Author: ಮೃತ್ಯುಂಜಯಾಚಾರ್ ಬಿ

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

ಪ್ರೇಮಿ ಜತೆ ಪತ್ನಿ ಪರಾರಿ: ಪತಿ, ಮದುವೆ ಮಾಡಿಸಿದ್ದ ಮಾವ ಆತ್ಮಹತ್ಯೆ ದಾವಣಗೆರೆ: ವಿವಾಹವಾಗಿದ್ದ ಯುವತಿಯೊಬ್ಬಳು ತನ್ನ ಪ್ರಿಯಕರನ ಜೊತೆ ಪರಾ ರಿಯಾಗಿದ್ದಕ್ಕೆ ಮನನೊಂದ ಆಕೆಯ ಪತಿ ಹಾಗೂ ಮದುವೆ ಮಾಡಿಸಿದ್ದ ಸೋದರ ಮಾವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ಗುಮ್ಮನೂರು ನಿವಾಸಿ ಹರೀಶ್ (30) ಹಾಗೂ ದಾವಣಗೆರೆಯ ರುದ್ರೇಶ (40) ಮೃತರು. ಖಾಸಗಿ ಕಂಪನಿಯಲ್ಲಿ ಎಚ್‌ಆರ್‌ಆಗಿದ್ದ ಹರೀಶ್ 45 ದಿನದ ಹಿಂದಷ್ಟೇ ರುದ್ರೇಶ ಅವರ ಸೋದರಿಯ ಮಗಳಾದ ಸರಸ್ವತಿ ಎಂಬುವವರನ್ನು ಮದುವೆಯಾಗಿ ದ್ದರು. ಆದರೆ, ಸರಸ್ವತಿ ಮದುವೆಗೂ ಮುಂಚೆ ಪ್ರೀತಿ ಸುತ್ತಿದ್ದ ಕುಮಾರ ಎಂಬುವವರ ಜತೆ ಓಡಿ ಹೋಗಿದ್ದಾಳೆ. ಇದರಿಂದ ನೊಂದ ಹರೀಶ್ ಡೆತ್‌ ನೋಟ್ ಬರೆದಿಟ್ಟು ನೇಣು ಹಾಕಿಕೊಂಡಿದ್ದಾರೆ. ಇನ್ನು ರುದ್ರೇಶ ಅವರು ಹರೀಶ್ ಸಾವಿನ ಸುದ್ದಿ ಕೇಳಿ ವಿಷ ಸೇವಿಸಿ ಮೃತಪಟ್ಟಿದ್ದಾರೆ.

Read More

ಗೈರಾದ ಸಚಿವರಿಗೆ ಛೀಮಾರಿ ಹಾಕಿ, ಮನೆಗೆ ಕಳುಹಿಸಿ: ವಿಪಕ್ಷಗಳ ಆಗ್ರಹ ವಿಧಾನಸಭೆ: ನಿಗದಿತ ಸಚಿವರು ಕಲಾಪಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಗೈರಾದ ಸಚಿವರಿಗೆ ಛೀಮಾರಿ ಹಾಕಿ ಮನೆಗೆ ಕಳುಹಿಸುವಂತೆ ವಿರೋಧ ಪಕ್ಷದ ಶಾಸಕರು ಸ್ಪೀಕರ್ ಯು.ಟಿ. ಖಾದರ್ ಅವರಲ್ಲಿ ಆಗ್ರಹಿಸಿದ ಪ್ರಸಂಗ ಮಂಗಳವಾರ ನಡೆಯಿತು. ವಿರೋಧ ಪಕ್ಷಗಳ ಆಕ್ರೋಶದ ಹಿನ್ನೆಲೆಯಲ್ಲಿ ಕಲಾಪಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಸಚಿವರಿಗೂ ಕಳೆದ ವಾರ ಪತ್ರ ಬರೆದಿದ್ದರು. ಆದರೆ, ಬಹುತೇಕ ಸಚಿವರು ರಾಜಭವನ ಚಲೋದಲ್ಲಿ ಪಾಲ್ಗೊಂಡ ಕಾರಣ ಕಲಾಪಕ್ಕೆ ಗೈರಾಗಿದ್ದರು. ಇದರಿಂದ ಸಿಟ್ಟಾದ ವಿರೋಧ ಪಕ್ಷದ ಶಾಸಕರು, ಯಾರೆಲ್ಲ ಸಚಿವರು ಸದನದಲ್ಲಿ ಹಾಜರಿರಬೇಕು ಎಂಬುದನ್ನು ಘೋಷಿಸುವಂತೆ ಸ್ಪೀಕರ್ ಯು.ಟಿ. ಖಾದ‌ರ್ ಅವರಲ್ಲಿ ಪಟ್ಟು ಹಿಡಿದರು. ಸ್ಪೀಕರ್ ಯು.ಟಿ. ಖಾದರ್ ಸಚಿವರ ಹೆಸರು ಹೇಳುತ್ತಿದ್ದಂತೆ, ವಿರೋಧ ಪಕ್ಷದ ಶಾಸಕರು ‘ಹಾಜರಿಲ್ಲ, ಹಾಜರಿಲ್ಲ’ ಎಂದು ಜೋರಾಗಿ ಕೂಗುತ್ತಾ ಗದ್ದಲ ಎಬ್ಬಿಸಿದರು

