Author: Times Of Bayaluseeme Staff

ಚಿತ್ರದುರ್ಗ: 21ನೇ ಶತಮಾನ ಅತ್ಯಂತ ವೇಗವಾಗಿ ಸಾಗುತ್ತಿರುವ ಬಿಕ್ಕಟ್ಟಿನ ಕಾಲಘಟ್ಟವಾಗಿದೆ. ಮೌಲ್ಯಗಳು ಇಂದು ಅಪಮೌಲ್ಯಗಳಾಗುತ್ತಿವೆ. ಸತ್ಯ ಮತ್ತು ಸುಳ್ಳುಗಳ ಗೊಂದಲದಲ್ಲಿರುವ ಈ ದುರಿತಕಾಲದಲ್ಲಿ ರಂಗಭೂಮಿಯ ಪಾತ್ರ ಮಹತ್ವದ್ದಾಗಿದೆ ಎಂದು ಹಿರಿಯ ಸಾಹಿತಿ ಡಾ.ಜೆ.ಕರಿಯಪ್ಪ ಮಾಳಿಗೆ ತಿಳಿಸಿದರು. ನಗರದ ಬಾಪೂಜಿ ಸ್ಕೂಲ್ ಆವರಣದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ರಂಗಸೌರಭ ಕಲಾ ಸಂಘದಿಂದ ಆಯೋಜಿಸಿದ್ದ ಶಿವಸಂಚಾರ ನಾಟಕೋತ್ಸವದಲ್ಲಿ ಮಾತನಾಡಿದರು. ವಿಶ್ವದ ಪ್ರಖರ ಮಾಧ್ಯಮ ರಂಗಭೂಮಿ. ಹೊಸ ರಂಗಪ್ರಯೋಗಗಳು ಯುವಕರನ್ನು ಆಕರ್ಷಿಸುತ್ತವೆ. ಸಾಧ್ಯವಾಗದ ಸಾಮಾಜಿಕ ಬದಲಾವಣೆಯನ್ನು ರಂಗಭೂಮಿಯಿಂದ ಮಾತ್ರ ಸಾಧಿಸಲು ಸಾಧ್ಯ. ಸಾಮಾಜಿಕ ಬದಲಾವಣೆಗೆ ರಂಗಭೂಮಿ ಪ್ರಮುಖ ಅಸ್ತ್ರ ಎಂದರು. ಸಮಾಜಕ್ಕೆ ಹೊಸ ದಿಕ್ಕನ್ನು ತೋರಿಸುವ ಶಕ್ತಿ ಹೊಂದಿದೆ. ಕಳ್ಳ ಎಂಬ ಪದಕ್ಕೆ ಹಲವು ಅರ್ಥಗಳಿವೆ. ಹಣ, ಒಡವೆದೋಚುವ ದರೋಡೆ ಮಾತ್ರವಲ್ಲ ನಮ್ಮಲ್ಲಿ ಮಾತು, ಮೌಲ್ಯ, ನ್ಯಾಯ ಮತ್ತು ಸ್ನೇಹ ಹೀಗೆ ಹಲವು ಕಳ್ಳರಿದ್ದಾರೆ. ಸಮಾಜವು ಮಗುವನ್ನು ಛೀ ಕಳ್ಳ ಎಂದು ಲೇವಡಿ ಮಾಡುವುದೂ ಉಂಟು. ತಪ್ಪು ಮಾಡಿದಾಗ ಅದನ್ನು ಮುಚ್ಚಿಡಲು…

