Author: Times Of Bayaluseeme Staff
ಅಕ್ಷರ ಕಲಿಕೆ ಎನ್ನುವುದು ಜೀವನದ ಒಂದು ಸಾಧನವಷ್ಟೇ ಹೊರತು ಅದು ಜ್ಞಾನದ ಅಂತಿಮ ರೂಪವಲ್ಲ. ಇಂದಿನ ಆಧುನಿಕ ಸಮಾಜದಲ್ಲಿ ಅಕ್ಷರಸ್ಥರಲ್ಲೇ ಹೆಚ್ಚಾಗುತ್ತಿರುವ ಕ್ರೌರ್ಯ ಮತ್ತು ಅಮಾನವೀಯತೆಯನ್ನು ವಿಶ್ಲೇಷಿಸುತ್ತಾ, ನಿಜವಾದ ಜ್ಞಾನವು ವಿಶಾಲವಾದ ಹೃದಯದಲ್ಲಿ ಮಾತ್ರ ನೆಲೆಸುತ್ತದೆ ಎಂಬ ಸತ್ಯವನ್ನು ಪ್ರತಿಪಾದಿಸುವ ಲೇಖನ ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ…….. ……ಒಂದು ಟ್ವೀಟ್… ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ ತಿಳಿಯುವ ಒಂದು ವಿಧಾನ ಅಥವಾ ಜೀವನ ಕೌಶಲ್ಯದ ಸಾಧನವೇ ಹೊರತು ಅದೇ ಜ್ಞಾನವಲ್ಲ, ಅರಿವಲ್ಲ, ಮೌಲ್ಯವಲ್ಲ, ಬದುಕಲ್ಲ. ಅಕ್ಷರ ಕಲಿಕೆ ಎಂಬುದು ಅಡುಗೆ ಮಾಡುವ, ಹೊಲಿಗೆ ಮಾಡುವ, ವಾಹನ ಚಾಲನೆ ಮಾಡುವ, ಮನೆ ಕಟ್ಟುವ, ಭೇಟೆಯಾಡುವ ರೀತಿಯ ಒಂದು ಕೌಶಲವೇ ಹೊರತು ಅದು ಎಲ್ಲವನ್ನೂ ಒಳಗೊಂಡ ವಿಶೇಷ ಅತಿಮಾನುಷ ಶಕ್ತಿಯೇನು ಅಲ್ಲ. ಅಕ್ಷರ ಕಲಿಯದೆಯೂ ವ್ಯಕ್ತಿತ್ವವಿದೆ, ಜ್ಞಾನವಿದೆ, ನಾಗರೀಕತೆಯಿದೆ ಬದುಕಿದೆ, ಹಾಗೆಯೇ ಅಕ್ಷರ ಕಲಿತೂ ಅಜ಼್ಞಾನವಿದೆ, ಮೋಸವಿದೆ, ಅಮಾನವೀಯತೆಯಿದೆ, ಅನಾಗರಿಕತೆ ಇದೆ…… ಅಕ್ಷರಸ್ಥರ ಈಗಿನ ಮೋಸ ವಂಚನೆ…
13 ಮೇ 2026 ಬುಧವಾರದ ನಿಮ್ಮ ರಾಶಿ ಫಲ ಇಲ್ಲಿದೆ. ಸಿಂಹ ರಾಶಿಯವರಿಗೆ ಧನ ಲಾಭ, ಮೇಷ ರಾಶಿಯವರಿಗೆ ಹೊಸ ಉದ್ಯೋಗದ ಅವಕಾಶ ಹಾಗೂ ಮಿಥುನ ರಾಶಿಯವರಿಗೆ ಮಿತ್ರರ ಸಹಕಾರ ದೊರೆಯಲಿದೆ. ನಿಮ್ಮ ಇಂದಿನ ಶುಭ ಸಂಖ್ಯೆ, ಬಣ್ಣ ಮತ್ತು ಸಮಯದ ಸಂಪೂರ್ಣ ಮಾಹಿತಿ ಇಲ್ಲಿದೆ. ಮೇಷ – ಉದ್ಯೋಗ ಕ್ಷೇತ್ರದಲ್ಲಿ ಹೊಸ ಅವಕಾಶಗಳು ದೊರೆಯಬಹುದು. ಆರ್ಥಿಕ ವಿಚಾರಗಳಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದವರ ಜೊತೆ ಸಮಯ ಕಳೆಯುವುದು ಮನಸ್ಸಿಗೆ ನೆಮ್ಮದಿ ನೀಡುತ್ತದೆ. ವೃಷಭ – ಹಳೆಯ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಲಾಭದ ಸೂಚನೆ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ. ಮಿಥುನ – ಸ್ನೇಹಿತರಿಂದ ಸಹಕಾರ ಸಿಗಲಿದೆ. ಹೊಸ ಯೋಜನೆಗಳಿಗೆ ಚಾಲನೆ ನೀಡಲು ಅನುಕೂಲಕರ ದಿನ. ಅನಗತ್ಯ ವಾದಗಳಿಂದ ದೂರವಿರಿ. ಕಟಕ – ಮನಸ್ಸಿನಲ್ಲಿ ಆತಂಕ ಹೆಚ್ಚಾಗಬಹುದು. ಕುಟುಂಬದಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಕಂಡುಬರಬಹುದು. ಧೈರ್ಯ ಮತ್ತು ಸಮಾಧಾನದಿಂದ ನಡೆದುಕೊಳ್ಳಿ ಸಿಂಹ – ಉದ್ಯೋಗ ಮತ್ತು ವ್ಯವಹಾರದಲ್ಲಿ ಉತ್ತಮ ಪ್ರಗತಿ.…
12 ಮೇ 2026ರ ಇಂದಿನ ದಿನ ಭವಿಷ್ಯ: ಮೇಷ ರಾಶಿಯಿಂದ ಮೀನ ರಾಶಿಯವರೆಗಿನ ದ್ವಾದಶ ರಾಶಿಗಳ ಫಲ ಇಲ್ಲಿದೆ. ಇಂದು ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಮತ್ತು ಕುಟುಂಬ ಜೀವನ ಹೇಗಿರಲಿದೆ? ಪೂರ್ಣ ಮಾಹಿತಿ ಇಲ್ಲಿದೆ ನೋಡಿ ಮೇಷ – ಕೆಲಸಗಳಲ್ಲಿ ಚುರುಕು ಕಾಣಿಸಿಕೊಳ್ಳುತ್ತದೆ. ಆರ್ಥಿಕ ವಿಚಾರದಲ್ಲಿ ಸ್ವಲ್ಪ ಎಚ್ಚರಿಕೆ ಅಗತ್ಯ. ಕುಟುಂಬದವರ ಜೊತೆ ಸಮಯ ಕಳೆಯುವ ಅವಕಾಶ ಸಿಗಬಹುದು. ವೃಷಭ – ಹೊಸ ಯೋಜನೆಗಳಿಗೆ ಚಾಲನೆ ನೀಡಲು ಒಳ್ಳೆಯ ದಿನ. ಉದ್ಯೋಗ ಕ್ಷೇತ್ರದಲ್ಲಿ ಮೆಚ್ಚುಗೆ ದೊರೆಯಬಹುದು. ಆರೋಗ್ಯದ ಕಡೆ ಗಮನ ಕೊಡಿ. ಮಿಥುನ – ಮಾತಿನ ಮೇಲೆ ನಿಯಂತ್ರಣ ಇರಲಿ. ಸ್ನೇಹಿತರ ಸಹಾಯದಿಂದ ಸಮಸ್ಯೆಗಳಿಗೆ ಪರಿಹಾರ ಸಿಗಬಹುದು. ಹಣಕಾಸಿನಲ್ಲಿ ಜಾಗ್ರತೆ ಉತ್ತಮ. ಕಟಕ – ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ಹಳೆಯ ನೆನಪುಗಳು ಮನಸ್ಸನ್ನು ಕಾಡಬಹುದು. ಕೆಲಸದಲ್ಲಿ ಸಹನೆ ಮುಖ್ಯ. ಸಿಂಹ – ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹೊಸ ಪರಿಚಯಗಳು ಉಪಯುಕ್ತವಾಗಬಹುದು. ಅನಗತ್ಯ ಖರ್ಚು ತಪ್ಪಿಸಿ. ಕನ್ಯಾ – ದಿನದ ಆರಂಭ…
ನವೆಂಬರ್ 6, 2025…..ಒಂಬತ್ತು ತಿಂಗಳ ಹಿಂದೆ ಅಗಲಿದ ತಾಯಿಯ ನೆನಪು ಹಾಗೂ ತಾಯ್ತನದ ಬಗೆಗಿನ ಸಾಂಪ್ರದಾಯಿಕ ಆರಾಧನಾ ಮನೋಭಾವವನ್ನು ಮೀರಿ, ವಾಸ್ತವ ನೆಲೆಯಲ್ಲಿ ತಾಯಿಯ ವ್ಯಕ್ತಿತ್ವವನ್ನು ವಿಶ್ಲೇಷಿಸುವ ವಿವೇಕಾನಂದ ಎಚ್.