Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

17/06/2026 ರ ನಿತ್ಯ ಭವಿಷ್ಯ (ಬುಧವಾರ)

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ; 15 ಲಕ್ಷ ಗಿಡ ನೆಡಲು ಬಿಡಿಎ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

16/06/2026 ರ ನಿತ್ಯ ಭವಿಷ್ಯ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಮುಖಪುಟ»ಬುದ್ಧ ಪೂರ್ಣಿಮೆ ವಿಶೇಷ: ನಮ್ಮೊಳಗಿನ ಬುದ್ಧನನ್ನು ಹುಡುಕುವ ಒಂದು ಮಾನಸಿಕ ಪಯಣ!
ಮುಖಪುಟ

ಬುದ್ಧ ಪೂರ್ಣಿಮೆ ವಿಶೇಷ: ನಮ್ಮೊಳಗಿನ ಬುದ್ಧನನ್ನು ಹುಡುಕುವ ಒಂದು ಮಾನಸಿಕ ಪಯಣ!

Times Of Bayaluseeme StaffBy Times Of Bayaluseeme StaffMay 2, 2026No Comments10 Mins Read
Share WhatsApp Facebook Twitter Threads Telegram
Follow Us
Facebook Instagram
buddha-purnima-2026-searching-buddha-within-us-kannada
Share
WhatsApp Twitter Facebook Telegram

ಬುದ್ಧ ಪೂರ್ಣಿಮೆಯ ಈ ಸಂದರ್ಭದಲ್ಲಿ ಗೌತಮ ಬುದ್ಧನ ತತ್ವಗಳು ಇಂದಿನ 21ನೇ ಶತಮಾನಕ್ಕೆ ಹೇಗೆ ಪ್ರಸ್ತುತ? ಸಿದ್ಧಾರ್ಥ ಬುದ್ಧನಾದ ಕಥೆ ಮತ್ತು ನಮ್ಮೊಳಗಿನ ಮಾನವೀಯತೆಯಲ್ಲಿ ಬುದ್ಧನನ್ನು ಹುಡುಕುವ ಬಗೆಯನ್ನು ವಿವರಿಸುವ ವಿಶೇಷ ಲೇಖನ.

” ಜಗತ್ತಿನ ಎಲ್ಲಾ ಶೋಷಿತರು – ದೌರ್ಜನ್ಯಕ್ಕೆ ಒಳಗಾದವರು ನನ್ನ ಸಂಗಾತಿಗಳು “……

ಚೆಗುವಾರ…………

ವಿಶ್ವ ಕಾರ್ಮಿಕರ ದಿನದಂದು ಜಗತ್ತಿನ ಎಲ್ಲಾ ಜೀವಚರಗಳು ಒಂದಲ್ಲ ಒಂದು ರೀತಿಯಲ್ಲಿ ಕಾರ್ಮಿಕರೇ ಎಂಬ ಭಾವದೊಂದಿಗೆ….

ಎಲ್ಲರಿಗೂ ಶುಭಾಶಯಗಳು……..

ನಿಮ್ಮ ಸಂತೋಷದ ಸಂದರ್ಭಗಳಲ್ಲಿ ಇವರುಗಳು ಸಹ ನೆನಪಾಗಲಿ………

ಚುಮು ಚುಮು ಚಳಿಯಲ್ಲಿ ನಿಮಗೆ ನಿಮ್ಮ ಪ್ರೇಯಸಿ/ ಪ್ರಿಯಕರ ನೆನಪಾದರೆ ಸಂತೋಷಿಸುವೆವು.
ಹಾಗೆಯೇ,
ಹಿಮಾಲಯದ ತಪ್ಪಲಿನಲ್ಲಿ ಆ ನಡುಗುವ ಚಳಿಯಲ್ಲಿ ನಮಗಾಗಿ ಕಾರ್ಯ ನಿರ್ವಹಿಸುತ್ತಿರುವ ಸೈನಿಕರೂ ನೆನಪಾಗಲಿ ಎಂದು ಆಶಿಸುವೆ …….