Read More

ಚಿತ್ರದುರ್ಗ: ದೇಶದ ಬಹುತ್ವ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಒಳಗೊಂಡ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ. ಅವುಗಳ ಬಲದಿಂದಲೇ ಆಡಳಿತ ವ್ಯವಸ್ಥೆ ಸುಸೂತ್ರವಾಗಿ ನಡೆಯುತ್ತಿದೆ ಎಂದು ನಗರದ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲೆ ಪ್ರೊ. ತಾರಿಣಿ ಶುಭದಾಯಿನಿ ಹೇಳಿದರು. ನಗರದ ಸರ್ಕಾರಿ ಕಲಾ ಕಾಲೇಜಿನ ಅಂಬೇಡ್ಕರ್ ಸಭಾಂಗಣದಲ್ಲಿ ಮಂಗಳವಾರ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದಲ್ಲಿ ದಲಿತರು ಮತ್ತು ಮಹಿಳೆಯರು ದ್ವಂದ್ವ ಶೋಷಣೆಗೆ ಒಳಗಾಗುತ್ತಿದ್ದಾರೆ. ಹಿಂದುಳಿದ ವರ್ಗಗಳು ಸಂಖ್ಯೆಯಲ್ಲಿ ಹೆಚ್ಚಾಗಿದ್ದರೂ ಅಧಿಕಾರದಿಂದ ವಂಚಿತರಾಗಿ ಅಸ್ಪೃಶ್ಯತೆಯ ಅನುಭವವನ್ನು ಎದುರಿಸುತ್ತಿರುವುದು ಕಳವಳಕಾರಿ ಸಂಗತಿ ಎಂದು ಅವರು ಹೇಳಿದರು. ಪತ್ರಕರ್ತ ಪಿ. ಲಂಕೇಶ್ ಅವರ ‘ಮುಟ್ಟಿಸಿಕೊಂಡವರು’ ಕಥೆಯನ್ನು ಉಲ್ಲೇಖಿಸಿದ ಅವರು, ಜಾತಿ ವ್ಯವಸ್ಥೆಯನ್ನು ಒಂದು ಸಾಮಾಜಿಕ ರೂಪಕವಾಗಿ ಕಥೆಯಲ್ಲಿ ಚಿತ್ರಿಸಲಾಗಿದೆ ಎಂದರು. ಹೊರಗಡೆ ಕಾಣಿಸದ ಜಾತಿ ಭೇದಗಳು ಮನೆಯೊಳಗೇ ಆರಂಭವಾಗುತ್ತವೆ. ಆದ್ದರಿಂದ ಸಮಾಜಕ್ಕೆ ಅಂಟಿಕೊಂಡಿರುವ ಜಾತಿ, ಭ್ರಷ್ಟಾಚಾರ ಮತ್ತು ಶ್ರೇಷ್ಠತೆಯ ವ್ಯಸನದಂತಹ ರೋಗಗಳನ್ನು…

Read More

ಚಿತ್ರದುರ್ಗ: ಮನುಸ್ಮೃತಿ ಪ್ರತಿಪಾದಿಸಿದ ಅಸಮಾನತೆಯ ಮನಸ್ಥಿತಿ ಹೋಗಲಾಡಿಸಿದ ಕ್ರಾಂತಿ ಪುರುಷ ಡಾ.ಬಿ.ಆರ್.ಅಂಬೇಡ್ಕರ್ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಬಣ್ಣಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರ ಸಭೆ ಸಹಯೋಗದಲ್ಲಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡಾ. ಬಿ.ಆರ್. ಅಂಬೇಡ್ಕರ್ ಎಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ, ಅವರೊಬ್ಬ ಕ್ರಾಂತಿ ಮತ್ತು ಚಳುವಳಿಯ ಶಕ್ತಿಯಾಗಿದ್ದಾರೆ. ಅಂಬೇಡ್ಕರ್ ಶಿಕ್ಷಣವನ್ನು ಪ್ರಮುಖ ಅಸ್ತçವೆಂದು ನಂಬಿದ್ದರು. ಶಿಕ್ಷಣ ಪುರುಷರಿಗೆ ಸೀಮಿತವಾಗದೆ, ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೂ ಸಮಾನವಾಗಿ ಸಿಗಬೇಕು ಎಂಬುದು ಅವರ ಆಶಯವಾಗಿತ್ತು. ಅಂಬೇಡ್ಕರ್ ಅವರನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸುವುದು ಸರಿಯಲ್ಲ ಎಂದು ವಿಷಾದಿಸಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, “ಅಂಬೇಡ್ಕರ್ ಅಂದರೆ ಅದೊಂದು ವ್ಯಕ್ತಿಯಲ್ಲ, ಅದೊಂದು ಕ್ರಾಂತಿ ಮತ್ತು ಚಳವಳಿ. ಅಸ್ಪೃಶ್ಯತೆ ಎಂಬ ಅಸಮಾನತೆಯನ್ನು ಹೋಗಲಾಡಿಸಲು ಅವರು ತಮ್ಮ ಇಡೀ ಜೀವನವನ್ನೇ ಮುಡುಪಾಗಿಟ್ಟಿದ್ದರು. ಅವರು ದೇಶದ ಪ್ರತಿಯೊಬ್ಬರಿಗೂ ಮತ್ತು ಎಲ್ಲಾ…