ಕೆ. ಅವರ ವಿಶೇಷ ಲೇಖನ. ಎಂದಿನಂತೆ ಬೆಳಗ್ಗೆ ಬೇಗ ಎದ್ದು ಲೇಖನ ಸಿದ್ಧಪಡಿಸಿ ಪೋಸ್ಟ್ ಮಾಡಿ ಕ್ರೀಡಾಂಗಣಕ್ಕೆ ಹೋಗಲು ಸಿದ್ದನಾದೆ. ಈ ಮಧ್ಯೆ ಸುಮಾರು ಒಂದು ವರ್ಷದಿಂದ ಹಾಸಿಗೆ ಹಿಡಿದಿದ್ದ 95 ವರ್ಷದ ಅಮ್ಮನಿಗಾಗಿ ಕಾಫಿ ಮಾಡಿ, ನನಗಾಗಿ ಸಿರಿಧಾನ್ಯದ ಗಂಜಿ ಮಾಡಿ ಟೇಬಲ್ ಮೇಲೆ ಇಟ್ಟು ಅಮ್ಮನಿಗೆ ಕಾಫಿ ಕುಡಿಸಲು ಹೋದೆ. ಒಂದು ವರ್ಷದಿಂದ ಸ್ವಲ್ಪ ಮಾತ್ರ ಆಹಾರ ತೆಗೆದುಕೊಳ್ಳುತ್ತಿದ್ದ ಅವರು ಕೆಲವು ತಿಂಗಳಿನಿಂದ ಕೇವಲ ದ್ರವಾಹಾರ ಮಾತ್ರ ಸೇವಿಸುತ್ತಿದ್ದರು. ಆರೋಗ್ಯ ದಿನದಿಂದ ದಿನಕ್ಕೆ ಕುಸಿಯುತ್ತಿತ್ತು. ಆದ್ದರಿಂದ ವಾರಕ್ಕೊಮ್ಮೆ ಗ್ಲುಕೋಸ್ ಹಾಕಿಸುತ್ತಿದ್ದೆ. ಈ ಬಾರಿ ಮೂರು ದಿನದ ಹಿಂದೆ ಹಾಕಿಸಿದ್ದೆ. ಆದರೂ ಅಷ್ಟೇನು ಚೇತರಿಕೆ ಕಂಡು ಬಂದಿರಲಿಲ್ಲ. ಹಿಂದಿನ ದಿನ ಕಾಫಿ ಕೊಡಲು ಹೋದಾಗ ಬೇಡವೆಂದು ನಿರಾಕರಿಸಿದ್ದರು. ಬೆಳಗ್ಗೆ ಏನಾದರೂ…
11 ಮೇ 2026 ರ ಇಂದಿನ ರಾಶಿಫಲ: ಮೇಷ ರಾಶಿಯವರಿಗೆ ಹೊಸ ಅವಕಾಶ, ಧನು ರಾಶಿಯವರಿಗೆ ಶುಭ ಸುದ್ದಿ ಹಾಗೂ ಕಟಕ ರಾಶಿಯವರಿಗೆ ಆರ್ಥಿಕ ಲಾಭದ ಮುನ್ಸೂಚನೆ ಇದೆ. ನಿಮ್ಮ ರಾಶಿಯ ಸಂಪೂರ್ಣ ಭವಿಷ್ಯವನ್ನು ಇಲ್ಲಿ ಓದಿ. ಮೇಷ – ಉದ್ಯೋಗ ಮತ್ತು ವ್ಯವಹಾರದಲ್ಲಿ ಹೊಸ ಅವಕಾಶಗಳು ಸಿಗಬಹುದು. ಆತುರದ ನಿರ್ಧಾರಗಳನ್ನು ತಪ್ಪಿಸಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯದ ಬಗ್ಗೆ ಸ್ವಲ್ಪ ಗಮನ ಕೊಡಿ. ವೃಷಭ – ಹಣಕಾಸಿನ ವಿಷಯದಲ್ಲಿ ಎಚ್ಚರಿಕೆ ಅಗತ್ಯ. ಸ್ನೇಹಿತರಿಂದ ಸಹಾಯ ದೊರೆಯಬಹುದು. ಹಳೆಯ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಮನಸ್ಸಿಗೆ ನೆಮ್ಮದಿ ಸಿಗಲಿದೆ. ಮಿಥುನ – ಹೊಸ ಪರಿಚಯಗಳು ಜೀವನದಲ್ಲಿ ಬದಲಾವಣೆ ತರಬಹುದು. ಉದ್ಯೋಗದಲ್ಲಿ ಮೆಚ್ಚುಗೆ ಸಿಗುವ ಸಾಧ್ಯತೆ ಇದೆ. ಪ್ರಯಾಣದ ಯೋಗವಿದೆ. ಆರೋಗ್ಯ ಸಾಮಾನ್ಯವಾಗಿರುತ್ತದೆ. ಕಟಕ – ಕುಟುಂಬದವರೊಂದಿಗೆ ಸಮಯ ಕಳೆಯುವ ಅವಕಾಶ ಸಿಗುತ್ತದೆ. ಆರ್ಥಿಕವಾಗಿ ಲಾಭದ ಸೂಚನೆ ಇದೆ. ಕೋಪವನ್ನು ನಿಯಂತ್ರಿಸುವುದು ಉತ್ತಮ. ವಿದ್ಯಾರ್ಥಿಗಳಿಗೆ ಶುಭ ದಿನ. ಸಿಂಹ – ನಿಮ್ಮ…
