ಚಿತ್ರದುರ್ಗ : ಧರ್ಮಾಧಾರಿತ ದೇಶ ಕಟ್ಟಲು ಹೊರಟಿರುವವರ ವಿರುದ್ದ ಕಮ್ಯುನಿಸ್ಟ್ ಪಕ್ಷದ ಹೋರಾಟ ನಿರಂತರವಾಗಿರುತ್ತದೆಂದುಕಮ್ಯುನಿಸ್ಟ್ ಪಾರ್ಟಿ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ಹೇಳಿದರು.ದಾವಣಗೆರೆ ರಸ್ತೆಯಲ್ಲಿರುವ ಕಮ್ಯುನಿಸ್ಟ್ ಕಾರ್ಯಾಲಯದಲ್ಲಿ ನಡೆದ 19 ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.ಕಟ್ಟಕಡೆಯವರನ್ನು ಮೇಲೆತ್ತಿ ಸಮ ಸಮಾಜ ನಿರ್ಮಾಣವಾಗಬೇಕೆಂಬುದು ಕಮ್ಯುನಿಸ್ಟ್ ಪಕ್ಷದ ಉದ್ದೇಶ. ಭಗತ್ಸಿಂಗ್ರವರಲ್ಲಿಸಮ ಸಮಾಜದ ಕನಸಿತ್ತು. ಕಮ್ಯುನಿಸ್ಟ್ ಪಾರ್ಟಿಗೆ ದೇಶಕ್ಕಾಗಿ ಪ್ರಾಣ ಕೊಟ್ಟ ಇತಿಹಾಸವಿದೆ. ಚಳುವಳಿ, ಹೋರಾಟಗಳ ಮೂಲಕಜನರ ಮನಸ್ಸು ಗೆದ್ದು ಕಮ್ಯನಿಸ್ಟ್ ಕಾರ್ಯಕರ್ತರು ಚುನಾವಣೆಯಲ್ಲಿಯೂ ನಿಂತು ರಾಜಕೀಯವಾಗಿ ಅಧಿಕಾರ ಹಿಡಿಯಬೇಕು.ಬಿಹಾರ, ತಮಿಳುನಾಡು, ಕೇರಳದಲ್ಲಿ ಕಮ್ಯುನಿಸ್ಟ್ ಪಕ್ಷದ ಶಾಸಕರುಗಳಿದ್ದಾರೆ. ಚುನಾವಣೆಯಲ್ಲಿ ಯಾರನ್ನು ಗೆಲ್ಲಿಸಬೇಕು. ಯಾರನ್ನುಸೋಲಿಸಬೇಕೆಂಬ ಶಕ್ತಿ ಕಮ್ಯುನಿಸ್ಟ್ ಪಕ್ಷಕ್ಕಿದೆ ಎಂದರು.
ದೇಶವನ್ನು ಕಾಡುತ್ತಿರುವ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಬೇಕು. ಆದಿವಾಸಿಗಳ ಹಕ್ಕಿಗಾಗಿ ಹೋರಾಟ, ಸರ್ಕಾರಿಶಾಲೆಗಳನ್ನು ಮುಚ್ಚುತ್ತಿರುವುದರ ವಿರುದ್ದ ಚಳುವಳಿಯಲ್ಲಿ ತೊಡಗುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.ಸಿಪಿಐ.ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್ಬಾಬು ಮಾತನಾಡಿ ಕಮ್ಯುನಿಸ್ಟ್ ಕಾರ್ಯಾಲಯದಲ್ಲಿ ನೂತನ ಕಟ್ಟಡನಿರ್ಮಿಸಲಾಗಿದೆ. ಪಕ್ಷದ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದೇವೆ. ಹಟ್ಟಿ ಚಿನ್ನದ ಗಣಿ ಪುನರಾರಂಭಿಸಬೇಕು. ಸೂರಿಗಾಗಿ ಸಮರ ನಮ್ಮ ಹೋರಾಟದಉದ್ದೇಶ.ವಿದ್ಯಾಭ್ಯಾಸ,ಆರೋಗ್ಯವನ್ನುರಾಷ್ಟ್ರೀಕರಣಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.
ಸಿಪಿಐ. ರಾಜ್ಯ ಮಂಡಳಿ ಸದಸ್ಯರುಗಳಾದ ಸಿ.ವೈ.ಶಿವರುದ್ರಪ್ಪ, ಟಿ.ಆರ್.ಉಮಾಪತಿ,ಚಿತ್ರದುರ್ಗತಾಲ್ಲೂಕುಕಾರ್ಯದರ್ಶಿಸಿ.ವೈ.ಸತ್ಯಕೀರ್ತಿ, ಹೊಳಲ್ಕೆರೆ ತಾಲ್ಲೂಕು ಕಾರ್ಯದರ್ಶಿ ಅಮಿನಾಭಿ, ಹೊಸದುರ್ಗ ತಾಲ್ಲೂಕು ಕಾರ್ಯದರ್ಶಿ ಕುಮಾರಸ್ವಾಮಿ,ಚಳ್ಳಕೆರೆ ತಾಲ್ಲೂಕು ಕಾರ್ಯದರ್ಶಿ ಗಿರೀಶ್, ಮೊಳಕಾಲ್ಮುರು ತಾಲ್ಲೂಕು ಕಾರ್ಯದರ್ಶಿ ಜಾಫರ್ಷರೀಫ್, ಪೆನ್ನಯ್ಯ ಇವರುಗಳುವೇದಿಕೆಯಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







