Author: Times of bayaluseeme
ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರನ್ನು ಅತಂತ್ರವಾಗಿ ಐದು ಭಾಗ ಮಾಡಲಾಗಿದೆ. ರಾಜಕೀಯ ದೃಷ್ಟಿಯಿಂದ ಹಾಗೂ ಕಾಂಗ್ರೆಸ್ ಗೆಲ್ಲಬೇಕೆಂಬ ಗುರಿಯಿಂದ ವಿಭಜನೆ ಮಾಡಲಾಗಿದೆ. ಐದು ಪಾಲಿಕೆಗಳ ನಡುವೆ ತಾರತಮ್ಯ ಉಂಟಾಗಲಿದೆ. ಇದರ ವಿರುದ್ಧ ಕೋರ್ಟ್ ಮೊರೆ ಹೋಗಿ ಹೋರಾಟ ಮಾಡಲಾಗುವುದು. ಬೆಂಗಳೂರನ್ನು ಒಡೆಯಿರಿ ಎಂದು ಜನರು ಕೇಳಿಲ್ಲ. ಈಗಾಗಲೇ ನಗರದಲ್ಲಿ ತೆರಿಗೆ, ಸೆಸ್, ಇ ಖಾತಾದಿಂದ ಸಮಸ್ಯೆ ಉಂಟುಮಾಡಿದ್ದಾರೆ. ಇಂತಹ ಸಮಯದಲ್ಲಿ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲು ಖಚಿತವಾಗಿದೆ. ಅದನ್ನು ತಪ್ಪಿಸಲು ಹೀಗೆ ಭಾಗ ಮಾಡಿದ್ದಾರೆ ಎಂದರು. ಕಪ್ಪು ಪಟ್ಟಿಯಲ್ಲಿರುವ ಗುತ್ತಿಗೆದಾರರಿಗೆ ಸುರಂಗ ರಸ್ತೆ ಯೋಜನೆಯನ್ನು ನೀಡಲಾಗುತ್ತಿದೆ. ಸುರಂಗ ರಸ್ತೆಗೆ ಟೋಲ್ ಕೂಡ ಇರುವುದರಿಂದ ಶ್ರೀಮಂತರು ಮಾತ್ರ ಇದನ್ನು ಬಳಸಬಹುದು. ಜನಸಾಮಾನ್ಯರಿಗೆ ಇದರಿಂದ ಪ್ರಯೋಜನವಿಲ್ಲ. ಅಭಿವೃದ್ಧಿಗೆ ನಮ್ಮ ಸಹಕಾರವಿದೆ. ಆದರೆ ದುಡ್ಡು ಕೊಳ್ಳೆ ಹೊಡೆಯುವ…
ಡಿಜಿಟಲ್ ಪಾವತಿಗಳ ಜಗತ್ತಿನಲ್ಲಿ, ಭಾರತೀಯರು ದಿನದಿಂದ ದಿನಕ್ಕೆ ಯೂನಿಫೈಡ್ ಪೇಮೆಂಟ್ ಇಂಟರ್ಫೇಸ್ (UPI) ಉಪಯೋಗ ಹೆಚ್ಚಿಸುತ್ತಿದ್ದಾರೆ. ಈಗ ಈ ಸೇವೆ ಮತ್ತಷ್ಟು ವೇಗವಾಗಿ ಹಾಗೂ ಸುರಕ್ಷಿತವಾಗಿ ಕಾರ್ಯನಿರ್ವಹಿಸಲು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಆಗಸ್ಟ್ 1ರಿಂದ ಹಲವು ಹೊಸ ನಿಯಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ.ಈ ಹೊಸ ಮಾರ್ಗಸೂಚಿಗಳಂತೆ, ದಿನಕ್ಕೆ ನೀವು ಬದಲಾವಣೆ ಮಾಡಿದಾಗ ಬ್ಯಾಲೆನ್ಸ್ ಚೆಕ್ ಮಾಡುವ ಗರಿಷ್ಟಾವಧಿ 50 ಬಾರಿ ಮಾತ್ರವಿರಲಿದೆ. ಈ ಹಿಂದೆ ಕೆಲವರು ನಿರಂತರವಾಗಿ ಬ್ಯಾಲೆನ್ಸ್ ಚೆಕ್ ಮಾಡಿ ಸರ್ವರ್ ಮೇಲೆ ಒತ್ತಡ ಹೆಚ್ಚಿಸುತ್ತಿದ್ದರು. ಇದನ್ನು ತಡೆಗಟ್ಟಲು ಹೊಸ ನಿಯಮ ಜಾರಿಯಾಗುತ್ತಿದೆ.ಅದೇ ರೀತಿ, ಮೊಬೈಲ್ ನಂಬರ್ಗೆ ಲಿಂಕ್ ಮಾಡಲಾದ ಖಾತೆಗಳ ಮಾಹಿತಿ ಪರಿಶೀಲನೆ ದಿನಕ್ಕೆ 25 ಬಾರಿ ಮಾತ್ರ ಅನುಮತಿ ಇರುತ್ತದೆ. ಈ ನಿಯಮಗಳು ಬ್ಯಾಂಕ್ ಸೇವೆಗಳ ಮೇಲೆ ಅನಗತ್ಯ ಒತ್ತಡವನ್ನು ಕಡಿಮೆ ಮಾಡಲಿದೆ ಮತ್ತು ಮೋಸದ ಪ್ರಯತ್ನಗಳನ್ನು ತಡೆಯಲಿದೆ. ಆಟೋಪೇ ಕೂಡ ನಿಯಂತ್ರಣಕ್ಕೆ ಒಳಪಡಲಿದೆ. ಉದಾಹರಣೆಗೆ ನೆಟ್ ಪಿಕ್ಸ್, ಮ್ಯೂಚುಯಲ್ ಫಂಡ್ ಸಬ್ಸ್ಕ್ರಿಪ್ಶನ್ಗಳಂತಹ ಪಾವತಿಗಳು…
ಮೈಸೂರು: ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅಥವಾ ಮಹಾರಾಜರಷ್ಟೇ ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಹೇಳಿದರು.ಮೈಸೂರಿನಲ್ಲಿ ಮಾತನಾಡಿದ ಅವರು, ಸಾಕಷ್ಟು ಅಭಿವೃದ್ಧಿಯನ್ನು ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಅಭಿವೃದ್ಧಿ ಮಾಡಿರುವುದಕ್ಕಾಗಿಯೇ ಸಾಧನಾ ಸಮಾವೇಶ ಮಾಡಿದ್ದು. ಸುಮ್ಮನೇ ವಿಪಕ್ಷಗಳು ಟೀಕೆ ಮಾಡುತ್ತಿವೆ ಯಾರು ಹೇಳಿದ್ದು ಐದು ವರ್ಷ ಸಿದ್ದರಾಮಯ್ಯ ಸಿಎಂ ಅಲ್ಲ ಅಂತ.ಬೇಸಿಕಲಿ, 5 ವರ್ಷ ಸಿದ್ದರಾಮಯ್ಯ ಸಿಎಂ ಹೌದೋ, ಅಲ್ಲವೋ ಎಂಬ ಚರ್ಚೆಯೇ ಸರಿ ಇಲ್ಲ. ಸಿದ್ದರಾಮಯ್ಯ ಎರಡೂವರೆ ವರ್ಷ ಮಾತ್ರ ಸಿಎಂ ಅಂತ ನಮ್ಮ ಪಕ್ಷದವರು ಯಾರಾದ್ರು ಹೇಳಿದ್ದಾರಾ?. ಇದು ವಿಪಕ್ಷಗಳು ಸೃಷ್ಟಿ ಮಾಡಿದ ಚರ್ಚೆ ಎಂದರು. ಸೆಪ್ಟೆಂಬರ್ನಲ್ಲಿ ರಾಜಕೀಯ ಕ್ರಾಂತಿ ಆಗುತ್ತೆ ಅಂಥ ರಾಜಣ್ಣ ಹೇಳಿದ್ದಾರೆ. ಕ್ರಾಂತಿ ಅಂದ್ರೆ ಅದು ಸಿಎಂ ಬದಲಾವಣೆ ಅಂತ ಅರ್ಥನಾ..? ಯಾಕೆ ಕ್ರಾಂತಿಯನ್ನು ಸಿಎಂ ಬದಲಾವಣೆಗೆ ತಂದು ನಿಲ್ಲಿಸುತ್ತೀರಾ..?ಬೇರೆ ವಿಚಾರಕ್ಕೆ ಕ್ರಾಂತಿಯಾಗಬಹುದು. ಅದು ಏನು ಕ್ರಾಂತಿ ಅಂಥ ರಾಜಣ್ಣ ಅವರನ್ನೇ ಕೇಳಿ. ಕ್ರಾಂತಿ ಅಂದರೆ…
ಮೊಳಕಾಲ್ಮೂರು : ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಕರಡಿಯೊಂದು ಸಾವನ್ನಪ್ಪಿರುವ ಘಟನೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿಯ ಗ್ರ್ಯಾಂಡ್ ಹೋಟೆಲ್ ಬಳಿ ನಡೆದಿದೆ. ತಡರಾತ್ರಿ ಅತಿ ವೇಗವಾಗಿ ವಾಹನ ಸಂಚಾರ ಮಾಡುವ ವೇಳೆ ಆರೇಳು ವರ್ಷದ ಗಂಡು ಕರಡಿ ರಸ್ತೆ ದಾಟಲು ಮುಂದಾಗಿದೆ, ಈ ವೇಳೆ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿ ಮೃತಪಟ್ಟಿದೆ.ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಬೇಟಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ಇದೇ ರಸ್ತೇಲಿ ಹಲವು ಬಾರಿ ಕಾಡು ಪ್ರಾಣಿಗಳು ವಾಹನ ಓಡಾಟಕ್ಕೆ ಸಿಲುಕಿ ಸಾವನ್ನಪ್ಪಿದ್ದು, ಈ ಸಂಬಂಧ ಅರಣ್ಯ ಇಲಾಖೆ ಯಾವ ಕ್ರಮ ಕೈಗೊಳ್ಳದೆ ಇರುವುದಕ್ಕೆ ಪ್ರಾಣಿ ಪ್ರಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜೈಪುರ: ಮಹಿಳೆಯೊಬ್ಬರಿಂದ ಅತ್ಯಾಚಾರದ ಆರೋಪ ಎದುರಿಸುತ್ತಿರುವ ಕ್ರಿಕೆಟಿಗ ಯಶ್ ದಯಾಳ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಪ್ರಾಪ್ತಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಪುರದಲ್ಲಿ ಫೋಕೋ ಕಾಯ್ದೆಯಡಿ ಎಫ್ ಐಆರ್ ದಾಖಲಾಗಿದೆ. ಕ್ರಿಕೆಟ್ ಆಟಗಾರ್ತಿಯಾಗಿರುವ ಯುವತಿಯೊಬ್ಬರು ಜೈಪುರದ ಸಂಗನೇರ್ ಸರ್ಕಾರ್ ಪೊಲೀಸ್ ಠಾಣೆಗೆ ಯಶ್ ವಿರುದ್ಧ ದೂರು ನೀಡಿದ್ದಾರೆ. ‘2023ರಲ್ಲಿ ನನಗೆ 17 ವರ್ಷವಾಗಿದ್ದಾಗ ಯಶ್ ಅತ್ಯಾಚಾರ ಎಸಗಿದ್ದಾರೆ. ನನ್ನ ಕ್ರಿಕೆಟ್ ಬದುಕಿಗೆ ಸಹಾಯ ಮಾಡುತ್ತೇನೆ ಎಂಬ ಭರವಸೆ ನೀಡಿ 2 ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ. ಈ ಏಪ್ರಿಲ್ನಲ್ಲಿ ಐಪಿಎಲ್ನಡೆಯುತ್ತಿದ್ದಾಗಲೂಜೈಪುರದಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ’ ಎಂದು ದೂರಿದ್ದಾರೆ.” ಆದರೆ ಈ ಬಗ್ಗೆ ದಯಾಳ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲೂ ದಯಾಳ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ನವದೆಹಲಿ: ಇಲ್ಲಿನ ಕರ್ನಾಟಕ ಭವನವು ಕದನಕಣವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ವಿಶೇಷ ಅಧಿಕಾರಿ ಸಿ. ಮೋಹನ್ ಕುಮಾರ್ ತಮ್ಮ ಮೇಲೆ ಪಾದರಕ್ಷೆಯಿಂದ ದಾಳಿ ಮಾಡಿದ್ದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿಶೇಷ ಅಧಿಕಾರಿ ಎಚ್. ಆಂಜನೇಯ ಆರೋಪಿಸಿದ್ದಾರೆ.