Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ಬಿಗ್‌ ಬಾಸ್‌ಗೆ RCB ತಂಡದ ಮಾಜಿ ಆಟಗಾರನ ಪತ್ನಿ ಎಂಟ್ರಿ, ಈಕೆಗೆ ಕೊಡುತ್ತಿರುವ ಸಂಭಾವನೆ ಎಷ್ಟು ಗೊತ್ತಾ..?
ಪ್ರಮುಖ ಸುದ್ದಿ

ಬಿಗ್‌ ಬಾಸ್‌ಗೆ RCB ತಂಡದ ಮಾಜಿ ಆಟಗಾರನ ಪತ್ನಿ ಎಂಟ್ರಿ, ಈಕೆಗೆ ಕೊಡುತ್ತಿರುವ ಸಂಭಾವನೆ ಎಷ್ಟು ಗೊತ್ತಾ..?

Times of bayaluseemeBy Times of bayaluseemeJuly 14, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

 

ಧನಶ್ರೀ ವರ್ಮಾ ಮಾರ್ಚ್ 20, 2025 ರಂದು ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ಅವರಿಂದ ವಿಚ್ಛೇದನ ಪಡೆಯುವುದಾಗಿ ಅಧಿಕೃತವಾಗಿ ಘೋಷಿಸಿದರು. ವಿಚ್ಛೇದನದ ನಂತರ ಧನಶ್ರೀ ವರ್ಮಾ ಸರಣಿ ಚಲನಚಿತ್ರಗಳು ಮತ್ತು ಸಂಗೀತ ಆಲ್ಬಮ್‌ಗಳಲ್ಲಿ ನಿರತರಾಗಿದ್ದಾರೆ.

ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ಅವರ ಮಾಜಿ ಪತ್ನಿ ಧನಶ್ರೀ ವರ್ಮಾ ಸದ್ಯ ರಿಯಾಲಿಟಿ ಶೋ, ಸಿನಿಮಾ ಹಾಗೂ ಆಲ್ಬಂ ಸಾಂಗ್‌ ಮೂಲಕ ಮಿಂಚುತ್ತಿದ್ದಾರೆ. ಇದರ ನಡುವೆ ಬಿಗ್ ಬಾಸ್ ಹಿಂದಿ ಸೀಸನ್ 19ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿದೆ. ತಮ್ಮ ವೀಡಿಯೊಗಳಿಂದ ಜನಪ್ರಿಯತೆ ಗಳಿಸಿದ ಧನಶ್ರೀ ವರ್ಮಾ ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ಅವರನ್ನು ಪ್ರೀತಿಸಿ 2020ರಲ್ಲಿ ವಿವಾಹವಾದರು. ಆದರೆ ಮದುವೆಯಾದ ಕೆಲ ವರ್ಷಗಳಲ್ಲಿಯೇ ಇಬ್ಬರೂ ವಿಚ್ಛೇದನ ಪಡೆದು ಬೇರ್ಪಟ್ಟಿದ್ದಾರೆ.

ಧನಶ್ರೀ ವರ್ಮಾ-ಚಹಾಲ್‌ ಡಿವೋರ್ಸ್‌:

ವಿಚ್ಛೇದನ ಪಡೆದ ಬಳಿಕ ಧನಶ್ರೀ ವರ್ಮಾ ಯುಜ್ವೇಂದ್ರ ಚಾಹಲ್ ಅವರಿಂದ 40 ಕೋಟಿ ರೂ. ಜೀವನಾಂಶ ಪಡೆದಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಆದರೆ, ಚಾಹಲ್ ಮತ್ತು ಧನಶ್ರೀ ವರ್ಮಾ ಈ ವರದಿಗಳನ್ನು ನಿರಾಕರಿಸಿದ್ದಾರೆ. ಧನಶ್ರೀ ವರ್ಮಾ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಜೊತೆ ಸಂಬಂಧ ಹೊಂದಿದ್ದರು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಮೀಮ್ಸ್ ವೈರಲ್ ಆಗಿದ್ದವು.

