Author: Times of bayaluseeme

ಚಿತ್ರದುರ್ಗ: ಮಹಿಳೆಯರಿಗೆ ಗೌರವ ಕೂಡುವುದರ ಬಗ್ಗೆ ಬರೀ ಬಾಯಿ ಮಾತಿನಲ್ಲಿ ಹೇಳುವುದನ್ನು ಬಿಟ್ಟು ನಿಜವಾಗಿ ಮಹಿಳೆಯರಿಗೆಗೌರವ ಕೊಡುವುದನ್ನು ಕಲಿಯಬೇಕಿದೆ ಎಂದು ಸಮಾಜವಾದಿಪಾರ್ಟಿಯ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮೀಕಾಂತ ಹೇಳಿದರು.ಯು.ಪಿ.ಯ ಮಾಜಿ ಸಂಸದೆ ದಿ. ಫೋಲನ್ ದೇವಿ ಹುತಾತ್ಮ ದಿನದ ಅಂಗವಾಗಿ ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಒಂದು ನೆನಪು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದಅವರುಮಹಿಳೆಯರಿಗೆ ಗೌರವವನ್ನು ನೀಡುತ್ತೇವೆ ಎಂದು ಬರೀ ಬಾಯಿ ಮಾತಿನಲ್ಲಿ ಹೇಳಲಾಗುತ್ತಿದೆ, ಅದರೆ ನಿಜವಾಗಿಯೂ ಮಹಿಳೆಯರಿಗೆಸಮಾಜದಲ್ಲಿ ಗೌರವ ಸಿಗುತ್ತಿಲ್ಲ, ನಮ್ಮ ಹಿಂದೆ ನಡೆದಂತಹ ಚರಿತ್ರೆಯನ್ನು ಓದಿದಾಗ ಮಾತ್ರ ನಮ್ಮಲ್ಲಿ ಬದಲಾವಣೆ ಸಾಧ್ಯವಿದೆ.ಸಮುದಾಯದಲ್ಲಿ ನೊಂದ ಮಹಿಳೆಯರಿಗೆ ಪ್ರಜ್ಞಾವಂತರಾದವರು ಅವರಿಗೆ ಅನ್ಯಾಯವಾದಾಗ ನ್ಯಾಯವನ್ನು ಕೂಡಿಸುವಕಾರ್ಯವನ್ನು ಮಾಡಬೇಕಾದ್ದು ಎಲ್ಲರ ಕರ್ತವ್ಯವಾಗಿದೆ ಎಂದರು. ಇದೇ ಹಿನ್ನಲೆಯಲ್ಲಿ ಯು.ಪಿ.ಯ ಮಾಜಿ ಸಂಸದೆ ದಿ. ಫೋಲನ್ ದೇವಿಯ ತಮ್ಮ ಬದುಕಿನಲ್ಲಿ ಕಷ್ಟ, ನೋವು, ದೌರ್ಜನ್ಯ, ದಬ್ಬಾಳಿಕೆಯನ್ನು ಅನುಭವಿಸಿದ್ದು ಅದನ್ನು ಅವರು ಮೆಟ್ಟಿ ನಿಲ್ಲುವ ಸಲುವಾಗಿ ಡಕಾಯಿತಿಯಾದಳು ಇದರಿಂದ ತನ್ನ ಮೇಲೆ ದೌರ್ಜನ್ಯದಬ್ಬಾಳಿಕೆ, ಅತ್ಯಾಚಾರ ಮಾಡಿದಂತಹವರನ್ನು…

