ಬೆಂಗಳೂರು: ಕರ್ನಾಟಕ ವಿಧಾನಸಭೆಯು ಸೋಮವಾರ 18 ಬಿಜೆಪಿ ಶಾಸಕರ ಅಮಾನತು ರದ್ದತಿ ನಿರ್ಧಾರವನ್ನು ಅಂಗೀಕರಿಸಿದೆ.ಈ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ಇಂದು ವಿಧಾಸಭೆಯಲ್ಲಿ ನಿರ್ಣಯ ಮಂಡಿಸಿದರು, ಇದನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.ಮೇ 25 ರಂದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರೊಂದಿಗಿನ ಸಭೆಯ ನಂತರ ಸ್ಪೀಕರ್ ಯು ಟಿ ಖಾದರ್ ಅವರು 18 ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವುದಾಗಿ ಘೋಷಿಸಿದ್ದರು.ಮಾರ್ಚ್ನಲ್ಲಿ ನಡೆದ 6ನೇ ಅಧಿವೇಶನದಲ್ಲಿ 18 ಬಿಜೆಪಿ ಸದಸ್ಯರನ್ನು ಸದನದಿಂದ 6 ತಿಂಗಳ ಕಾಲ ಅಮಾನತುಗೊಳಿಸುವ ನಿರ್ಣಯವನ್ನು ಮೇ 25 ರಿಂದ ಜಾರಿಗೆ ಬರುವಂತೆ ಹಿಂಪಡೆಯಲು ಎಚ್ ಕೆ ಪಾಟೀಲ್ ಅವರು ವಿಧಾನಸಭೆಯ ಅನುಮೋದನೆ ಕೋರುವ ಪ್ರಸ್ತಾವನೆ ಮಂಡಿಸಿದರು.
ನಂತರ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು ಪ್ರಸ್ತಾವವನ್ನು ಮತಕ್ಕೆ ಹಾಕಿದಾಗ, ಧ್ವನಿಮತದ ಮೂಲಕ ಅನುಮೋದನೆ ಪಡೆಯಲಾಯಿತು.ಬಿಜೆಪಿ ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮುನಿರತ್ನ, ಬೈರತಿ ಬಸವರಾಜ್, ಎಸ್.ಆರ್.ವಿಶ್ವನಾಥ್, ದೊಡ್ಡನಗೌಡ ಪಾಟೀಲ್, ಚನ್ನಬಸಪ್ಪ, ಉಮಾನಾಥ್ ಕೋಟ್ಯಾನ್, ಎಂ.ಆರ್.ಪಾಟೀಲ್, ಡಾ.ಭರತ್ ಶೆಟ್ಟಿ, ಬಿ.ಪಿ.ಹರೀಶ್, ದೀರಜ್ ಮುನಿರಾಜು, ಡಾ.ಚಂದ್ರುಲಮಾಣಿ, ಶರಣು ಸಲಗಾರ್, ಬಸವರಾಜ್ ಮತ್ತಿಮೋಡ್ ಸೇರಿದಂತೆ 18 ಶಾಸಕರನ್ನು ಅಮಾನತು ಮಾಡಲಾಗಿತ್ತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