ಚಿತ್ರದುರ್ಗ: ಕರ್ನಾಟಕದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್ ಅವರು ತೀವ್ರ ಅನಾರೋಗ್ಯದಿಂದ ಭಾನುವಾರ ಮುಂಜಾನೆ 3:15ರ ಸುಮಾರಿಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಳೆದ ಮಾರ್ಚ್ 27ರಂದು ಮೊಣಕಾಲು ನೋವಿನ ಚಿಕಿತ್ಸೆಗಾಗಿ (ಶಸ್ತ್ರಚಿಕಿತ್ಸೆ) ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಆಪರೇಷನ್ ಬಳಿಕ ಅವರಿಗೆ ಶ್ವಾಸಕೋಶದ ಸೋಂಕು ತೀವ್ರವಾಗಿ ಉಲ್ಬಣಿಸಿತ್ತು. ಸೋಂಕು ಕಡಿಮೆಯಾಗದ ಹಿನ್ನೆಲೆಯಲ್ಲಿ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೆಲವು ದಿನಗಳ ಹಿಂದೆ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ತೀವ್ರ ನಿಗಾವಹಿಸಿ ಚಿಕಿತ್ಸೆ ನೀಡಿದರೂ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಮಾರ್ಚ್ 28, 1961ರಂದು ಚಿತ್ರದುರ್ಗದ ಚಳ್ಳಕೆರೆಯಲ್ಲಿ ಜನಿಸಿದ್ದ ಸುಧಾಕರ್ ಅವರು, ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದರು. ಮೃತರು ಪತ್ನಿ ಹರ್ಷಿಣಿ ಸುಧಾಕರ್, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸದಾ ನಗುಮುಖದಿಂದಲೇ ಎಲ್ಲರನ್ನೂ ವಿಶ್ವಾಸಕ್ಕೆ…
ಚಿತ್ರದುರ್ಗ: ನಗರದ ದೊಡ್ಡಪೇಟೆಯಲ್ಲಿರುವ ಪ್ರಸಿದ್ಧ ಮೈಸೂರು ಕೆಫೆಯ ಮಾಲೀಕರಾಗಿದ್ದ ವೇದವ್ಯಾಸ ಆಚಾರ್ಯ (ಅಣ್ಣಾದೊರೈ) ಅವರು ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು. ಸುಮಾರು ಐದು ದಶಕಗಳಿಗಿಂತಲೂ ಹೆಚ್ಚು ಕಾಲ ಮೈಸೂರು ಕೆಫೆ ನಡೆಸುತ್ತಿದ್ದ ಅವರು, ಉತ್ತಮ ಸೇವೆ ಹಾಗೂ ಆತ್ಮೀಯ ನಡೆನುಡಿಗಳ ಮೂಲಕ ಅಪಾರ ಗ್ರಾಹಕ ವಲಯವನ್ನು ಹೊಂದಿದ್ದರು. ಗ್ರಾಹಕರೊಂದಿಗೆ ಸ್ನೇಹಭಾವದಿಂದ ಮಾತನಾಡುತ್ತಿದ್ದ ಅವರನ್ನು ಅಣ್ಣಾದೊರೈ ಎಂದೇ ಜನರು ಕರೆಯುತ್ತಿದ್ದರು. ಸಾಹಿತ್ಯ ಮತ್ತು ಕನ್ನಡ ಚಟುವಟಿಕೆಗಳಲ್ಲಿಯೂ ಆಸಕ್ತಿ ಹೊಂದಿದ್ದ ಅವರು, ದೊಡ್ಡಪೇಟೆಯಲ್ಲಿ ಕನ್ನಡ ಬಳಗ ಸ್ಥಾಪಿಸಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹಿರಿಯ ಸಾಹಿತಿಗಳಾದ ದ.