Author: Times Of Bayaluseeme Staff
ಮೇ 5, 2026ರ ಇಂದಿನ ರಾಶಿಫಲ: ಮೇಷ ರಾಶಿಯವರಿಗೆ ಇಂದು ಅದೃಷ್ಟದ ದಿನವೇ? ವೃಷಭ ಮತ್ತು ತುಲಾ ರಾಶಿಯವರು ಎಚ್ಚರದಿಂದಿರಬೇಕಾದ ವಿಷಯಗಳೇನು? 12 ರಾಶಿಗಳ ಇಂದಿನ ಸಂಪೂರ್ಣ ಭವಿಷ್ಯವನ್ನು ಇಲ್ಲಿ ಓದಿ. ಮೇಷ (Aries) ಇಂದು ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಿರುತ್ತದೆ. ಕೆಲಸಗಳಲ್ಲಿ ಯಶಸ್ಸು ಕಾಣುವಿರಿ. ಕುಟುಂಬದೊಂದಿಗೆ ಸಂತೋಷದ ಕ್ಷಣಗಳನ್ನು ಕಳೆಯುವಿರಿ. ವೃಷಭ (Taurus) ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ಅಗತ್ಯ. ಹೊಸ ಹೂಡಿಕೆಗಳಿಗೆ ತಾಳ್ಮೆ ವಹಿಸಿ. ಆರೋಗ್ಯದ ಕಡೆ ಗಮನ ಕೊಡಿ. ಮಿಥುನ (Gemini) ಸ್ನೇಹಿತರ ಸಹಾಯದಿಂದ ಕಾರ್ಯಗಳು ಸುಗಮವಾಗುತ್ತವೆ. ಹೊಸ ಅವಕಾಶಗಳು ನಿಮ್ಮತ್ತ ಬರುತ್ತವೆ. ಪ್ರಯಾಣ ಸಾಧ್ಯತೆ ಇದೆ. ಕಟಕ (Cancer) ಮನಸ್ಸಿನಲ್ಲಿ ಸ್ವಲ್ಪ ಗೊಂದಲ ಉಂಟಾಗಬಹುದು. ನಿರ್ಧಾರಗಳನ್ನು ತಾಳ್ಮೆಯಿಂದ ತೆಗೆದುಕೊಳ್ಳಿ. ಕುಟುಂಬದ ಬೆಂಬಲ ನಿಮಗೆ ಸಿಗುತ್ತದೆ. ಸಿಂಹ (Leo) ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಪ್ರಗತಿ. ಮೇಲಾಧಿಕಾರಿಗಳಿಂದ ಪ್ರಶಂಸೆ ದೊರೆಯುತ್ತದೆ. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಕನ್ಯಾ (Virgo) ಹೊಸ ಯೋಜನೆಗಳಿಗೆ ಉತ್ತಮ ಸಮಯ. ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ. ಆರೋಗ್ಯ ಉತ್ತಮವಾಗಿರುತ್ತದೆ. ತುಲಾ (Libra)…
ಚಿತ್ರದುರ್ಗ.ಮೇ 4: ರಾಜ್ಯದಲ್ಲಿ ನುಡಿದಂತೆ ನಡೆಯುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದತ್ತ ಮತದಾರರ ಒಲವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂಬುದಕ್ಕೆ ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆಯಲ್ಲಿನ ಗೆಲುವೇ ಸಾಕ್ಷಿ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಎಚ್.