Read More

ಚಿತ್ರದುರ್ಗ ತಾಲೂಕಿನ ಮುದ್ದಾಪುರ ಗ್ರಾಮದಲ್ಲಿ ನಾಯಿಗಳ ದಾಳಿಗೆ 500ಕ್ಕೂ ಹೆಚ್ಚು ನಾಟಿ ಕೋಳಿಗಳು ಬಲಿಯಾಗಿವೆ. ಗ್ರಾಮದ ರಂಗನಾಥ ಎಂಬುವವರ ಜಮೀನೊಂದರಲ್ಲಿ ಬಾಡಿಗೆ ಶೆಡ್ ಪಡೆದು ಸಾಕಿದ್ದ ನಾಟಿ ಕೋಳಿ ಫಾರ್ಮ್ಗೆ ಏಕಾಏಕಿ ನಾಯಿಗಳು ನುಗ್ಗಿ ದಾಳಿ ಮಾಡಿದ ಪರಿಣಾಮ 500ಕ್ಕೂ ಹೆಚ್ಚು ನಾಟಿ ಕೋಳಿಗಳು ಸಾವನ್ನಪ್ಪಿವೆ. ಇದರಿಂದಾಗಿ ರೈತ ರಂಗನಾಥ್ ಅವರಿಗೆ ಸುಮಾರು ಒಂದು ಲಕ್ಷ ರೂಪಾಯಿ ನಷ್ಟ ಉಂಟಾಗಿದ್ದು, ಘಟನೆ ಬಗ್ಗೆ ರಂಗನಾಥ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾನೆ. ಅಷ್ಟೇ ಅಲ್ಲದೆ ನಾಟಿಕೋಳಿ ಉದ್ಯಮವನ್ನೆ ನಂಬಿಕೊಂಡಿದ್ದ ರಂಗನಾಥ್ ಮುಂದೇನು ಮಾಡಬೇಕೆಂದು ತಿಳಿಯುತ್ತಿಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

Read More

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿನ ‘ದಿ ರಾಮೇಶ್ವರಂ ಕೆಫೆ’ಯಲ್ಲಿನ ಪೊಂಗಲ್‌ನಲ್ಲಿ ಕೀಟ ಪತ್ತೆಯಾಗಿದೆ ಎಂಬ ಆರೋಪದ ವಿಡಿಯೊ ವೈರಲ್ ಆದ ಬೆನ್ನಲ್ಲೇ 6 ಸ್ಪಷ್ಟಿಕರಣ ನೀಡಿರುವ ಕೆಫೆ ಆಡಳಿತ ಮಂಡಳಿ, ಆರೋಪವನ್ನು ನಿರಾಕರಿಸಿದೆ. ಕೆಫೆಯಲ್ಲಿ ನೀಡಿದ್ದ ಆಹಾರದಲ್ಲಿ ಕೀಟವಿದೆ ಎಂಬ ಸುಳ್ಳು ಆರೋಪ ಮಾಡಿದ್ದು, ಅಪರಿಚಿತರು 25 ಲಕ್ಷ ರೂ. ಸುಲಿಗೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಮೇಶ್ವರಂ ಕೆಫೆ ವತಿಯಿಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಏರ್‌ಪೋರ್ಟ್‌ನ ಕೆಫೆಗೆ ಬಂದಿದ್ದ ಕೆಲವರು ಅವರೇ ಆಹಾರದಲ್ಲಿ ಕೀಟವಿದೆ ಎಂದು ವಿಡಿಯೊ ಮಾಡಿ ತಗಾದೆ ತೆಗೆದಿದ್ದಾರೆ. ಬಳಿಕ ಹಣ ನೀಡದಿದ್ದರೆ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದಾರೆ. ಇದಕ್ಕೆ ಪೂರಕವಾಗಿ ಅಪರಿಚಿತನೊಬ್ಬಕರೆ ಮಾಡಿ 25 ಲಕ್ಷ ರೂ.ಗಳನ್ನು ಬ್ರಿಗೇಡ್ ರಸ್ತೆಗೆ ತಂದು ಕೊಡುವಂತೆ ಬೆದರಿಸಿದ್ದ. ಈ ಘಟನೆಗಳು ಸಂಸ್ಥೆಯ ವಿರುದ್ಧ ಮಾಡಿರುವ ಪಿತೂರಿಯಾಗಿದೆ ಎಂದು ತಿಳಿಸಿದೆ. ಅಲ್ಲದೆ, ಈ ಕುರಿತು ನಗರ ಪೊಲೀಸ್ ಆಯುಕ್ತರಿಗೆ ನೀಡಿರುವ ದೂರಿನ ಪತ್ರಿಯನ್ನು ಹಂಚಿಕೊಂಡಿದೆ.

