Author: Times Of Bayaluseeme Staff
ಇಂದಿನ ರಾಶಿ ಭವಿಷ್ಯ (17-06-2026): ಇಂದು ಬುಧವಾರ ಗ್ರಹಗಳ ಶುಭ ಸಂಚಾರದಿಂದ ಯಾವ ರಾಶಿಯವರಿಗೆ ಆರ್ಥಿಕ ಲಾಭ? ಯಾರಿಗೆ ಉದ್ಯೋಗದಲ್ಲಿ ಪ್ರಗತಿ? ಸಿಂಹ, ತುಲಾ, ಮಕರ ಸೇರಿದಂತೆ 12 ರಾಶಿಗಳ ಇಂದಿನ ಸಂಪೂರ್ಣ ಭವಿಷ್ಯ ಹಾಗೂ ಪರಿಹಾರಗಳನ್ನು ಇಲ್ಲಿ ತಿಳಿಯಿರಿ. ಇಂದು ಗ್ರಹಗಳ ಅನುಕೂಲಕರ ಸಂಚಾರದಿಂದ ಹಲವಾರು ರಾಶಿಯವರಿಗೆ ಹೊಸ ಅವಕಾಶಗಳು, ಆರ್ಥಿಕ ಲಾಭ ಮತ್ತು ಆತ್ಮವಿಶ್ವಾಸ ಹೆಚ್ಚುವ ಸಾಧ್ಯತೆಗಳಿವೆ. ಕೆಲವರು ಆರೋಗ್ಯ ಹಾಗೂ ಮಾತಿನ ಮೇಲೆ ನಿಯಂತ್ರಣ ಇಡುವುದು ಉತ್ತಮ. ಮೇಷ: ಉದ್ಯೋಗ ಹಾಗೂ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಹೊಸ ಕಾರ್ಯಗಳಿಗೆ ಚಾಲನೆ ನೀಡಲು ಉತ್ತಮ ದಿನ. ಕುಟುಂಬದ ಸಹಕಾರ ದೊರೆಯುತ್ತದೆ. ವೃಷಭ: ಆರ್ಥಿಕ ವಿಷಯಗಳಲ್ಲಿ ಲಾಭದ ಸೂಚನೆ ಇದೆ. ಹಳೆಯ ಬಾಕಿ ಹಣ ವಾಪಸ್ ಸಿಗುವ ಸಾಧ್ಯತೆ. ಆರೋಗ್ಯದ ಕಡೆ ಗಮನವಿರಲಿ. ಮಿಥುನ: ಸಂವಹನ ಕೌಶಲ್ಯದಿಂದ ಯಶಸ್ಸು ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಉಪಯೋಗವಾಗಲಿವೆ. ವಿದ್ಯಾರ್ಥಿಗಳಿಗೆ ಶುಭದಿನ. ಕಟಕ: ಕೆಲಸಗಳಲ್ಲಿ ನಿಧಾನಗತಿ ಕಂಡರೂ ತಾಳ್ಮೆ ಕಳೆದುಕೊಳ್ಳಬೇಡಿ. ಕುಟುಂಬ ಸದಸ್ಯರ…
ಬೆಂಗಳೂರು: ನೂತನವಾಗಿ ನಿರ್ಮಾಣವಾಗುತ್ತಿರುವ ಕೆಂಪೇಗೌಡ ಬಡಾವಣೆಯಲ್ಲಿ ಇದೇ 27ರಂದು ಬೆಳಗ್ಗೆ 11.30ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತಿ ನಡೆಸಲು ತೀರ್ಮಾನಿಸಲಾಗಿದೆ. ಬಿಡಿಎ ವತಿಯಿಂದ ಅಧ್ಯಕ್ಷರಾದ ಹ್ಯಾರೀಸ್ ಅವರ ನೇತೃತ್ವದಲ್ಲಿ ನಗರದಲ್ಲಿ 15 ಲಕ್ಷ ಗಿಡಗಳನ್ನು ನೆಡಲಾಗುವುದು. ಈ ಬಡಾವಣೆಯಲ್ಲಿ ನೂತನ ರಸ್ತೆಯನ್ನು ಉದ್ಘಾಟಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಪೂರ್ವಭಾವಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಪ್ರತಿ ವರ್ಷದಂತೆ ಕೆಂಪೇಗೌಡ ಜಯಂತಿ ಆಚರಣೆ ಕುರಿತಾಗಿ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಕಾರ್ಯಕ್ರಮದ ರೂಪುರೇಷೆ ಬಗ್ಗೆ ಎಲ್ಲಾ ಸಂಘಟನೆಗಳ ಜತೆ ಚರ್ಚೆ ಮಾಡಲಾಗಿದೆ. ಪ್ರತಿ ಬಾರಿಯಂತೆ ನಗರದ ನಾಲ್ಕು ಕೆಂಪೇಗೌಡ ಗೋಪುರಗಳಿಂದ ಪ್ರತ್ಯೇಕ ತಂಡಗಳು ಆಗಮಿಸಲಿವೆ. ನಾಲ್ಕು ಗೋಪುರಗಳ ಪೈಕಿ ರಾಮಲಿಂಗಾ ರೆಡ್ಡಿ, ಕೃಷ್ಣ ಬೈರೇಗೌಡ, ಕೆ.ಜೆ ಜಾರ್ಜ್ ಹಾಗೂ ಬೈರತಿ ಸುರೇಶ್ ಅವರು ಜವಾಬ್ದಾರಿ ವಹಿಸಲಿದ್ದಾರೆ. ಇನ್ನು ಮಾಗಡಿ ತಂಡವನ್ನು ಸ್ಥಳೀಯ ಶಾಸಕರಾದ…
ಇಂದಿನ ರಾಶಿ ಭವಿಷ್ಯ (16 ಜೂನ್ 2026): ಮೇಷ ರಾಶಿಯವರಿಗೆ ಹೊಸ ಕಾರ್ಯಕ್ಕೆ ಚಾಲನೆ, ಸಿಂಹ ರಾಶಿಯವರಿಗೆ ಉದ್ಯೋಗದಲ್ಲಿ ಲಾಭ ಹಾಗೂ ಮೀನ ರಾಶಿಯವರಿಗೆ ಆರ್ಥಿಕ ಪ್ರಗತಿ! ನಿಮ್ಮ ರಾಶಿಯ ಇಂದಿನ ಶುಭ ಸಂಖ್ಯೆ, ಬಣ್ಣ ಮತ್ತು ಸಮಯದ ಸಂಪೂರ್ಣ ಮಾಹಿತಿ ಇಲ್ಲಿದೆ. ಮೇಷ: ಹೊಸ ಕಾರ್ಯಗಳಿಗೆ ಚಾಲನೆ ನೀಡಲು ಉತ್ತಮ ದಿನ. ಉದ್ಯೋಗ ಕ್ಷೇತ್ರದಲ್ಲಿ ಮೆಚ್ಚುಗೆ ದೊರೆಯಬಹುದು. ಕುಟುಂಬದವರೊಂದಿಗೆ ಸಮಯ ಕಳೆಯುವಿರಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ವೃಷಭ: ಆರ್ಥಿಕ ವಿಚಾರಗಳಲ್ಲಿ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚುಗಳನ್ನು ನಿಯಂತ್ರಿಸಿ. ಸ್ನೇಹಿತರಿಂದ ಸಹಕಾರ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಶುಭ ಫಲ. ಮಿಥುನ: ಕೆಲಸದ ಒತ್ತಡ ಹೆಚ್ಚಾಗಬಹುದು. ತಾಳ್ಮೆಯಿಂದ ವರ್ತಿಸಿದರೆ ಯಶಸ್ಸು ನಿಮ್ಮದಾಗುತ್ತದೆ. ದೂರದ ಪ್ರಯಾಣದ ಸಾಧ್ಯತೆ ಇದೆ. ಕಟಕ: ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಬಹುದು. ದೇವರ ಆರಾಧನೆಯಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಸಿಂಹ: ನಾಯಕತ್ವದ ಗುಣಗಳಿಂದ ಎಲ್ಲರ ಮೆಚ್ಚುಗೆ ಪಡೆಯುವಿರಿ. ವ್ಯವಹಾರದಲ್ಲಿ ಲಾಭದ ಸೂಚನೆ ಇದೆ. ಆರೋಗ್ಯದ…
