Author: Times Of Bayaluseeme Staff

13 ಏಪ್ರಿಲ್ 2026, ಸೋಮವಾರದ ನಿತ್ಯ ಭವಿಷ್ಯ: ಇಂದು ನಿಮ್ಮ ರಾಶಿಗೆ ಶುಭ ಯೋಗವಿದೆಯೇ? ಮೇಷದಿಂದ ಮೀನ ರಾಶಿಯವರ ಇಂದಿನ ಉದ್ಯೋಗ, ಆರ್ಥಿಕ ಮತ್ತು ಆರೋಗ್ಯ ಭವಿಷ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ. ಇಂದಿನ ಶುಭ ಬಣ್ಣ ಮತ್ತು ಸಂಖ್ಯೆಯನ್ನು ತಿಳಿಯಿರಿ ಮೇಷ (Aries) ಇಂದು ಕೆಲಸಗಳಲ್ಲಿ ವೇಗ ಹೆಚ್ಚಾಗುತ್ತದೆ. ಹೊಸ ಅವಕಾಶಗಳು ದೊರೆಯಬಹುದು. ಆರ್ಥಿಕವಾಗಿ ಸಾಧಾರಣ ದಿನ. ಕುಟುಂಬದಲ್ಲಿ ಸಂತೋಷಕರ ವಾತಾವರಣ. ವೃಷಭ (Taurus) ಸಣ್ಣ ಅಡೆತಡೆಗಳು ಎದುರಾಗಬಹುದು, ಆದರೆ ಧೈರ್ಯದಿಂದ ಮುಂದೆ ಸಾಗಿದರೆ ಯಶಸ್ಸು ನಿಮ್ಮದೇ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಮಿಥುನ (Gemini) ಹೊಸ ಪರಿಚಯಗಳು ಜೀವನದಲ್ಲಿ ಬದಲಾವಣೆ ತರಬಹುದು. ಉದ್ಯೋಗ ಕ್ಷೇತ್ರದಲ್ಲಿ ಮೆಚ್ಚುಗೆ ಸಿಗುವ ಸಾಧ್ಯತೆ ಇದೆ. ಕರ್ಕಾಟಕ (Cancer) ಮನಸ್ಸು ಚಂಚಲವಾಗಿರಬಹುದು. ಕುಟುಂಬದವರ ಜೊತೆ ಸಮಯ ಕಳೆಯುವುದು ಉತ್ತಮ. ಆರೋಗ್ಯದ ಕಡೆ ಗಮನ ನೀಡಿ. ಸಿಂಹ (Leo) ನಿಮ್ಮ ನಾಯಕತ್ವ ಗುಣಗಳು ಹೊರಹೊಮ್ಮುವ ದಿನ. ವ್ಯವಹಾರದಲ್ಲಿ ಲಾಭದ ಸೂಚನೆ. ಸ್ನೇಹಿತರ ಸಹಕಾರ ಸಿಗುತ್ತದೆ. ಕನ್ಯಾ (Virgo) ಕೆಲಸದ…