Read More

ದಾವಣಗೆರೆ: ಪರಿಶಿಷ್ಟಜಾತಿಯಲ್ಲಿ ಒಳಮೀಸಲಾತಿ ಜಾರಿಗೊಳ್ಳುವವರೆಗೂ ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿನ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ, ಪ್ರಕ್ರಿಯೆಗಳನ್ನು ತಕ್ಷಣ ಸ್ಥಗಿತಗೊಳಿಸದಿದ್ದರೆ ರಾಜ್ಯ ವ್ಯಾಪಿ ತೀವ್ರ ಸ್ವರೂಪದ ಹೋರಾಟ ನಡೆಸಬೇಕಾದೀತು ಎಂದು ತಾಪಂ ಮಾಜಿ ಸದಸ್ಯ, ಬಿಜೆಪಿ ಮಾಯಕೊಂಡ ಮುಖಂಡ ಆಲೂರು ನಿಂಗರಾಜ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.ಸರ್ಕಾರವು ವಿವಿಧ ಇಲಾಖೆಗಳ ಹುದ್ದೆಗಳಿಗೆ ನೇಮಕಾತತಿ ಪ್ರಕ್ರಿಯೆ ಕೈಗೊಳ್ಳಲು ಅಧಿಸೂಚನೆ ಹೊರಟಿಸಿದ್ದು ಸರಿ ಯಲ್ಲ. ಮೊದಲು ಒಳ ಮೀಸಲಾತಿ ಜಾರಿ ಗೊಳಿ ಸುವ ಕೆಲಸ ಮಾಡಲಿ. ಆ ನಂತರ ಹುದ್ದೆಗಳ ನೇಮ ಕಕ್ಕೆ ಅಧಿಸೂಚನೆ ಹೊರಡಿಸಲಿ. ಈಗ ಹೊರಡಿಸಿದ ಅಧಿಸೂಚನೆ ಯನ್ನು ತಕ್ಷಣ ತಕ್ಷಣ ಹಿಂಪಡೆದು, ನೇಮಕಾತಿ ಪ್ರಕ್ರಿಯೆ ತಡೆಯಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ರಾಜ್ಯದ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆ ಹೊರಡಿಸಬಾರದು. ಈ ಬಗ್ಗೆ ಸಚಿವ ಸಂಪುಟದಲ್ಲೇ ನಿರ್ಣಯವಾಗಿದ್ದು, ಈ ಬಗ್ಗೆ ಸೂಚನೆ ಸಹ ನೀಡಿದೆ. ಆದರೂ ರಾಜ್ಯ ಸರ್ಕಾರ ದಲಿತರಿಗೆ ವಂಚನೆ…

