ಚಿತ್ರದುರ್ಗ: ಇಂಡೋ ಟಿಬೇಟಿ ಫ್ರೆಂಡ್ ಶಿಪ್ ಸೊಸೈಟಿ ವತಿಯಿಂದ ಚಿತ್ರದುರ್ಗ ನಗರದಲ್ಲಿ ಮಾದಾರ ಗುರು ಪೀಠದ ಶ್ರೀ ಬಸವಮೂರ್ತಿಮಾದಾರ ಚನ್ನಯ್ಯ ಶ್ರೀಗಳ ನೇತೃತ್ವದಲ್ಲಿಂದು ಬೃಹನ್ಮಠದ ಅನುಭವ ಮಂಟಪದಲ್ಲಿ ಬಸವ ನಾಡಿನಲ್ಲಿ ಬುದ್ದ ಸ್ಮರಣೆಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಟೇಬೇಟಿಯನ್ನರ ಪಾದಾಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.
ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸುಮಾರು 500ಕ್ಕೂ ಹೆಚ್ಚು ಟಿಬೇಟಿಯನ್ನರು ತಮ್ಮ ಸಂಪ್ರದಾ ಲ್ಯಕವಾದ ಉಡುಪಾದ ಎಣ್ಣೆ ಕೆಂಪು ಬಣ್ಣದ ಸಮವಸ್ತ್ರ ಅದರ ಮೇಲೆ ಹಳದಿ ಬಣ್ಣದ ವಸ್ತ್ರವನ್ನು ಹಾಕಿಕೊಂಡು ನಗರದ ನೀಲಕಂಠೇಶ್ವರ ದೇವಾಲಯದಿಂದಮದಕರಿನಾಯಕ ವೃತ್ತದವರೆಗೂ ಪಾದಯಾತ್ರೆ ಯನ್ನು ಮಾಡುವುದರ ಮೂಲಕ ಬಸವ ನಾಡಿನಲ್ಲಿ ಬುದ್ದನ ಸ್ಮರಣೆಗೆಪಾತ್ರರಾದರು.ದಾರಿಯುದ್ದಕ್ಕೂ ತಮ್ಮ ಧರ್ಮದ ಮಂತ್ರಗಳನ್ನು ಪಠಣ ಮಾಡುವುದರ ಮೂಲಕ ಸರ್ವರಿಗೂ ಒಳಿತಾಗಲಿ ಎಂದುಭಗವಂತನಲ್ಲಿ ಪ್ರಾರ್ಥಿಸಿದರು.
ಪಾದಯಾತ್ರೆಯ ಸಂದರ್ಭದಲ್ಲಿ ಸಂವಿಧಾನ ಶಿಲ್ಪ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ನಾಯಕ ಸಮುದಾಯ ಕುಲ ತಿಲಕ
ಚಿತ್ರದುರ್ಗವನ್ನಾಳಿದ ರಾಜ ಮದಕರಿ ನಾಯಕ ಪ್ರತಿಮೆಗೆ ಮಾಲಾರ್ಪಣೆಯನ್ನು ಮಾಡಲಾಯಿತು. ಬುದ್ದ ಸ್ಮರಣೆ ಕಾರ್ಯಕ್ರಮದಅಂಗವಾಗಿ ಡಾ,ಬಿ.ಅರ್ ಅಂಬೇಡ್ಕರ್ ಹಾಗೂ ಮದಕರಿ ನಾಯಕ ಪ್ರತಿಮೆಗೆ ವಿಶೇಷವಾದ ಅಲಂಕಾರವನ್ನು ಮಾಡಲಾಗಿತ್ತು.ಮದಕರಿ ನಾಯಕ ವೃತ್ತದಲ್ಲಿ ಚಿತ್ರದುರ್ಗಕ್ಕೆ ಆಗಮಿಸಿದ್ದ ಟಿಬೇಟಿಯನ್ನರು ಸಚಿವ ಸಂತೋಷಲಾಡ್, ಶಾಸಕರಾದ ಕೆ.ಸಿ.ವಿರೇಂದ್ರ,ಶಿವಲಿಂಗಾನಂದ ಶ್ರೀಗಳು ಹಾಗೂ ಮಾದಾರ ಚನ್ನಯ್ಯ ಶ್ರೀಗಳಿಗೆ ಕೈ ಮುಗಿಯುವದರ ಮೂಲಕ ಪರಿಚಯ ಮಾಡಿಕೊಂಡರು.ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ನೀಲಿ ಬಣ್ಣದ ವಸ್ತ್ರದಿಂದ ಅಲಂಕಾರವನ್ನು ಮಾಡಿದ್ದರೆ ಮದಕರಿನಾಯಕ ಪ್ರತಿಮೆಯ ಸುತ್ತಾವಿವಿಧ ರೀತಿಯ ಹೂಗಳಿಂದ ಮದಕರಿ ನಾಯಕ ಪ್ರತಿಮೆಗೆ ಚಂಡುಹೂ ಹಾಗೂ ಗುಲಾಬಿ ಹೊಗಳಿಂದ ಮಾಡಿದ ಹಾರವನ್ನುಹಾಕಲಾಗಿತ್ತು.ಈ ಸಂದರ್ಭದಲ್ಲಿ ಕಾರ್ಮಿಕ ಸಚಿವರಾದ ಸಂತೋಷಲಾಡ್ರವರು ಸಹಾ ತಮ್ಮ ವಾಹನವನ್ನು ಬಿಟ್ಟು ಪಾದಯಾತ್ರೆಯ ಮೂಲಕಟಿಬೇಟಿಯನ್ನರ ಜೊತೆಯಲ್ಲಿ ನೀಲಕಂಠೇಶ್ವರ ದೇವಾಲಯದಿಂಧ ಮದಕರಿ ನಾಯಕ ವೃತ್ತದವರೆಗೂ ಭಾಗವಹಿಸಿದ್ದುವಿಶೇಷವಾಗಿತ್ತು, ಇವರ ಜೊತೆಯಲ್ಲಿ ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಶ್ರೀಗಳು, ಶ್ರೀ ಬಸವಮೂರ್ತಿ ಮಾದಾರಚನ್ನಯ್ಯ ಶ್ರೀಗಳು, ಶಾಸಕರಾದ ಕೆ.ಸಿ.ವಿರೇಂದ್ರ ರಘುಮೂರ್ತಿ, ಮಾಜಿ ಶಾಸಕರಾದ ಎಸ್.ಕೆ.ಬಸವರಾಜನ್, ನಗರಾಭೀವೃದ್ದಿಪ್ರಾಧಿಕಾರದ ಅಧ್ಯಕ್ಷರಾದ ತಾಜ್ ಪೀರ್, ಡಿಸಿಸಿ ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ, ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ಮಾರಸಂದ್ರಮುನಿಯಪ್ಪ, ಮುಂಡರಗಿ ನಾಗರಾಜ್, ನಾಯಕ ಸಮುದಾಯದ ಅಧ್ಯಕ್ಷರಾದ ಹೆಚ್.ಜೆ.ಕೃಷ್ಣಮೂರ್ತಿ ಲಿಡ್ಕರ್ ಮಾಜಿ ಅಧಕ್ಷ ಓ
ಶಂಕರ್, ಜಿ.ಪಂ. ಮಾಜಿ ಸದಸ್ಯ ನರಸಿಂಹಮೂರ್ತಿ, ಜಯ್ಯಪ್ಪ, ನಾಗರಾಜ್ ಸೇರಿದಂತೆ ಇತರರು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