Read More

ಟೈಮ್ಸ್ ಆಫ್ ಬಯಲುಸೀಮೆ ಕನ್ನಡ ದಿನಪತ್ರಿಕೆ ವತಿಯಿಂದ ಜಗಜ್ಯೋತಿ ಬಸವೇಶ್ವರರ ಜಯಂತಿ ಅಂಗವಾಗಿ ವಿಶೇಷಾಂಕ ಪ್ರಕಟಿಸಲಾಗುತ್ತಿದೆ. ಈ ವಿಶೇಷಾಂಕಕ್ಕಾಗಿ ಯುವಜನರಿಂದ 150 ಪದಗಳ ಚುಟುಕು ಲೇಖನಗಳನ್ನು ಆಹ್ವಾನಿಸಲಾಗಿದೆ. ವಿಷಯ: “ನನ್ನ ಮನದ ಕಣ್ಗಳಲ್ಲಿ ಕಂಡ ಜಗಜ್ಯೋತಿ ಬಸವೇಶ್ವರರು” ಬಸವಣ್ಣನ ವಚನಗಳು, ಅವರ ಚಿಂತನೆಗಳ ಇಂದಿನ ಪ್ರಸ್ತುತತೆ ಹಾಗೂ ಯುವ ಮನಸ್ಸಿನ ಅನಿಸಿಕೆಗಳನ್ನು ಒಳಗೊಂಡ ಲೇಖನಗಳಿಗೆ ಆದ್ಯತೆ ನೀಡಲಾಗುವುದು. ವಿದ್ಯಾರ್ಥಿಗಳು, ಯುವ ಲೇಖಕರು, ಆಸಕ್ತ ಬರಹಗಾರರು ಹಾಗೂ ಬಸವ ಚಿಂತನೆಗೆ ಆಸಕ್ತಿ ಹೊಂದಿರುವ ಯುವಜನರಿಗೆ ಅವಕಾಶ ಕಲ್ಪಿಸಲಾಗಿದೆ. ಲೇಖನ ಕಳುಹಿಸಲು ಏಪ್ರಿಲ್ 14 ಕೊ‌ನೆ ದಿನ. 9620139796 ಈ ಸಂಖ್ಯೆಗೆ ವಾಟ್ಸಾಪ್ ಮೂಲಕ ಪೂರ್ಣ ಹೆಸರು, ನಿಮ್ಮ ಬಗ್ಗೆ ಒಂದೆರಡು ಸಾಲು ಪರಿಚಯ, ಫೋನ್ ನಂಬರ್ ಹಾಗೂ ಭಾವಚಿತ್ರವಿರಲಿ. ವಂದನೆಗಳೊಂದಿಗೆ ವೀರೇಂದ್ರ ಕೋಗುಂಡೆ ಮಠ ಕಾರ್ಯನಿರ್ವಾಹಕ ಸಂಪಾದಕರುಟೈಮ್ಸ್ ಆಫ್ ಬಯಲುಸೀಮೆ ಕನ್ನಡ ದಿನಪತ್ರಿಕೆ

Read More

ಜಗಜ್ಯೋತಿ ಬಸವೇಶ್ವರರ ಜಯಂತಿ ಅಂಗವಾಗಿ ಟೈಮ್ಸ್ ಆಫ್ ಬಯಲುಸೀಮೆ ಕನ್ನಡ ದಿನಪತ್ರಿಕೆ ವತಿಯಿಂದ ವಿಶೇಷಾಂಕ ಹೊರತರಲಾಗುತ್ತಿದೆ. ಈ ವಿಶೇಷಾಂಕಕ್ಕೆ ‘ನನ್ನ ಮನದ ಕಣ್ಗಳಲ್ಲಿ ಕಂಡ ಜಗಜ್ಯೋತಿ ಬಸವೇಶ್ವರರು’ ಎಂಬ ವಿಷಯದ ಕುರಿತು ಯುವಜನರಿಂದ 150 ಪದಗಳ ಚುಟುಕು ಲೇಖನಗಳನ್ನು ಆಹ್ವಾನಿಸಲಾಗಿದೆ. ಸಮಾನತೆ, ಕಾಯಕ, ದಾಸೋಹ ಹಾಗೂ ಮಾನವತೆಯ ಮೌಲ್ಯಗಳನ್ನು ಸಮಾಜಕ್ಕೆ ಬಿತ್ತಿದ ಜಗಜ್ಯೋತಿ ಬಸವೇಶ್ವರರ ತತ್ವಗಳು ಇಂದಿನ ಯುವಜನರ ಬದುಕಿನಲ್ಲಿ ಹೇಗೆ ಸ್ಪಂದಿಸುತ್ತಿವೆ ಎಂಬುದನ್ನು ತಮ್ಮದೇ ಶೈಲಿಯಲ್ಲಿ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಬಸವಣ್ಣನ ವಚನಗಳು, ಅವರ ಚಿಂತನೆಗಳ ಪ್ರಸ್ತುತತೆ ಮತ್ತು ಯುವ ಮನಸ್ಸಿನ ಅನಿಸಿಕೆಗಳನ್ನು ಒಳಗೊಂಡ ಲೇಖನಗಳಿಗೆ ಆದ್ಯತೆ ನೀಡಲಾಗುವುದು. ಯುವ ಲೇಖಕರು, ವಿದ್ಯಾರ್ಥಿಗಳು ಹಾಗೂ ಆಸಕ್ತ ಬರಹಗಾರರು ಉತ್ಸಾಹದಿಂದ ಭಾಗವಹಿಸುವಂತೆ ಸಂಪಾದಕ ಮಂಡಳಿ ಮನವಿ ಮಾಡಿದೆ. ವಿಶೇಷ ಸೂಚನೆ ; ಲೇಖನಕ್ಕೆ ಏಪ್ರಿಲ್ 14 ಕೊನೆ ದಿನ. 9620139796 ಈ ನಂಬರ್ ಗೆ ಪೂರ್ಣ ಹೆಸರು, ನಿಮ್ಮ ಬಗ್ಗೆ ಒಂದೆರಡು ಸಾಲು ವಿವರಣೆ, ಫೋನ್ ನಂಬರ್ ಜತೆ ಭಾವಚಿತ್ರದ ಜತೆ…