Read More

ಹುಬ್ಬಳ್ಳಿ: ಯೂರಿಯಾ ಗೊಬ್ಬರಕ್ಕಾಗಿ ಗದಗ, ಧಾರವಾಡ, ವಿಜಯನಗರ ಜಿಲ್ಲೆಯ ಕೆಲವೆಡೆ ರೈತರು ಪರದಾಡಿದ್ದು, ಗೊಬ್ಬರ ಸಿಗದೇ ತೊಂದರೆಗೊಳಗಾದರು ಗದಗ ಗ್ರಾಮೀಣ, ಮುಳಗುಂದ, ಲಕ್ಷ್ಮೀಶ್ವರ, ಗಜೇಂದ್ರಗಡ, ನರಗುಂದ ತಾಲೂಕಿನಲ್ಲಿ ರೈತರು ಗೊಬ್ಬರದ ಅಂಗಡಿ ಗಳ ಮುಂದೆ ಸರದಿ ಸಾಲಿನಲ್ಲಿ ನಿಂತರೂ ಬೇಡಿಕೆಗೆ ಅನುಗುಣವಾಗಿ ಗೊಬ್ಬರ ದೊರೆ ಯಲಿಲ್ಲ. ವಾಡಿಕೆಗಿಂತ ಹೆಚ್ಚು ಮಳೆಯಾಗಿ ದು ತೇವಾಂಶ ಹೆಚ್ಚಿ ಬೆಳೆಗಳಿಗೆ ಹಳದಿ ರೋಗ ಬಾಧಿಸುತ್ತಿದೆ. ರೋಗ ನಿಯಂತ್ರ ಣಕ್ಕೆ ರೈತಮ ಯೂರಿಯಾ ಗೊಬ್ಬರ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ಯೂರಿಯಾಕ್ಕೆ ಮುಗಿಬಿದ್ದಿದ್ದು ಗಜೇಂದ್ರಗಡದಲ್ಲಿ ರೈತರು ರಸಗೊಬ್ಬರ ಅಂಗಡಿಗೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದ್ದಾರೆ. ಮಳೆ ಲೆಕ್ಕಿಸದೆ ಸರತಿ ಸಾಲು: ಲಕ್ಷ್ಮೀಶ್ವರ ಪಟ್ಟಣದ 2 ಗೊಬ್ಬರ ಮಾರಾಟದ ಅಂಗಡಿಗಳುಯೂರಿಯಾ ಬಂದಿದೆ ಎನ್ನುವ ಮಾಹಿತಿ ಸಿಕ್ಕ ರೈತರು ಬೆಳಗ್ಗೆಯೇ ಜಿಟಿ ಜಿಟಿ ಮಳೆ ಲೆಕ್ಕಿಸಿ ಸರತಿ ಸಾಲಿನಲ್ಲಿ ಆಧಾ‌ರ್ ಕಾರ್ಡ್ ಹಿಡಿದು ಕಾಯುತ್ತಿದ್ದರು.ಇತ್ತ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಹಲವಾಗಿಲು ಗ್ರಾಮದಲ್ಲಿ ಬುಧವಾರ ಅಧಿಕಾರಿಗಳಿಗೆ ದಿಗ್ಧಂಧನ ವಿಧಿಸಿ ಬೀಗ ಹಾಕಿ…

Read More

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಣೆ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ರಾಮ ಚಂದ್ರರಾವ್ ಮಗಳು, ನಟಿ ರನ್ಯಾ ರಾವ್‌ ಮತ್ತೊಬ್ಬ ಸ್ನೇಹಿತನನ್ನು ಕಂದಾಯ ಗುಪ್ತಚರ ಜಾರಿನಿರ್ದೇಶನಾಲಯ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.ಹೈದರಾಬಾದ್ ಮೂಲದ ಭರತ್ ಕುಮಾರ್‌ಜೈನ್ ಬಂಧಿತನಾಗಿದ್ದು, ಈತನ ಮೂಲಕ ರನ್ಯಾ ರಾವ್‌ಗೆ ಚಿನ್ನ ಸಾಗಣೆ ಜಾಲದ ಪರಿಚಯವಾಗಿತ್ತು. ಮಾರಾಟದಲ್ಲಿ ಆತ ಪ್ರಮುಖ ಪಾತ್ರ ವಹಿಸಿದ್ದ ಎಂದು ತಿಳಿದು ಬಂದಿದೆ. ಕಳೆದ ಮಾರ್ಚ್‌ನಲ್ಲಿ ದುಬೈನಿಂದ ಅಕ್ರಮವಾಗಿ 12.5 ಕೋಟಿ ರು. ಮೌಲ್ಯದ 14 ಕೆ.ಜಿ. ಚಿನ್ನ ಸಾಗಿಸುವಾಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ರಾವ್‌ರನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಆಕೆಯ ವಿಚಾರಣೆ ವೇಳೆ ಕಳ್ಳ ಸಾಗಣೆ ಸಂಪರ್ಕ ಜಾಲ ಬಯಲಾಗಿತ್ತು. ಪ್ರಕರಣದಲ್ಲಿ ಆಕೆಯ ಸ್ನೇಹಿತ ಹಾಗೂ ಉದ್ಯಮಿ ಪುತ್ರ ತರುಣ್ ರಾಜು ಹಾಗೂ ಬಳ್ಳಾರಿ ಚಿನ್ನಾಭರಣ ವ್ಯಾಪಾರಿ ಸಾಹಿಲ್ ಜೈನ್‌ರನ್ನು ಅಧಿಕಾರಿಗಳು ಬಂಧಿಸಿದ್ದರು. ಐದು ತಿಂಗಳ ಅವಧಿಯಲ್ಲಿ ಆರೋಪಿಗಳು 50 ಕೋಟಿ ರು.ಗೂ ಅಧಿಕ ಚಿನ್ನ ಸಾಗಿಸಿರುವುದು ಪತ್ತೆಯಾಗಿತ್ತು. ರನ್ಯಾ…