ಈ ಸಂಬಂಧ ನಿವಾಸಿ ಆಯುಕ್ತ ಇನ್ನೊಂಗ್ಲಾ ಜಮೀರ್ ಅವರಿಗೆ ಔಪಚಾರಿಕ ದೂರು ನೀಡಿರುವ ಆಂಜನೇಯ, ‘ಕುಮಾರ್ ನನಗೆ ಶೂನಿಂದ ಹೊಡೆದಿದ್ದು ನನ್ನ ಘನತೆ ಮತ್ತು ಗೌರವಕ್ಕೆ ಧಕ್ಕೆ ತಂದಿದೆ. ನನಗೆ ನ್ಯಾಯ ಕೊಡಿಸಿ’ ಎಂದು ಕುಮಾರ್ ವಿರುದ್ಧ ಕ್ರಿಮಿನಲ್ ಪ್ರಕ್ರಿಯೆಗೆಒತ್ತಾಯಿಸಿದ್ದಾರೆ. ‘ಕುಮಾರ್ ನನ್ನ ಕೆಲಸ ಗಳಿಗೆ ಅಡ್ಡಿ ಉಂಟುಮಾಡುತ್ತಿದ್ದು, ಚೇಂಬರ್ನಲ್ಲಿ ಎಲ್ಲರೆದುರು ಪಾದರಕ್ಷೆ ಯಿಂದ ಹೊಡೆಯುವುದಾಗಿ ಬೆದರಿಸಿದ್ದರು. ನನಗೆ ಏನಾದರೂ ಆದರೆ ಅದಕ್ಕೆ ಕುಮಾರ್ ಹೊಣೆ’ ಎಂದೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.ಜತೆಗೆ, ಕುಮಾರ್ ಅವರ ಹಿಂದಿನ ವರ್ತ ನೆಗಳಪಟ್ಟಿಯನ್ನೇ ನೀಡಿರುವ ಆಂಜನೇಯ, ‘ಕುಮಾರ್ ಈ ಮೊದಲು ಎಂ.ಎಂ. ಜೋಶಿ ಎಂಬುವರನ್ನು ಹೊಡೆದಿದ್ದರು. ಸಿಎಂ ಅವರ ಕರ್ತವ್ಯದಲ್ಲಿರುವ ವಿಶೇಷ ಅಧಿಕಾರಿ ಎಂದು ಅಹಂಕಾರದಿಂದ ವರ್ತಿಸಿದ್ದರು’ ಎಂದೂ ಉಲ್ಲೇಖಿಸಿದ್ದಾರೆ.
ಜೈಪುರ: ರಾಜಸ್ಥಾನದ ಝಾಲಾವಾಡ್ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಶುಕ್ರ ವಾರ ಪ್ರಾರ್ಥನೆಗೆಂದು ಸೇರಿದ್ದ ವೇಳೆ, ಶಿಥಿಲವಾಗಿದ್ದ ಶಾಲಾ ಕಟ್ಟಡ ಕುಸಿದು 7 ಮಕ್ಕಳು ಸಾವನ್ನಪ್ಪಿ, 28 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಝಾಲಾವಾಡ್ನ ಮನೋಹರ್ತನ ವಿಭಾಗದ ಪಿಪ್ಲೋಡಿ ಎಂಬಲ್ಲಿ ಶಾಲೆಯ 6 ಮತ್ತು 7ನೇ ತರಗತಿಯಿದ್ದ ಭಾಗ ಧರಶಾ ಹಿಯಾಗಿದೆ. ಕುಸಿದ ಕಟ್ಟಡದ ಕಾಂಕ್ರೀಟ್ ತುಂಡುಗಳು, ಇಟ್ಟಿಗೆಗಳ ಅವಶೇಷಗಳಡಿ 35ಕ್ಕೂ ಹೆಚ್ಚು ಮಕ್ಕಳು ಸಿಲುಕಿಕೊಂಡಿದ್ದರು. ಕೂಡಲೇ ಸ್ಥಳದಲ್ಲಿದ್ದ ಶಿಕ್ಷಕರು, ಪೋಷಕರು ಮತ್ತು ಸ್ಥಳೀಯರು ಸಾಧ್ಯವಾದಷ್ಟು ಜನರನ್ನು ಹುಡುಕಿ ಹೊರತೆಗೆದಿದ್ದಾರೆ. ಕುಸಿದು ಬಿದ್ದ ಶಾಲಾ ಕಟ್ಟಡದ ಭಾಗ ‘ದುರ್ಘಟನೆಗೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ. ಕಟ್ಟಡ ಶಿಥಿಲವಾಗಿದ್ದರೂ ಸರಿಪಡಿಸಿ ರಲಿಲ್ಲ’ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳು ಕೂಡ ಘಟ ನೆಯ ಕೆಲ ಹೊತ್ತಿಗೂ ಮುನ್ನ ಕಟ್ಟಡ ಹಾಳಾಗಿದೆ.
