Author: Times of bayaluseeme

ಕೂಲಿ ಸಿನಿಮಾದ ಯಶಸ್ಸಿನ ನಂತರ ಅಧ್ಯಾತ್ಮಿಕ ಪ್ರವಾಸದ ನಿಮಿತ್ತ ಹಿಮಾಲಯಕ್ಕೆ ತೆರಳಿರುವ ಸೂಪರ್ ಸ್ಟಾರ್ ರಜನಿಕಾಂತ್ ಗಂಗಾ ನದಿ ಸ್ನಾನದೊಂದಿಗೆ ಬೀದಿ ಬದಿಯಲ್ಲೇ ಊಟ ಮಾಡುತ್ತಾ ಪ್ರವಾಸ ಎಂಜಾಯ್ ಮಾಡುತ್ತಿದ್ದಾರೆ. ಬೀದಿ ಬದಿಯಲ್ಲೇ ಸರಳವಾಗಿ ಊಟ ಮಾಡುತ್ತಿರುವ ಅವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ರಿಷಿಕೇಶದಲ್ಲಿರುವ ಸ್ವಾಮಿ ದಯಾನಂದ ಆಶ್ರಮಕ್ಕೆ ಭೇಟಿ ನೀಡಿರುವ ರಜನಿಕಾಂತ್ ಗೌರವ ಸಲ್ಲಿಸಿ, ಗಂಗಾ ನದಿ ತಟದಲ್ಲಿ ಧ್ಯಾನಕ್ಕೆ ಕೂತು, ಗಂಗಾ ಆರತಿಯಲ್ಲಿ ಭಾಗವಹಿಸಿದ್ದರು‌. ನಂತರ ಪ್ರಯಾಣದ ನಡುವೆ ರಸ್ತೆ ಪಕ್ಕದ ತಡೆಗೋಡೆ ಮೇಲೆಯೆ ಅಡಿಕೆ ಎಲೆಯ ತಟ್ಟೆಯಲ್ಲಿ ರಜನಿಕಾಂತ್ ಊಟ ಮಾಡುತ್ತಿರುವ ಫೋಟೊ ವೈರಲ್ ಆಗಿದೆ‌.

Read More

ಉತ್ತರ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ. ಮಳೆಯ ರಭಸಕ್ಕೆ 14 ಜನ ಆಹುತಿಯಾಗುದ್ದು ಸೇತುವೆ, ರಸ್ತೆಗಳು ಕುಸಿದಿವೆ. ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಮಿರಿಕ್ ಮತ್ತು ಸುಖಿಯಾ ಪೋಖಾರಿಯಂತಹ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದ್ದು, ಪೊಲೀಸರು ಮತ್ತು ಸ್ಥಳೀಯ ಆಡಳಿತವು ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ವಿಪತ್ತಿನ ಪರಿಣಾಮ ಸಿಕ್ಕಿಂನ ಸಂಪರ್ಕವು ಕಡಿತಗೊಂಡಿದೆ ಎಂದು ವರದಿಯಾಗಿದೆ‌.ಭೂಕುಸಿತದ ಪರಿಣಾಮ ಡಾರ್ಜಿಲಿಂಗ್ ನಿಂದ ಪ್ರಮುಖ ನಗರಗಳನ್ನು ಸಂಪರ್ಕಿಸುವ ರಸ್ತೆಗಳು ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ರಸ್ತೆ ಸಂಚಾರಕ್ಕೆ ತಡೆ ಉಂಟಾಗಿದೆ. ಅಹಿತಕರ ಘಟನೆಗಳನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ಟೈಗರ್ ಹಿಲ್ ಮತ್ತು ರಾಕ್ ಗಾರ್ಡನ್ ಸೇರಿದಂತೆ ಡಾರ್ಜಿಲಿಂಗ್‌ನ ಪ್ರವಾಸಿ ತಾಣಗಳನ್ನು ಮುಚ್ಚಲು ಗೂರ್ಖಾಲ್ಯಾಂಡ್ ಪ್ರಾದೇಶಿಕ ಆಡಳಿತ ನಿರ್ಧರಿಸಿದೆ.