Read More

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದಲ್ಲೂ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡಿದ್ದು, ಆ ಕಾರಣದಿಂದ ಕಾಂಗ್ರೆಸ್‌ಗೆ ಹಿನ್ನಡೆಯಾಗುವಂತಾಗಿದೆ ಎಂಬ ಸತ್ಯ ಈಗ ಬಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮತಗಳ್ಳತನ ಕುರಿತ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಾದವನ್ನು ಪುಷ್ಟಿಕರಿಸಿ ಮಾಧ್ಯಮಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಫಲಿತಾಂಶ ನಮಗೆ ಅಚ್ಚರಿಯನ್ನುಂಟು ಮಾಡಿದ್ದಲ್ಲದೆ, ಈ ಫಲಿತಾಂಶ ಹಲವು ಅನುಮಾನಗಳನ್ನು ಕೂಡ ಹುಟ್ಟು ಹಾಕಿತ್ತು. ಆ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಅಕ್ರಮ ಎಸಗಿರುವುದರಿಂದಲೇ ಕಾಂಗ್ರೆಸ್‌ಗೆ ಹಿನ್ನಡೆಯಾಗುವಂತಾಗಿತ್ತು ಎನ್ನುವ ಸತ್ಯ ಈಗ ಬಯಲಾಗುತ್ತಿದೆ ಎಂದಿದ್ದಾರೆ. ರಾಹುಲ್ ಅವರು ಚುನಾವಣಾ ಆಯೋಗ ನಡೆಸಿರುವ ಅಕ್ರ ಮಗಳ ದಾಸ್ತಾನನ್ನು ಒಂದೊಂದಾಗಿ ಬಯಲಿಗಳಯುತ್ತಿದ್ದಾರೆ. ಅದರಲ್ಲಿ ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆಯೂ ವಿವರಗಳನ್ನು ನೀಡಿದ್ದಾರೆ. ಅಲ್ಲದೆ, ಕರ್ನಾಟಕದಲ್ಲಿ ಚುನಾವಾಣಾ ಆಯೋಗ ಆಕ್ರಮ ನಡೆಸಿರುವುದಕ್ಕೆಸಾಕ್ಷ್ಯಗಳವೆ ಎಂಬ ರಾಹುಲ್‌ ಹೇಳಿಕೆಯನ್ನು ನಾನು ಸಂಪೂರ್ಣವಾಗಿ ಅನು…