ಅತ್ಯಂತ ತೀವ್ರ ಉಷ್ಣ ತಾಪಮಾನದಲ್ಲಿ ಅನಿರೀಕ್ಷಿತವಾಗಿ ತಣ್ಣನೆಯ ನೀರ ಮಜ್ಜಿಗೆ ಮತ್ತು ಎಳನೀರು ದೊರೆತು ಅದು ಗಂಟಲಲ್ಲಿ ಇಳಿಯುವಾಗ ಆಸ್ವಾದಿಸುವ ನಿಮ್ಮ ಮನಸ್ಥಿತಿಗೆ ಸಂತೋಷಪಡುವೆವು, ಆದರೆ ಅದೇ ಸಮಯದಲ್ಲಿ ಅದು ತಯಾರಾಗಲು ಬೆವರು ಸುರಿಸಿದ ರೈತರು ನೆನಪಾಗಲಿ ಎಂದು ಆಶಿಸುವೆ……

ಮೋಡ ಬಿರಿದಂತೆ ಸುರಿಯುವ ಮಳೆ ಮತ್ತು ಗಡಗಡ ನಡುಗುವ ಚಳಿಯಲ್ಲಿ ಬೆಚ್ಚಗಿನ ಹೊದಿಕೆ – ಆಶ್ರಯ ನಿಮಗೆ ಸಿಕ್ಕರೆ ಸಂತೋಷಿಸುವೆವು,
ಹಾಗೆಯೇ,
ಬೀದಿ ಬದಿಯಲ್ಲಿ ಹೊದಿಕೆ ಇಲ್ಲದೆ ಚಳಿಗೆ ವಿಲವಿಲ ಒದ್ದಾಡುತ್ತಾ ಮಲಗಿರುವ ಅನಾಥ ನಿರ್ಗತಿಕ ಜನರೂ ನೆನಪಾಗಲಿ ಎಂದು ಆಶಿಸುವೆ ………

ಮಾಗಿಯ ಚಳಿಗೆ ನಿಮಗೆ ಬಿಸಿಬಿಸಿ ಕಾಫಿ/ಟೀ ಸಿಕ್ಕರೆ ಸಂತೋಷಿಸುವೆವು.
ಹಾಗೆಯೇ,
ಸುರಿಯುವ ಮಂಜಿನಲ್ಲಿ ಕಾಫಿ/ಟೀ ತೋಟಗಳಲ್ಲಿ ಕೆಲಸ ಮಾಡುವ ಆ ಕೂಲಿ ಕಾರ್ಮಿಕರ ಸ್ಥಿತಿಯೂ ನಿಮಗೆ ನೆನಪಾಗಲಿ ಎಂದು ಆಶಿಸುವೆ …………

ಹಿಮದ ರಾಶಿಯ ನಡುವೆ ಗರಿಗರಿ ಸುಟ್ಟ ಕೋಳಿ ಮಾಂಸದ ಜೊತೆಗೆ ರಮ್/ವಿಸ್ಕಿ ನಿಮಗೆ ಸಿಕ್ಜರೆ ಸಂತೋಷಿಸುವೆವು.
ಹಾಗೆಯೇ,
ಬೆಳಗಿನ ಅದುರುವ ಚಳಿಯಲ್ಲಿ ಹೊಲ ಉಳುವ ರೈತನೂ ನಿಮಗೆ ನೆನಪಾಗಲಿ ಎಂದು ಆಶಿಸುವೆ…………..

ತಲೆಯಿಂದ ಪಾದದವರೆಗೂ ಬೆಚ್ಚನೆ ಹೊದ್ದು ಮನೆಯ ಬಾಲ್ಕನಿಯಲ್ಲಿ ಕಾಲಮೇಲೆ ಕಾಲುಹಾಕಿ ಕುಳಿತು ಬಿಸಿಬಿಸಿ ಬೆಣ್ಣೆ ದೋಸೆ / ತುಪ್ಪದ ಉಪ್ಪಿಟ್ಟು ತಿನ್ನುತ್ತಾ ಪತ್ರಿಕೆ ಓದುವ ಸುಖ ನಿಮ್ಮದಾದರೆ ಸಂತೋಷಿಸುವೆವು.
ಹಾಗೆಯೇ,
ಹತ್ತರ ಪುಟ್ಟ ಹುಡುಗನೊಬ್ಬ ಆ ಭಯಂಕರ ಚಳಿಯಲ್ಲಿ ಚಡ್ಡಿಹಾಕಿಕೊಂಡು ಬೆಳಗ್ಗೆ 4ಕ್ಕೆ ಎದ್ದು ಮನೆಮನೆಗೆ ಪತ್ರಿಕೆ ಹಾಕುವ ಕಷ್ಟ ನೆನಪಾಗಲಿ ಎಂದು ಆಶಿಸುವೆ……………..