ಅಡುಗೆ ಮನೆಯ ಡಬ್ಬಿಯಲ್ಲಿರುವ ‘ಇಂಗು’ (Asafoetida) ಕೇವಲ ಸಾಂಬಾರಿಗೆ ರುಚಿ ನೀಡುವ ಪದಾರ್ಥವಲ್ಲ; ಇದು ಅದ್ಭುತ ಔಷಧೀಯ ಗುಣಗಳ ಗಣಿ. ಆಯುರ್ವೇದದಲ್ಲಿ ಇಂಗನ್ನು ‘ಸರ್ವರೋಗ ನಿವಾರಕ’ ಎಂದು ಕರೆಯಲಾಗುತ್ತದೆ. ಅಜೀರ್ಣದಿಂದ ಹಿಡಿದು ಮಹಿಳೆಯರ ಮುಟ್ಟಿನ ನೋವಿನವರೆಗೆ ಹಲವು ಸಮಸ್ಯೆಗಳಿಗೆ ಇದು ಸುಲಭ ಮನೆಮದ್ದಾಗಿದೆ. ಇಂಗಿನ ಅದ್ಭುತ ಪ್ರಯೋಜನಗಳು: ಗ್ಯಾಸ್ಟ್ರಿಕ್ ಸಮಸ್ಯೆಗೆ ಬ್ರೇಕ್: ಬೇಳೆ ಕಾಳುಗಳನ್ನು ಬಳಸಿ ಮಾಡುವ ಅಡುಗೆಗಳಲ್ಲಿ ಒಂದು ಚಿಟಿಕೆ ಇಂಗು ಬಳಸುವುದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ ಮತ್ತು ಹೊಟ್ಟೆಯಲ್ಲಿ ಗ್ಯಾಸ್ ಉಂಟಾಗುವುದನ್ನು ತಡೆಯುತ್ತದೆ. ಹೊಟ್ಟೆಯುಬ್ಬರಕ್ಕೆ ಮಜ್ಜಿಗೆ ಮತ್ತು ಇಂಗು: ಅತಿಯಾದ ಆಹಾರ ಸೇವನೆಯಿಂದ ಅಥವಾ ಅಜೀರ್ಣದಿಂದ ಹೊಟ್ಟೆಯುಬ್ಬರ ಉಂಟಾದಾಗ, ಒಂದು ಲೋಟ ಮಜ್ಜಿಗೆಗೆ ಸ್ವಲ್ಪ ಉಪ್ಪು ಮತ್ತು ಇಂಗು ಬೆರೆಸಿ ಕುಡಿಯಿರಿ. ಇದು ಕೇವಲ 30 ನಿಮಿಷಗಳಲ್ಲಿ ಹೊಟ್ಟೆ ನೋವನ್ನು ಕಡಿಮೆ ಮಾಡುತ್ತದೆ. ಮುಟ್ಟಿನ ನೋವಿನಿಂದ ಮುಕ್ತಿ: ಪಿರಿಯಡ್ಸ್ ಸಮಯದಲ್ಲಿ ಕಾಡುವ ಹೊಟ್ಟೆ ನೋವು ಮತ್ತು ಸೆಳೆತಕ್ಕೆ ಇಂಗು ಅತ್ಯುತ್ತಮ ಪರಿಹಾರ. ಮಜ್ಜಿಗೆಗೆ ಮೆಂತೆ ಪುಡಿ, ಚಿಟಿಕೆ ಉಪ್ಪು ಮತ್ತು…
ಬೆಂಗಳೂರು: ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು ‘ಕರ್ತವ್ಯ’ (KAAMS – Karnataka Advanced Attendance Management System) ಎಂಬ ನೂತನ ಮುಂದುವರಿದ ಹಾಜರಾತಿ ನಿರ್ವಹಣಾ ತಂತ್ರಜ್ಞಾನವನ್ನು ಜಾರಿಗೆ ತಂದಿದೆ. ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಇಲಾಖಾ ಕಾರ್ಯದರ್ಶಿಗಳೊಂದಿಗೆ ನಡೆಸಿದ ಮೊದಲ ಸಭೆಯಲ್ಲೇ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಕಚೇರಿ ವೇಳೆಯಲ್ಲಿ ಕಡ್ಡಾಯವಾಗಿ 100% ಹಾಜರಿರಬೇಕು ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದರು. ಈ ಹಿಂದೆ ಜಾರಿಯಲ್ಲಿದ್ದ ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಉದ್ಯೋಗಿಗಳು ಕೇವಲ ಡಿಜಿಟಲ್ ಸಹಿ ಮಾಡಿ ಕಚೇರಿಯಿಂದ ಗೈರಾಗುವ ಸಾಧ್ಯತೆಗಳಿದ್ದವು. ಈ ದೋಷವನ್ನು ನಿವಾರಿಸಲು, ಉದ್ಯೋಗಿಗಳ ಭೌತಿಕ ಉಪಸ್ಥಿತಿ ಮತ್ತು ಕಚೇರಿಯ ಭೌಗೋಳಿಕ ಸ್ಥಳವನ್ನು (Geographical Location) ನಿಖರವಾಗಿ ಪತ್ತೆಹಚ್ಚುವ ಈ ಹೊಸ ವ್ಯವಸ್ಥೆಯನ್ನು ರೂಪಿಸಲಾಗಿದೆ. ಸಂಪೂರ್ಣ “ಮೇಡ್-ಇನ್-ಕರ್ನಾಟಕ” ಆವಿಷ್ಕಾರ ಯಾವುದೇ ಬಾಹ್ಯ ಖಾಸಗಿ ತಂತ್ರಜ್ಞಾನ ಸಂಸ್ಥೆಗಳ ನೆರವಿಲ್ಲದೆ, ಸಂಪೂರ್ಣವಾಗಿ ಸರ್ಕಾರದ ಪರಿಸರ ವ್ಯವಸ್ಥೆಯಲ್ಲೇ “ಕರ್ತವ್ಯ”…
ಇಂದಿನ ರಾಶಿ ಭವಿಷ್ಯ (15/06/2026): ಮೇಷ ರಾಶಿಯಿಂದ ಮೀನ ರಾಶಿಯವರೆಗಿನ ಇಂದಿನ ದಿನದ ಜಾತಕ ಫಲ ಇಲ್ಲಿದೆ. ಇಂದಿನ ಶುಭ ಬಣ್ಣ, ಶುಭ ಸಂಖ್ಯೆ ಮತ್ತು ಗಣೇಶನ ಪರಿಹಾರ ಮಂತ್ರದೊಂದಿಗೆ ನಿಮ್ಮ ದಿನವನ್ನು ಸುಖಮಯವಾಗಿಸಿಕೊಳ್ಳಿ. ಮೇಷ – ಹೊಸ ಕಾರ್ಯಗಳಿಗೆ ಶುಭ ದಿನ. ಉದ್ಯೋಗ ಹಾಗೂ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆತ್ಮವಿಶ್ವಾಸ ಹೆಚ್ಚಲಿದೆ. ಹಣಕಾಸಿನ ವಿಷಯದಲ್ಲಿ ಲಾಭದ ಸೂಚನೆಗಳಿವೆ. � ವೃಷಭ – ಖರ್ಚಿನ ಮೇಲೆ ನಿಯಂತ್ರಣ ಅಗತ್ಯ. ಕುಟುಂಬದವರೊಂದಿಗೆ ಸಹನೆ ಕಾಪಾಡಿ. ಆರೋಗ್ಯದ ಕಡೆ ಗಮನ ಹರಿಸುವುದು ಉತ್ತಮ. � ಮಿಥುನ – ಹೊಸ ಅವಕಾಶಗಳು ಎದುರಾಗಬಹುದು. ಸಂವಹನ ಕೌಶಲ್ಯದಿಂದ ಯಶಸ್ಸು ಸಿಗಲಿದೆ. ಸ್ನೇಹಿತರ ಸಹಕಾರ ದೊರೆಯಲಿದೆ. � ಕಟಕ – ಕೆಲಸಗಳಲ್ಲಿ ನಿಧಾನಗತಿಯ ಪ್ರಗತಿ ಕಂಡರೂ ಫಲ ಸಿಗಲಿದೆ. ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳಿ. ಕುಟುಂಬದ ಬೆಂಬಲ ನಿಮ್ಮೊಂದಿಗೆ ಇರುತ್ತದೆ. � ಸಿಂಹ – ನಾಯಕತ್ವ ಗುಣಗಳು ಹೊಳೆಯುವ ದಿನ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಉತ್ತಮ ಬೆಳವಣಿಗೆ ಸಾಧ್ಯ. ಗೌರವ…
ಬೆಂಗಳೂರು: ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ “ಗೃಹಲಕ್ಷ್ಮಿ” ಮತ್ತು “ಗೃಹಜ್ಯೋತಿ” ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಅಕೌಂಟ್ ತೆರೆದು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೇ ಅರ್ಜಿ ಸಲ್ಲಿಸಲು ಹೇಳಲಾಗಿದೆಯೇ ಹೊರತು ಯೋಜನೆಗಳನ್ನು ನಿಲ್ಲಿಸಲು ಅಲ್ಲ ಎಂದು ಮುಖ್ಯಮಂತ್ರಿಗಳು ಮಾಧ್ಯಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಎಲ್ಲ ಗ್ಯಾರಂಟಿ ಯೋಜನೆಗಳು ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಯುತ್ತವೆ. ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆ ಸರಕಾರಿ ರಿಯಲ್ ಎಸ್ಟೇಟ್ ಯೋಜನೆಯಾಗಿದೆ. ಇದು ಸಂಪೂರ್ಣವಾಗಿ ಹಣ ಲೂಟಿ ಮಾಡುವ ಯೋಚನೆಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವರು; ಬಿಡದಿ ಟೌನ್ಶಿಪ್ ನಾಡಿನ ಹಿತಾಸಕ್ತಿ ಅಡಗಿಲ್ಲ. ಭೂ ಮಾಫಿಯ ಹಾಗೂ ಭೂ ಲೂಟಿಕೋರರಿಗೆ ಲಾಭ ಮಾಡಿಕೊಡಲು ಇದನ್ನು ರೂಪಿಸಲಾಗಿದೆ. ಹೀಗಾಗಿ ಇದನ್ನು ನಾನು ಸರಕಾರಿ ರಿಯಲ್ ಎಸ್ಟೇಟ್ ದಂಧೆ ಎಂದು ಕರೆಯುತ್ತೇನೆ ಎಂದು ಹೇಳಿದರು. ರಸ್ತೆಗಳಲ್ಲಿ ಮೊಣಕಾಲುದ್ದ ಗುಂಡಿಗಳು ಬಿದ್ದು ವಾಹನ ಸಂಚಾರ ದೊಡ್ಡ ಪ್ರಯಾಸವಾಗಿದೆ. ಅದೇನೋ ಬ್ರ್ಯಾಂಡ್ ಬೆಂಗಳೂರು ಎಂದು ಹೇಳುತ್ತಿದ್ದರಲ್ಲ, ಅದನ್ನು ಮಾಡುವುದು ಬಿಟ್ಟು ಬಿಡದಿ ರೈತರ ಬದುಕಿಗೆ ಬೆಂಕಿ ಹಾಕಲು ಹೊರಟಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದರು. ಬೆಂಗಳೂರು ಅಭಿವೃದ್ಧಿಗೆ ಎಳ್ಳಷ್ಟು ಉಪಯೋಗ ಆಗದ ಈ ಯೋಜನೆಯನ್ನು ತಮ್ಮ ಸ್ವಾರ್ಥಕ್ಕಾಗಿ, ರಿಯಲ್ ಎಸ್ಟೇಟ್ ಮಾಫಿಯಾದೊಂದಿಗೆ ಕೈಜೋಡಿಸಿ ರೈತರ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದ್ದಾರೆ. ಈ ಹಿನ್ನೆಯಲ್ಲಿ ನಮ್ಮ…
ಚಿತ್ರದುರ್ಗ : ಶಿಕ್ಷಕನ ವೃತ್ತಿ ದೇವರಿಗೆ ಪ್ರಿಯವಾದದ್ದು, ಒಬ್ಬ ಶಿಕ್ಷಕ ತನ್ನ ಜವಾಬ್ದಾರಿ ಕರ್ತವ್ಯಗಳಿಂದ ಅದೆಷ್ಟು ವಿದ್ಯಾರ್ಥಿಗಳಿಗೆ ಅಕ್ಷರದಾನ ಮಾಡುವುದರ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿ ರೂಪಿಸಲು ತನ್ನದೇ ಆದ ಶ್ರಮವನ್ನ ವಹಿಸಿದ್ದಾರೆ, ಬಹು ದಿನಗಳ ಸರ್ಕಾರಿ ಶಿಕ್ಷಕರ ಕನಸಾಗಿ ಉಳಿದಿರುವಂತ ಗುರುಭವನದ ಭೂಮಿ ಪೂಜೆಯನ್ನು ಅತಿ ಶೀಘ್ರದಲ್ಲೇ ನೆರವೇರಿಸಲಾಗುವುದು ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದರು. ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ನಿರ್ದೇಶಕರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು, ದೇಶದಲ್ಲಿ ಶಿಕ್ಷಕರ ಪಾತ್ರ ಅನನ್ಯವಾದದ್ದು, ಶಿಕ್ಷಕರ ವೃತ್ತಿ ಪವಿತ್ರವಾದದ್ದು ಶಿಕ್ಷಕರು ತಮ್ಮ ಕಾರ್ಯವನ್ನು ಶ್ರದ್ಧೆಯಿಂದ ನಿರ್ವಹಿಸಿದರೆ ಅವರು ದೇವರಿಗೆ ಪ್ರಿಯವಾಗುತ್ತಾರೆ ಎಂದು ತಿಳಿಸಿದರು. ಶಿಕ್ಷಕರ ಮಧ್ಯ ಚುನಾವಣೆ ನಡೆಯಬಾರದು ಎಲ್ಲರೂ ಒಟ್ಟಾಗಿ ಯಾವುದೇ ರೀತಿ ವಿರೋಧವಿಲ್ಲದೆ ಅವಿರೋಧವಾಗಿ ನಡೆಯಬೇಕು ಆಗ ಶಿಕ್ಷಕರ ನಡುವೆ ಉತ್ತಮ ಸಂಬಂಧ ಬೆಳೆಯುತ್ತದೆ.…
ಬೆಂಗಳೂರು: ಭ್ರಷ್ಟಾಚಾರ ಮುಕ್ತ ಕರ್ನಾಟಕ, ಎಸ್ಐಆರ್ ನಲ್ಲಿ ಮತದಾನದ ಹಕ್ಕು ರಕ್ಷಣೆ, ತಾಲ್ಲೂಕು ಮಟ್ಟದಲ್ಲಿ ರಿಂಗ್ ರಸ್ತೆ ಗ್ರಿಡ್ ನಿರ್ಮಾಣ, ಮಳೆ ಕೊರತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ, ಯುವ ಯುಗ ಸ್ಥಾಪನೆ, ನಕಲಿ ಫೈನಾನ್ಸ್ ಸ್ಕೀಂ, ರೌಡಿಗಳು ಹಾಗೂ ಡ್ರಗ್ಸ್ ಜಾಲ ನಿಗ್ರಹ, ಗ್ರಾಮೀಣ ಶಿಕ್ಷಣಕ್ಕೆ ಸಿಎಸ್ಆರ್ ನೀತಿ ರಚನೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಸರ್ಕಾರಿ ಹಿರಿಯ ಅಧಿಕಾರಿಗಳೊಂದಿಗೆ 7 ಗಂಟೆಗಳ ಕಾಲ ಸುದೀರ್ಘ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಶನಿವಾರ ಮಾಹಿತಿ ನೀಡಿದರು. “ನಾವೆಲ್ಲರೂ ಒಂದೇ ತಂಡ, ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ ಎಂದು ಅಧಿಕಾರಿಗೆಳಿಗೆ ಮನವಿ ಮಾಡಲಾಗಿದೆ. ಸಮಸ್ಯೆ ಕಾರಣಕ್ಕೆ ಜನ ನಮ್ಮ ಬಳಿಗೆ ಬರುತ್ತಾರೆ. ಸಮಸ್ಯೆ ಇಲ್ಲವಾದರೆ ಯಾರೂ ಡಿಸಿ, ತಾಲ್ಲೂಕು ಕಚೇರಿಗೆ ಬರುವುದಿಲ್ಲ. ಸಮಸ್ಯೆಯೊಂದಿಗೆ ಬಂದ ಜನರಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು, ಸಮಸ್ಯೆ…
Subscribe to Updates
Get the latest creative news from FooBar about art, design and business.