Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಚಂದ್ರಪ್ಪ ಚಾಲನೆ

ವಿಪಕ್ಷದ ಶಾಸಕರಾದರು ಅಭಿವೃದ್ಧಿಗೆ ಅನುದಾನ ಏನು ಕೊರತೆ ಇಲ್ಲ – ಎಂ.ಚಂದ್ರಪ್ಪ

ಸಚಿವ ಸಂಪುಟಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಇಲ್ಲಿವೆ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ಧರ್ಮಸ್ಥಳ ಕೇಸ್; ಮೂವರು ಯುಟ್ಯೂಬರ್ಸ್ ಮೇಲೆ ಹಲ್ಲೆ; ಉದ್ವಿಗ್ನ ಪರಿಸ್ಥಿತಿ ನಿರ್ಮಾಣ
ಪ್ರಮುಖ ಸುದ್ದಿ

ಧರ್ಮಸ್ಥಳ ಕೇಸ್; ಮೂವರು ಯುಟ್ಯೂಬರ್ಸ್ ಮೇಲೆ ಹಲ್ಲೆ; ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

Times of bayaluseemeBy Times of bayaluseemeAugust 7, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಮೃತದೇಹಗಳನ್ನು ಹೂತು ಹಾಕಿದ ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮದ ಪ್ರಾಂಗಳ ರಸ್ತೆಯ ಸಮೀಪ ಲೈವ್ ವರದಿ ಮಾಡುತ್ತಿದ್ದ ಕುಡ್ಲ ರ‍್ಯಾಂಪೇಜ್ ನ ಅಜಯ್ ಅಂಚನ್, ಯುನೈಟಡ್ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲಾ ರ‍್ಯಾಂಪೇಜಿನ ಕ್ಯಾಮೆರಾ ಮೆನ್ ಮೇಲೆ ಬುಧವಾರ ಸಂಜೆ ವೇಳೆ ದುಷ್ಕರ್ಮಿಗಳ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ.ಸುಮಾರು 25ಕ್ಕೂ ಹೆಚ್ಚು ಮಂದಿಯಿದ್ದ ತಂಡ ಇವರ ಮೇಲೆ ಏಕಾಏಕಿ ದಾಳಿ ನಡೆಸಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಗಾಯಾಳುಗಳೆಲ್ಲರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 ಹಲ್ಲೆಯ ಬೆನ್ನಲ್ಲಿಯೇ ಘರ್ಷಣೆ

ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆಯ ಬೆನ್ನಲ್ಲಿಯೇ ಧರ್ಮಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿತ್ತು.ಯುಟ್ಯೂಬರ್ ಗಳ ಮೇಲಿನ ಹಲ್ಲೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸೌಜನ್ಯ ಪರ ಹೋರಾಟಗಾರರು ಘಟನಾ ಸ್ಥಳಕ್ಕೆ ಧಾವಿಸಿ ಬಂದರು. ಹಲ್ಲೆಗೆ ಒಳಗಾದವರನ್ನು ಆಸ್ಪತ್ರೆಗೆ ದಾಖಲಿಸುವ ಕಾರ್ಯ ಮಾಡಿದ್ದಾರೆ. ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಇದೇ ವೇಳೆ ನೇತ್ರಾವತಿ ಪಾಂಗಳ ರಸ್ತೆಯಲ್ಲಿ ಸೌಜನ್ಯ ಪರ ಹೋರಾಟಗಾರರು ಸೇರಿದ್ದು ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ. ಇಲ್ಲಿ ಜನ ಸೇರಿರುವ ಮಾಹಿತಿ ತಿಳಿದು ಧರ್ಮಸ್ಥಳದ ಪರವಾಗಿರುವವರು ನೂರಾರು ಸಂಖ್ಯೆಯಲ್ಲಿ ಇಲ್ಲಿ ಸೇರಿದ್ದಾರೆ.ನೇತ್ರಾವತಿ ಪಾಂಗಳ ರಸ್ತೆಯ ಬಳಿ ಎರಡೂ ಗುಂಪುಗಳು ಎದುರಾಗಿದ್ದು ಘರ್ಷಣೆಗೆ ಕಾರಣವಾಗಿದೆ. ಈ ವೇಳೆ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಸೌಜನ್ಯ ಪರ ಹೋರಾಟಗಾರರು ಧ್ವನಿಯೆತ್ತಿದರು. ಈ ವೇಳೆ ಧರ್ಮಸ್ಥಳದ ಪರವಾಗಿ ಬಂದ ಗುಂಪು ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಘೋಷಣೆ ಕೂಗಿದರು.