Read More

ಬೆಂಗಳೂರು: ಅರಣ್ಯ ಹಕ್ಕು ಕಾಯ್ದೆ ಅಡಿ ಅರಣ್ಯ ವಾಸಿಗಳು, ಬುಡಕಟ್ಟು ಸಮುದಾಯದವರು ಮತ್ತು ಸ್ಥಳೀಯರು ತಮ್ಮ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸಲು ಅವಕಾಶವಿದೆ. ಆದರೆ, ನೆರೆ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜಾನುವಾರುಗಳನ್ನು ತಂದು ರಾಜ್ಯದ ಅರಣ್ಯ ಪ್ರದೇಶದಲ್ಲಿ ಮೇಯಿಸಲು ಮಾತ್ರ ಕಡಿವಾಣ ಹಾಕಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.ಮೇವಿಗಾಗಿ ಅರಣ್ಯದೊಳಗೆ ಜಾನುವಾರುಗಳನ್ನು ಕಳುಹಿಸುವುದನ್ನು ನಿಷೇಧಿಸುವ ಆದೇಶ ಕುರಿತ ಗೊಂದಲಕ್ಕೆ ಸಂಬಂಧಿಸಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಈಶ್ವರ್ ಖಂಡ್ರೆ, ಮಲೆಮಹದೇಶ್ವರ ಬೆಟ್ಟ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಸುಮಾರು 33 ಸಾವಿರ ಜಾನುವಾರುಗಳಿವೆ ಎಂದು ಪಶುಸಂಗೋಪನಾ ಇಲಾಖೆಯ ಅಂಶದಿಂದ ಬಹಿರಂಗವಾಗಿದೆ. ಅದರಡಿ ಜಾನುವಾರುಗಳನ್ನು ಹೊಡೆದುಕೊಂಡು ಹೋದಾಗ ವನ್ಯ ಜೀವಿಗಳಿಗೆ ಕೊರತೆ, ನೀರಿನ ಕೊರತೆ ಎದುರಾಗುತ್ತದೆ. ಆ ಹಿನ್ನೆಲೆಯಲ್ಲಿ ಜಾನುವಾರುಗಳನ್ನು ಹಾಗೆ ಮೇವಿಗಾಗಿ ಬಿಡುವುದನ್ನು ನಿಷೇದಿಸಲು ಸೂಚಿಸಲಾಗಿದೆ. ಮದ್ರಾಸ್ ಹೈಕೋರ್ಟ್ ಆದೇಶದಂತೆ ತಮಿಳುನಾಡಿನ ಅರಣ್ಯಗಳಲ್ಲಿ ಜಾನುವಾರುಗಳನ್ನು ಮೇಯಿಸುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಅಲ್ಲಿನ ಸಾವಿರಾರು ಜಾನುವಾರುಗಳನ್ನು ನಮ್ಮ ಕಾಡಿನಲ್ಲಿ ಮೇಯಿಸಲಾಗುತ್ತಿದೆ ಎಂದಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ

Read More

ಚಿತ್ರದುರ್ಗ : ಈ ಬಾರಿ ಚಿತ್ರದುರ್ಗದ ಹಿಂದೂ ಮಹಾಗಣಪತಿ ಹಬ್ಬ 18 ದಿನಗಳ ಅದ್ದೂರಿಯಾಗಿ ನಡೆಯಲಿದೆ ಎಂದು ದಕ್ಷಿಣ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದರು.ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗಣೇಶ ಹಬ್ಬವನ್ನು ದೇಶದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಎಲ್ಲರನ್ನೂ ಒಂದುಗೂಡಿಸಿ ರಾಷ್ಟ್ರೀಯ ಭಾವನೆ ಮೂಡಿಸುವ ಕೆಲಸ ಆಗುತ್ತಿದೆ. ಸಾರ್ವಜನಿಕ ಗಣೇಶೋತ್ಸವನ್ನು ಚಿತ್ರದುರ್ಗದಲ್ಲಿ 2007ರಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ನೇತೃತ್ವದಲ್ಲಿ ಆರಂಭ ಮಾಡಿದ್ವಿ. 17 ವರ್ಷಗಳಿಂದ ಹಿಂದೂ ಮಹಾ ಗಣಪತಿ ಉತ್ಸವನ್ನು ವಿಜೃಂಭಣೆಯಿಂದ ಆಚರಿಸಿಕೊಂಡು ಬಂದಿದ್ದೇವೆ. ಒಂದು ತಿಂಗಳು ನಡೆಯುವ ಈ ಉತ್ಸವ, ಇಡೀದೇಶಾದ್ಯಂತ ಪ್ರಸಿದ್ಧಿ ಪಡೆದಿದೆ. ಹಿಂದೂ ಮಹಾಗಣಪತಿ ಕಾರ್ಯಕ್ರಮಕ್ಕೆ ವಿವಿಧ ರಾಜ್ಯಗಳಿಂದ ಸಾವಿರಾರು ಜನ ಉತ್ಸವ ನೋಡಲು ಬರುತ್ತಾರೆ. ಕೊನೆಯಲ್ಲಿ ನಡೆಯುವ ಶೋಭಾಯಾತ್ರೆ ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಜನ ಸೇರುವ ಶೋಭಾಯಾತ್ರೆ ಎಂಬ ಖ್ಯಾತಿ ಪಡೆದಿದೆ. ವಿಶ್ವ ಹಿಂದೂ ಪರಿಷತ್ ಜೊತೆಗೆ ಸಾರ್ವಜನಿಕರನ್ನು ಸೇರಿಸಿಕೊಂಡು ಸಮಿತಿಮಾಡಿಕೊಂಡುಗಣೇಶೋತ್ಸವ ಮಾಡುತ್ತಾ ಬಂದಿದ್ದೇವೆ. ಹಿಂದೂ…