Read More

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಒಂದು ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಒದಗಿಸುವುದು ಸರಕಾರದ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ 22 ಜಿಲ್ಲೆಗಳಲ್ಲಿ ವೈದ್ಯಕೀಯ‌ ಕಾಲೇಜುಗಳನ್ನು ಆರಂಭಿಸಲಾಗಿದೆ. ಉಳಿದ‌ ಕಡೆಗಳಲ್ಲೂ ಶೀಘ್ರ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಬೆಳಗಾವಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ, ಗೃಹವೈದ್ಯರ ವಸತಿ ನಿಲಯ ನಿರ್ಮಾಣಕ್ಕೆ ಶಿಲಾನ್ಯಾಸ, ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿರುವ ನಗರ ಬಸ್ ನಿಲ್ದಾಣ ಹಾಗೂ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಪಿಎಂ-ಉಷಾ(ಮೇರು) ಕಟ್ಟಡ ಕಾಮಗಾರಿಗಳು ಮತ್ತು ಹೆದ್ದಾರಿಯಿಂದ ವಿಶ್ವವಿದ್ಯಾನಿಲಯದ ರಸ್ತೆ ನಿರ್ಮಾಣ ಕಾಮಗಾರಿಗೆ ಶನಿವಾರ(ಅ.4) ಬಿಮ್ಸ್ ಆವರಣದಲ್ಲಿ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರುಕಾರಣಾಂತರಗಳಿಂದ ಕುಂಟುತ್ತ ಸಾಗಿದ್ದ ಬಿಮ್ಸ್ ಆಸ್ಪತ್ರೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಇದೀಗ ಆರಂಭಿಸಲಾಗಿದೆ. ಹಂತ ಹಂತವಾಗಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.ಕೆ.ಎಲ್.ಇ‌. ಸಂಸ್ಥೆಯಿಂದ ವೈದ್ಯರನ್ನು ನಿಯೋಜಿಸಿ ಉಚಿತ ಸೇವೆ ಒದಗಿಸಿರುವುದರಿಂದ ಸರಕಾರದ‌ ವತಿಯಿಂದ ಧನ್ಯವಾದಗಳನ್ನು ತಿಳಿಸಿದರು. ಬಡವರು, ತಳ ಸಮುದಾಯದ ಜನರಿಗೆ ಹಾಗೂ…

Read More

ರಾಜ್ಯದ ಎಲ್ಲಾ ಮಲ್ಟಿಫ್ಲೆಕ್ಸ್ ಗಳಲ್ಲಿ ಸಿನಿಮಾ ಟಿಕೆಟ್‌ಗಳ ಮೇಲೆ ವಿಧಿಸಿದ್ದ 200 ರೂ.ಗಳ ದರ ಮಿತಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ಮುಂದುವರಿಸಿದೆ.ಕರ್ನಾಟಕ ಉಚ್ಚ ನ್ಯಾಯಾಲಯದ ಪ್ರಧಾನ ಪೀಠದಲ್ಲಿ ದಾಖಲಾಗಿದ್ದ, ರಿಟ್ ಅಪೀಲು ಸಂಖ್ಯೆ: 1623/2025ರ (ಕರ್ನಾಟಕ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ವಿರುದ್ಧ, ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ಇಂಡಿಯಾ) ಪ್ರಕರಣದಲ್ಲಿ ದಿನಾಂಕ:30.09.2025 ರಂದು ಮಾನ್ಯ ನ್ಯಾಯಾಲಯವು ಸಿನಿಮಾ ಟಿಕೆಟ್‌ಗಳ ಮೇಲೆ ವಿಧಿಸಿದ್ದ ರೂ.200/-ಗಳ ಮಿತಿಗೆ ದಿನಾಂಕ:23.09.2025ರಂದು ನೀಡಿದ ತಡೆಯಾಜ್ಞೆಯನ್ನು ಮುಂದುವರೆಸುವ ಜೊತೆಗೆ, ಈ ಕೆಳಕಂಡAತೆ ಆದೇಶಿಸಿರುತ್ತದೆ. ದಾಖಲೆಗಳ ನಿರ್ವಹಣೆ: ಪ್ರತಿವಾದಿ ಸಂಖ್ಯೆ 1 ಮತ್ತು ಅದರ ಅಡಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಮಲ್ಟಿಫ್ಲೆಕ್ಸ್ ಗಳು, ಮಾರಾಟವಾದ ಪ್ರತಿಯೊಂದು ಟಿಕೆಟ್ ಗೆ ಸಮಗ್ರ ಮತ್ತು ಲೆಕ್ಕಪರಿಶೋಧಿಸಬಹುದಾದ ದಾಖಲೆಗಳನ್ನು ನಿರ್ವಹಿಸಲು ನಿರ್ದೇಶಿಸಲಾಗಿದೆ. ದಾಖಲೆಗಳು ಈ ಕೆಳಗಿನವುಗಳನ್ನು ಒಳಗೊಂಡಿರಬೇಕು.ಮಠಾರಾಟದ ದಿನಾಂಕ ಮತ್ತು ಸಮಯ, ಆನ್‌ಲೈನ್ ಅಥವಾ ಭೌತಿಕ ಕೌಂಟರ್ ಗಳಲ್ಲಿ ಬುಕಿಂಗ್ ಮಾಡಿರುವ ವಿವರ, ಕ್ರೆಡಿಟ್/ಡೆಬಿಟ್ ಕಾರ್ಡ್, ಯುಪಿಐ ನೆಟ್ ಬ್ಯಾಂಕಿAಗ್ ಅಥವಾ ನಗದು ಪಾವತಿ ಮಾಡಿರುವ…