Read More

ಚಿತ್ರದುರ್ಗ: ಆಧುನಿಕ ಭಾರತದ ಬಹುಮುಖ ಪ್ರತಿಭೆ ಡಾ.ಬಿ.ಆರ್ ಅಂಬೇಡ್ಕರ್. ಅವರು ಒಂದೇ ಜಾತಿ, ಹಾಗೂ ಒಂದೇ ಕ್ಷೇತ್ರಕ್ಕೆ ಸೀಮಿತವಾಗದೆ, ಆಧುನಿಕ ಭಾರತದ ಸರ್ವತೋಮುಖ ಬೆಳವಣಿಗೆಯ ಶಕ್ತಿಯಾಗಿ ನಿಂತವರು. ಇಡೀ ರಾಷ್ಟ್ರದ ಭವಿಷ್ಯಕ್ಕೆ ಶಕ್ತಿಯಾಗಿ ನಿಂತ ವ್ಯಕ್ತಿಯೇ ಅಂಬೇಡ್ಕರ ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ನಗರದ ಹೊರವಲಯದಲ್ಲಿರುವ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿಗುರುಪೀಠದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತ್ಯೋತ್ಸವದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಅಂಬೇಡ್ಕರ್ ಅವರ ವ್ಯಕ್ತಿತ್ವವು ಒಂದೇ ಕ್ಷೇತ್ರಕ್ಕೆ ಸೀಮಿತವಾಗಿರದೆ, ಅನೇಕ ಕ್ಷೇತ್ರಗಳಲ್ಲಿ ವ್ಯಾಪಿಸಿದೆ. ಅವರು ರಾಷ್ಟ್ರೀಯತಾವಾದಿಯಾಗಿ ದೇಶದ ಏಕತೆಗಾಗಿ ಶ್ರಮಿಸಿದರೆ, ಕಾನೂನು ತಜ್ಞರಾಗಿ ಸಮಾನತೆ ಮತ್ತು ನ್ಯಾಯದ ತತ್ವಗಳನ್ನು ಸ್ಥಾಪಿಸಿದರು. ರಾಜಕೀಯ ನಾಯಕನಾಗಿ ಅವರು ಜನತಾಂತ್ರಿಕ ಮೌಲ್ಯಗಳನ್ನು ಬಲಪಡಿಸಿದರು. ಜೊತೆಗೆ, ಕ್ರಿಯಾಶೀಲ ಸಾಮಾಜಿಕ ಕಾರ್ಯಕರ್ತರಾಗಿ ದಲಿತರ ಹಕ್ಕುಗಳಿಗಾಗಿ ಹೋರಾಟ ನಡೆಸಿದರು. ಇತಿಹಾಸಕಾರ ಮತ್ತು ತತ್ತ್ವಜ್ಞಾನಿಯಾಗಿ ಅವರು ಸಮಾಜದ ಮೂಲಭೂತ ಸಮಸ್ಯೆಗಳ ಕುರಿತು ಆಳವಾದ ಚಿಂತನೆಗಳನ್ನು ವ್ಯಕ್ತಪಡಿಸಿದರು. ಅಂಬೇಡ್ಕರ್ ಅವರು ಮಾನವಶಾಸ್ತ್ರಜ್ಞರಾಗಿ…