ಆಂಜನೇಯ ಹೇಳಿದ್ದಾರೆ. ರಾಜ್ಯದ ಎರಡು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ಸಿದ್ದರಾಮಯ್ಯ ಅವರ ಆಡಳಿತದ ಹಿರಿಮೆಗೆ ಬಹುದೊಡ್ಡ ಗರಿ ಆಗಿದೆ. ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಿದ ಸಂದರ್ಭ ಇದು ಸಾಧ್ಯವೇ ಇಲ್ಲವೆಂದು ಸುದ್ದಿ ಹರಡಿದರು. ಬಳಿಕ ಅನುಷ್ಠಾನಕ್ಕೆ ತರುತ್ತಿದ್ದಂತೆ ರಾಜ್ಯ ದಿವಾಳಿ ಆಗಲಿದೆ ಎಂದು ಬೊಬ್ಬೆ ಹಾಕಿದರು. ಆದರೆ, ದೇಶದಲ್ಲಿಯೇ ಅತ್ಯಂತ ಶಿಸ್ತುಬದ್ಧ ಆರ್ಥಿಕ ಸ್ಥಿತಿಯಲ್ಲಿ ರಾಜ್ಯವೇ ನಂ. 1 ಆಗಿದೆ. ಇದಕ್ಕೆ ಮತದಾರರು ಈಗ ಮುದ್ರೆ ಒತ್ತಿದ್ದಾರೆ ಎಂದಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಎಲ್ಲ ರಾಜಕೀಯ ಶತ್ರುಗಳು ಒಗ್ಗೂಡಿದ್ದರು. ಪಕ್ಷದಿಂದ ಉಚ್ಛಾಟಿಸಿದ್ದ ಯತ್ನಾಳ್ ಅವರನ್ನು ಬಿಜೆಪಿ ಪ್ರಚಾರಕ್ಕೆ ಕರೆತಂದಿತು. ಜಾತಿಗಳ ಮಧ್ಯೆ ಕಂದಕ ಹುಟ್ಟುಹಾಕುವ ಕೆಲಸ ಮಾಡಿತು. ಆದರೆ, ಆ…
ಚಿತ್ರದುರ್ಗ: ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ಉಪಕರಣಗಳ ಬದಲಾಯಿಸುವ ತುರ್ತು ನಿರ್ವಹಣಾ ಕಾಮಗಾರಿಗೆ ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆ.ವಿ ಚಿತ್ರದುರ್ಗ ವಿ.ವಿ ಕೇಂದ್ರದ ಮಾರ್ಗಗಳ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ಮಾರ್ಗಗಳ ನಗರ, ಎನ್.ಜೆ.ವೈ , ವಾಟರ್ ವಕ್ರ್ಸ ಮಾರ್ಗಗಳಿಗೆ ಇದೇ ಮೇ 05ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಗಾಂಧಿ ನಗರ, ಐಯುಡಿಪಿ ಲೇಔಟ್, ಟೀಚರ್ಸ್ ಕಾಲೋನಿ, ಪ್ರಶಾಂತ್ ನಗರ, ಕೆಳಗೋಟೆ, ಆಕಾಶವಾಣಿ ಹಿಂಭಾಗ, ಬ್ಯಾಂಕ್ ಕಾಲೋನಿ, ಮದಕರಿಪುರ, ಜೆ.ಸಿ.