Read More

ಬಳ್ಳಾರಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಇನ್ನು ಮೂರು ದಿನ ಬಾಕಿ ಇದ್ದು, ನಗರ, ಸ್ಥಳೀಯ-ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿ ಇರುವ ಮನೆಗಳ ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.ಶನಿವಾರ, ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಈವರೆಗೆ ನಡೆದಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದ ಪ್ರಗತಿ ಸಭೆ ನಡೆಸಿ ಅವರು ಮಾತನಾಡಿದರು.ಬಳ್ಳಾರಿ ನಗರ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ಇನ್ನೂ ಪ್ರಗತಿಯಾಗಬೇಕಿದ್ದು, ಗಣತಿದಾರರಿಗೆ ಮಾರ್ಗದರ್ಶನ ನೀಡಬೇಕು. ಹೆಚ್ಚುವರಿ ಸಿಬ್ಬಂದಿ ಅಥವಾ ಈಗಾಗಲೇ ಪೂರ್ಣಗೊಳಿಸಿರುವ ಸಿಬ್ಬಂದಿಗಳಿದ್ದಲ್ಲಿ ನೇಮಿಸಿಕೊಳ್ಳಬೇಕು ಎಂದು ನೋಡೆಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಜೆಸ್ಕಾಂ ಇಲಾಖೆಯ ಮೀಟರ್ ರೀಡರ್ ಗಳು ಜಿಲ್ಲೆಯಲ್ಲಿ ವಿವಿಧ ಸರ್ಕಾರಿ ಕಟ್ಟಡಗಳಿಗೂ ಯುಹೆಚ್‌ಐಡಿ ಸ್ಟೀಕರ್ ಅಂಟಿಸಿದ್ದು, ಇದರಿಂದ ಗಣತಿದಾರರಿಗೆ ಸಮೀಕ್ಷಾ ಕಾರ್ಯಕ್ಕೆ ತೊಂದರೆಯಾಗಿದೆ. ಹಾಗಾಗಿ ಮೀಟರ್ ರೀಡರ್ ಗಳು ಗಣತಿದಾರರಿಗೆ ಪೂರಕ ಮನೆಗಳನ್ನು ತೋರಿಸಲು ಹಾಗೂ ಅವರ ಜೊತೆ ತೆರಳುವಂತೆಯೂ…

Read More

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 6ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ನಡೆಯಲಿರುವ ಜಿಲ್ಲಾ ವ್ಯಾಪ್ತಿಯ ರೂ. 2000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದ ನಿಮಿತ್ತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಶನಿವಾರ ಸಿದ್ಧತೆಗಳನ್ನು ಪರಿಶೀಲಿಸಿದರು. ಅ. 6ರ ಕಾರ್ಯಕ್ರಮಕ್ಕೆ ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಮಾರುತಿ ಸುಜೂಕಿ ಶೋ ರೂಂ ಎದುರುಗಡೆಯ ಅಗಡಿ ಲೇಔಟನಲ್ಲಿ ನಿರ್ಮಿಸಲಾಗಿರುವ ಮುಖ್ಯ ವೇದಿಕೆ, ಮಾಧ್ಯಮದ ಗ್ಯಾಲರಿ, ಗಣ್ಯರು, ಸಾರ್ವಜನಿಕರಿಗೆ ಕೂಡುವ ಆಸನಗಳ ವ್ಯವಸ್ಥೆ, ಕುಡಿಯುವ ನೀರು, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ವಿವಿಧ ಇಲಾಖೆಗಳ ಪ್ರದರ್ಶನ ಮಳಿಗೆಗಳು ಸೇರಿದಂತೆ ಇನ್ನಿತರ ಸಿದ್ಧತೆಗಳನ್ನು ಸಚಿವರು ವೀಕ್ಷಣೆ ಮಾಡಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು. ಇದೇ ವೇಳೆ ಸಚಿವರು ಮಾತನಾಡಿ, ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಫಲಾನುಭವಿಗಳು ಒಳಗೊಂಡಂತೆ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ…