Read More

ಚಿತ್ರದುರ್ಗ: ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಮದಕರಿನಾಯಕ ವಿದ್ಯಾ ಸಂಸ್ಥೆ ಆಶ್ರಯದಲ್ಲಿ ಶ್ರೀಮತಿ ಯಶೋದರಮ್ಮ ಮಹಿಳಾ ಪ್ರಥಮ ದರ್ಜೆ ಕಾಲೇಜು, ಹಾಗೂ ಶ್ರೀ ಕೋಟೆ ಸಣ್ಣ ಬೋರಪ್ಪ–ಬೋರಮ್ಮ ಪ್ರಥಮ ದರ್ಜೆ ಕಾಲೇಜಿನಿಂದ ಸಂಯುಕ್ತವಾಗಿ ಜೆ.ಎನ್.ಕೋಟೆಯಲ್ಲಿ ಆಯೋಜಿಸಿದ್ದ ಎನ್‌ಎಸ್‌ಎಸ್ ವಿಶೇಷ ಶಿಬಿರ ಮಂಗಳವಾರ ಯಶಸ್ವಿಯಾಗಿ ಮುಕ್ತಾಯವಾಯಿತು. ಶಿಬಿರದ 6ನೇ ದಿನ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ದೀಪೋತ್ಸವ ಸಮಾರಂಭಕ್ಕೆ ಅಧ್ಯಕ್ಷತೆ ವಹಿಸಿದ್ದ ಎಸ್. ಸಂದೀಪ್, ಎನ್‌ಎಸ್‌ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ ಎಂದು ಹೇಳಿದರು. ಗ್ರಾಮಸ್ಥರ ಸಮ್ಮುಖದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡ ಅವರು, ಯುವಜನರಲ್ಲಿ ಸಮಾಜಮುಖಿ ಚಿಂತನೆ ಬೆಳೆಸುವಲ್ಲಿ ಇಂತಹ ಶಿಬಿರಗಳ ಪಾತ್ರ ಅನನ್ಯ ಎಂದರು. ಪ್ರಾಂಶುಪಾಲರಾದ ಡಾ. ಲತಾ ಎಸ್. ಮಾತನಾಡಿ, ಆರು ದಿನಗಳ ಅವಧಿಯಲ್ಲಿ ಸ್ವಚ್ಛತಾ ಕಾರ್ಯ, ಶ್ರಮದಾನ, ಆರೋಗ್ಯ ಜಾಗೃತಿ ಮತ್ತು ಪಶು ಸಂಗೋಪನೆ ಕುರಿತ ವಿಶೇಷ ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮಾಧಿಕಾರಿಗಳಾದ ಡಾ. ಧನಂಜಯ…

Read More

ಇಂದಿನ ರಾಶಿ ಭವಿಷ್ಯ (14-04-2026): ಇಂದು ಮೇಷ ರಾಶಿಯವರಿಗೆ ಕಾರ್ಯಸಿದ್ಧಿ, ಸಿಂಹ ರಾಶಿಯವರಿಗೆ ಉದ್ಯೋಗದಲ್ಲಿ ಪ್ರಗತಿ ಮತ್ತು ಧನು ರಾಶಿಯವರಿಗೆ ಪ್ರಯಾಣ ಯೋಗವಿದೆ. ನಿಮ್ಮ ರಾಶಿಯ ಆರ್ಥಿಕ, ಆರೋಗ್ಯ ಮತ್ತು ಕೌಟುಂಬಿಕ ಭವಿಷ್ಯ ಹೇಗಿದೆ ಎಂದು ತಿಳಿಯಲು ಈಗಲೇ ಓದಿ. ಮೇಷ (Aries) ಇಂದು ನಿಮ್ಮ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹೊಸ ಅವಕಾಶಗಳು ದೊರೆಯುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಸುಧಾರಣೆ. ವೃಷಭ (Taurus) ಹಣಕಾಸಿನ ವಿಚಾರಗಳಲ್ಲಿ ಲಾಭ. ಕುಟುಂಬದ ಜೊತೆ ಸಮಯ ಕಳೆಯುವಿರಿ. ಆರೋಗ್ಯ ಉತ್ತಮವಾಗಿರುತ್ತದೆ. ಹೂಡಿಕೆಗಳಿಗೆ ಉತ್ತಮ ದಿನ. ಮಿಥುನ (Gemini) ಕೆಲಸದ ಒತ್ತಡ ಸ್ವಲ್ಪ ಹೆಚ್ಚಾಗಬಹುದು. ಆದರೆ ನಿಮ್ಮ ಚಾತುರ್ಯದಿಂದ ಎಲ್ಲವನ್ನು ನಿಭಾಯಿಸುತ್ತೀರಿ. ಸ್ನೇಹಿತರ ಸಹಾಯ ಸಿಗಲಿದೆ. ಕರ್ಕಾಟಕ (Cancer) ಭಾವನಾತ್ಮಕವಾಗಿ ಸ್ವಲ್ಪ ಅಸ್ಥಿರತೆ ಇರಬಹುದು. ಧೈರ್ಯದಿಂದ ನಿರ್ಧಾರ ತೆಗೆದುಕೊಳ್ಳಿ. ಕುಟುಂಬದ ಬೆಂಬಲ ಸಿಗುತ್ತದೆ. ಸಿಂಹ (Leo) ಪ್ರತಿಭೆ ಹೊರಹೊಮ್ಮುವ ದಿನ. ಉದ್ಯೋಗದಲ್ಲಿ ಪ್ರಗತಿ. ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ. ಕನ್ಯಾ (Virgo) ಆರೋಗ್ಯದ ಕಡೆ…

