Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ದಿನದ ವಿಶೇಷ»ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್
ದಿನದ ವಿಶೇಷ

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್

Times of bayaluseemeBy Times of bayaluseemeMay 25, 2025No Comments3 Mins Read
Share WhatsApp Facebook Twitter Telegram Copy Link
Follow Us
Google News Flipboard
dk shivakumar
Share
Facebook Twitter LinkedIn Pinterest Email Copy Link
  • ಬೆಂಗಳೂರಿನ ಫುಟ್ ಪಾತ್ ಅಂಗಡಿಗಳನ್ನು ತೆರವು, ವ್ಯಾಪಾರಿಗಳಿಗೆ ವಾಹನ ಸೌಲಭ್ಯ
  • ಕಾನೂನು ಬಾಹಿರವಾಗಿ ಹಾಕಿರುವ ಆಪ್ಟಿಕಲ್ ಕೇಬಲ್ ಕತ್ತರಿಸಲು ಸೂಚನೆ
  • ರಸ್ತೆ ಅಗಲೀಕರಣಕ್ಕೆ ಶಾಸಕರು ಶಿಫಾರಸ್ಸು ಮಾಡಿದರೆ ಟಿಡಿಆರ್ ನೀಡಲು ಸಿದ್ಧ
  • ಮಳೆಯಿಂದ ಮನೆಯೊಳಗೆ ನೀರು ನುಗ್ಗಿರುವವರಿಗೆ 10 ಸಾವಿರ ಪರಿಹಾರ
  • ಕೆಂಪೇಗೌಡ ಬಡಾವಣೆಯ ಬಿಡಿಎ ಜಾಗದಲ್ಲಿ ಸ್ಕೈ ಡೆಕ್ ನಿರ್ಮಾಣ

ಬೆಂಗಳೂರು, ಮೇ 24: “ಸೆಪ್ಟೆಂಬರ್ 15ರ ಒಳಗಾಗಿ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣಗೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

“ವಿರೋಧ ಪಕ್ಷದ ನಾಯಕರು ಸೇರಿದಂತೆ ಇನ್ನೂ ಮೂರ್ನಾಲ್ಕು ಶಾಸಕರ ಜತೆ ಚರ್ಚೆ ಮಾಡುತ್ತೇನೆ. ಎಲ್ಲರ ಸಲಹೆ ಪಡೆದ ಬಳಿಕ ಸಚಿವ ಸಂಪುಟದಲ್ಲಿ ಪ್ರಸ್ತಾಪ ಮಾಡಿ ಅಂತಿಮ ತೀರ್ಮಾನ ಮಾಡಲಾಗುವುದು” ಎಂದರು.

ಗ್ರೇಟರ್ ಬೆಂಗಳೂರು ಸಭೆ ನಂತರ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

“ಮೇ 15ರಿಂದ ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಜಿಎ) ಆಗಿ ಪರಿವರ್ತನೆಗೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. 120 ದಿನಗಳಲ್ಲಿ ನಾವು ಪಾಲಿಕೆಗಳನ್ನು ರಚನೆ ಮಾಡಲೇಬೇಕು. ಹೀಗಾಗಿ ಎಷ್ಟು ಪಾಲಿಕೆ ಮಾಡಬೇಕು ಎಂದು ಬೆಂಗಳೂರಿನ ಎಲ್ಲಾ ಶಾಸಕರ ಬಳಿ ಸಲಹೆಗಳನ್ನು ಕೇಳಿದ್ದೇನೆ. ನಂತರ ಮುಂದೆ ಎಲ್ಲೆಲ್ಲಿ ವಿಸ್ತರಣೆ ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ. ಸೆಪ್ಟೆಂಬರ್ 15ರ ಒಳಗಾಗಿ ಈ ಪಾಲಿಕೆಗಳು ರಚನೆಯಾಗಬೇಕು” ಎಂದು ತಿಳಿಸಿದರು.

“ಮಳೆ ಪೀಡಿತ ಪ್ರದೇಶಗಳ ಶಾಸಕರ ಜತೆ ಚರ್ಚೆ ಮಾಡಿ ತುರ್ತು ಕೆಲಸ ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳಿಗೆ ಅಧಿಕಾರ ನೀಡಿದ್ದೇವೆ. ಇದಕ್ಕೆ ಅಗತ್ಯವಿರುವ ಬಜೆಟ್ ಅನ್ನು ಸರ್ಕಾರದಿಂದ ನೀಡುತ್ತೇವೆ” ಎಂದರು.