Read More

ಇಂದು ಬೆಳಗಾವಿ ನಗರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ವೇಳೆ ನಗರದ ಪ್ರವಾಸಿ ಮಂದಿರದಲ್ಲಿ ಕನ್ನಡಪರ ಹೋರಾಟಗಾರರು ಮನವಿ ಸಲ್ಲಿಸಿದರು. ಈ ವೇಳೆ ಮನವಿ ಪತ್ರದಲ್ಲಿ ರಾಜ್ಯದಲ್ಲಿ ಅತ್ಯಂತ ವಿಜೃಂಭಣೆಯಿಂದ ರಾಜ್ಯೋತ್ಸವ ಬೆಳಗಾವಿ ನಗರದಲ್ಲಿ ನಡೆಯುತ್ತದೆ. ಅದಕ್ಕಾಗಿ ಎರಡು ಕೋಟಿ ಅನುದಾನ ನೀಡಬೇಕು. ಕನ್ನಡ ಪರ ಹೋರಾಟಗಾರರ ಮೇಲಿನ ಕೇಸ್ ವಾಪಾಸ್ ಪಡೆಯಬೇಕು. ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗಾಗಿ ಬೆಳಗಾವಿ ಜಿಲ್ಲೆಗೆ ಸುಸಜ್ಜಿತ ಹೆಚ್ಚಿನ ಸಂಖ್ಯೆಯ ಹಾಸ್ಟೇಲ್, ಚಿಕ್ಕೋಡಿ ನಗರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕು ಎಂದು ಮನವಿ ಸಲ್ಲಿಸಿದರು‌.

Read More

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟ ದರ್ಶನ್‌ ಜೈಲು ಪರಿಸ್ಥಿತಿ ಕಂಡು ಪತ್ನಿ ವಿಜಲಯಕ್ಷ್ಮಿ ಕಣ್ಣೀರಿಟ್ಟಿದ್ದಾರೆ‌. ಜೈಲಿನಲ್ಲಿ ಕನಿಷ್ಠ ಸೌಲಭ್ಯವೂ ಸಿಗದೆ ದರ್ಶನ್ ಜೈಲಿನಲ್ಲಿ ದಿನಗಳೆಯಲು ಕಷ್ಟ ಪಡುತ್ತಿದ್ದಾರೆ. ಪತಿ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಪರಿಸ್ಥಿತಿ ಕಂಡು ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಪರಪ್ಪನ ಅಗ್ರಹಾರದ ಸಿಬ್ಬಂದಿ ಬಳಿ ಹಾಸಿಗೆ, ದಿಂಬು, ಮಂಚಕ್ಕೆ ಅಂಗಲಾಚಿದರೂ ಜೈಲಾಧಿಕಾರಿಗಳು ಮಾತ್ರ ಶಿಸ್ತಿನಿಂದಿದ್ದಾರೆ. ಕೂರಲು ಕುರ್ಚಿಯೂ ಇಲ್ಲದ ಪತಿಯ ಸಂಕಷ್ಟಕ್ಕೆ ವಿಜಯಲಕ್ಷ್ಮಿ ಕಣ್ಣೀರು ಹಾಕಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಎರಡನೇ ಬಾರಿ ಜೈಲು ಸೇರಿದ್ದು ಒಂದು ಕಡೆಯಾದರೆ, ಪ್ರಕರಣದ ಸಹ ಆರೋಪಿಗಳು ಸಹ ದರ್ಶನ್ ವಿರುದ್ಧ ಮುನಿಸಿಕೊಂಡಿದ್ದಾರಂತೆ. ದರ್ಶನ್ ಜೊತೆಗೆ ಮಾತು, ಸ್ನೇಹ ಅಷ್ಟಕಷ್ಟೇ ಎಂದು ವರದಿಯಾಗಿದೆ.

