Author: Times of bayaluseeme
ಹಾಸನ: ತೋಟಕ್ಕೆ ತೆರಳಿದ್ದ ಯುವಕನೊಬ್ಬನ ಮೇಲೆಹೆಚ್ಚೇನು ದಾಳಿ ಮಾಡಿ ಕಡಿದಿದ್ದರಿಂದ ಆತ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬಾಣನಕೆರೆಯಲ್ಲಿ ಮಂಗಳವಾರ ನಡೆದಿದೆ. ಗ್ರಾಮದ ಚರಣ್ (30) ಎಂಬ ಯುವಕ ತನ್ನ ತಂದೆಯೊಂದಿಗೆ ತೋಟಕ್ಕೆ ಹೋಗಿದ್ದಾಗ ಹೆಚ್ಚೇನು ದಾಳಿ ನಡೆಸಿದ್ದವು. ದಾಳಿ ಯಿಂದ ತೀವ್ರ ಅಸ್ವಸ್ಥಗೊಂಡಿದ್ದ ಚರಣ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಆತನ ತಂದೆ ಸ್ಥಿತಿ ಗಂಭೀರವಾಗಿದೆ.
ರಾಜ್ಯದಲ್ಲಿ ಹೃದಯಾಘಾತದ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಬುಧವಾರ ಕೂಡ ನಾಲ್ವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಮಧ್ಯೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ನವಜಾತ ಶಿಶುವಿಗೆ ಹೃದಯಾಘಾತವಾಗಿದ್ದು, ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಶು ಆರೋಗ್ಯವಾಗಿದೆ ತಿಳಿದುಬಂದಿದೆ. ಎಂದು ಮೂಡಿಗೆರೆಯ ರಘು-ಸುಷ್ಮಾ ದಂಪ ತಿಯ ಮಗು ಹೃದಯಾಘಾತಕ್ಕೆ ಒಳ ಗಾಗಿದೆ. ಸುಷ್ಮಾ, ಹಾಸನದ ಆಸ್ಪತ್ರೆ ಯೊಂದಕ್ಕೆ ದಾಖಲಾಗಿದ್ದರು. ಶಿಶು ಹುಟ್ಟಿದ ಕೆಲ : ತಾಸುಗಳ ಬಳಿಕಹೃದಯಾಘಾತವಾಗಿದೆ. ಮಗುವನ್ನು 3 ತಾಸಲ್ಲಿ ಬೆಂಗಳೂರಿನ ಜಯದೇವ ಆಸ್ಪ ತ್ರೆಗೆ ಕರೆತರಲಾಯಿತು. ಅಲ್ಲಿ ತಜ್ಞ ವೈದ್ಯರ ತಂಡವು ತಕ್ಷಣವೇ ಚಿಕಿತ್ಸೆ ಆರಂ ಭಿಸಿ, ಮಗುವಿನ ಪ್ರಾಣ ಉಳಿಸಿದ್ದಾರೆಬುಧವಾರ ಈ ಮಧ್ಯೆ, ಕೊಪ್ಪಳದ 26 ವರ್ಷ ದ ಮಹಿಳೆ ಮಂಜುಳಾ ಹೂಗಾರ’ (25) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆ ಕೊಟ್ಟೂರಿನ ಎಚ್.ಕೆ.ರೇಖಾ (3), ಮಂಡ್ಯದ ಪಾಂಡವಪುರ ತಾಲೂನ ಗುಮ್ಮನಹಳ್ಳಿಯಲ್ಲಿ ಮಂಜುನಾಥ್ (44), ಬಾಗಲಕೋಟೆಯ ಜಮಖಂಡಿಯಲ್ಲಿ ಸಿದ್ದು ಮೀಸಿ (63) ಎಂಬುವರು ಬಲಿಯಾಗಿದ್ದಾರೆ. ಹೃದಯಾಘಾತಕ್ಕೆ