Read More

ಚಿತ್ರದುರ್ಗ: ಶಿಕ್ಷಣವು ಕೇವಲ ನಾಲ್ಕು ಗೋಡೆಗಳೊಳಗೆ ಪಾಠ ಕಲಿಯುವುದಕ್ಕೆ ಸೀಮಿತವಾಗಿಲ್ಲ. ಸಮಾಜದ ಸ್ಥಿತಿ, ಆಡಳಿತ ವ್ಯವಸ್ಥೆ, ಸಮಕಾಲೀನ ಘಟನೆಗಳು ಹಾಗೂ ಸಾಮಾನ್ಯ ಜ್ಞಾನವನ್ನು ಅರ್ಥಮಾಡಿಕೊಳ್ಳಲು ದಿನಪತ್ರಿಕೆಗಳ ಓದು ಅತ್ಯಂತ ಅಗತ್ಯ ಎಂದು ಹಿರಿಯ ಪತ್ರಕರ್ತ ಗೌನಹಳ್ಳಿ ಗೋವಿಂದಪ್ಪ ತಿಳಿಸಿದರು. ತಾಲ್ಲೂಕಿನ ದ್ವಾಮವ್ವನಹಳ್ಳಿಯಲ್ಲಿ ಡಾನ್ ಬೋಸ್ಕೋ ಪದವಿ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯಿಂದ ಸೋಮವಾರ ಆಯೋಜಿಸಿದ್ದ ವಿಶೇಷ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿ ಜೀವನದಲ್ಲಿ ದಿನಪತ್ರಿಕೆ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳು ಪ್ರತಿದಿನ ಪತ್ರಿಕೆ ಓದುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಪತ್ರಿಕೆಗಳು ಸಾಮಾನ್ಯ ಜ್ಞಾನ, ಸಮಕಾಲೀನ ಮಾಹಿತಿ ಹಾಗೂ ಸಮಾಜದ ಸಮಸ್ಯೆಗಳ ಅರಿವಿಗೆ ಪ್ರಮುಖ ಮೂಲವಾಗಿವೆ ಎಂದು ತಿಳಿಸಿದರು. ಪತ್ರಿಕೆ ಜಗತ್ತನ್ನು ನೋಡುವ ಕಿಟಕಿಯಂತಿದೆ. ಆಡಳಿತದ ತಪ್ಪುಗಳನ್ನು ಪ್ರಶ್ನಿಸುವುದು, ಅನ್ಯಾಯವನ್ನು ಬೆಳಕಿಗೆ ತರುವುದು ಮತ್ತು ಸಮಾಜದ ದಿಕ್ಕು ತಿದ್ದುವುದು ಪತ್ರಿಕೋದ್ಯಮದ ಮಹತ್ವದ ಕರ್ತವ್ಯ ಎಂದು ಹೇಳಿದರು. ಪತ್ರಿಕೆಗಳು ಕೇವಲ ಸುದ್ದಿಗಳಿಗೆ ಸೀಮಿತವಾಗಿಲ್ಲ. ಕ್ರೀಡೆ, ಸಾಹಿತ್ಯ,…