ನವದೆಹಲಿ: ಭಾರತದ ತಾರಾ ಕ್ರಿಕೆಟರ್, ಕರ್ನಾಟಕದ ವೇದಾ ಕೃಷ್ಣಮೂರ್ತಿ ವೃತ್ತಿಪರ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ವೇದ ಅವರು 2020ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತವನ್ನು ಕೊನೆ ಬಾರಿ ಪ್ರತಿನಿಧಿಸಿದ್ದರು. ಆ ಬಳಿಕ ಅವಕಾಶಕ್ಕಾಗಿ ಕಾಯುತ್ತಿದ್ದರೂ ತಂಡಕ್ಕೆ ಆಯ್ಕೆಯಾಗಿರ ಲಿಲ್ಲ. ದೇಸಿ ಕ್ರಿಕೆಟ್ನಲ್ಲಿ ಕರ್ನಾಟಕ ಹಾಗೂ ರೈಲ್ವೇಸ್ ತಂಡಗಳಿಗೆ ನಾಯಕಿಯಾಗಿದ್ದ ವೇದಾ, ಕಳೆದ ವರ್ಷ ಡಬ್ಲ್ಯುಪಿಎಲ್ ನಲ್ಲಿ ಯುಪಿ ವಾರಿಯರ್ಸ್ ಪರ ಆಡಿದ್ದರು. ಚಿಕ್ಕಮಗಳೂರಿನ ಕಡೂರಿನವರಾದ ವೇದ ಕರ್ನಾಟಕದ ಮಾಜಿ ಕ್ರಿಕೆಟರ್ ಅರ್ಜುನ್ ಹೊಯ್ಸಳ ಅವರನ್ನು ವಿವಾಹವಾಗಿದ್ದಾರೆ. ಕೋವಿಡ್ ವೇಳೆ ತಮ್ಮ ತಾಯಿ, ಸಹೋದರಿ ಯನ್ನು ಕಳೆದುಕೊಂಡಿದ್ದರು
ಬೆಂಗಳೂರು: ಈ ಬಾರಿಯೂ ಅಭಿಮನ್ಯು ಆನೆ ದಸರಾ ಜಂಬೂ ಸವಾರಿಯಲ್ಲಿ ಅಂಬಾರಿ ಹೊರಲಿದ್ದು, ಆಗಸ್ಟ್ 4ರಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ವಿಧ್ಯುಕ್ತವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.ವಿಕಾಸಸೌಧದಲ್ಲಿ 2025ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಒಟ್ಟು 14 ಆನೆಗಳ ಪೈಕಿ 9 ಆನೆಗಳ ಪಟ್ಟಿ ಬಿಡುಗಡೆ ಮಾಡಿದ ಅವರು, 2020ರಿಂದ ವಿಜಯ ದಶಮಿಯ ದಿನದಂದು ಜಂಬೂಸವಾರಿಯಲ್ಲಿ ನಾಡದೇವಿ ಚಾಮುಂಡೇಶ್ವರಿ ವಿಗ್ರಹವಿರುವ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯುವೇ ಕ್ಯಾಪ್ಟನ್ ಆಗಲಿದ್ದಾನೆ ಎಂದು ಮಾಹಿತಿ ನೀಡಿದರು.