ಆರ್, ಚಂದ್ರವಳ್ಳಿ, ಮಾರುತಿ ನಗರ, ಮೇದೇಹಳ್ಳಿ ರಸ್ತೆ, ಬುರುಜನಹಟ್ಟಿ, ಪ್ರೈವೇಟ್ ಬಸ್ ನಿಲ್ದಾಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ರಾಜೇಂದ್ರಸ್ವಾಮಿ ದೇವಸ್ಥಾನ, ನೀಲಕಂಠೇಶ್ವರ ದೇವಸ್ಥಾನ, ಸಂತೆ ಮೈದಾನ, ಸಂತೇಹೋಂಡ, ದವಳಗಿರಿ ಬಡಾವಣೆ, ದಿ.ವಿ.ಕೆ.ಎಸ್ ಲೇಔಟ್, ಎಸ್.ಜೆ.ಎಮ್.ಕಾಲೇಜ್, ಮಾಳಪ್ಪನಹಟ್ಟಿ ರಸ್ತೆ, ಹೊಳಲ್ಕೆರೆ ಮುಖ್ಯ ರಸ್ತೆ, ಮಲ್ಲಾಪುರ, ಕನಕನಗರ, ಮಲ್ಲಾಪುರ ಗೊಲ್ಲರಹಟ್ಟಿ, ತಮಟಕಲ್ಲು, ಮೇದೇಹಳ್ಳಿ, ವಿದ್ಯಾನಗರ , ಪಿಳ್ಳೆಕೆರೆನಹಳ್ಳಿ, ಎ.ಪಿ.ಎಮ್.ಸಿ, ಪೈರ್…
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಅಭೂತಪೂರ್ವ ಮುನ್ನಡೆ ಸಾಧಿಸಿದೆ. ರಾಜಕೀಯಕ್ಕೆ ಕಾಲಿಟ್ಟ ಮೊದಲ ಪ್ರಯತ್ನದಲ್ಲೇ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ವಿಜಯ್ ಹೊಸ ಇತಿಹಾಸ ಸೃಷ್ಟಿಸುತ್ತಿದ್ದಾರೆ. ಸದ್ಯದ ಟ್ರೆಂಡ್ ಗಮನಿಸಿದರೆ ಟಿವಿಕೆ ಪಕ್ಷ ಅಧಿಕಾರ ಹಿಡಿಯುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ವಿಜಯ್ ಅವರ ಈ ಭರ್ಜರಿ ಯಶಸ್ಸಿಗೆ ಅವರು ನೀಡಿದ 7 ಪ್ರಮುಖ ಭರವಸೆಗಳೇ ಅಡಿಪಾಯ ಎಂದು ವಿಶ್ಲೇಷಿಸಲಾಗುತ್ತಿದೆ. ಆ ಭರವಸೆಗಳು ಇಲ್ಲಿವೆ: 1. ಮಹಿಳೆಯರಿಗೆ ಮಾಸಿಕ ₹2,500 ನೆರವು: ’ಮದಿಪ್ಪುಮಗು ಮಗಳಿರ್ ತಿಟ್ಟಂ’ ಯೋಜನೆಯಡಿ 60 ವರ್ಷದೊಳಗಿನ ಮಹಿಳಾ ಗೃಹಿಣಿಯರಿಗೆ ಪ್ರತಿ ತಿಂಗಳು ₹2,500 ನೀಡುವ ಭರವಸೆ ನೀಡಲಾಗಿತ್ತು. ಇದು ಮಹಿಳಾ ಮತದಾರರನ್ನು ಸೆಳೆಯುವಲ್ಲಿ ದೊಡ್ಡ ಮಟ್ಟದ ಪ್ರಭಾವ ಬೀರಿದೆ. 2. ವರ್ಷಕ್ಕೆ 6 ಉಚಿತ ಎಲ್ಪಿಜಿ ಸಿಲಿಂಡರ್: ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ‘ಅನ್ನಪೂರ್ಣಿ ಸೂಪರ್ ಸಿಕ್ಸ್’ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ…