Read More

ಬೆಂಗಳೂರು, ಏ. 12: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಂಗೀಕರಿಸಿದ್ದಾರೆ. “ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ನೂತನ ಸಮಿತಿ ಶೀಘ್ರ ರಚನೆಗೆ ಕ್ರಮ ವಹಿಸಲಾಗಿದೆ” ಎಂದು ಶಿವಕುಮಾರ್ ಅವರು ಹೇಳಿದ್ದಾರೆ.

Read More

ಮುಂಬೈ: ಭಾರತೀಯ ಸಂಗೀತ ಲೋಕಕ್ಕೆ ಭಾರೀ ನಷ್ಟ ಉಂಟುಮಾಡುವಂತಹ ದುಃಖದ ಸುದ್ದಿ ಹೊರಬಿದ್ದಿದೆ. ಪ್ರಸಿದ್ಧ ಪ್ಲೇಬ್ಯಾಕ್ ಗಾಯಕಿ ಆಶಾ ಭೋಂಸ್ಲೆ ಅವರು 92ನೇ ವಯಸ್ಸಿನಲ್ಲಿ ಇಂದು ವಿಧಿವಶರಾದರು. ದಶಕಗಳ ಕಾಲ ಭಾರತೀಯ ಚಿತ್ರರಂಗದಲ್ಲಿ ತನ್ನ ಅಮೋಘ ಧ್ವನಿಯಿಂದ ಅಭಿಮಾನಿಗಳ ಮನಗೆದ್ದಿದ್ದ ಆಶಾ ಭೋಂಸ್ಲೆ ಅವರು ಸಾವಿರಾರು ಹಾಡುಗಳನ್ನು ಹಾಡಿ ಸಂಗೀತ ಲೋಕದಲ್ಲಿ ಅಮರ ಸಾಧನೆ ಮಾಡಿದ್ದಾರೆ. ಹಿಂದುಸ್ತಾನಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಅನೇಕ ಭಾಷೆಗಳಲ್ಲಿ ಅವರು ಹಾಡಿದ ಹಾಡುಗಳು ಇಂದಿಗೂ ಜನಮನಗಳಲ್ಲಿ ಜೀವಂತವಾಗಿವೆ. ಅವರ ನಿಧನದಿಂದ ಸಂಗೀತ ಕ್ಷೇತ್ರದಲ್ಲಿ ದೊಡ್ಡ ಖಾಲಿ ಉಂಟಾಗಿದೆ. ಅನೇಕ ಗಣ್ಯರು, ರಾಜಕೀಯ ನಾಯಕರು ಮತ್ತು ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅಪಾರ ಸಾಧನೆ 70 ವರ್ಷಗಳಿಗೂ ಹೆಚ್ಚು ಕಾಲ ಸಂಗೀತ ಸೇವೆ ಸಾವಿರಾರು ಹಾಡುಗಳಿಗೆ ಧ್ವನಿಯಾಗಿದ್ದರು ಅನೇಕ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದರು 😢 ಅಭಿಮಾನಿಗಳ ಕಣ್ಣೀರು ಆಶಾ ಭೋಂಸ್ಲೆ ಅವರ ನಿಧನ ಸುದ್ದಿ ಕೇಳಿ ದೇಶದಾದ್ಯಂತ ಅಭಿಮಾನಿಗಳು ದುಃಖ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ…