Read More

ಹರಿಹರ, ಏಪ್ರಿಲ್ 13: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಸಮೀಪದ ಪಂಚಮಸಾಲಿ ಗುರುಪೀಠದಲ್ಲಿ ಮಹತ್ವದ ಬೆಳವಣಿಗೆಯಾಗಿ, ಪೀಠಾಧಿಪತಿಗಳಾದ ವಚನಾನಂದ ಸ್ವಾಮೀಜಿಯನ್ನು ಉಚ್ಚಾಟನೆ ಮಾಡುವ ನಿರ್ಧಾರ ಧರ್ಮದರ್ಶಿ ಮಂಡಳಿ ತೆಗೆದುಕೊಂಡಿದೆ. 🔍 ಏನಾಯಿತು? ಗುರುಪೀಠದಲ್ಲಿ ನಡೆದ ಧರ್ಮದರ್ಶಿಗಳ ಸಭೆಯಲ್ಲಿ ಒಟ್ಟು 15 ಮಂದಿ ಸದಸ್ಯರು ಭಾಗವಹಿಸಿದ್ದು, ಇವರಲ್ಲಿ 12 ಮಂದಿ ವಚನಾನಂದ ಶ್ರೀಗಳ ವಿರುದ್ಧ ಮತ ಚಲಾಯಿಸಿದ್ದಾರೆ. ಬಹುಮತದ ಆಧಾರದ ಮೇಲೆ ಉಚ್ಚಾಟನೆಗೆ ಅಂತಿಮ ಮುದ್ರೆ ಬಿದ್ದಿದೆ. ⚠️ ಉಚ್ಚಾಟನೆಗೆ ಕಾರಣಗಳು ಸಭೆಯ ಬಳಿಕ ಸಮಿತಿ ಸದಸ್ಯರಾದ ಬಸವರಾಜ ದಿಂಡೂರ ಹಾಗೂ ಬಾವಿ ಬೆಟ್ಟಪ್ಪ ಮಾಹಿತಿ ನೀಡಿದ್ದು, ಪ್ರಮುಖ ಕಾರಣಗಳನ್ನು ಬಹಿರಂಗಪಡಿಸಿದರು: 📌 ಸ್ಪಷ್ಟನೆ ನೀಡದ ಆರೋಪ: ಪೀಠದ ಆಡಳಿತ ಮತ್ತು ನಡವಳಿಕೆ ಕುರಿತು 12 ಅಂಶಗಳ ಪ್ರಶ್ನೆಗಳಿಗೆ ಯಾವುದೇ ಉತ್ತರ ನೀಡದಿರುವುದು 📌 ‘ಶ್ವಾಸ ಪೀಠ’ ವಿವಾದ: ಪೀಠದ ಘನತೆಗೆ ಧಕ್ಕೆ ತರುವ ಚಟುವಟಿಕೆಗಳ ಆರೋಪ 🔄 ಮುಂದೇನು? ಈ ನಿರ್ಧಾರದಿಂದ ಪಂಚಮಸಾಲಿ ಗುರುಪೀಠದಲ್ಲಿ ಆಡಳಿತಾತ್ಮಕ ಬದಲಾವಣೆಗಳು ಅನಿವಾರ್ಯವಾಗಿವೆ. ಭಕ್ತರು…