ನಾಗರಹೊಳೆಯ ಮತ್ತಿಗೋಡು ಶಿಬಿರದಲ್ಲಿರುವ 59 ವರ್ಷ ವಯಸ್ಸಿನ ಅಭಿಮನ್ಯು 300ಕ್ಕೂ ಹೆಚ್ಚು ಆನೆ ಸೆರೆ ಕಾರ್ಯಾಚರಣೆ ಹಾಗೂ 80ಕ್ಕೂ ಹೆಚ್ಚು ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಪ್ರಮುಖ ಕುಮ್ಕಿ ಆನೆ ಎಂದೇ ಖ್ಯಾತನಾಗಿದ್ದಾನೆ ಎಂದು ಹೇಳಿದರು. ಈ ಬಾರಿಯ ಜಂಬೂಸವಾರಿಯಲ್ಲಿ ಮತ್ತೀಗೋಡು ಶಿಬಿರದ ಭೀಮ (25 ವರ್ಷ), ದುಬಾರೆ ಶಿಬಿರದ ಕಂಜನ್ (24), ಧನಂಜಯ (44) ಮತ್ತು ಪ್ರಶಾಂತ್ (53), ಬಳ್ಳೆ…
ಫಹಾದ್ ಫಾಸಿಲ್ ಹೆಸರು ಕೇಳದ ಸಿನಿಮಾ ಪ್ರೇಮಿಗಳಿಲ್ಲ. ಮಲಯಾಳಂ ನಟ ಫಹಾದ್ ಈಗ ಭಾರತದ ಅತ್ಯುತ್ತಮ ನಟರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಅವರ ನಟನೆಗೆ ಫಿದಾ ಆಗದವರಿಲ್ಲ. ಫಹಾದ್ ಫಾಸಿಲ್ ಈಗ ಮಲಯಾಳಂ ಮಾತ್ರವೇ ಅಲ್ಲದೆ ಹಲವಾರು ಭಾಷೆಗಳ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಯಾವ ಪಾತ್ರಗಳೂ ಸವಾಲೆ ಅಲ್ಲವೇನೋ ಎಂಬಂತೆ ನಟಿಸುತ್ತಾರೆ ಫಹಾದ್. ಸಖತ್ ಬೇಡಿಕೆಯ ನಟರಾಗಿರುವ ಫಹಾದ್, ಬೇಡಿಕೆಗೆ ತಕ್ಕಂತೆ ಕೋಟ್ಯಂತರ ರೂಪಾಯಿ ಸಂಭಾವನೆಯನ್ನೂ ಪಡೆಯುತ್ತಾರೆ. ಆದರೆ ಫಹಾದ್ಗೆ ಟ್ಯಾಕ್ಸಿ ಡ್ರೈವರ್ ಆಗುವ ಆಸೆಯಂತೆ.ನಟರುಗಳು ನಿವೃತ್ತಿ ಹತ್ತಿರ ಬರುತ್ತಿದ್ದಂತೆ ಯಾವುದಾದರೂ ರಾಜಕೀಯ ಪಕ್ಷ ಸೇರಿಕೊಂಡು ಚುನಾವಣೆಗೆ ನಿಂತು ರಾಜಕಾರಣಿಯಾಗಿ ಆರಾಮವಾಗಿ ಜೀವನ ಕಳೆಯುತ್ತಾರೆ. ಇನ್ನು ಕೆಲವರು ಸಿನಿಮಾ ನಿರ್ಮಾಣ ಸಂಸ್ಥೆಗಳನ್ನು ತೆರೆದು ಸಿನಿಮಾ ಮಾಡುತ್ತಾ ಜೀವನ ಕಳೆಯುತತಾರೆ. ಆದರೆ ಫಹಾದ್ ಫಾಸಿಲ್ಗೆ ನಟನೆಯಿಂದ ನಿವೃತ್ತರಾದ ಬಳಿಕ ಟ್ಯಾಕ್ಸಿ ಡ್ರೈವರ್ ಆಗಬೇಕು ಎಂಬ ಆಸೆಯಂತೆ. ಹೀಗೆಂದು ಅವರೇ ಹೇಳಿಕೊಂಡಿದ್ದಾರೆ. 2020 ರಲ್ಲಿ ಫಹಾದ್ ಫಾಸಿಲ್ ಈಗಿನಷ್ಟು ಜನಪ್ರಿಯ ನಟ ಆಗಿರಲಿಲ್ಲ. ಆಗ ಸಂದರ್ಶನವೊಂದರಲ್ಲಿ…
Subscribe to Updates
Get the latest creative news from FooBar about art, design and business.