Read More

ಬೆಂಗಳೂರು: ಪ್ರಾಣಿ ವಿನಿಮಯ ಕಾರ್ಯಕ್ರಮದ ಭಾಗವಾಗಿ, ನಾಲ್ಕು ಆನೆಗಳನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಜಪಾನ್‌ನ ಹಿಮೇಜಿ ಸೆಂಟ್ರಲ್ ಸಫಾರಿ ಪಾರ್ಕ್‌ಗೆ ಕಳುಹಿಸಲಾಗುವುದು. ಆನೆಗಳನ್ನು ಗುರುವಾರ ಮತ್ತು ಶುಕ್ರವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಪಾನ್‌ನ ಒಸಾಕಾದ ಕನ್ಸೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸರಕು ವಿಮಾನದ ಮೂಲಕ ಕಳುಹಿಸಲಾಗುವುದು ಎಂದು BBP ಕಾರ್ಯನಿರ್ವಾಹಕ ನಿರ್ದೇಶಕ AV ಸೂರ್ಯ ಸೇನ್ ತಿಳಿಸಿದ್ದಾರೆ.ಪ್ರಾಣಿ ವಿನಿಮಯ ಕಾರ್ಯಕ್ರಮದಡಿಯಲ್ಲಿ, BBP ನಾಲ್ಕು ಚಿರತೆಗಳು, ನಾಲ್ಕು ಜಾಗ್ವಾರ್‌ಗಳು, ನಾಲ್ಕು ಪೂಮಾಗಳು, ಮೂರು ಚಿಂಪಾಂಜಿಗಳು ಮತ್ತು ಎಂಟು ಕಪ್ಪು-ಕ್ಯಾಪ್ಡ್ ಕ್ಯಾಪುಚಿನ್ ಕೋತಿಗಳನ್ನು ಸ್ವೀಕರಿಸಲಿದೆ. ಜಪಾನ್‌ಗೆ ಕಳುಹಿಸಬೇಕಾದ ಆನೆಗಳು 8 ವರ್ಷದ ಸುರೇಶ್, ಗೌರಿ (9), ಶ್ರುತಿ (7), ಮತ್ತು ತುಳಸಿ (5) ಆನೆಗಳನ್ನು ಕಳುಹಿಸಲಾಗುತ್ತಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನದಿಂದ ಹಿಮೇಜಿ ಸಫಾರಿ ಪಾರ್ಕ್‌ಗೆ ತಲುಪಲು ಸುಮಾರು 20 ಗಂಟೆಗಳ ಕಾಲ ಪ್ರಯಾಣಿಸಬೇಕಿದೆ. ಕಳೆದ 6 ತಿಂಗಳುಗಳಿಂದ ಈ ಸಾಗಣೆಗಾಗಿ ಪ್ರಾಣಿಗಳಿಗೆ ತರಬೇತಿ ನೀಡಲಾಗಿದೆ. ಆನೆಗಳು ಉತ್ತಮ ಆರೋಗ್ಯ ಹೊಂದಿದ್ದು, ಪ್ರಯಾಣ ಮಾಡಲು…

Read More