Author: Times of bayaluseeme
ಚಿತ್ರದುರ್ಗ: ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ದಾವಣಗೆರೆ ಜಲ್ಲೆಯ ಹೊನ್ನಾಳಿ ತಾಲ್ಲೂಕಿನ ದೊಡ್ಡಕೆರೆ ಎಚ್.ಜಿ.ಮಂಜಪ್ಪ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ಚಿತ್ರದುರ್ಗ ನಗರದ ತಮಟಕಲ್ ರಸ್ತೆಯಲ್ಲಿರುವ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದೊಡ್ಡಕೆರೆ ಎಚ್.ಜಿ.ಮಂಜಪ್ಪ ಅವರು ಪದಗ್ರಹಣ ಮಾಡಿದರು. ಈ ಸಂದರ್ಭದಲ್ಲಿ ಜಗಳೂರು ಶಾಸಕ ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್ಪೀರ್, ಮಾಜಿ ಸಚಿವ ಎಚ್.ಆಂಜನೇಯ, ಬಯಲುಸೀಮೆ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಎಲ್.ಎ.ಕೃಷ್ಣನಾಯಕ್, ಉಪ ಕಾರ್ಯದರ್ಶಿ ಸತೀಶ್ ರೆಡ್ಡಿ, ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಸೇರಿದಂತೆ ಮತ್ತಿತರರು ಇದ್ದರು.
ಚಿತ್ರದುರ್ಗ: ಕೃಷಿ, ಹೈನುಗಾರಿಕೆ, ಮತ್ತು ಪಶುಸಂಗೋಪನೆ ಈ ಇಲಾಖೆಗಳಲ್ಲಿ ಸರ್ಕಾರದ ಯೋಜನೆಗಳ ಅನ್ವಯ ಕೃಷಿ ಜೊತೆಗೆ ಉಪ ಕಸುಬು, ಸ್ವಯಂ ಉದ್ಯೋಗ, ಗುಡಿ ಕೈಗಾರಿಕೆ ಸಂಬಂದಿತ ಚಟುವಟಿಕೆಗಳನ್ನು ಕೈಗೊಳ್ಳಲು ಬ್ಯಾಂಕ್ ಸಾಲ ಸೌಲಭ್ಯಗಳನ್ನು ನೀಡಲು ತಾರತಮ್ಯ ನೀತಿ ಅನುಸರಿಸಿ ಕೊಲೆಟ್ರಲ್ ಸೆಕ್ಯೂರಿಟಿ ಇಲ್ಲದೆ ಸಾಲ ನೀಡದೆ ಸ್ವಯಂ ಉದ್ಯೋಗಗಳ ಮುಖಂತರ ಬದುಕು ಕಟ್ಟಿಕೊಳ್ಳಲು ಹಿನ್ನಡೆಯಾಗುತ್ತಿದೆ ಈ ನಿಟ್ಟಿನಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಸಂಬಂದಿಸಿದ ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ಸರಿಯಾಗಿ ಸೂಚನೆ ನೀಡಿ ಕ್ರಮ ಕೈಗೊಂಡು ಸರ್ಕಾರಿ ಯೋಜನೆಗಳು ಸುಲಭವಾಗಿ, ಸಮರ್ಪಕವಾಗಿ ಕೈಗೆಟುಕುವಂತೆ ಕ್ರಮ ಕೈಗೊಳ್ಳಲು ಚಿತ್ರದುರ್ಗ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷರಾದ ಬಿ.ಟಿ. ಜಗದೀಶ್ ಸೂಚಿಸಿದರು.ಚಿತ್ರದುರ್ಗ ನಗರದ ಜಂಟಿ ಕೃಷಿ ನಿರ್ದೇಶಕರ ಕಛೇರಿ ಸಭಾಂಗಣದಲ್ಲಿ ನಡೆದ ಚಿತ್ರದುರ್ಗ ತಾಲ್ಲೂಕು ಕೃಷಿಕ ಸಮಾಜದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸ್ವಯಂ ಉದ್ಯೋಗ ಕೈಗೊಳ್ಳಲು ಬೇಕಾದ ಮಾಹಿತಿ ಮತ್ತು ತರಬೇತಿಗಳ ಗುಡಿ ಕೈಗಾರಿಕೆ ಕೈಗೊಳ್ಳಲು ಅಗತ್ಯವಿರುವ ಸಾಲ ಸೌಲಭ್ಯಗಳನ್ನು ಪಡೆಯಲು ಜಿಲ್ಲಾ ಯೋಜನಾ ಸಂಪನ್ಮೂಲ…