ರಾ. ಬೇಂದ್ರೆ ಮತ್ತು ಜಿ.ಎಸ್. ಶಿವರುದ್ರಪ್ಪ ಅವರನ್ನು ಆಹ್ವಾನಿಸಿ ಕಾರ್ಯಕ್ರಮಗಳನ್ನು ನಡೆಸಿದ್ದನ್ನು ಸಾಹಿತ್ಯಾಸಕ್ತರು ಸ್ಮರಿಸಿದ್ದಾರೆ. ಅವರ ನಿಧನಕ್ಕೆ ವ್ಯಾಪಾರಿಗಳು, ಗ್ರಾಹಕರು ಕನ್ನಡಾಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
10 ಮೇ 2026 ರ ಇಂದಿನ ರಾಶಿ ಭವಿಷ್ಯ: ಇಂದು ಮೇಷ ರಾಶಿಯವರಿಗೆ ಕಾರ್ಯದಕ್ಷತೆ ಹೆಚ್ಚಲಿದೆ, ಕನ್ಯಾ ರಾಶಿಯವರಿಗೆ ತಾಳ್ಮೆಯ ಅಗತ್ಯವಿದೆ. ನಿಮ್ಮ ರಾಶಿಯ ಆರ್ಥಿಕ ಸ್ಥಿತಿ, ಉದ್ಯೋಗ ಮತ್ತು ಆರೋಗ್ಯದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಪಡೆಯಿರಿ. ಇಂದಿನ ಶುಭ ಬಣ್ಣ ಮತ್ತು ಸಂಖ್ಯೆ ಕೂಡ ಲಭ್ಯವಿದೆ. ಮೇಷ (Aries): ಇಂದು ಕೆಲಸಗಳಲ್ಲಿ ಚುರುಕು ಹೆಚ್ಚಿರುತ್ತದೆ. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಸಿಗಬಹುದು. ಆರ್ಥಿಕ ವಿಚಾರಗಳಲ್ಲಿ ಜಾಗರೂಕತೆ ಅಗತ್ಯ. ವೃಷಭ (Taurus): ಹೊಸ ಆಲೋಚನೆಗಳು ಮತ್ತು ಯೋಜನೆಗಳಿಗೆ ಉತ್ತಮ ದಿನ. ಉದ್ಯೋಗದಲ್ಲಿ ಮೆಚ್ಚುಗೆ ಸಿಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ಸ್ವಲ್ಪ ಗಮನ ಕೊಡಿ. ಮಿಥುನ (Gemini): ಸ್ನೇಹಿತರ ಸಹಕಾರದಿಂದ ಕೆಲವು ಕೆಲಸಗಳು ಪೂರ್ಣಗೊಳ್ಳಬಹುದು. ಅನಗತ್ಯ ವಾದ-ವಿವಾದಗಳಿಂದ ದೂರವಿರಿ. ಹಣಕಾಸಿನಲ್ಲಿ ಸಮತೋಲನ ಕಾಪಾಡಿ. ಕಟಕ (Cancer): ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಬಹುದು. ಮನಸ್ಸಿಗೆ ಶಾಂತಿ ದೊರೆಯುವಂತಹ ಘಟನೆಗಳು ನಡೆಯಬಹುದು. ಹಳೆಯ ಸಮಸ್ಯೆಗೆ ಪರಿಹಾರ ಸಿಗುವ ಸೂಚನೆ ಇದೆ. ಸಿಂಹ (Leo):…
ಚಿತ್ರದುರ್ಗ: ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ. ಸುಧಾಕರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಭಾನುವಾರ ಮುಂಜಾನೆ 3 ಗಂಟೆಗೆ ವಿಧಿವಶರಾದರು. ಅವರ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ ದರ್ಶನಕ್ಕೆ ಹಿರಿಯೂರಿನ ನೆಹರೂ ಮೈದಾನದಲ್ಲಿ ಮಧ್ಯಾಹ್ನ 