ಸಿರಿಧಾನ್ಯಗಳ ಬಾತ್, ಕಾಫಿ ಸವಿದ ಸಚಿವ ಡಿ.ಸುಧಾಕರ್ ಶುಚಿ ಹಾಗೂ ರುಚಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಕ್ಕ ಕೆಫೆಯ ಮಹಿಳಾ ಸದಸ್ಯರನ್ನು ಅಭಿನಂಧಿಸಿದ ಅವರು, ಅಕ್ಕ ಕೆಫೆಯಲ್ಲಿ ಆಹಾರದ ಗುಣಮಟ್ಟ ಚೆನ್ನಾಗಿರಬೇಕು, ಶುಚಿ ಹಾಗೂ ರುಚಿಗೆ ಹೆಚ್ಚಿನ ಆದ್ಯತೆ ನೀಡಿ, ನಿರಂತರವಾಗಿ ಉತ್ತಮ ರೀತಿಯಲ್ಲಿ ನಿರ್ವಹಿಸುವಂತೆ ಸಲಹೆ ನೀಡಿದರು. ಅಲ್ಲದೆ ತಾವು ಅಕ್ಕ ಕೆಫೆಯಲ್ಲಿ ಪಡೆದ ಉಪಹಾರಕ್ಕೆ ಪ್ರತಿಯಾಗಿ ಮೊದಲ ಬಿಲ್ ಹಣವನ್ನು ತಾವೇ ಪಾವತಿಸಿ, ಅಕ್ಕ ಕೆಫೆ ನಿರ್ವಹಿಸುವ ಮಹಿಳೆಯರಿಗೆ ಪ್ರೋತ್ಸಾಹದ ನುಡಿಗಳನ್ನಾಡಿದರು.
ಜಿ.ಪಂ. ಸಿಇಒ ಡಾ. ಆಕಾಶ್ ಮಾತನಾಡಿ, ಕಡಿಮೆ ಬೆಲೆಯಲ್ಲಿ ಜನರಿಗೆ ಅಕ್ಕ ಕೆಫೆಯಲ್ಲಿ ಮನೆಯ ರುಚಿಯ ಅನುಭೂತಿ ನೀಡುವ ತಿಂಡಿ ಊಟಗಳು ದೊರೆಯಲಿವೆ. ರಾಸಾಯನಿಕ ಬಣ್ಣ, ಕೃತಕ ರುಚಿಕಾರಕಗಳನ್ನು ಅಕ್ಕ ಕೆಫೆಯಲ್ಲಿ ಬಳಸುವುದಿಲ್ಲ. ಶುಚಿ ಮತ್ತು ಆರೋಗ್ಯಕರ ಆಹಾರ ನೀಡುವುದು ಅಕ್ಕ ಕೆಫೆ ಉದ್ದೇಶವಾಗಿದೆ. ಜಿಲ್ಲೆಯಲ್ಲಿ ಸಿರಿಧಾನ್ಯಗಳನ್ನು ಹೆಚ್ಚಾಗಿ ಬೆಳೆಯುತ್ತಿದ್ದು, ಪ್ರತಿದಿನವು ಸಿರಿಧಾನ್ಯಗಳ ಖಾದ್ಯ ಅಕ್ಕ ಕೆಫೆಯಲ್ಲಿ ದೊರೆಯುತ್ತದೆ. ಜಿ.ಪಂ. ಗೆ ವಿವಿಧ ಕೆಲಸಕ್ಕೆ ಆಗಮಿಸುವ ಸಾರ್ವಜನಿಕರು ಇದರ ಸದಪಯೋಗ ಪಡೆದುಕೊಳ್ಳಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಗಾಯತ್ರಿ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
akka cafe chitradurga onwards started Todays
Follow on Google News Follow on Instagram
Share. Facebook Twitter Telegram WhatsApp
Previous Articleಬಿಜೆಪಿ ಏನೇ ಮಾಡಿದ್ರೂ ಬಾಯಿಮುಚ್ಚಿಕೊಂಡು ಕೂರಲು ಆಗಲ್ಲ – ಡಿಕೆಶಿ
Next Article ಆಶಾ ಕಾರ್ಯಕರ್ತೆಯರ ಕಾರ್ಯವೈಖರಿ ಬಗ್ಗೆ ಸಚಿವ ಡಿ. ಸುಧಾಕರ್ ಏನಾದ್ರೂ…?
Times of bayaluseeme
  • Website

Related Posts

ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ

August 10, 2025

ರಾಜಧಾನಿ ಬೆಂಗಳೂರಿಗೆ ಮೋದಿ ಆಗಮನ; ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

August 10, 2025

ಮಾರುತಿ ಗ್ಯಾಸ್ ಏಜೆನ್ಸಿ ಎದುರು ಡೆಲಿವರಿ ಬಾಯ್ ಗಳ ಪ್ರತಿಭಟನೆ

August 9, 2025
Add A Comment
Leave A Reply Cancel Reply

Advertisement
Latest Posts

ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ

ರಾಜಮೌಳಿ ಮುಂದಿನ ಸಿನಿಮಾದ ಪೋಸ್ಟರ್ ಬಿಡುಗಡೆ; ಆ ಸಿನಿಮಾಗೆ ಇವರೇ ನಾಯಕ ನೋಡಿ..?

ಬೆಂಗಳೂರಿನಲ್ಲಿ ಮತ್ತೊಂದು ನೂತನ ಸ್ಟೇಡಿಯಂ ನಿರ್ಮಾಣಕ್ಕೆ ಸಿದ್ಧತೆ 

ವಿಷ್ಣುವರ್ಧನ್ ಸಮಾಧಿ ಕೆಡವಿದ್ದರ ಹಿಂದೆ ಆ ಪ್ರಭಾವಿ ರಾಜಕಾರಣಿ ಕೈವಾಡ..?

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.