ಚಿತ್ರದುರ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಚಿತ್ರದುರ್ಗ ಜಿಲ್ಲಾ ಸಮಿತಿಗೆ ಉಪಾಧ್ಯಕ್ಷರಾಗಿ ಎಂ.ಡಿ.ಆಶ್ವಕ್ ಆಲಿಯವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾದ್ಯಕ್ಷರಾದ ಬಿ.ಸಿ.ಚಂದ್ರೇಶೇಖರ್ ರವರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷರಾದ ಎಂ.ಕೆ.ತಾಜ್ ಪೀರ್ ರವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ಅವರಿಗೆ ನೇಮಕಾತಿ ಪತ್ರವನ್ನು ವಿತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ತಾಜ್ ಪೀರ್ ಈಗ ನೇಮಕಾತಿ ಪತ್ರವನ್ನು ಪಡೆದು ಮನೆಯಲ್ಲಿ ಇರದೆ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವತ್ತಾ ಗಮನ ನೀಡಬೇಕಿದೆ ಇವರು ಎನ್.ಎಸ್.ಯು.ಐ, ಹಾಗೂ ಯುವ ಕಾಂಗ್ರೆಸ್ನಲ್ಲಿ ಕೆಲಸ ಮಾಡಿದ ಅನುಭವ ಇದೆ, ಇಂತಹರನ್ನು ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕ ಮಾಡಿರುವುದು ಉತ್ತಮವಾಗಿದೆ, ಪಕ್ಷದ ಸಂಘಟನೆಯಲ್ಲಿ ತೂಡಗುವಂತೆ ಕರೆ ನೀಡಿದರು.ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕಗೊಂಡ ಎಂ.ಡಿ.ಆಶ್ವಕ್ ಆಲಿ ಮಾತನಾಡಿ ನನ್ನನ್ನು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಉಪಾಧ್ಯಕ್ಷರಾಗಿ ನೇಮಕ ಮಾಡಿರುವುದು ನನಗೆ ಸಂತೋಷವನ್ನು ತಂದಿದೆ, ನನಗೆ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡಿದ ಅನುಭವ ಇದೆ, ಮುಂದಿನ ದಿನಮಾನದಲ್ಲಿ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವತ್ತ ಗಮನ ನೀಡಲಾಗುವುದಲ್ಲದೆ ಮುಂಬರುವ ಜಿ.ಪಂ.ತಾ.ಪಂ. ನಗರಸಭೆ,…
ಡಿಸೆಂಬರ್ 17 2024ರ ಸರ್ವೋಚ್ಚ ನ್ಯಾಯಾಲಯದ ಆದೇಶದ ನಂತರ ಗ್ರೇಟರ್ ಬೆಂಗಳೂರು ಸೇರಿದಂತೆ ರಾಜ್ಯ ವ್ಯಾಪ್ತಿಯಲ್ಲಿ ಸಿಸಿ ಮತ್ತು ಓಸಿ ಇಲ್ಲದೇ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಲು ಸಮಸ್ಯೆ ಉಂಟಾಗಿರುವ ಬಗ್ಗೆ ಚರ್ಚೆ ನಡೆಸಲಾಯಿತು.ಸುಪ್ರೀಂಕೋರ್ಟ್ ನ ಆದೇಶ ಭಾರತದ ಎಲ್ಲ ರಾಜ್ಯಗಳಿಗೂ ಅನ್ವಯವಾಗುತ್ತಿದ್ದೂ, ಎಲ್ಲ ರಾಜ್ಯಗಳೂ ಆದೇಶವನ್ನು ಅನುಷ್ಠಾನಗೊಳಿಸುತ್ತಿವೆಯೇ..? ಪರಿಶೀಲಿಸಲು ಮುಖ್ಯಮಂತ್ರಿಗಳು ಸೂಚಿಸಿದರು ನಿಯಮ ಉಲ್ಲಂಘಿಸಿ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಅನುಮತಿ ನೀಡುವ ಸಾಧ್ಯತೆ ಬಗ್ಗೆ ಚರ್ಚೆ ನಡೆಸಲಾಗಿ, ನಿರ್ಮಾಣಗೊಂಡಿರುವ ಕಟ್ಟಡಗಳನ್ನು ನೆಲಸಮಗೊಳಿಸಲು ಸಾಧ್ಯವಿಲ್ಲ.ಸರ್ಕಾರದ ನಿರ್ಧಾರದಿಂದ ಜನರಿಗೆ ಅನುಕೂಲವಾಗಬೇಕು.ಸೂಕ್ತ ಅನುಮತಿಗಳಿಲ್ಲದೇ ಈಗಾಗಲೇ ಮನೆ ನಿರ್ಮಿಸಿ ವಾಸವಿದ್ದಾರೆ. ಅಂತಹವರಿಗೆ ಒಂದು ಬಾರಿಗೆ ಅನ್ವಯವಾಗುವಂತೆ ನಿಯಮಿತಗೊಳಿಸಲು ಕಾನೂನಿನಲ್ಲಿ ಅವಕಾಶವಿರುವ ಬಗ್ಗೆಯೂ ಚರ್ಚೆ ನಡೆಸಲಾಯಿತು.ಸುಪ್ರೀಂಕೋರ್ಟ್ ಆದೇಶ ಅನುಷ್ಠಾನಗೊಳ್ಳುವ ಮುಂಚೆ ಸಲ್ಲಿಕೆಯಾಗಿರುವ ಮಾರ್ಚ್ 2025ರವರೆಗಿನ ಅರ್ಜಿಗಳನ್ನು ಪರಿಗಣಿಸಿ ಒಸಿ ಮತ್ತು ಸಿಸಿಯಿಂದ ವಿನಾಯ್ತಿಗೊಳಿಸಿ ವಿದ್ಯುತ್ ಮತ್ತು ನೀರಿನ ಸಂಪರ್ಕ ನೀಡುವ ಬಗ್ಗೆ ಕಾನೂನಿನ ಸಾಧ್ಯತೆಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಲು ಅಕ್ಟೋಬರ್ 8 ರಂದು…
ಚಿತ್ರದುರ್ಗ: ವೀರಶೈವ ಲಿಂಗಾಯತ ಸಮಾಜ ಬಾಂಧವರಲ್ಲಿ ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕ (ಜಾತಿ ಗಣತಿ) ಸಮೀಕ್ಷೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿರ್ಣಯದ ಮೇರೆಗೆ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ವೀರಶೈವ ಲಿಂಗಾಯತ ಜಾತಿ ಕಾಲಂನಲ್ಲಿ ಲಿಂಗಾಯತ ಅಥವಾ ವೀರಶೈವ ಅಂತಾ ಬರಿಸಿ ಉಪಜಾತಿ ಕಾಲಂನಲ್ಲಿ ನಿಮ್ಮ ನಿಮ್ಮ ಉಪಜಾತಿಗಳ ಹೆಸರನ್ನು ಬರೆಸಿ ಅಲಕ್ಷ ಮಾಡಬೇಡಿ ಎಂದು ಅಖಿಲ ಭಾರತ ವೀರಶೈವ ಮಹಾ ಸಭಾದ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ಮಹಡಿ ಶಿವಮೂರ್ತಿ ಸಮಾಜ ಬಾಂಧವರಲ್ಲಿ ಮನವಿ ಮಾಡಿದ್ದಾರೆ.ಎರಡನೇ ಬಾರಿ ಸಮೀಕ್ಷೆ ನಡೆದಿರುವುದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪನವರ ಮತ್ತು ಪದಾಧಿಕಾರಿಗಳ ಒತ್ತಾಯದ ಮೇರೆಗೆ ಈ ಹಿನ್ನಲೆಯಲ್ಲಿ ಸಮಾಜ ಬಂದುಗಳೇ ಈ ರೀತಿಯಾಗಿ ಬರೆಸಿದಾಗ ಕರ್ನಾಟಕ ರಾಜ್ಯದಲ್ಲಿ ವೀರಶೈವ ಲಿಂಗಾಯತರ ಸಂಖ್ಯೆ ಎಷ್ಟು ಇದೆ ಅನ್ನುವುದು ನಿಖರವಾಗಿ ಗೊತ್ತಾಗುವುದು ಮತ್ತು ಆರ್ಥಿಕ ಸ್ಥಿತಿಗತಿ ಬಗ್ಗೆಯೂ…