ನಮ್ಮ ಮನೆಯ ಹಿತ್ತಲಲ್ಲಿ ಹಸಿರಾಗಿ ನಳನಳಿಸುವ ಸೀಬೆ ಮರವನ್ನು ಕಂಡಾಗ ನಮಗೆ ನೆನಪಾಗುವುದು ರುಚಿಯಾದ ಸೀಬೆ ಹಣ್ಣು ಮಾತ್ರ. ಆದರೆ, ಹಣ್ಣಿಗಿಂತಲೂ ಅದರ ಎಲೆಯಲ್ಲಿ ನೂರಾರು ಪಟ್ಟು ಹೆಚ್ಚಿನ ಆರೋಗ್ಯದ ರಹಸ್ಯ ಅಡಗಿದೆ ಎಂಬ ವಿಷಯ ನಿಮಗೆ ಗೊತ್ತೇ? ಆಯುರ್ವೇದದಲ್ಲಿ ಸೀಬೆ ಎಲೆಯನ್ನು ಹಣ್ಣಿಗಿಂತಲೂ ಶಕ್ತಿಶಾಲಿ ಮದ್ದು ಎಂದು ಪರಿಗಣಿಸಲಾಗಿದೆ. ಈ ಪುಟ್ಟ ಎಲೆಗಳಲ್ಲಿ ಅಡಗಿರುವ ಔಷಧೀಯ ಗುಣಗಳು ಮಧುಮೇಹದಿಂದ ಹಿಡಿದು ಹಠಮಾರಿ ಚರ್ಮ ರೋಗಗಳವರೆಗೆ ಎಲ್ಲದಕ್ಕೂ ರಾಮಬಾಣವಾಗಿ ಕೆಲಸ ಮಾಡುತ್ತವೆ .ಆಯುರ್ವೇದದಲ್ಲಿ ಸೀಬೆ ಎಲೆಯನ್ನು ‘ನೈಸರ್ಗಿಕ ಇನ್ಸುಲಿನ್’ ಎಂದೇ ಕರೆಯಲಾಗುತ್ತದೆ. ಇಂದಿನ ದಿನಗಳಲ್ಲಿ ಸಣ್ಣ ವಯಸ್ಸಿನಲ್ಲೇ ಸಕ್ಕರೆ ಕಾಯಿಲೆ (Diabetes) ಮತ್ತು ರಕ್ತದೊತ್ತಡದಂತಹ ಸಮಸ್ಯೆಗಳು ಸಾಮಾನ್ಯವಾಗುತ್ತಿವೆ. ಇಂತಹ ಸಮಯದಲ್ಲಿ ನಾವು ಆಸ್ಪತ್ರೆಯ ದುಬಾರಿ ಮಾತ್ರೆಗಳ ಬದಲಾಗಿ, ನಮ್ಮ ಸುತ್ತಮುತ್ತ ಸಿಗುವ ಇಂತಹ ಅದ್ಭುತ ಗಿಡಮೂಲಿಕೆಗಳ ಮೊರೆ ಹೋಗುವುದು ಉತ್ತಮ. ಈ ಪುಟ್ಟ ಎಲೆಗಳು ನಮ್ಮ ದೇಹಕ್ಕೆ ರಕ್ಷಾ ಕವಚದಂತೆ ಕೆಲಸ ಮಾಡುತ್ತವೆ. ಬನ್ನಿ, ಸೀಬೆ ಎಲೆ ನಮ್ಮ ಆರೋಗ್ಯಕ್ಕೆ ಹೇಗೆಲ್ಲಾ…
ಬೆಂಗಳೂರು: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸ ಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್ ವರ್ಲ್ಡ್ ರೆಕಾರ್ಡ್’ ನಿರ್ಮಿಸಲಾಗಿದೆ. ಈ ಐತಿಹಾಸಿಕ ಸಾಹಸದಲ್ಲಿ ಬೆಂಗಳೂರಿನ ಪ್ರತಿಭಾವಂತ ಸಾಹಸ ಕ್ರೀಡಾ ತಜ್ಞ ಶರತ್ ಆರ್. ಅಶೋಕ್ ಅವರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಕರ್ನಾಟಕದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಎತ್ತಿ ಹಿಡಿದಿದ್ದಾರೆ. ಶರತ್ ಆರ್. ಅಶೋಕ್ ಅವರು ಸಾಹಸ ಕ್ರೀಡಾ ಕ್ಷೇತ್ರದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ತೊಡಗಿಸಿಕೊಂಡಿದ್ದು, ಅಪಾರ ಅನುಭವ ಹೊಂದಿದ್ದಾರೆ. ಆಟೋಮೊಬೈಲ್ ಇಂಜಿನಿಯರಿಂಗ್ ಪದವೀಧರರಾಗಿರುವ ಇವರು, ಪ್ರಮಾಣೀಕೃತ ‘ಡೈವ್ ಮಾಸ್ಟರ್’ ಮತ್ತು ಸ್ಕೂಬಾ ಇನ್ಸ್ಟ್ರಕ್ಟರ್ ಆಗಿ ಅಂತರಾಷ್ಟ್ರೀಯ ಮಟ್ಟದ ಪರಿಣತಿ ಪಡೆದಿದ್ದಾರೆ. ಜಲ ಸಾಹಸ ಮಾತ್ರವಲ್ಲದೆ, ಪ್ಯಾರಾಗ್ಲೈಡಿಂಗ್ ಮತ್ತು ಪ್ಯಾರಾಮೋಟರ್ ಪೈಲಟ್ ಆಗಿ ಆಕಾಶದಲ್ಲೂ ಸಾಹಸ ಮೆರೆದಿರುವ ಇವರು, ಮೊಟೊಕ್ರಾಸ್ ಮತ್ತು ಪರ್ವತಾರೋಹಣದಲ್ಲಿಯೂ ಸಿದ್ಧಹಸ್ತರು. ಇಂತಹ ಹತ್ತು ವರ್ಷಗಳ ವೈವಿಧ್ಯಮಯ ಸಾಹಸೀ…
ಇಂದಿನ ರಾಶಿಫಲದಲ್ಲಿ ಯಾವ ರಾಶಿಯವರಿಗೆ ಆರ್ಥಿಕ ಲಾಭವಿದೆ ಮತ್ತು ಯಾರು ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಬೇಕು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ♈ ಮೇಷ (Aries) ಇಂದು ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿರುತ್ತದೆ. ಹೊಸ ಕೆಲಸಗಳನ್ನು ಪ್ರಾರಂಭಿಸಲು ಸೂಕ್ತ ದಿನ. ಕುಟುಂಬದವರ ಜೊತೆ ಸಂತೋಷದ ಕ್ಷಣಗಳು. ♉ ವೃಷಭ (Taurus) ಆರ್ಥಿಕವಾಗಿ ಸ್ವಲ್ಪ ಜಾಗ್ರತೆ ಅಗತ್ಯ. ಅನಗತ್ಯ ಖರ್ಚು ತಪ್ಪಿಸಿ. ಆರೋಗ್ಯದ ಕಡೆ ಗಮನ ಕೊಡಿ. ♊ ಮಿಥುನ (Gemini) ಸ್ನೇಹಿತರ ಸಹಾಯದಿಂದ ಕೆಲಸಗಳು ಸುಗಮವಾಗಿ ನಡೆಯುತ್ತವೆ. ಉದ್ಯೋಗ ಕ್ಷೇತ್ರದಲ್ಲಿ ಮೆಚ್ಚುಗೆ ದೊರೆಯಬಹುದು. ♋ ಕರ್ಕಾಟಕ (Cancer) ಮನಸ್ಸಿನಲ್ಲಿ ಸ್ವಲ್ಪ ಗೊಂದಲ ಇರಬಹುದು. ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳಿ. ಕುಟುಂಬ ಬೆಂಬಲ ಸಿಗುತ್ತದೆ. ♌ ಸಿಂಹ (Leo) ನಿಮ್ಮ ನಾಯಕತ್ವ ಗುಣಗಳು ಇಂದು ಹೊರಹೊಮ್ಮುತ್ತವೆ. ಹೊಸ ಅವಕಾಶಗಳು ಎದುರಾಗಬಹುದು. ♍ ಕನ್ಯಾ (Virgo) ಕೆಲಸದ ಒತ್ತಡ ಹೆಚ್ಚಾಗಬಹುದು. ಆದರೆ ನೀವು ಅದನ್ನು ಯಶಸ್ವಿಯಾಗಿ ನಿಭಾಯಿಸುತ್ತೀರಿ. ಆರೋಗ್ಯದ ಕಡೆ ಗಮನ ಕೊಡಿ. ♎ ತುಲಾ (Libra)…
