ಬೆಂಗಳೂರು: ಭಾರತಕ್ಕೆ ಭೇಟಿ ನೀಡಿರುವ ವಾಷಿಂಗ್ಟನ್ ಡಿಸಿ ಯ ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗದ ತಂಡವು ವಾರ್ಷಿಕ ಆರ್ಟಿಕಲ್ IV ಸಮಾಲೋಚನೆಯ ಭಾಗವಾಗಿ ಇಂದು ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿತು.ಈ ಅಂತರರಾಷ್ಟ್ರೀಯ ಹಣಕಾಸು ನಿಧಿ ನಿಯೋಗ ತಂಡವು ಸ್ಥೂಲ ಆರ್ಥಿಕ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುವುದರೊಂದಿಗೆ ಹಣಕಾಸು ಸಚಿವಾಲಯ, ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಇತರ ಸರ್ಕಾರಿ ಅಧಿಕಾರಿಗಳಿಗೆ ನೀತಿ ಸಲಹೆಗಳನ್ನು ನೀಡುತ್ತದೆ.ರಾಜ್ಯದಲ್ಲಿ ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡುವುದು, ಹಣಕಾಸಿನ ಸುಸ್ಥಿರತೆಯನ್ನು ಕಾಪಾಡಿಕೊಳ್ಳುವುದು ಮತ್ತು ಮಾನವ ಬಂಡವಾಳವನ್ನು ಬಲಪಡಿಸುವುದರೊಂದಿಗೆ, ಹವಾಮಾನ ಕೇಂದ್ರಿತ ನೀತಿಗಳನ್ನು ಮುಂದುವರಿಸುವ ಕುರಿತು ರಚನಾತ್ಮಕ ಸವಾಲುಗಳನ್ನು ಗುರಿಯಾಗಿರಿಸಿಕೊಂಡು ರಾಜ್ಯ ಮಟ್ಟದ ಉಪಕ್ರಮಗಳ ಬಗ್ಗೆ ಮುಖ್ಯ ಕಾರ್ಯದರ್ಶಿಯವರೊಂದಿಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಶ್ರೀಮತಿ ಉಮಾ ಮಹದೇವನ್ ಸಹ ಹಾಜರಿದ್ದರು.ಅಂತರರಾಷ್ಟ್ರೀಯ ಹಣಕಾಸು ನಿಧಿ ನಿಯೋಗ ತಂಡದಲ್ಲಿ ಸಹಾಯಕ ನಿರ್ದೇಶಕ ಮತ್ತು ಮಿಷನ್ ಮುಖ್ಯಸ್ಥರಾದ ಹೆರಾಲ್ಡ್ ಫಿಂಗರ್ ಅವರೊಂದಿಗೆ ಭಾರತದ ಹಿರಿಯ ನಿವಾಸಿ ಪ್ರತಿನಿಧಿ ರನಿಲ್ ಸಲ್ಗಾಡೊ, ಏಷ್ಯಾ ಮತ್ತು ಪೆಸಿಫಿಕ್ ಇಲಾಖೆಯ ಹಿರಿಯ ಅರ್ಥಶಾಸ್ತ್ರಜ್ಞೆ ಶ್ರೀಮತಿ ನುಜಿನ್ ಸುಫಾಫಿಫಟ್ ಮತ್ತು ಅಂತರರಾಷ್ಟ್ರೀಯ ಹಣಕಾಸು ನಿಧಿ ನಿಯೋಗದ (IMF) ಅರ್ಥಶಾಸ್ತ್ರಜ್ಞೆ ಶ್ರೀಮತಿ ಗೀತಿಕಾ ಡ್ಯಾಂಗ್ ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