Read More

ಹಾಸನ, ಏಪ್ರಿಲ್ 13: ಎಂಟು ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬರು ತನ್ನ ಪತಿ ಹಾಗೂ ಏಳು ವರ್ಷದ ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ವಿವಾಹವಾಗಿರುವ ಘಟನೆ ಹಾಸನ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ. ಅರಕಲಗೂಡು ತಾಲೂಕಿನ ಮುಂಡಗೋಡು ಗ್ರಾಮದ ಹರ್ಷಿತಾ ಅವರು 2017ರಲ್ಲಿ ಹಾಸನ ತಾಲೂಕಿನ ಮುಕಂದೂರು ಗ್ರಾಮದ ಪ್ರಕಾಶ್ ಅವರೊಂದಿಗೆ ವಿವಾಹವಾಗಿದ್ದರು. ದಂಪತಿಗೆ ಏಳು ವರ್ಷದ ಗಂಡು ಮಗನಿದ್ದಾನೆ. ಮಾರ್ಚ್ 30ರಂದು ‘ಆಸ್ಪತ್ರೆಗೆ ಹೋಗಿ ಬರುತ್ತೇನೆ’ ಎಂದು ಮನೆಯಿಂದ ಹೊರಟ ಹರ್ಷಿತಾ ನಂತರ ವಾಪಸ್ ಮನೆಗೆ ಬಂದಿರಲಿಲ್ಲ. ಮಗಳು ಕಾಣೆಯಾಗಿರುವ ಬಗ್ಗೆ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಹರ್ಷಿತಾಳನ್ನು ಪತ್ತೆಹಚ್ಚಿ ಠಾಣೆಗೆ ಕರೆತಂದಿದ್ದರು. ಈ ವೇಳೆ ಪತಿ ಜೊತೆ ಹೋಗಲು ನಿರಾಕರಿಸಿದ ಆಕೆ, ತನ್ನ ಪ್ರಿಯಕರ ಸಚಿನ್ ಜೊತೆಗೇ ಹೋಗುವುದಾಗಿ ಹಠ ಹಿಡಿದಿದ್ದರಿಂದ, ಪೊಲೀಸರು ಆಕೆಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು. ಆದರೆ, ಸಾಂತ್ವನ ಕೇಂದ್ರದಲ್ಲಿದ್ದ ಹರ್ಷಿತಾ ಆರೋಗ್ಯ ಸಮಸ್ಯೆ ಇದೆ ಎಂದು ಹೇಳಿ ಆಸ್ಪತ್ರೆಗೆ…

Read More

ಸಂಗೀತವೆಂದರೆ ಕೇವಲ ಧ್ವನಿಯೇ ಅಥವಾ ಭಾವನೆಗಳ ಸಮ್ಮಿಲನವೇ? ಸುಮಾರು 12,000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾದ ಆಶಾ ಭೋಸ್ಲೆ ಅವರ ಸ್ವರಯಾನ ಮತ್ತು ಬದುಕಿನ ಸಾರ್ಥಕತೆಯ ಬಗ್ಗೆ ವಿವೇಕಾನಂದ ಎಚ್. ಕೆ. ಅವರ ವಿಶೇಷ ಲೇಖನ ಇಲ್ಲಿದೆ. ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ…… ಶಬ್ದ ಅಥವಾ ಧ್ವನಿ ಕ್ರಮಬದ್ಧತೆಯ – ಶಿಸ್ತುಬದ್ಧತೆಯ ತರಂಗಗಳನ್ನು ಸಂಗೀತ ಎಂದು ಗ್ರಹಿಸಬಹುದೇ ? ಅಥವಾ, ಆ ಶಬ್ದಗಳ ಸುಶ್ರಾವ್ಯತೆ ಮಾತ್ರ ಸಂಗೀತವೇ ? ಅಥವಾ, ಧ್ವನಿ ಮತ್ತು ವಾದ್ಯಗಳ ಸಮ್ಮಿಲನದ ಭಾಷೆಗೆ ಸಂಗೀತ ಎನ್ನಬಹುದೇ…… ಅಥವಾ, ಸಾಹಿತ್ಯ ಧ್ವನಿ ವಾದ್ಯಗಳ ಮಿಲನದ ಪ್ರಕ್ರಿಯೆಯೇ ಸಂಗೀತವೇ…… ಅಥವಾ, ಧ್ವನಿಯ ಸ್ವರ, ಲಯ ತಾಳಗಳ ರೂಪವೇ ಸಂಗೀತ ಸೃಷ್ಟಿಸುತ್ತದೆಯೇ….. ಭಾವನೆಗಳು ಅಕ್ಷರ ರೂಪದ ಸಾಹಿತ್ಯವಾಗಿ ಮೂಡಿದ ಮೇಲೆ ಆ ಅಕ್ಷರಗಳು ಮತ್ತೆ ಭಾವನೆಗಳಾಗಿ ಹಾಡಿನ ಮೂಲಕ ಪರಿವರ್ತನೆ ಹೊಂದಿ ಕೆಲವೊಮ್ಮೆ ಮತ್ತೆ ಅಕ್ಷರಗಳಾಗಿ ಮತ್ತೆ ಭಾವನೆಗಳಾಗುವ ಸರಪಳಿಯ ಕೊಂಡಿಯೊಂದು…

Read More