ಇಂದಿನ ಶಿಕ್ಷಣ ವ್ಯವಸ್ಥೆ ಕೇವಲ ಅಂಕಗಳಿಗೆ ಸೀಮಿತವಾಗಿದೆಯೇ? ಜ್ಞಾನಾರ್ಜನೆ, ಉದ್ಯೋಗ ಮತ್ತು ಮಾನವೀಯ ಮೌಲ್ಯಗಳ ನಡುವಿನ ಗೊಂದಲಗಳಿಗೆ ಉತ್ತರ ಹುಡುಕುವ, ಶಿಕ್ಷಣದ ನೈಜ ಅರ್ಥ ಮತ್ತು ಅಮೂಲಾಗ್ರ ಬದಲಾವಣೆಯ ಅಗತ್ಯವನ್ನು ವಿವರಿಸುವ ವಿವೇಕಾನಂದ ಎಚ್. ಕೆ. ಅವರ ವಿಶೇಷ ಲೇಖನ ಶೈಕ್ಷಣಿಕ ಹಾದಿ…….. ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ……. ಶಿಕ್ಷಣ… ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ, ಸರ್ಕಾರದ ಕಡ್ಡಾಯಕ್ಕಾಗಿಯೇ, ವ್ಯವಹಾರಕ್ಕಾಗಿಯೇ, ಮಾನವೀಯ ಮೌಲ್ಯಗಳಿಗಾಗಿಯೇ, ಸಮಾಜದ ಮುಂದುವರಿಕೆಗಾಗಿಯೇ ಅಥವಾ ವ್ಯವಸ್ಥೆಯ ಸಹಜ ಸ್ವಾಭಾವಿಕ ಕ್ರಿಯೆಯೇ ಎಂಬ ಪ್ರಶ್ನೆಗಳ ಜೊತೆಗೆ,……. ಗುರುಕುಲ ವ್ಯವಸ್ಥೆ ಸರಿಯೇ, ಮೆಕಾಲೆ ಪದ್ದತಿ ಸರಿಯೇ, ಉದ್ಯೋಗ ಖಾತ್ರಿ ಶಿಕ್ಷಣ ಸರಿಯೇ, ಪ್ರಾಣಿ ಪಕ್ಷಿಗಳಂತೆ ಪ್ರಾಕೃತಿಕ ಶಿಕ್ಷಣ ಸರಿಯೇ, ಕೃತಕ ಜ್ಞಾನಾರ್ಜನೆಯ ಪದ್ದತಿ ಸರಿಯೇ,……… ಎಂಬ ಗೊಂದಲಗಳ ನಡುವೆ, ವಿದ್ಯಾರ್ಥಿಗಳ ಸಾಮರ್ಥ್ಯ ಮತ್ತು ವ್ಯಕ್ತಿತ್ವ ಬೆಳೆಸುವ ಕ್ರಮಗಳಲ್ಲಿ… ನೆನಪಿನ ಶಕ್ತಿ ಮುಖ್ಯವೇ, ಮಾನವೀಯ ಮೌಲ್ಯಗಳು ಮುಖ್ಯವೇ, ಶ್ರದ್ಧೆ ಮತ್ತು ಸ್ಪಂದನೆ ಮುಖ್ಯವೇ, ದೈಹಿಕ…
ನಾಯಕನಹಟ್ಟಿ: ಬಡ್ಡಿ ಹಾಗೂ ಜೀವನದ ಭದ್ರತೆಗೆ ಹಣವನ್ನು ಬ್ಯಾಂಕ್ನಲ್ಲಿ ಇರಿಸಿದಂತೆ ಎಐ ಯುಗದಲ್ಲಿ ಶಿಕ್ಷಣ ಮತ್ತು ಜ್ಞಾನವನ್ನು ಠೇವಣಿಯನ್ನಾಗಿಸಬೇಕಿದೆ ಎಂದು ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ರಾಘವೇಂದ್ರ ತಿಳಿಸಿದರು. ಪಟ್ಟಣದ ವಿದ್ಯಾವಿಕಾಸ ಪ್ರೌಢಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಎಐ ಯುಗದಲ್ಲಿ ಎಸ್ಸೆಸ್ಸೆಲ್ಸಿ ನಂತರ ಮುಂದೇನು ? ಶೈಕ್ಷಣಿಕ ಮಾರ್ಗದರ್ಶಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಿಂದ ಬರುವ ಜ್ಞಾನ ಎಂಬ ಬಡ್ಡಿಯನ್ನು ಲೆಕ್ಕ ಹಾಕಲು ಸಾಧ್ಯವಿಲ್ಲ. ಹಣವಿದ್ದರೆ ಕಳೆಯುವ ಚಿಂತೆ ಇರುತ್ತದೆ. ಆದರೆ ಜ್ಞಾನವನ್ನು ಕದಿಯಲು, ಕಳೆಯಲು ಸಾಧ್ಯವಿಲ್ಲ ಎಂದರು. ಕೇವಲ ಬಿಎ, ಬಿಎಸ್ಸಿಗಳಿಂದ ಇದೀಗ ಜೀವನ ಸಾಧ್ಯವಿಲ್ಲ. ಉತ್ತಮ ಜೀವನಕ್ಕಾಗಿ ಕೌಶಲ್ಯ ಮತ್ತು ಜ್ಞಾನ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಕೇಂದ್ರ ಸರಕಾರದ ಕೌಶಲ್ಯ ತರಬೇತಿ ಸಂಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಜಿಟಿಟಿಸಿ ನಂತರ ಇಂಜಿನಿಯರಿಂಗ್ ಗೆ ಅವಕಾಶಗಳಿವೆ ಎಂದು ಹೇಳಿದರು. ಎಸ್ಎಸ್ಎಲ್ಸಿ ಪೂರ್ಣಗೊಂಡ ಈ ಕ್ಷಣ, ಮಕ್ಕಳಿಗಷ್ಟೇ ಅಲ್ಲ ತಂದೆ ತಾಯಿಗಳಿಗೆ ಕೂಡ ಮಹತ್ವದ ಹಂತ. ಇವರೆಗೂ ನೀವು…
ಚಿತ್ರದುರ್ಗ ನಗರದಲ್ಲಿ ಶಾಕಿಂಗ್ ಘಟನೆ ನಡೆದಿದೆ. ರಾಮದಾಸ್ ಕಂಪೌಂಡ್ ಬಡಾವಣೆಯಲ್ಲಿ 46 ವರ್ಷದ ಪ್ರಮೋದ್ ಅವರನ್ನು ದುಷ್ಕರ್ಮಿಗಳು ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದಾರೆ. ಮಾಹಿತಿ ಪ್ರಕಾರ, ಪ್ರಮೋದ್ ಅವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ರಾತ್ರಿ ಸಮಯದಲ್ಲಿ ದಾಳಿ ನಡೆದಿದೆ. ಮಹಿಳೆಯೊಂದಿಗಿನ ಅಕ್ರಮ ಸಂಬಂಧದ ಹಿನ್ನೆಲೆ ಈ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳು ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದು, ಬೆಳಗ್ಗೆ ಸುಮಾರು 8 ಗಂಟೆಗೆ ಮನೆ ಬಾಗಿಲು ತೆರೆಯುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಅರುಣ್ ಗೌಡ ಹಾಗೂ ಸಿಪಿಐ ನಯೀಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಚಿತ್ರದುರ್ಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. 👉 ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Subscribe to Updates
Get the latest creative news from FooBar about art, design and business.