Read More

 ಶಾಸಕಿ ಕರೆಮ್ಮಗೆ ಬೆದರಿಕೆ ಹಾಕಿದವರ ವಿರುದ್ಧ ಕಠಿಣ ಕ್ರಮ: ಪರಮೇಶ್ವರ್ ವಿಧಾನಸಭೆ: ರಾಜ್ಯದ ಎಲ್ಲ ಶಾಸಕರ ರಕ್ಷಣೆ ನಮ್ಮ ಹೊಣೆ. ಜೆಡಿಎಸ್ ಶಾಸಕಿ ಕರೆಮ್ಮ ಅವರಿಗೆ ಮರಳು ದಂಧೆಕೋರರಿಂದ ಬೆದರಿಕೆ ಬಂದಿರುವ ಕುರಿತು ತನಿಖೆ ನಡೆಸಿ, ಎಷ್ಟೇ ದೊಡ್ಡವರಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು. ಪ್ರಶೋತ್ತರ ಕಲಾಪದಲ್ಲಿ ಉತ್ತರಿಸಿದ ಡಾ.ಪರಮೇಶ್ವರ್, ಯಾವುದೇ ಶಾಸಕರಿಗೂ ಸಮಸ್ಯೆಯಾಗಲು ಬಿಡುವುದಿಲ್ಲ. ರಕ್ಷಣೆ ನೀಡುವುದು ನಮ್ಮ ಪೊಲೀಸರ ಕರ್ತವ್ಯ. ದೇವದುರ್ಗ ಮಾತ್ರವಲ್ಲದೆ ರಾಜ್ಯದಲ್ಲಿ ಮರಳು ದಂಧೆ ನಡೆಯುತ್ತಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಅದಕ್ಕೆ ಕಡಿವಾಣ ಹಾಕುತ್ತಿದ್ದಾರೆ. ಇಷ್ಟಾದರೂ ಮರಳು ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ ಕರೆಮ್ಮ ಅವರಿಗೆ ಬೆದರಿಕೆ ಹಾಕಿದವರ ಸ ವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.