Read More

ಸೂಪರ್ ಸ್ಟಾರ್ ‘ರಜನಿಕಾಂತ್’ ಕೂಲಿ ಸಿನಿಮಾದ ಯಶಸ್ಸಿನ ನಂತರ ದಿಢೀರ್ ಹಿಮಾಲಯಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಆಗಸ್ಟ್ 14ರಂದು ಬಿಡುಗಡೆಯಾಗಿದ್ದ ಲೋಕೇಶ್ ಕನಗರಾಜ್ ನಿರ್ದೇಶನದ ಕೂಲಿ ಸಿನಿಮಾ ಹಿಟ್ ಆಗಿತ್ತು. ಇದು 500 ಕೋಟಿ ಗಳಿಕೆ ಮಾಡಿದೆ ಎಂಬ ವರದಿಗಳು ಹರಿದಾಡುತ್ತಿವೆ‌. ಈ ಯಶಸ್ಸಿನ ನಂತರ ರಜನೀಕಾಂತ್ ನೆಲ್ಸನ್ ದಿಲೀಪಕುಮಾರ್ ನಿರ್ದೇಶಿಸುತ್ತಿರುವ ‘ಜೈಲರ್ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮುಂದಿನ ವರ್ಷ ಜೂನ್ ವೇಳೆಗೆ ಈ ಸಿನಿಮಾ ತೆರೆಗೆ ಬರಲಿದೆ ಎಂದು ಸ್ವತಃ ರಜನಿ ಅವರೇ ಹೇಳಿದ್ದಾರೆ. ಈ ನಡುವೆ ಪ್ರತಿ ಸಿನಿಮಾ ಚಿತ್ರೀಕರಣದ ನಂತರ ವಿಶ್ರಾಂತಿಗಾಗಿ ಹಿಮಾಲಯಕ್ಕೆ ಪ್ರಯಾಣ ಬೆಳೆಸುವಂತೆ ಈ ಸಾರಿಯು ಪ್ರಯಾಣ ಬೆಳೆಸಿದ್ದಾರೆ. ಒಂದು ವಾರದ ಅವರ ಹಿಮಾಲಯ ಪ್ರವಾಸದ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Read More

ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ-1 ಸಿನಿಮಾ ಎಲ್ಲೆಡೆ ಭರಪೂರ ಪ್ರದರ್ಶನ ಕಾಣುತ್ತಿದೆ. ಎಲ್ಲಾ ಕಡೆ ಚಿತ್ರದ ಟಿಕೆಟ್ ಸೋಲ್ಡ್ ಔಟ್ ಆಗಿವೆ. ಶನಿವಾರ, ಭಾನುವಾರ ವೀಕೆಂಡ್ ಆಗಿರೋ ಕಾರಣ ಹೌಸ್‌ ಫುಲ್ ಪ್ರದರ್ಶನಕ್ಕೆ ಕಾಂತಾರ ಸಜ್ಜಾಗಿದೆ. ಹೊಂಬಾಳೆ ಫಿಲ್ಮ್ಸ್ವನಿಂದ ನಿರ್ಮಾಣಗೊಂಡಿರುವ ಈ ಚಿತ್ರ ಈಗಾಗಲೇ ಬಾಕ್ಸ್ ಆಫೀಸ್‌ನಲ್ಲಿ ತನ್ನ ವಿಜಯೋತ್ಸವವನ್ನು ಪ್ರಾರಂಭಿಸಿದ್ದು ಬಿಡುಗಡೆಯಾದ ಎರಡೇ ದಿನಗಳಲ್ಲಿ 100 ಕೋಟಿ ಕ್ಲಬ್ ಗೆ ಸೇರಿ ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ವಾರಾಂತ್ಯದ ಜನದಟ್ಟಣೆ ಕಲೆಕ್ಷನ್‌ಗಳನ್ನು ಇನ್ನಷ್ಟು ಹೆಚ್ಚಿಸುವ ನಿರೀಕ್ಷೆಯಿದೆ. ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರೊಂದಿಗೆ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ಜಯರಾಮ್ ಮತ್ತು ಪ್ರಕಾಶ್ ತುಮಿನಾಡು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಏಳು ಭಾಷೆಗಳಲ್ಲಿ ಬಿಡುಗಡೆಯಾಗಿರುವ ಈ ಚಿತ್ರದ ವ್ಯಾಪ್ತಿಯು ಕರ್ನಾಟಕವನ್ನು ಮೀರಿ ವಿಸ್ತರಿಸಿದೆ.

Read More