ಪ್ರಸ್ತುತ, ಧನಶ್ರೀ ವರ್ಮಾ ಸಂಗೀತ ಆಲ್ಬಮ್‌ಗಳ ಜೊತೆಗೆ ಕೆಲವು ಚಲನಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ರಾಜ್‌ಕುಮಾರ್ ರಾವ್ ನಟಿಸಿದ ಭೂಲ್ ಚುಕ್ ಮಾಫ್ ಚಿತ್ರದಲ್ಲಿ ಅವರು ಐಟಂ ಹಾಡಿನಲ್ಲಿ ನೃತ್ಯ ಮಾಡಿದ್ದಾರೆ. ಇದರ ನಡುವೆ ಅಕ್ಷಯ್ ಕುಮಾರ್ ನಡೆಸಿಕೊಡುವ ಖತ್ರೋನ್ ಕಿ ಖಿಲಾಡಿ ಕಾರ್ಯಕ್ರಮದಲ್ಲಿ ಧನಶ್ರೀ ವರ್ಮಾ ಭಾಗವಹಿಸಲಿದ್ದಾರೆ ಎಂಬ ವದಂತಿಯೂ ಇತ್ತು. ಆದಾಗ್ಯೂ, ಕೆಲವು ಕಾರಣಗಳಿಂದಾಗಿ ಈ ಕಾರ್ಯಕ್ರಮ ಪ್ರಾರಂಭವಾಗಲಿಲ್ಲ.

ಬಿಗ್‌ ಬಾಸ್‌ಗೆ ಧನಶ್ರೀ ಎಂಟ್ರಿ:

ಇದೀಗ ಧನಶ್ರೀ ವರ್ಮಾ ಅವರಿಗೆ ಬಿಗ್ ಬಾಸ್ ಮನೆಯಿಂದ ಭಾರಿ ಸಂಭಾವನೆಯ ಆಫರ್ ಬಂದಿದೆ ಎಂದು ವರದಿಯಾಗಿದೆ. ಯೂಟ್ಯೂಬರ್, ಸಾಮಾಜಿಕ ಮಾಧ್ಯಮ ಪ್ರಭಾವಿ ಮತ್ತು ಯುಜ್ವೇಂದ್ರ ಚಾಹಲ್ ಅವರ ಮಾಜಿ ಪತ್ನಿಯಾಗಿ ಧನಶ್ರೀ ವರ್ಮಾ ಯುವಕರಲ್ಲಿ ಜನಪ್ರಿಯತೆ ಗಳಿಸಿದ್ದಾರೆ. ಇದರೊಂದಿಗೆ ಅವರನ್ನು ಮನೆಗೆ ಕರೆತರಲು ವಾಹಿನಿಯವರು ಪ್ರಯತ್ನಗಳು ನಡೆಯುತ್ತಿವೆ ಎಂಬ ವರದಿಗಳಿವೆ.

 ಬೋಲ್ಡ್‌ ಲುಕ್‌ಗೆ ಸೋಶಿಯಲ್‌ ಮೀಡಿಯಾ ಶೇಕ್‌! ಫೋಟೋ ನೋಡಿ ಪಡ್ಡೆ ಹೈಕ್ಳು ಫಿದಾಅಲ್ಲದೆ ಯೂಟ್ಯೂಬರ್ ಪೂರವ್ ಝಾ, ರಾಜ್ ಕುಂದ್ರಾ, ಫೈಸಲ್ ಶೇಖ್, ರಾಮ್ ಕಪೂರ್, ತನುಶ್ರೀ ದತ್ತಾ ಮತ್ತು ಗೌರವ್ ತನೇಜಾ ಅವರಂತಹ ಸೆಲೆಬ್ರಿಟಿಗಳು ಬಿಗ್ ಬಾಸ್ ಹಿಂದಿ ಸೀಸನ್ 19ರಲ್ಲಿ ಸ್ಪರ್ಧಿಗಳಾಗಲಿದ್ದಾರೆ ಎಂದು ವರದಿಯಾಗಿದೆ. ಮುಂದಿನ ತಿಂಗಳು ಬಿಗ್ ಬಾಸ್ ಹಿಂದಿ ಸೀಸನ್ 19 ಅನ್ನು ಪ್ರಾರಂಭಿಸಿ ಜನವರಿ 2026ರ ವರೆಗೆ ಮುಂದುವರಿಸಲು ಪ್ರಯತ್ನಗಳು ನಡೆಯುತ್ತಿವೆ. ಬಿಗ್ ಬಾಸ್ ಸೀಸನ್ ಸುಮಾರು 5 ತಿಂಗಳ ಕಾಲ ನಡೆಯಲಿದೆ ಎಂದು ಹೇಳಲಾಗುತ್ತಿದೆ, ಇದು ಬಿಗ್ ಬಾಸ್ ಇತಿಹಾಸದಲ್ಲಿ ಅತಿ ದೊಡ್ಡ ಶೋ ಆಗಲಿದೆ.