“ಟ್ಯಾಂಕರ್ ನೀರಿನ ವಿಚಾರವಾಗಿ ದೂರು ಬಂದಿರುವ ಪ್ರದೇಶಗಳಲ್ಲಿ ಆಯಾ ಋತುವಿಗೆ ತಕ್ಕಂತೆ ಅಗತ್ಯ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ” ಎಂದು ತಿಳಿಸಿದರು.

“ಬೆಂಗಳೂರಿನ ಎಲ್ಲಾ ಫುಟ್ ಪಾತ್ ಅಂಗಡಿಗಳನ್ನು ತೆರವುಗೊಳಿಸಲು ನಿರ್ಧರಿಸಿದ್ದೇವೆ. 27,665 ಬೀದಿ ಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದು, ನಾವು ಅವರಿಗೆ ತಳ್ಳುವ ವಾಹನ ನೀಡಲು ಸಿದ್ಧರಿದ್ದೇವೆ. ನಾವು ನಿಗದಿ ಮಾಡುವ ಜಾಗದಲ್ಲಿ ವಾಹನ ಇಟ್ಟುಕೊಂಡು ವ್ಯಾಪಾರ ಮಾಡಬೇಕು. 3,755 ಜನ ವ್ಯಾಪಾರಿಗಳು ವಾಹನ ಬೇಕು ಎಂದು ಕೇಳಿದ್ದಾರೆ” ಎಂದು ಹೇಳಿದರು.

“ನೀವು ಶಾಸಕರ ಮೂಲಕ ಒತ್ತಡ ತರಬೇಡಿ. ಕಾನೂನಿನಲ್ಲಿ ಇದಕ್ಕೆ ಅವಕಾಶವಿಲ್ಲ. ನಾವು ಒಂದೇ ಬಾರಿಗೆ ಇದನ್ನು ತೆರವುಗೊಳಿಸಲು ಆಗದಿದ್ದರೂ, ವ್ಯವಸ್ಥಿತವಾಗಿ ಹಂತ ಹಂತವಾಗಿ ಇದನ್ನು ಸರಿಪಡಿಸಲಾಗುವುದು” ಎಂದರು.

“ರಸ್ತೆ ಅಗಲೀಕರಣದ ವಿಚಾರವಾಗಿ ಶಾಸಕರ ಜತೆ ಚರ್ಚೆ ಮಾಡಲಾಗಿದ್ದು, ಶಾಸಕರು ಎಲ್ಲೆಲ್ಲಿ ರಸ್ತೆ ಅಗಲೀಕರಣ ಆಗಬೇಕು ಎಂದು ಶಿಫಾರಸ್ಸು ಮಾಡುತ್ತಾರೋ ಅಲ್ಲಿ ಆಸ್ತಿ ಮಾಲೀಕರಿಗೆ ಟಿಡಿಆರ್ ನೀಡಲಾಗುವುದು. ಶಾಸಕರು ಆಸ್ತಿ ಮಾಲೀಕರ ಜತೆ ಚರ್ಚೆ ಮಾಡಬೇಕು” ಎಂದು ತಿಳಿಸಿದರು.

“ರಾಜಕಾಲುವೆ ಅಕ್ಕಪಕ್ಕದ ಬಫರ್ ವಲಯದಲ್ಲಿ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಿದ್ದು, ನಾವು 300 ಕಿ.ಮೀ ಉದ್ದದ ರಸ್ತೆ ಗುರುತಿಸಿದ್ದು, ಶಾಸಕರು ಕೂಡ ಸುಮಾರು 300 ಕಿ.ಮೀ ಉದ್ದದಷ್ಟು ರಸ್ತೆ ಮಾಡಲು ಶಿಫಾರಸ್ಸು ನೀಡಬಹುದು ಎಂದು ಹೇಳಿದ್ದೇವೆ. ಮುಂದೆ ತಗ್ಗು ಪ್ರದೇಶಗಳಲ್ಲಿ ಬೇಸ್ ಮೆಂಟ್ ಪಾರ್ಕಿಂಗ್ ಗೆ ಅವಕಾಶ ಇರುವುದಿಲ್ಲ” ಎಂದು ತಿಳಿಸಿದರು.

“ಆಪ್ಟಿಕಲ್ ಫೈಬರ್ ಕೇಬಲ್ ಗಳನ್ನು ಸೀವೇಜ್ ಹಾಗೂ ನೀರು ಗಾಲುವೆಗಳಲ್ಲಿ ತೆಗೆದುಕೊಂಡು ಹೋಗಿದ್ದಾರೆ ಎಂದು ಕೆಲವು ಶಾಸಕರು ಹೇಳಿದ್ದಾರೆ. ಈ ರೀತಿ ಎಳೆದಿರುವ ಕೇಬಲ್ ಗಳನ್ನು ಕತ್ತರಿಸಿ ಹಾಕಲು ನಾನು ಹೇಳಿದ್ದೇನೆ. ಇನ್ನು ಚರಂಡಿಗಳಲ್ಲಿ ಹೂಳು ಎತ್ತಲು ಸೂಚಿಸಲಾಗಿದೆ” ಎಂದು ತಿಳಿಸಿದರು.

“ನಗರದ 25 ಲಕ್ಷ ಆಸ್ತಿಗಳನ್ನು ಈ ಖಾತಾ ಮಾಡಲು ಹೇಳಿದ್ದು, ಎಲ್ಲಾ ಆಸ್ತಿಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣ ಮಾಡುತ್ತಿದ್ದು, ಈಗಾಗಲೇ 5 ಲಕ್ಷ ಆಸ್ತಿಗಳ ಡಿಜಿಟಲೀಕರಣ ಪೂರ್ಣಗೊಂಡಿದೆ. ಇದನ್ನು ದೊಡ್ಡ ಅಭಿಯಾನವಾಗಿ ಮಾಡುತ್ತಿದ್ದೇವೆ. ಆಮೂಲಕ ತೆರಿಗೆ ಹಾಗೂ ಆಸ್ತಿ ದಾಖಲಾತಿಯಲ್ಲಿ ಪಾರದರ್ಶಕತೆ ತರಲಾಗುತ್ತಿದೆ. ಇದಕ್ಕಾಗಿ ನ್ಯಾಷನಲ್ ಈ ಗವರ್ನೆನ್ಸ್ ಅವಾರ್ಡ್ ಕೂಡ ಸಿಕ್ಕಿದೆ” ಎಂದು ಮಾಹಿತಿ ನೀಡಿದರು.

“ಇನ್ನು ಸ್ಕೈ ಡೆಕ್ ಅನ್ನು ಹೆಮ್ಮಿಗೆಪುರದಲ್ಲಿ ನಿರ್ಮಿಸಲು ತೀರ್ಮಾನಿಸಿದ್ದೆವು. ಆದರೆ ವಿಮಾನ ನಿಲ್ದಾಣದಿಂದ 20 ಕಿ.ಮೀ ದೂರ ಇರಬೇಕು ಎಂಬ ಕಾರಣದಿಂದ ಅಲ್ಲಿ ಸಮಸ್ಯೆ ಎದುರಾಗಿದೆ. ಹೀಗಾಗಿ ಇದನ್ನು ಕೆಂಪೇಗೌಡ ಬಡಾವಣೆಯಲ್ಲಿ ಬಿಡಿಎ ಜಾಗದಲ್ಲಿ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ” ಎಂದರು

ರಸ್ತೆಗಳಲ್ಲಿ ಹಳೆ ವಾಹನಗಳನ್ನು ನಿಲ್ಲಿಸಿ ಹೋಗುತ್ತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯಿಂದ 100 ಎಕರೆ ಜಾಗ ಒದಗಿಸಿ, ಆ ಎಲ್ಲಾ ವಾಹನಗಳನ್ನು ಅಲ್ಲಿಗೆ ಸ್ಥಳಾಂತರಿಸಲು ಸಂಚಾರಿ ಪೊಲೀಸರಿಗೆ ಸೂಚಿಸಲಾಗಿದೆ. ಪಾಲಿಕೆ ಕಾನೂನಿನ ಪ್ರಕಾರ 21 ದಿನಗಳ ಕಾಲ ರಸ್ತೆಯಲ್ಲಿ ನಿಲ್ಲಿಸಿರುವ ವಾಹನ ತೆಗೆಯದಿದ್ದರೆ ಅದನ್ನು ಅನಾಥ ವಾಹನ ಎಂದು ಪರಿಗಣಿಸಿ ಹರಾಜು ಹಾಕಲು ಅವಕಾಶವಿದೆ. ಇನ್ನು ಪೊಲೀಸರು ನಿಗದಿ ಮಾಡುವ ನೋ ಪಾರ್ಕಿಂಗ್ ಪ್ರದೇಶಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ಇರುವುದಿಲ್ಲ” ಎಂದರು.