ಈ ವೇಳೆ ಅಲ್ಲಿದ್ದ ಪೊಲೀಸರು ಮಧ್ಯಪ್ರವೇಶಿಸಿದರೂ ಗುಂಪುಗಳನ್ನು ತಡೆಯಲಾಗಲಿಲ್ಲ. ಪರಸ್ಪರ ಹಲ್ಲೆ ಮಾಡಿಕೊಳ್ಳುವ ಹಂತಕ್ಕೂ ಘರ್ಷಣೆ ಬೆಳೆದಿತ್ತು.ಧರ್ಮಸ್ಥಳ ಪರವಾಗಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಜನರು ಯುಟ್ಯೂಬರ್ ಗಳ ಪರವಾಗಿ ಸೇರಿದ್ದವರ ಮೇಲೆ ಮುಗಿ ಬಿದ್ದರು. ಈ ವೇಳೆ ಪೊಲೀಸರು ಸೌಜನ್ಯ ಹೋರಾಟಗಾರರನ್ನು ಅಲ್ಲಿಂದ ತೆರಳುವಂತೆ ಸೂಚಿಸಿದರು. ಅವರು ತೆರಳುವ ವೇಳೆ ಆಕ್ರೋಶಿತ ಗುಂಪು ಅವರನ್ನು ಬೆನ್ನಟ್ಟುವ ಪ್ರಯತ್ನಕ್ಕೂ ಮುಂದಾಯಿತು.ಇದಾದ ಬಳಿಕ ಸ್ಥಳದಲ್ಲಿದ್ದ ಗುಂಪು ಅಲ್ಲಿಯೇ ನಿಂತು ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಮಟ್ಟಣ್ಣನವರ್ ವಿರುದ್ಧ ಆಕ್ರೋಶಿತ ಘೋಷಣೆಗಳನ್ನು ಕೂಗುತ್ತಿರುವುದು ಕಂಡು ಬಂತು.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಈ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಧರ್ಮಸ್ಥಳದ ವಿರುದ್ಧ ಅಪಮಾನಕಾರಿಯಾಗಿ ಮಾತನಾಡುತ್ತಿರುವವರ ವಿರುದ್ಧ ಕುಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಗದ್ದಲ ಎಬ್ಬಿಸಿದ್ದಾರೆ. ಅಲ್ಲಿದ್ದ ವಿಠಲ ಗೌಡರಿಗೆ ಸೇರಿದ ವಾಹನ ಹಾಗೂ ಇನ್ನೊಂದು ವಾಹನವನ್ನು ಸಂಪೂರ್ಣ ಜಖಂಗೊಳಿಸಲಾಗಿದೆ. ಬಳಿಕ ಹೆಚ್ಚಿನ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಸೇರಿದ್ದ ಜನರನ್ನು ಚದುರಿಸಿದರು. ಇದರ ಬೆನ್ನಲ್ಲಿಯೇ ನೂರಾರು ಸಂಖ್ಯೆಯಲ್ಲಿ ಜನರು ಧರ್ಮಸ್ಥಳ ಪೊಲೀಸ್‌ ಠಾಣೆಯ ಮುಂದೆ ಸೇರಿದ್ದು, ಕ್ಷೇತ್ರದ ವಿರುದ್ಧ ಅಪಮಾನ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುಂತೆ ಧರಣಿ ನಡೆಸಿದರು. ಎಸ್.ಪಿ ಸ್ಥಳಕ್ಕೆ ಅಗಮಿಸಿದ ಬಳಿಕ ಸೇರಿದ್ದ ಜನರು ಚದುರಿದ್ದಾರೆ.