12ರಿಂದ ಸಂಜೆ 4 ಗಂಟೆಯವರೆಗೆ ವ್ಯವಸ್ಥೆ ಮಾಡಲಾಗಿದೆ. ನಂತರ ಪಾರ್ಥಿವ ಶರೀರವನ್ನು ಚಳ್ಳಕೆರೆಯ ಸ್ವಗೃಹಕ್ಕೆ ಕರೆದೊಯ್ಯಲಾಗುವುದು. ಅಲ್ಲಿ ಪೂಜೆ ಹಾಗೂ ವಿಧಿ-ವಿಧಾನಗಳು ನೆರವೇರಲಿವೆ. ಬಳಿಕ ಚಳ್ಳಕೆರೆಯ ಡಿ. ಸುಧಾಕರ್ ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೇ 11ರಂದು ಮಧ್ಯಾಹ್ನ 3ರಿಂದ 4 ಗಂಟೆಯವರೆಗೆ ಅಂತ್ಯಕ್ರಿಯೆಯ ವಿಧಿ-ವಿಧಾನಗಳು ನಡೆಯಲಿವೆ ಎಂದು ಕುಟುಂಬದ ಮೂಲಗಳು ಹಾಗೂ ಜಿಲ್ಲಾಡಳಿತ ತಿಳಿಸಿವೆ.
ಬೆಂಗಳೂರು: ಕರ್ನಾಟಕದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್ ಅವರು ತೀವ್ರ ಅನಾರೋಗ್ಯದಿಂದ ಭಾನುವಾರ ಮುಂಜಾನೆ ನಿಧನರಾದರು. ಅವರಿಗೆ 65 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು ಮುಂಜಾನೆ 3.15ರ ಸುಮಾರಿಗೆ ಕೊನೆಯುಸಿರೆಳೆದರು. ಮೊಣಕಾಲು ಶಸ್ತ್ರಚಿಕಿತ್ಸೆಯ ಬಳಿಕ ಉಂಟಾದ ಶ್ವಾಸಕೋಶದ ಸೋಂಕಿನಿಂದಾಗಿ ಅವರ ಆರೋಗ್ಯ ಹದಗೆಟ್ಟಿತ್ತು ಎಂದು ತಿಳಿದುಬಂದಿದೆ. ಕಳೆದ ಮಾರ್ಚ್ 27ರಂದು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸುಧಾಕರ್ ಅವರಿಗೆ ನಂತರ ಸೋಂಕು ತೀವ್ರವಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ವೈದ್ಯರು ತೀವ್ರ ನಿಗಾವಹಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. 1961ರ ಮಾರ್ಚ್ 28ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಜನಿಸಿದ್ದ ಅವರು, ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರ್ಣಗೊಳಿಸಿದ್ದರು. ಪತ್ನಿ ಹರ್ಷಿಣಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಡಿ. ಸುಧಾಕರ್ ಅವರು ಜಿಲ್ಲೆಯ ರಾಜಕೀಯದಲ್ಲಿ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿದ್ದರು. ಜನಪರ ಕೆಲಸಗಳು…
Subscribe to Updates
Get the latest creative news from FooBar about art, design and business.