ನಿಮ್ಮ ಸುಖಕ್ಕೆ ಹೊಟ್ಟೆ ಉರಿ ಪಡಲಾರೆವು.
ಆದರೆ ಆ ಶ್ರಮಜೀವಿಗಳ ಸಂಕಷ್ಷಗಳಿಗೆ ಮರುಕವಿದೆ/ ಸಹಾನುಭೂತಿಯಿದೆ.
ಅವರೂ ಶ್ರಮಪಡಲಿ. ಆದರೆ ಅವರ ನೋವು ಕಷ್ಟದ ಪ್ರಮಾಣ ಕಡಿಮೆಯಾಗಿ ಅವರ ಜೀವನಮಟ್ಟ ಸುಧಾರಣೆಯಾಗಿ ಅವರೂ ನೆಮ್ಮದಿ ಬದುಕು ಕಾಣುವಂತಾಗಲಿ ಎಂದು ಆಶಿಸುತ್ತಾ ……………….
**************************

ಶ್ರಮಿಕರ ಎದೆಯ ಮೇಲಿನ ಬೆವರ ಹನಿಗಳು……………

ಇಂಗ್ಲೇಂಡಿನ ಮ್ಯಾಂಚೆಸ್ಟರ್ ನ ಬಟ್ಟೆ ಗಿರಣಿಗಳು,

ದಕ್ಷಿಣ ಆಫ್ರಿಕಾದ ಚಿನ್ನದ ಗಣಿಗಳು,

ಚೀನಾದ ಕಬ್ಬಿಣದ ಅದಿರ ಗಣಿಗಳು,

ಅರೇಬಿಯನ್ ಮರುಭೂಮಿಯ ಕೂಲಿಗಳು,

ಬ್ರೆಜಿಲ್ ಕಾಫಿ ತೋಟದ ಕಾರ್ಮಿಕರು,

ಸುಡಾನ್, ಇಥಿಯೋಪಿಯಾದ ಗುಲಾಮರು,

ಇಟಲಿಯ ಕ್ವಾರಿಯ ಕಲ್ಲುಗಣಿ ಶ್ರಮಿಕರು,

ಅಮೆರಿಕದ ಹಾಲಿವುಡ್‌ನ ಸಿನೆಮಾ ಕೆಲಸಗಾರರು,

ಹಾಂಕಾಂಗ್ ನ ಹೋಟೆಲ್ ಕಾರ್ಮಿಕರು,

ಆಸ್ಟ್ರೇಲಿಯಾ ದ್ವೀಪಗಳ ಮೀನುಗಾರರು,

ಬಾಂಗ್ಲಾದೇಶದ ಬಿರು ಬಿಸಿಲಿನಲ್ಲಿ ನಡೆದಾಡುವ ಟಾಂಗಾವಾಲಾಗಳು,

ಟಿಬೆಟ್ಟಿನ ದುರ್ಗಮ ರಸ್ತೆಗಳಲ್ಲಿ ವಾಹನ ಚಲಾಯಿಸುವ ಚಾಲಕರು,

ಸಿರಿಯಾದ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ದಾದಿಯರು,

ಉತ್ತರ ಕೊರಿಯಾದ ಸರ್ವಾಧಿಕಾರಕ್ಕೆ ನಲುಗಿ ಉಸಿರಾಡಲು ಕಷ್ಟ ಪಡುತ್ತಿರುವ ಸ್ವತಂತ್ರ ಜೀವಿಗಳು,

ಭಾರತದ ಮ್ಯಾನ್ ಹೋಲ್ ಗಳಲ್ಲಿ ಕೆಲಸ ಮಾಡುವ ನನ್ನದೇ ಅಣ್ಣ ತಮ್ಮಂದಿರು,

ಮುಂಬಯಿನ ರೈಲ್ವೆ ಕೂಲಿಗಳು,

ಸೂರತ್ ನ ಬಟ್ಟೆ ಗಿರಣಿಗಳ ಕೆಲಸಗಾರರು,

ವಿಶಾಖಪಟ್ಟಣದ ಮೀನುಗಾರರು,