Read More

ನಮ್ಮಲ್ಲೇ ಓಂಕಾರಕ್ಕೆ ವಿರೋಧ ಇರೋದು ದುರದೃಷ್ಟ: ಸಂತೋಷ್ ಇಸ್ಲಾಂ ದೇಶಗಳೂ ಓಂಕಾರವನ್ನು ಗೌರವಿಸುತ್ತವೆ ಇಸ್ಲಾಂ ದೇಶಗಳಲ್ಲೂ ಸಹ ಓಂಕಾರದ ಮೂಲಕ ಯೋಗ ಅಭ್ಯಾಸ ನಡೆಸುತ್ತಿದ್ದಾರೆ. ಆದರೆ ನಮ್ಮ ದೇಶದ ಕೆಲವು ಎಡಬಿಡಂಗಿಗಳು ಓಂಕಾರ ವನ್ನು ವಿರೋಧಿಸುವ ಮಾನ ಸಿಕತೆಯನ್ನು ಹೊಂದಿರುವುದು ದುರಾದೃಷ್ಟ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಂಘಟನಾ ಬಿಎಲ್ ಸಂತೋಷ್ ಹೇಳಿದರು. ವಿಶ್ವಕ್ಕೆ ಶಾಂತಿ ಕೊಟ್ಟಿರುವ ಹಿಂದೂ ಧರ್ಮ ನಾಶಪಡಿಸಲು ಸಾಧ್ಯವಿಲ್ಲ: ಸಂತೋಷ್ ಧರ್ಮವನ್ನು ನಾಶ ಪಡಿಸಲು ಸಾಧ್ಯವಿಲ್ಲ, ఎల్లా ಧರ್ಮಗಳಿಗೂ ಆಶ್ರಯವನ್ನು ನೀಡುವ ಮೂಲಕ ಹಾಗೂ ಬದುಕು ಕಟ್ಟಿಕೊಳ್ಳಲು ಅವಕಾಶ ನೀಡಿ ವಿಶ್ವದ ದೊಡ್ಡ ಪ್ರಜಾಪ್ರಭುತ್ವ ದೇಶವಾದ * ಭಾರತದಲ್ಲಿ ಹಿಂದೂ ಸಮಾಜವನ್ನು ಒಗ್ಗೂಡಿಸಿ ನಮ್ಮ ಅಸ್ತಿತ್ವವನ್ನೂ ಉಳಿಸಿಕೊಳ್ಳುವ ಕಾರ್ಯ ಹಿಂದೂ ಸಮಾಜೋತ್ಸವ ಮೂಲಕ ಆಗಬೇಕಾಗಿದೆ ಎಂದರು. ಈ ವೇಳೆ ಸಿದ್ದಗಂಗಾ ಮಠದ ಕಿರಿಯ مه ಶಿವಸಿದ್ದೇಶ್ವರ ಸ್ವಾಮೀಜಿ, ಎಚ್‌ಜಿ ಚಂದ್ರಶೇಖರ್, ಇಂದಿರಮ್ಮ .ನಗರದ ಎಸ್‌ಐಟಿಯ ಬಿರ್ಲಾ ಸಭಾಂಗಣದಲ್ಲಿ ನಡೆದ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಶ್ವಕ್ಕೆ ಶಾಂತಿಯನ್ನು…

Read More

ಹಸಿದವರ ಹೊಟ್ಟೆ ತುಂಬಿಸಿದ ಸಿದ್ದು ನನ್ನ ರಾಮ: ಪ್ರದೀಪ್ ಈಶ್ವರ್ ವಿಧಾನಸಭೆ ಬಡವರ, ಹಸಿದವರ ಹೊಟ್ಟೆ ತುಂಬಿಸಿದ ಸಿದ್ದರಾಮಯ್ಯ ಅವರು ನನ್ನ ಪಾಲಿನ ‘ಶ್ರೀರಾಮಚಂದ್ರ’ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹಾಡಿಹೊಗಳಿದ್ದಾರೆ. ಮಂಗಳವಾರ ರಾಜ್ಯಪಾಲರ ಭಾಷ ಣದ ಮೇಲಿನ ವಂದನಾ ನಿರ್ಣಯ ಪ್ರಸ್ತಾವ ಅನುಮೋದಿಸಿ ಮಾತನಾಡಿ, ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರನ್ನು ವಿಬಿಜಿ ರಾಮ್ ಜಿ ಎಂದು ಬದ ಲಿಸಿದೆ. ಅಯೋಧ್ಯೆಯಲ್ಲಿ ರಾಮಂದಿರ ಕಟ್ಟಿದರು. ಆದರೆ, ಅಯೋಧ್ಯೆಯ ಶ್ರೀರಾಮಚಂದ್ರ ಮಾತ್ರ ಚುನಾವಣೆ ಯಲ್ಲಿ ಇಂಡಿಯಾ ಕೂಟಕ್ಕೆ ಒಲಿದುಬಿಟ್ಟ. ಈಗ ಮನರೇಗಾ ಹೆಸರು ಬದಲಿಸಿ ಶ್ರೀರಾಮಚಂದ್ರನನ್ನು ಒಲಿಸಿಕೊಳ್ಳಲು ಮತ್ತೆ ಯತ್ನಿಸಿದ್ದಾರೆ ಎಂದು ಆರೋಪಿಸಿ ದರು. ಜತೆಗೆ ಬಡವರ ಹಸಿವು ನೀಗಿಸುವ, ಹೊಟ್ಟೆ ತುಂಬಿಸುವ ಹಾಗೂ ಸ್ವಾಭಿಮಾನ ದಿಂದ ಬದುಕಲು ಪ್ರೇರೇಪಿಸಿದ ಸಿದ್ದರಾಮಯ್ಯ ಅವರು ನನ್ನ ಪಾಲಿನ ಶ್ರೀರಾಮಚಂದ್ರ ಎಂದರು.