Read More

ಅಮೃತಬಳ್ಳಿಯು (Tinospora cordifolia) ನಮ್ಮ ಸಾಂಪ್ರದಾಯಿಕ ಆಯುರ್ವೇದ ಔಷಧಿಯಲ್ಲೊಂದು ಪ್ರಮುಖವಾದ ಔಷಧೀಯ ಸಸ್ಯವಾಗಿದೆ. ಇದು ಮೆನಿಸ್ಪರ್ಮೇಸೀ ಕುಟುಂಬಕ್ಕೆ ಸೇರಿದ ಬಳ್ಳಿಯಾಗಿದ್ದು, ಒಣ ಕಾಡುಗಳಲ್ಲಿ ಮತ್ತು ಪರ್ಣಪಾತಿ ಕಾಡುಗಳಲ್ಲಿ ನೈಸರ್ಗಿಕವಾಗಿ ಬೆಳೆಯುತ್ತದೆ. ಪ್ರಮುಖ ಔಷಧೀಯ ಗುಣಗಳು ಮತ್ತು ಪ್ರಯೋಜನಗಳು 1. ತ್ರಿದೋಷಹರ ಮತ್ತು ಜ್ವರ ನಿವಾರಕ ವಾತ, ಪಿತ್ತ ಮತ್ತು ಕಫ ದೋಷಗಳನ್ನು ಸಮತೋಲನಗೊಳಿಸುತ್ತದೆ ಎಲ್ಲಾ ರೀತಿಯ ಜ್ವರಗಳಿಗೆ ಅತ್ಯಂತ ಪರಿಣಾಮಕಾರಿ ಔಷಧಿಯಾಗಿದೆ ತಾಜಾ ಕಾಂಡವನ್ನು ಜಜ್ಜಿ ರಸ ತೆಗೆದು, ಜೇನುತುಪ್ಪದೊಂದಿಗೆ ಬೆರೆಸಿ ದಿನಕ್ಕೆ ಮೂರು ಬಾರಿ ಆಹಾರದ ಮೊದಲು ಸೇವಿಸಬೇಕು 2. ಮಧುಮೇಹ ನಿರ್ವಹಣೆ ಮಧುಮೇಹ (ಡಯಾಬಿಟಿಸ್) ರೋಗಕ್ಕೆ ಔಷಧಿಯಾಗಿ ಬಳಸಲಾಗುತ್ತದೆ ಒಂದು ಅಮೃತಬಳ್ಳಿ ಎಲೆಯನ್ನು ಪ್ರತಿದಿನ ಸೇವಿಸುವುದರಿಂದ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಬಹುದು 3. ಹೃದಯ ಸಂಬಂಧಿ ಆರೋಗ್ಯ ಹೃದಯ ಸಂಬಂಧಿ ಎದೆಯುರಿ (ಹೃದಯ ಶೂಲೆ) ಚಿಕಿತ್ಸೆಗೆ ಅಮೃತಬಳ್ಳಿಯ ಚೂರ್ಣವನ್ನು ಅರ್ಧ ಟೀ ಚಮಚದಷ್ಟು ತೆಗೆದುಕೊಳ್ಳಬೇಕು ಇದಕ್ಕೆ ಮೆಣಸಿನ ಪುಡಿಯನ್ನು ಸೇರಿಸಿ ಬಿಸಿ ನೀರಿನಲ್ಲಿ ಬೆರೆಸಿ ದಿನಕ್ಕೆ ಎರಡು ಬಾರಿ…