“ಇನ್ನು ಮೆಟ್ರೋ ಕಾಮಗಾರಿ ನಡೆಯುತ್ತಿರುವ ಕಡೆಗಳಲ್ಲಿ ಸರ್ವೀಸ್ ರಸ್ತೆಗಳನ್ನು ಮುಖ್ಯ ರಸ್ತೆ ಜತೆ ವಿಲೀನ ಮಾಡಿ ಸುಗಮವಾಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಸುಮಾರು 40-50 ಕಿ.ಮೀ ಪ್ರಮುಖ ರಸ್ತೆಗಳಲ್ಲಿ ಈ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರವಾಗಿ ಶಾಸಕರನ್ನು ವಿಶ್ವಾಸಕ್ಕೆ ಪಡೆದಿದ್ದು, ಎಲ್ಲರೂ ಒಪ್ಪಿದ್ದಾರೆ ” ಎಂದರು.

ಬಿಬಿಎಂಪಿ ವಿಭಜನೆ ಬಗ್ಗೆ ಬಿಜೆಪಿ ನಾಯಕರು ಅಪಸ್ವರ ಎತ್ತಿದ್ದಾರೆ ಎಂದು ಕೇಳಿದಾಗ, “ಅವರು ನಿಮ್ಮ ಮುಂದೆ ಏನು ಹೇಳುತ್ತಾರೋ. ಆದರೆ ನನ್ನ ಬಳಿ ಅವರು ಏನು ಹೇಳುತ್ತಾರೆ ಎಂದು ನನಗೆ ಮಾತ್ರ ಗೊತ್ತಿದೆ.

ಟನಲ್ ರಸ್ತೆ ಮಾಡುವುದು ಅಸಾಧ್ಯ ಎಂಬ ಬಿಜೆಪಿ ನಾಯಕರ ಮಾತಿನ ಬಗ್ಗೆ ಕೇಳಿದಾಗ, “ಈ ಯೋಜನೆಯ ಟೆಂಡರ್ ಬಂದಾಗ ಗೊತ್ತಾಗುತ್ತದೆ” ಎಂದು ತಿಳಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
ಡಿ.ಕೆ. ಶಿವಕುಮಾರ್ ಬಿಬಿಎಂಪಿ ವಿಭಜನೆ ಬೆಂಗಳೂರು ಬೆಂಗಳೂರು ದಕ್ಷಿಣ ಜಿಲ್ಲೆ
Follow on Google News Follow on Instagram
Share. Facebook Twitter Telegram WhatsApp
Previous Articleಸುರಂಗ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್: ಡಿಸಿಎಂ ಡಿ.ಕೆ. ಶಿವಕುಮಾರ್
Next Article ಹೈದರಾಬಾದ್‌ಗೆ 2000 ಎಲೆಕ್ಟ್ರಿಕ್ ಬಸ್‌ಗಳ ಹಂಚಿಕೆ: ಎಚ್.ಡಿ. ಕುಮಾರಸ್ವಾಮಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಧನ್ಯವಾದ
Times of bayaluseeme
  • Website

Related Posts

ಇತ್ತೀಚಿಗೆ ಹೃದಯಾಘಾತಕ್ಕೆ ಕಾರಣಗಳು ಏನು…? ಸಿನಿಮಾ ನಟ, ನಟಿಯರಿಗೆ ಯಾಕೆ ಹೆಚ್ಚು ಹೃದಯಾಘಾತ ಆಗುತ್ತವೆ ಎಂಬುದಕ್ಕೆ ಇಲ್ಲಿದೆ ಕಾರಣ

July 27, 2025

ಧೂಮಪಾನ ಚಟವಿದ್ದರೆ ಇಂದೇ ಬಿಟ್ಟುಬಿಡಿ…. ಧೂಮಪಾನದಿಂದ ಆಗುವ ಪರಿಣಾಮಗಳು ಏನು..?

July 26, 2025

ಉಚಿತ ಕಿವಿಯ ಶ್ರವಣ ತಪಾಸಣೆ, ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ

July 25, 2025
Add A Comment
Leave A Reply Cancel Reply

Advertisement
Latest Posts

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.