ಉಜಿರೆಯಲ್ಲಿಯೂ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು; ಉದ್ವಿಗ್ನ ವಾತಾವರಣ

ಯುಟ್ಯೂಬರ್ ಗಳ ಮೇಲೆ ನಡೆದ ಹಲ್ಲೆಯ ಮಾಹಿತಿ ತಿಳಿದು ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.ಹಲ್ಲೆಗೆ ಒಳಗಾದವರು ದಾಖಲಾಗಿದ್ದ ಆಸ್ಪತ್ರೆಯ ಎದುರು ಜನ ಜಮಾಯಿಸಿದರು. ಕೂಡಲೇ ಸ್ಥಳದಲ್ಲಿ ಹೆಚ್ವಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸರು ಜನರಿಗೆ ಮನೆಗಳಿಗೆ ತೆರಳುವಂತೆ ಸೂಚನೆ ನೀಡಿದ ಬಳಿಕವೂ ತಡರಾತ್ರಿಯೂ ಜನರು ಗುಂಪು ಸೇರುತ್ತಿರುವುದು ಕಂಡುಬಂತು. ಈ ನಡುವೆ ಚಾನೆಲ್ ವರದಿಗಾರರ ಮೇಲೆ ಹಲ್ಲೆ ಮಾಡುವ ಕಾರ್ಯವೂ ನಡೆದಿದೆ.ಐಜಿಪಿ ಅಮಿತ್ ಸಿಂಗ್, ಎಸ್.ಪಿ ಡಾ. ಅರುಣ್ ಕೆ. ಎಎಸ್ಪಿ ರಾಜೇಂದ್ರ, ಬಂಟ್ವಾಳ ಡಿ ವೈ ಎಸ್.ಪಿ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
3 attacked case Dharmasthala On youtubers
Follow on Google News Follow on Instagram
Share. Facebook Twitter Telegram WhatsApp
Previous Articleಮಧುಮೇಹ ನಿಯಂತ್ರಣಕ್ಕೆ ಇಲ್ಲಿವೆ ಸಲಹೆಗಳು
Next Article ಬಾಗಲಕೋಟೆ ವಿದ್ಯಾರ್ಥಿನಿ ಸಹಾಯಕ್ಕೆ ನಿಂತ ಕ್ರಿಕೆಟರ್ ರಿಷಬ್ ಪಂತ್
Times of bayaluseeme
  • Website

Related Posts

ಸಚಿವ ಸಂಪುಟಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಇಲ್ಲಿವೆ

August 7, 2025

ಪಕ್ಷಬೇಧ ಮರೆತು ಸರ್ಕಾರ ಹಾಗೂ ನನಗೆ ಆಶೀರ್ವಾದ ಮಾಡಿ – ಡಿಕೆಶಿ

August 7, 2025

ನಟ ದರ್ಶನ್ ಗೆ ಜಾಮೀನು ನೀಡದಂತೆ ವಕೀಲರ ವಾದ… ಹೊಸ ವರಸೆ ತೆಗೆದೆ ಪವಿತ್ರಗೌಡ..!

August 7, 2025
Add A Comment
Leave A Reply Cancel Reply

Advertisement
Latest Posts

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಚಂದ್ರಪ್ಪ ಚಾಲನೆ

ವಿಪಕ್ಷದ ಶಾಸಕರಾದರು ಅಭಿವೃದ್ಧಿಗೆ ಅನುದಾನ ಏನು ಕೊರತೆ ಇಲ್ಲ – ಎಂ.ಚಂದ್ರಪ್ಪ

ಸಚಿವ ಸಂಪುಟಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಇಲ್ಲಿವೆ

ಪಕ್ಷಬೇಧ ಮರೆತು ಸರ್ಕಾರ ಹಾಗೂ ನನಗೆ ಆಶೀರ್ವಾದ ಮಾಡಿ – ಡಿಕೆಶಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.