ಚನ್ನಪಟ್ಟಣ: ಡಿಜಿಟಲ್ ಅರೆಸ್ಟ್ ಹೆದರಿ ಬೆಸ್ಕಾಂ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆ ಚನ್ನ ಪಟ್ಟಣ ತಾಲೂಕಿನ ಕೆಲಗೆರೆ ಗ್ರಾಮದಲ್ಲಿ ನಡೆದಿದೆ. ವಿಕ್ರಮ್ ಗೋಸ್ವಾಮಿ ಎಂಬಾತ ಸಿಬಿಐ ಅಧಿಕಾರಿ ಹೆಸರಲ್ಲಿ ಕರೆ ಮಾಡಿ ನಿಮ್ಮ ಮೇಲೆ ಅರೆಸ್ಟ್ ವಾರೆಂಟ್ ಇದೆ ಎಂದು ಹೇಳಿ 11 ಲಕ್ಷ ರು. ದೋಚಿದ್ದಲ್ಲದೇ ಮತ್ತೆ ಹಣ ಕೊಡುವಂತೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೆ.ಕುಮಾರ್(48) ನೇಣಿಗೆ ಶರಣಾಗಿದ್ದಾರೆ. ಮೊದಲು 1 ಲಕ್ಷ 95 ಸಾವಿರ ರು. ಹಣ ಹಾಕುವಂತೆ ಸೂಚಿಸಿ ಖಾತೆ ನಂ. ಕಳುಹಿಸಿದ್ದ. ಭಯಪಟ್ಟು ಹಣ ಹಾಕಿದೆ. ನಂತರ ಮತ್ತೆ ಫೋನ್ ಮಾಡಿ ಆ ಅಕೌಂಟ್ಗೆ, ಈ ಅಕೌಂಟ್ಗೆ ಹಣ ಹಾಕು ಎಂದು ನನ್ನಿಂದ ಸುಮಾರು ₹11 ಲಕ್ಷ ಹಾಕಿಸಿಕೊಂಡಿದ್ದಾನೆ. ನಂತರ ಮತ್ತೆ *2.75 ಲಕ್ಷ ಕಳುಹಿಸು ಎಂದು ಕಾಡಿಸುತ್ತಿದ್ದಾರೆ. ಆದ ಕಾರಣ ನನ್ನ ಸಾವನ್ನು ನಾನೇ ತಂದುಕೊಂಡಿದ್ದೇನೆ’ ಎಂದು ಕುಮಾರ್ ಡೆತ್ ನೋಟ್ನಲ್ಲಿ ಉಲ್ಲೇಖಿಸಿ ದ್ದಾರೆ ಎಂದು ತಿಳಿದುಬಂದಿದೆ.ಎಂ.ಕೆ. ದೊಡ್ಡಿ ಠಾಣೆಯಲ್ಲಿ ಕೇಸ್…
ಚಿಕ್ಕಮಗಳೂರು: ತಮ್ಮೂರಿಗೆ ರಸ್ತೆ ಮಾಡಿಸಿಕೊಡುವಂತೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಮಲಗಾರು ಗ್ರಾಮದ 8ನೇ ತರಗತಿ ವಿದ್ಯಾರ್ಥಿನಿ ಸಿಂಧೂರ ಪತ್ರ ಬರೆದಿದ್ದಾಳೆ. ಮನೆಯಿಂದ ಶಾಲೆ 3-4ಕಿ.ಮೀ. ದೂರವಿದ್ದು, ಓಡಾಡಲು ತುಂಬಾ ಕಷ್ಟವಾಗಿದೆ. ಮಳೆಗಾಲದಲ್ಲಿ ರಸ್ತೆ ತುಂಬಾ ಹಾಳಾಗಿ ಕೆಸರು ಮಯವಾಗಿರುತ್ತದೆ. ವಾರದಲ್ಲಿ ಮೂರ್ನಾಲ್ಕು ದಿನವೂ ಶಾಲೆಗೆ ಹೋಗುವುದು ಕಷ್ಟವಾಗಿದೆ. ನಮ್ಮೂರಿನ ಜನರೆಲ್ಲರೂ ಪ್ರತಿಯೊಂದಕ್ಕೂ ಇದೇ ರಸ್ತೆ ಅವಲಂಬಿಸಿ ದ್ದಾರೆ. ನಮಗೆ ಓಡಾಡಲು ಬೇರೆ ರಸ್ತೆ ಇಲ್ಲ. ಊರಿನ ಮಹಿಳೆಯರು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ನಮಗಿರುವ ಒಂದೇ ರಸ್ತೆಯನ್ನು ದುರಸ್ತಿ ಮಾಡಿಸಿಕೊಡಿ ಎಂದು ಸಿಂಧೂರ, ಪ್ರಧಾನಿ ಮೋದಿಗೆ ಕನ್ನಡ-ಇಂಗ್ಲೀಷ್ ಎರಡರಲ್ಲೂ ಪತ್ರ ಬರೆದಿದ್ದಾಳೆ. ಆ ಪತ್ರ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ಜೇವರ್ಗಿ ಸರ್ಕಾರಿ ಆಸ್ಪತ್ರೆ ರಿಜಿಸ್ಟರ್ನಲ್ಲಿ ಸಿನಿಮಾ ಹಾಡು ಬರೆದ ಸಿಬ್ಬಂದಿ! ಹೊರ ರೋಗಿಗಳ ರಿಜಿಸ್ಟರ್ ಬುಕ್ನಲ್ಲಿ ಆಸ್ಪತ್ರೆ ಸಿಬ್ಬಂದಿ ರೋಗಿಗಳ ಮಾಹಿತಿ ದಾಖಲಿಸದೆ, ಹಳೆಯ ಜನಪ್ರಿಯ ಎರಡು ಕನಸು