ಧನಶ್ರೀ ವರ್ಮಾ ಹಿನ್ನಲೆ ಏನು?

ಸೋಷಿಯಲ್‌ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ಆಗಿರುವ ಧನಶ್ರೀ ಅವರಿಗೆ ಅಪಾರ ಸಂಖ್ಯೆಯ ಫಾಲೋವರ್ಸ್‌ ಇದ್ದಾರೆ. ಇವರು ಪ್ರತಿಭಾವಂತ ಕೊರಿಯಾಗ್ರಫರ್‌. ಬಾಲ್ಯದಿಂದಲೂ ಭರತನಾಟ್ಯಂ ಅಭ್ಯಾಸ ಮಾಡುತ್ತಿದ್ದಾರೆ. 2018ರಿಂದ ಅವರು ಡ್ಯಾನ್ಸ್‌ ಕ್ಲಾಸ್‌ ನಡೆಸುತ್ತಿದ್ದು, ನೃತ್ಯ ತರಬೇತಿ ಕೊಡುತ್ತಿದ್ದಾರೆ. ಧನಶ್ರೀ ಅವರು ಮೊಟ್ಟಮೊದಲು ದಂತವೈದ್ಯೆಯಾಗಿ ವೃತ್ತಿ ಜೀವನ ಶುರು ಮಾಡಿದರು. ಬಳಿಯ ತಮ್ಮ ಆಸಕ್ತಿಯ ಡ್ಯಾನ್ಸ್‌ ಕ್ಷೇತ್ರದತ್ತ ಸಂಪೂರ್ಣ ಗಮನ ಹರಿಸಿದರು. ಇನ್‌ಸ್ಟಾಗ್ರಾಂ ಮತ್ತು ಯೂಟ್ಯೂಬ್‌ನಲ್ಲಿ ಫೇಮಸ್‌ ಆದರು. ಅವರು ಬಾಲಿವುಡ್‌ ನಟಿಯರಾದ ಪ್ರಿಯಾಂಕಾ ಚೋಪ್ರಾ, ಆಲಿಯಾ ಭಟ್‌ ಜೊತೆ ಕೆಲಸ ಮಾಡಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
biggboss rcb wife
Follow on Google News Follow on Instagram
Share. Facebook Twitter Telegram WhatsApp
Previous Articleನಿಮಗೆ ಬೆನ್ನು ನೋವಿದೆಯೇ… ಬೆನ್ನು ನೋವಿಗೆ ಕಾರಣಗಳು ಏನ್ ಅಂತೀರಾ..?
Next Article ಅಪರೇಷನ್ ಕಮಲಕ್ಕೆ ಬಿಜೆಪಿ ಯತ್ನ – ಶಾಸಕ ವಿಜಯಾನಂದ ಕಾಶಪ್ಪನವರ್
Times of bayaluseeme
  • Website

Related Posts

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

July 27, 2025

ಪತ್ರಿಕೋದ್ಯಮ ಯಾರ ಪರವಾಗಿ ಕನ್ನಡಿ ಹಿಡಿಯುತ್ತಿದೆ ಎಂಬುದನ್ನು ಅರಿಯಬೇಕು – ಕೆ.ವಿ.ಪ್ರಭಾಕರ್

July 27, 2025

ನಟ ಪ್ರಥಮ್ ಗೆ ಜೀವ ಬೆದರಿಕೆ; ಘಟನೆಯಲ್ಲಿ ರಕ್ಷಕ್ ಬುಲೆಟ್ ಬಂದಿದ್ದೇಕೆ..?

July 27, 2025
Add A Comment
Leave A Reply Cancel Reply

Advertisement
Latest Posts

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.