ಚಿತ್ರದುರ್ಗ:ಒತ್ತಡದ ನಡುವೆ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ತಾವಾಗಿಯೇ ಮುಂದೆ ಬಂದು ಉಚಿತ ಹೃದಯ ರೋಗ ತಪಾಸಣೆ ಕಾರ್ಡ್ ವಿತರಿಸುತ್ತಿರುವ ಇಂಡಿಯಾನಾ-ಎಸ್.ಜೆ.ಎಂ. ಹಾರ್ಟ್ ಸೆಂಟರ್ನ ಸಾಮಾಜಿಕ ಬದ್ದತೆ ಇತರರಿಗೆ ಮಾದರಿಯಾಗಿದೆ ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು. ನಗರದ ಪತ್ರಿಕಾ ಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಇಂಡಿಯಾನಾ ಎಸ್.ಜೆ.ಎಂ. ಹಾರ್ಟ್ ಸೆಂಟರ್ ಸಹಯೋಗದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಉಚಿತ ಹೃದಯ ರೋಗ ತಪಾಸಣೆ ಕಾರ್ಡ್ಗಳನ್ನು ವಿತರಿಸಿ ಅವರು ಮಾತನಾಡಿದರು. ರಾತ್ರಿ ಹಗಲು ಎನ್ನದೇ ಬದ್ದತೆಯಿಂದ ಕೆಲಸ ನಿರ್ವಹಿಸುವ ಪತ್ರಕರ್ತರು ತಮ್ಮ ಸ್ವತಃ ಆರೋಗ್ಯ ಕಾಳಜಿಯನ್ನು ಮರೆಯುತ್ತಾರೆ. ಇದನ್ನು ಅರಿತು ಇಂಡಿಯಾನ-ಎಸ್ಜೆಎಂ ಹಾರ್ಟ್ ಸೆಂಟರ್ ಪತ್ರಕರ್ತರು ಹಾಗೂ ಅವರ ಕುಟುಂಬದವರಿಗೆ ಉಚಿತ ಓಪಿಡಿ ಸೇವೆ ಹಾಗೂ ರಿಯಾಯಿತಿ ದರದಲ್ಲಿ ಹೃದ್ರೋಗ ಶಸ್ತ್ರಚಿಕಿತ್ಸೆ ನೀಡುವ ಯೋಜನೆ ಜಾರಿಗೊಳಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇಂತಹ ಇವರ ಸೇವಾ ಮನೋಭಾವ ಮಾದರಿಯಾಗಿದೆ. ಆರೋಗ್ಯವೇ ಭಾಗ್ಯ ಇದನ್ನು ಕಾಪಾಡಿಕೊಳ್ಳಬೇಕು. ಆರೋಗ್ಯ ಒಂದು ಇದ್ದರೇ ಬೇಕಾದ ಸಾಧನೆ ಮಾಡಬಹುದು.…
ಕಾಂಗ್ರೆಸ್ ಸರ್ಕಾರ 80 ಪರ್ಸೆಂಟ್ ಕಮಿಶನ್ ಪಡೆಯುತ್ತಿರುವುದು ಸಾಬೀತಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ 40% ಕಮಿಶನ್ ಪಡೆಯುತ್ತಿದೆ ಎಂದು ಸುಳ್ಳು ಆರೋಪ ಮಾಡಿದ್ದರು. ಈಗ ಗುತ್ತಿಗೆದಾರರ ಸಂಘದವರು, ಕಾಂಗ್ರೆಸ್ ಸರ್ಕಾರ ದುಪ್ಪಟ್ಟು ಕಮಿಶನ್ ಪಡೆಯುತ್ತಿದೆ ಎಂದು ಹೇಳಿ ಸಿಎಂಗೆ ಪತ್ರ ಬರೆದಿದ್ದಾರೆ. ಅಂದರೆ ಇದು 80 ಪರ್ಸೆಂಟ್ ಸರ್ಕಾರ ಎಂದು ತಿಳಿದುಬಂದಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಎಲ್ಲರೂ ರಾಜೀನಾಮೆ ನೀಡಬೇಕು. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.ಸಚಿವರು ಲಂಚ ಪಡೆದಿಲ್ಲ ಎಂದಾದರೆ ಸ್ಪಷ್ಟನೆ ನೀಡಲಿ. ಇಲ್ಲವೆಂದರೆ ಎಲ್ಲರೂ ಲಂಚ ಪಡೆದಿದ್ದಾರೆ ಎಂದು ತಿಳಿಯಬೇಕಾಗುತ್ತದೆ. ನ್ಯಾ.ನಾಗಮೋಹನದಾಸ್ ಸಮಿತಿಯನ್ನು ಸರ್ಕಾರ ರದ್ದು ಮಾಡಿದೆ. ಭ್ರಷ್ಟಾಚಾರ ಬಯಲಾಗುವುದೆಂಬ ಕಾರಣಕ್ಕೆ ಈ ಕ್ರಮ ವಹಿಸಲಾಗಿದೆ. ಬಿಜೆಪಿ ಅವಧಿಯಲ್ಲಿ ಪೇ ಸಿಎಂ ಎಂಬ ಪೋಸ್ಟರ್ ಅಂಟಿಸಿದ್ದರು. ಇದಕ್ಕೆ ರಾಹುಲ್ ಗಾಂಧಿ ಉತ್ತರ…
ಚಿತ್ರದುರ್ಗ: ಸರ್ಕಾರ ಜನತೆಯನ್ನು ಸ್ವಾವಲಂಭಿ ಮಾಡಲು ಹಲವಾರು ಯೋಜನೆಗಳನ್ನು ಜಾರಿ ಮಾಡುತ್ತಿದೆ, ಇದಕ್ಕೆ ತಕ್ಕಂತೆ ಜನತೆಯೂ ಸಹ ಕೈಗಾರಿಕೆಯನ್ನು ಪ್ರಾರಂಭ ಮಾಡಲು ಆಸಕ್ತರಾಗಿದ್ದಾರೆ ಆದರೆ ಕೈಗಾರಿಕೆಯನ್ನು ಪ್ರಾರಂಭ ಮಾಡುವುದಕ್ಕೆ ಬೇಕಾದ ಪರವಾನಿಗೆಯನ್ನು ಪಡೆಯಲು ಹರ ಸಾಹಸವನ್ನು ಮಾಡಬೇಕಾದ ಪರಿಸ್ಥಿತಿ ಇಂದಿನ ದಿನದಲ್ಲಿ ನಿರ್ಮಾಣವಾಗಿದೆ ಎಂದು ಚೇಂಬರ್ ಅಫ್ ಕಾಮರ್ಸ್ನ ಅಧ್ಯಕ್ಷ ಎನ್.ಸತೀಶ್ ತಿಳಿಸಿದರು.ನಗರದ ಖಾಸಗಿ ಹೋಟೇಲ್ನಲ್ಲಿ ಸೋಮವಾರ ಕೈಗಾರಿಕೆ ಮತ್ತು ವಾಣೀಜ್ಯ ಇಲಾಖೆ, ಕೆ.ಸಿ.ಟಿ.ಯು. ಟೆಕ್ಸಾಕ್ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಎಂ.ಎಸ್. ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು ಯೋಜನೆಯಡಿ ಟಿ ಆರ್ಇಡಿ ಎಸ್ ಯೋಜನೆ ಕುರಿತ ಒಂದು ದಿನದ ಅರಿವು ಮೂಡಿಸುವ ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಬ್ಯಾಂಕ್ಗಳು ಕೈಗಾರಿಕೆಯನ್ನು ಆರಂಭಿಸಲು ಸಾಲವನ್ನು ನೀಡಲು ಮುಂದೆ ಬರುತ್ತಿವೆ, ಇದೇ ರೀತಿ ಕೈಗಾರಿಕೆಯನ್ನು ಮಾಡಲು ಸಹಾ ಜನತೆ ಮುಂದೆ ಬಂದಿದ್ದಾರೆ ಆದರೆ ಸಮಸ್ಯೆ ಏನೆಂದರೆ ಯಾವ ಕೈಗಾರಿಕೆಯನ್ನು ಮಾಡಬೇಕು ಎನ್ನುವುದು ಇದರ ಬಗ್ಗೆ…
ಜಗತ್ತು ಡಿಜಿಟಲೀಕರಣವಾದಂತೆ ಮಕ್ಕಳು ಮತ್ತು ಯುವ ಜನರು ಮೊಬೈಲ್, ಟ್ಯಾಬ್ಲೆಟ್, ಕಂಪ್ಯೂಟರ್ ಮತ್ತು ಅಂತರ್ಜಾಲದಲ್ಲಿ ಹೆಚ್ಚು ಸಮಯ ವ್ಯಯ ಮಾಡುತ್ತ ಸಾಮಾಜಿಕ ಜಾಲತಾಣದಲ್ಲಿ ಮುಳುಗಿ ತಮ್ಮೆಲ್ಲಾ ಚಟುವಟಿಕೆಗಳಿಗೂ ಹಾಗೂ ಸಮಸ್ಯೆಗಳಿಗೂ ಮೊಬೈಲ್ ಪರಿಹಾರ ಎಂಬಂತೆ ಅವಲಂಬಿತವಾಗಿರುವುದು ಚಟವಾಗಿ ಈಗ ಅದೊಂದು ಮಾರಕ ರೋಗವಾಗಿ ಬದಲಾಗುತ್ತಿದೆ ಎಂದು ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಬಿ.ಆರ್.ಮಲ್ಲೇಶ್ ತಿಳಿಸಿದರು.ಚಿತ್ರದುರ್ಗ ತಾಲ್ಲೂಕಿನ ಮದಕರಿಪುರದಲ್ಲಿ ಹಮ್ಮಿಕೊಂಡಿರುವ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಏಳು ದಿನಗಳ ವಿಶೇಷ ವಾರ್ಷಿಕ ಶಿಬಿರದ ಐದನೇ ದಿನದ ಸಂಜೆಯ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.ಮೊಬೈಲ್ ಚಟದಿಂದಾಗಿ ಮಕ್ಕಳು ಮತ್ತು ಯುವಜನರಲ್ಲಿ ನೋಮೋಪೋಬಿಯಾ ಅಂದರೆ ಮೊಬೈಲ್ ಪೋನ್ ಇಲ್ಲದಿದ್ದರೆ ಭಯ ಎಂಬ ವ್ಯಾದಿಗೆ ತುತ್ತಾಗಿ ಮೊಬೈಲ್ ಇಲ್ಲದೆ ಹೆಚ್ಚಿನ ಸಮಯ ಕಳೆಯಲಾಗದ ಸ್ಥಿತಿಗೆ ತಲುಪಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ.ಆರಂಭದಲ್ಲಿ ಒಂಟಿತನದಿಂದ ಹೊರ ಬರಲು ಬಳಸುತ್ತಿದ್ದ ಮೊಬೈಲ್…
ನಮ್ಮ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ ‘’ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ಹೊರಗೆ ಬಂದು ನಮ್ಮ ಸಮೀಕ್ಷೆಯನ್ನು ಬಹಿಷ್ಕರಿಸುವಂತೆ ಕರೆ ನೀಡುವ ಮೂಲಕ ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ.ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ. ಇದು ರಾಜ್ಯದ ಏಳು ಕೋಟಿ ಜನರ ಸಾಮಾಜಿಕ”,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಇದು ಯಾರ ವಿರುದ್ದವೂ ಅಲ್ಲ, ಇದು ಎಲ್ಲರ ಪರವಾಗಿರುವ ಸಮೀಕ್ಷೆ. ಇದರ ಮುಖ್ಯ ಉದ್ದೇಶ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಾನತೆಯನ್ನು ಸಾಧಿಸಿ ಸರ್ವರಿಗೂ ಸಮಪಾಲು, ಸಮಬಾಳು ನೀಡುವುದಾಗಿದೆ.ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಎಲ್ಲವೂ ಯಥಾಸ್ಥಿತಿಯಲ್ಲಿಯೇ ಇರಬೇಕು. ಬಡವರು ಬಡವರಾಗಿಯೇ ಉಳಿಯಬೇಕು, ಹಿಂದುಳಿದವರು ಹಿಂದೆಯೇ ಉಳಿಯಬೇಕು. ಮಹಿಳೆಯರು ಅವಕಾಶ ವಂಚಿತರಾಗಿಯೇ ಇರಬೇಕು. ವರ್ಣ ಮತ್ತು ವರ್ಗಗಳ ನಡುವಿನ ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ. ಬಿಜೆಪಿಯ…
Subscribe to Updates
Get the latest creative news from FooBar about art, design and business.