ಸಿನಿಮಾದ ‘ಪೂಜಿಸಲೆಂದೆ ಹೂಗಳ ತಂದೆ’ ಹಾಡು ಬರೆದಿರುವ ವಿಲಕ್ಷಣ ಪ್ರಕರಣ ಲೋಕಾಯುಕ್ತರು ಭೇಟಿ ನೀಡಿದಾಗ ಬೆಳಕಿಗೆ ಬಂದಿದೆ. ಹಾಡು ಬರೆದಿದ್ದು ಗಮನಿಸಿ ಅಧಿಕಾರಿಗಳು ಸಿಡಿಮಿಡಿಗೊಂಡು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ಗುರುವಾರ ವಿಚಾರಣೆಗೆ ಬರಲಿದೆ.. ನ್ಯಾಯಮೂರ್ತಿ ಜೆ.ಬಿ.ಪಾರ್ದಿವಾಲಾ ನೇತೃತ್ವದ ಪೀಠವಲ್ಲಿ ವಿಚಾರಣೆ ನಡೆಯಲಿದೆ.2024ರ ಜೂ.8ರಂದು ರೇಣುಕಾಸ್ವಾಮಿ-ಅವರನ್ನು ಅಪಹರಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಬಂಧನವಾಗಿ 6 ತಿಂಗಳ ಬಳಿಕ, 2024ರ ಡಿ.13 ರಂದು ಕರ್ನಾಟಕ ಹೈಕೋರ್ಟ್ ಅವಳಿಗೆ ಜಾಮೀನು ನೀಡಿತ್ತು. ಈ ಜಾಮೀನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಯ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಮೇ 21ರಂದು ನ್ಯಾಯಮೂರ್ತಿ ಪಾರ್ದೀವಾಲ ಪೀಠದಮುಂದೆ ಅರ್ಜಿ ವಿಚಾರಣೆಗೆ ಬಂದಿತ್ತು. ನ್ಯಾಯಪೀಠ ಅರ್ಜಿಯ ವಿಚಾರಣೆಯನ್ನು ಜು.17ಕ್ಕೆ ಮುಂದೂಡಿತ್ತು. ಹೀಗಾಗಿ, ಅರ್ಜಿಯ ವಿಚಾರಣೆ ಇಂದು ನಡೆಯಲಿದೆ ಈ ಮಧ್ಯೆ, ಮೇ 26ರಿಂದ ಸುಪ್ರೀಂಕೋರ್ಟ್ಗೆ ಬೇಸಿಗೆ ರಜೆ ಶುರುವಾಗಿದ್ದು, ಜುಲೈ 13ರ ತನಕ ಸುಪ್ರೀಂಕೋರ್ಟ್ಗೆ ರಜೆ ಇತ್ತು. ಈಗ ರಜೆಯ ಬಳಿಕ ಅರ್ಜಿ…
ಜನಾರ್ಧನರೆಡ್ಡಿ ಹಾಗ್ ಸಚಿವ ಬಿ.ಶ್ರೀರಾಮುಲು ಮಧ್ಯೆ ಇರುವ ವೈಮನಸ್ಸು ಶೀಘ್ರದಲ್ಲಿಯೇ ನಿವಾರಣೆಯಾಗಲಿದ್ದು, ರಾಜೀ ಆಗಲಿದ್ದಾರೆಂದು ಮಾಜಿ ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದಾರೆ. ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ನನ್ನ ಸಹೋದರರು. ಸಣ್ಣ-ಪುಟ್ಟ ವೈಮನಸ್ಸು ಇರುತ್ತದೆ. ಶೀಘ್ರದಲ್ಲಿ ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವ ಎ. ಸೋಮಣ್ಣ ನೇತೃತ್ವದಲ್ಲಿ ದೆಹಲಿಯಲ್ಲಿ ಸಂಧಾನಕ್ಕೆ ವರಿಷ್ಠರು ಕರೆದಿದ್ದಾರೆ. ಯಾವುದೋ ಕಾರಣಕ್ಕೆ ಇಬ್ಬರ ಮಧ್ಯೆ ವಿವಾದ ಉದ್ಭವಿಸಿದೆ. ಅವರಿಬ್ಬರು ಹಳೆಯ ಗೆಳೆಯರು. ಇಬ್ಬರು ಒಂದಾಗಲಿದ್ದು ಮತ್ತೆ ಬಳ್ಳಾರಿಯಲ್ಲಿ ಬಿಜೆಪಿ ಗತವೈಭವ ಮರುಕಳಿಸಲಿದೆ ಎಂದಿದ್ದಾರೆ.’
ಮಂಗಳೂರು: ಧರ್ಮಸ್ಥಳ ರಹಸ್ಯ ಅಂತ್ಯಸಂಸ್ಕರ ಪ್ರಕರಣವು ದಕ್ಷಿಣ ಕನ್ನಡ ಪೊಲೀಸರು ಮತ್ತು ಸಾಕ್ಷಿ ದೂರುದಾರರ ಪರ ವಕೀಲರ ನಡುವೆ ಘರ್ಷಣೆಗೆ ವೇದಿಕೆಯಾಗಿದೆ. ದೂರುದಾರ ಸಾಕ್ಷಿಗೆ ರಕ್ಷಣೆ ನೀಡುವುದಾಗಿ ಹೇಳಿದ ಕೆಲವು ದಿನಗಳ ನಂತರ, ಪೊಲೀಸರು ಆತ ಎಲ್ಲಿದ್ದಾನೆ ಗೊತ್ತಿಲ್ಲ ಎಂದು ಹೇಳಿದ್ದು ಈ ಹೇಳಿಕೆಯನ್ನು ಅವರ ವಕೀಲರು ತೀವ್ರವಾಗಿ ಪ್ರಶ್ನಿಸಿದ್ದಾರೆ. ಸಾಕ್ಷಿ ದೂರದಾರ ಇರುವ ಜಾಗ ನಮಗೆ ಗೊತ್ತಿಲ್ಲ. ಆದ್ದರಿಂದ ದೈಹಿಕ ರಕ್ಷಣೆ ನೀಡುವುದು ಅಸಾಧ್ಯವೆಂದು ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಹೇಳಿದ್ದಾರೆ. ಸಾಕ್ಷಿ ರಕ್ಷಣಾ ಯೋಜನೆಯ ನಿಯಮ 7 ಅನ್ನು ಉಲ್ಲೇಖಿಸಿ, ರಕ್ಷಣೆಯನ್ನು ಜಾರಿಗೊಳಿಸಲು ಸಾಕ್ಷಿಯ ಒಪ್ಪಿಗೆ ಮತ್ತು ಸಕ್ರಿಯ ಸಹಕಾರ ಎರಡೂ ಅಗತ್ಯವಿದೆ ಎಂದು ಹೇಳಿದ್ದಾರೆ. ಅವುಗಳಲ್ಲಿ ಯಾವುದೂ ಆಗಲಿಲ್ಲ ಎಂದು ಅವರು ಹೇಳಿದರು. ಜುಲೈ 10ರಂದು ದೂರುದಾರರ ವಕೀಲರಿಗೆ ರಕ್ಷಣೆ ನೀಡಲು ಅಗತ್ಯವಾದ ಕಾರ್ಯವಿಧಾನಗಳನ್ನು ಪೊಲೀಸರು ಔಪಚಾರಿಕವಾಗಿ ತಿಳಿಸಿದ್ದರು. ಆದರೆ ಅಂದಿನಿಂದ ನಮ್ಮ ನಡುವಿನ ಸಂವಹನವು ಇಮೇಲ್ಗೆ ಸೀಮಿತವಾಗಿದೆ. ದೂರುದಾರನ ಪ್ರಸ್ತುತ ಸ್ಥಳದ ಬಗ್ಗೆ…
ಸಾಮಾನ್ಯವಾಗಿ ಮಹಿಳೆಯರ ಆರೋಗ್ಯದ ವಿಷಯಕ್ಕೆ ಬಂದಾಗ ಸರಿಹೋಗಬಹುದು ಎಂದು ಹೇಳುವ ಸಂದರ್ಭಗಳೇ ಹೆಚ್ಚು. ಆದರೆ ಮಹಿಳೆಯರ ಕೆಲವು ಗಂಭೀರ ಆರೋಗ್ಯ ಸಮಸ್ಯೆಗಳು ಹೆಚ್ಚು ಅಪಾಯವನ್ನು ಉಂಟು ಮಾಡಬಹುದು. ಅಂತಹ ಸಮಸ್ಯೆಗಳಲ್ಲಿ ಕರುಳಿಗೆ ಸಂಬಂಧಿಸಿದ ಕಾಯಿಲೆ ಕೂಡ ಒಂದು. ಆರಂಭದಲ್ಲಿ ಕಿಬ್ಬೊಟ್ಟೆಯ ನೋವು ಕಾಣಿಸಿಕೊಳ್ಳುವ ಈ ಕರುಳಿನ ಸಮಸ್ಯೆ ಚಿಕಿತ್ಸೆ ಪಡೆಯದಿದ್ದರೆ ಇನ್ನಷ್ಟು ಅಪಾಯವನ್ನು ಉಂಟು ಮಾಡುತ್ತದೆ. ಜೀರ್ಣಕ್ರಿಯೆ ಸರಿಯಾಗಿ ಆಗದೇ ಇದ್ದಾಗ ಕರುಳಿಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಅದಕ್ಕೆ ಕಾರಣವೇನು, ಪರಿಹಾರದ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ. ಕರುಳಿನ ಸಮಸ್ಯೆ ಕರುಳಿಗೆ ಸಂಬಂಧಿಸಿದ ಅನಾರೋಗ್ಯ ಕಾಡಿದಾಗ ದೇಹವು ಪೋಷಕಾಂಶಗಳನ್ನು ಹೀರಿಕೊಳ್ಳಲು, ಕೊಬ್ಬನ್ನು ಸಂಗ್ರಹಿಸಲು ಮತ್ತು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲುಸಾಧ್ಯವಾಗದಸ್ಥಿತಿಗೆತಲುಪುತ್ತದೆ.ಬ್ಯಾಕ್ಟೀರಿಯಾದ ಬೆಳವಣಿಗೆ ಅಥವಾ ಪೋಷಕಾಂಶಗಳ ಕೊರತೆಯಿಂದ ತೂಕ ನಷ್ಟ ಅಥವಾ ದೇಹದ ತೂಕ ಹೆಚ್ಚಾಗಬಹುದು.ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಾದ ಮೊಡವೆ, ಎಸ್ಜಿಮಾ ಮತ್ತು ಸೋರಿಯಾಸಿಸ್ನಂತಹ ಕೆಲವು ಚರ್ಮದ ಸಮಸ್ಯೆಗಳು ಉಲ್ಬಣವಾಗಬಹುದು. ಮಹಿಳೆಯರಲ್ಲಿ…
ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದ ಸರಾಸರಿ ಪ್ರಕರಣಗಳು ಹೆಚ್ಚಾಗಿಲ್ಲ, ಈ ಹೆಚ್ಚಾಗಿದೆ. ಅಲ್ಲದೆ, ಕೋವಿಡ್ ಲಸಿಕೆಗೂ ಹೃದಯಾಘಾತ ಪ್ರಕರಣಗಳಿಗೂ ಸಂಬಂಧ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ಕಾಸಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಸಾರ್ವಜನಿಕರು ಅನಗತ್ಯವಾಗಿ ಆತಂಕ ಪಡುವುದು ಬೇಡ. ಬದಲಿಗೆ ವರ್ಷಕ್ಕೊಮ್ಮೆ ಹೃದಯ ತಪಾಸಣೆ ಮಾಡಿಸಿ, ಉತ್ತಮ ಜೀವನ ಶೈಲಿಗೆ ಒತ್ತು ನೀಡಿ ಎಂದರು. ಜಯದೇವ ಆಸ್ಪತ್ರೆಗಳಲ್ಲಿ ಹೃದ್ರೋಗ ತಜ್ಞ ಡಾ. ಕೆ.ಎಸ್.ರವೀಂದ್ರ ನಾಥ್ ಅವರ ನೇತೃತ್ವದಲ್ಲಿ ವಿಶ್ಲೇಷಣೆ ಯಲ್ಲಿ ಹೃದಯಾಘಾತದ ಕೋವಿಡ್ ಲಸಿಕೆಯೂ ಕಾರಣ ಇರಬ ಹುದೆಂಬ ಸುದ್ದಿಗಳಿಂದಾಗಿ ಜಯದೇವ ಆಸ್ಪತ್ರೆ ಸೇರಿ ಆನೇಕ ಆಸ್ಪತ್ರೆಗಳಲ್ಲಿನ ರೋಗಿ ಗಳ ಸಂಖ್ಯೆ ಮತ್ತು ಮುಂಜಾಗ್ರತೆ ಕ್ರಮ ಸನ್ನಿವೇಶ ಎದುರಾಗುತ್ತಿದೆ ಎಂದರು. ತೆಗೆದುಕೊಳ್ಳುವವರ ಸಂಖ್ಯೆ ಶೇ.31ರಷ್ಟು ಏರಿಕೆಯಾಗಿದೆ.
Subscribe to Updates
Get the latest creative news from FooBar about art, design and business.