Read More

ಇಂದಿನ ರಾಶಿ ಭವಿಷ್ಯ (12-04-2026): ಭಾನುವಾರದಂದು ಮೇಷ ರಾಶಿಯಿಂದ ಮೀನ ರಾಶಿಯವರೆಗೆ ಹನ್ನೆರಡು ರಾಶಿಗಳ ಫಲಾಫಲಗಳು ಹೇಗಿರಲಿವೆ? ಯಾರಿಗೆ ಆರ್ಥಿಕ ಲಾಭ? ಯಾರಿಗೆ ಉದ್ಯೋಗದಲ್ಲಿ ಪ್ರಗತಿ? ಪೂರ್ಣ ವಿವರ ಇಲ್ಲಿದೆ. ಮೇಷ (Aries): ಇಂದು ನೀವು ಹೊಸ ಕಾರ್ಯಗಳನ್ನು ಪ್ರಾರಂಭಿಸಲು ಉತ್ತಮ ದಿನ. ಕೆಲಸದ ಸ್ಥಳದಲ್ಲಿ ನಿಮ್ಮ ಪ್ರಯತ್ನಗಳಿಗೆ ಮೆಚ್ಚುಗೆ ಸಿಗಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ವೃಷಭ (Taurus): ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ಅಗತ್ಯ. ಅನಾವಶ್ಯಕ ಖರ್ಚುಗಳನ್ನು ತಪ್ಪಿಸಿ. ಸ್ನೇಹಿತರ ಸಹಕಾರದಿಂದ ಕೆಲವು ಸಮಸ್ಯೆಗಳು ನಿವಾರಣೆಯಾಗುತ್ತವೆ. ಮಿಥುನ (Gemini): ಇಂದು ನಿಮ್ಮ ಮಾತುಗಳಿಂದ ಇತರರನ್ನು ಆಕರ್ಷಿಸಬಹುದು. ಹೊಸ ಸಂಪರ್ಕಗಳು ನಿಮ್ಮ ಭವಿಷ್ಯಕ್ಕೆ ಸಹಾಯ ಮಾಡುತ್ತವೆ. ಆರೋಗ್ಯದ ಕಡೆ ಗಮನ ಕೊಡಿ. ಕಟಕ (Cancer): ಮನಸ್ಸಿನಲ್ಲಿ ಸ್ವಲ್ಪ ಒತ್ತಡ ಇರಬಹುದು. ಧೈರ್ಯದಿಂದ ಕೆಲಸಗಳನ್ನು ನಿರ್ವಹಿಸಿದರೆ ಯಶಸ್ಸು ಸಿಗುತ್ತದೆ. ಕುಟುಂಬದವರ ಜೊತೆ ಸಮಯ ಕಳೆಯಿರಿ. ಸಿಂಹ (Leo): ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳು ದೊರೆಯಬಹುದು. ಮೇಲಾಧಿಕಾರಿಗಳಿಂದ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ಆತ್ಮವಿಶ್ವಾಸ…

Read More

ಬೀದರ್ ಏ11: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು. ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು. ಅಂಬೇಡ್ಕರ್ ಮತ್ತು ಮಹಾತ್ಮಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು. ಬಸವಣ್ಣ ತಿರಸ್ಕರಿದ್ದ ಕರ್ಮಸಿದ್ಧಾಂತವನ್ನು ಪಾಲಿಸುವವರು ಈಗ…

Read More