Read More

12ನೇ ಶತಮಾನದ ಶರಣೆಯರು ಇಂದಿನ ಮಹಿಳೆಯರಿಗೆ ಆದರ್ಶವಾಗಬೇಕಿದೆ ಚಿತ್ರದುರ್ಗ ಜ. 28 12ನೇ ಶತಮಾನದ ಶರಣೆಯರು ಇಂದಿನ ಮಹಿಳೆಯರಿಗೆ ಆದರ್ಶವಾಗಬೇಕಿದೆ, ಮಹಿಳೆ ಯಾವುದರಲ್ಲೂ ಸಹಾ ಕಡಿಮೆ ಇಲ್ಲ ಎಲ್ಲದರಲ್ಲೂ ಸಹಾ ಸಾಧನೆ ಮಾಡಿದ್ದಾಳೆ, ಅವರಿವರ ಮಾತನ್ನು ಕೇಳದೆ ತಮ್ಮ ಸ್ವಂತಿಕೆ ಯಿಂದ ಬುದ್ದಿಯನ್ನು ಚಲಾಯಿಸಬೇಕಿದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಮೀನಾಕ್ಷಿ ಖಂಡಿಮಠ ಮಹಿಳೆಯರಿಗೆ ಕರೆ ನೀಡಿದರು. ಜಾಗತಿಕ ಲಿಂಗಾಯತ ಮಹಾಸಭಾ(ರಿ)ಜಿಲ್ಲಾ ಮಹಿಳಾ ಘಟಕದವತಿಯಿಂದ ನಗರದ ಶ್ರೀ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಮಂಗಳವಾರ ಸಂಜೆ ನಡೆದ ಪ್ರಥಮ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಒಂದು ಕುಟುಂಬದಲ್ಲಿ ಮಹಿಳೆಯ ಪಾತ್ರ ಅತಿ ಮುಖ್ಯವಾಗಿದೆ ಯಾವ ಕುಟುಂಬದಲ್ಲೂ ಸಹಾ ಮಹಿಳೆ ಇಲ್ಲದೆ ಆ ಕುಟುಂಬ ನಡೆಯಲು ಸಾಧ್ಯವಿಲ್ಲ, ಹೆಣ್ಣು ಪುರುಷನ ಬದುಕಿಗೆ ಮುಖ್ಯವಾಗಿದ್ದಾಳೆ, ವಚನ ಸಾಹಿತ್ಯದಲ್ಲಿ ಗಂಡು, ಹೆಣ್ಣು ಎಂಬ ಬೇಧ ಇಲ್ಲದೆ ಎಲ್ಲರನ್ನು ಸಮನಾಗಿ ಕಾಣಲಾಗಿದೆ. ನಮಗೆ ಶರಣರ ಸಾಹಿತ್ಯ ಪ್ರೇರಣೆಯಾಗಬೇಕಿದೆ. ಸಂವಿಧಾನ ನೀಡಿದ ಅಭೀವ್ಯಕ್ತಿ ಸ್ವಾತಂತ್ರ್ಯವನ್ನು…

Read More

ಉಚಿತ ತರಬೇತಿ ಶೀಬಿರ ಚಿತ್ರದುರ್ಗ ಬಾಗಲಕೋಟೆಯ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಲ್ಲಿ ‘ಆಡು ಮತ್ತು ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆ, ಹಣ್ಣು ಬೆಳೆಗಳ ಕೃಷಿ, ಸಾವಯವ ಕೃಷಿ, ಸಮಗ್ರ ಕೃಷಿ, ಅಣಬೆ ಕೃಷಿ, ಜೇನು ಕೃಷಿ, ರೇಷ್ಮೆ ಕೃಷಿ ಮತ್ತು ಪುಷ್ಪ-ತರಕಾರಿ ಬೆಳೆಗಳ ಕೃಷಿ ತರಬೇತಿ ಶಿಬಿರವನ್ನು ಉಚಿತವಾಗಿ ಬಾಗಲಕೋಟೆಯಲ್ಲಿ 2026ರ ಫೆಬ್ರವರಿ ತಿಂಗಳಲ್ಲಿ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ 18 ರಿಂದ 55 ವರ್ಷದೊಳಗಿನ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು, ಮಹಿಳೆಯರು ಮೊಬೈಲ್ ನಂಬರ್ 9482630790 ಗೆ ಕರೆ ಮಾಡಿ ತಮ್ಮ ಹೆಸರನ್ನು ನೊಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಯುನಿಟ್-2, ಸೆಕ್ಟರ್ ನಂ-96, ಅಡ್ಡರಸ್ತೆ-3, ಪಬ್ಲಿಕ್ ಗಾರ್ಡ್‍ನ್ ಹತ್ತಿರ, ದುರ್ಗಾನಗರ, ನವನಗರ-ಬಾಗಲಕೋಟೆ-587103 ಅವರನ್ನು ಸಂಪರ್ಕಿಸಬಹದು ಎಂದು ಕಾರ್ಯನಿರ್ವಹಕ ನಿರ್ದೇಶಕ ರೇವಣಸಿದ್ಧ ಬಳ್ಳೊಳ್ಳಿ…

Read More

ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ: ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ ಚಿತ್ರದುರ್ಗ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಪರಿಶಿಷ್ಟ  ವರ್ಗದ ಕಾನೂನು ಪದವೀಧರರನ್ನು ಆಯ್ಕೆ ಮಾಡಬೇಕಾಗಿರುವುದರಿಂದ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫೆ.16 ಅರ್ಜಿ ಸಲ್ಲಿಸಲು ಕೊನೆಯ ದಿನ. ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ ಮಾಸಿಕ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕಾಲಮಿತಿಯ ಬದಲು ವರ್ಷದ ಎಲ್ಲ ದಿನಗಳಲ್ಲೂ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 2026ರ ಜನವರಿ 27 ರಿಂದ ಫೆಬ್ರವರಿ 16ರವರೆಗೆ ಆನ್‍ಲೈನ್ tw.kar.nic.in  ನಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳವರ ಕಚೇರಿ, ಚಿತ್ರದುರ್ಗ  ಇಲ್ಲಿಗೆ ಸಲ್ಲಿಸಲು 2026ರ ಫೆಬ್ರವರಿ 16 ಕೊನೆಯ ದಿನವಾಗಿದೆ. ಷರತ್ತುಗಳು: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪರಿಶಿಷ್ಟ  ವರ್ಗಕ್ಕೆ ಸೇರಿದವರಾಗಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ದಿನಾಂಕಕ್ಕೆ ಕಾನೂನು ಪದವಿಯನ್ನು ಪಡೆದು 02 ವರ್ಷ ಮೀರಿರಬಾರದು. ಬಾರ್ ಕೌನ್ಸಿಲಿಂಗ್‍ನ ಖಾಯಂ ಸದಸ್ಯತ್ವ ಪ್ರಮಾಣ…

Read More

ಆದರ್ಶ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ ಚಿತ್ರದುರ್ಗ ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ ಆದರ್ಶ ವಿದ್ಯಾಲಯ ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕುಗಳಲ್ಲಿ 6ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಈಗಾಗಲೇ ಜನವರಿ 23 ರಿಂದ ಪ್ರಾರಂಭವಾಗಿದ್ದು, ಫೆ.25 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಪರೀಕ್ಷೆಗೆ ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 5ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು www.schooleducation.kar.nic.in ಮತ್ತು www.vidyavahini.karnataka.gov.in       ವೆಬ್‍ಪುಟಗಳ ಮೂಲಕ ಅರ್ಜಿ ಸಲ್ಲಿಸಬಹುದು. ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕುಗಳ ಖಾಯಂ ನಿವಾಸಿಗಳ ಮಕ್ಕಳು ಬೇರೆ ತಾಲ್ಲೂಕು, ಜಿಲ್ಲೆ, ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೂ ಸಹ 6ನೇ ತರಗತಿಯಿಂದ ಮೂಲ ತಾಲ್ಲೂಕಿನಲ್ಲಿ ವ್ಯಾಸಂಗ ಮಾಡಲು ಇಚ್ಛಿಸಲು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಡಿಡಿಪಿಐ (ಆಡಳಿತ)/ಅಭಿವೃದ್ಧಿ, ಬಿಇಒ/ಬಿಆರ್‍ಸಿ ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕು,  ಮುಖ್ಯ…

Read More

ಫೆ.01ರಂದು ಉದ್ಯೋಗ ಮೇಳ ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಸಂಯುಕ್ತಾಶ್ರಯದಲ್ಲಿ ಫೆ.01ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ “ಉದ್ಯೋಗ ಮೇಳ” ಆಯೋಜಿಸಲಾಗಿದೆ. ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಶರಣ ಪ್ರಕಾಶ ರುದ್ರಪ್ಪ ಪಾಟೀಲ, ಚಳ್ಳಕೆರೆ ಶಾಸಕರು ಹಾಗೂ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್…

Read More