ಕೊಯಮತ್ತೂರಿನ ಪಟಾಕಿ ತಯಾರಕರು,

ಮಂಗಳೂರಿನ ಬೀಡಿ ಕಟ್ಟುವವರು,

ಕೇರಳದ ಚಹಾ ತೋಟದ ದಿನಗೂಲಿಗಳು,

ದೆಹಲಿಯ ಕಟ್ಟಡ ಕಾರ್ಮಿಕರು,

ಜೈಪುರದ ಕಲ್ಲು ಬಂಡೆ ಹೊಡೆಯುವವರು,

ಇಳಕಲ್ ನ ಸೀರೆ ನೇಯುವವರು,

ಹೋಸಕೋಟೆಯ ಇಟ್ಟಿಗೆ ಕಾರ್ಮಿಕರು,

ಲಕ್ನೋ ಬಸ್ ನಿಲ್ದಾಣದ ಕಸ ಗುಡಿಸುವವರು,

ಅಸ್ಸಾಂನ ನಿರಾಶ್ರಿತರು,

ಮಣಿಪುರದ ಕ್ಷೌರಿಕರು,

ಭುವನೇಶ್ವರದ ಬಟ್ಟೆ ತೊಳೆಯುವವರು,

ಹೀಗೆ ಸಾಕಷ್ಟು ಶ್ರಮ ಜೀವಿಗಳು ನೆನಪಾಗುತ್ತಾರೆ…..

ನೆನಪಿರಲಿ,
ಜಗತ್ತಿನ ಪ್ರತಿ ಜೀವಿಯೂ ಕಾರ್ಮಿಕನೇ….‌‌…….

ಶ್ರೀಮಂತ ರಾಷ್ಟ್ರ ಕತಾರ್,
ಬಲಿಷ್ಠ ರಾಷ್ಟ್ರ ಅಮೆರಿಕ,
ಬಡ ರಾಷ್ಟ್ರ ಇಥಿಯೋಪಿಯ,
ಆಧ್ಯಾತ್ಮಿಕ ರಾಷ್ಟ್ರ ಭಾರತ,
ಧರ್ಮನಿಷ್ಠ ರಾಷ್ಟ್ರ ಇರಾನ್,
ಹಿಂಸಾತ್ಮಕ ರಾಷ್ಟ್ರ ಸಿರಿಯಾ, ಶಾಂತಿಯುತ ರಾಷ್ಟ್ರ ನಾರ್ವೆ,
ಸುಂದರ ರಾಷ್ಟ್ರ ಸ್ವಿಟ್ಜರ್ಲ್ಯಾಂಡ್,
ಯಾವುದೇ ಆಗಿರಲಿ,
ಮಗುವಿನಿಂದ ವೃದ್ಧರವರೆಗೆ,
ಎಲ್ಲರೂ ಒಂದಲ್ಲಾ ಒಂದು ಕೆಲಸದಲ್ಲಿ ತೊಡಗಲೇಬೇಕು…….

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ತನಗೆ ಎಲ್ಲವೂ ದೊರೆತಾಗಲೂ ಸುಮ್ಮನೆ ಇರಲು ಸಾಧ್ಯವಿಲ್ಲ. ಏನಾದರೂ ಮಾಡಲೇ ಬೇಕು. ಇಲ್ಲದಿದ್ದರೆ ಆತ ನಿರ್ಜೀವಿಯಾಗುತ್ತಾನೆ. ಹಾಗೆಯೇ ಭಿಕ್ಷುಕ ಕೂಡ ತನ್ನ ಮಿತಿಯಲ್ಲಿ ಕೆಲಸ ಮಾಡಲೇಬೇಕು….

ಆದರೆ,
ಕೆಲಸದ ರೂಪಗಳು, ಮಾರ್ಗಗಳು, ಗುರಿಗಳು, ಏರಿಳಿತಗಳು, ಅವಶ್ಯಕತೆಗಳು, ಅನಿವಾರ್ಯಗಳು ಬೇರೆ ಬೇರೆಯಾಗಿರುತ್ತದೆ ಅಷ್ಟೆ.

ಸಾಮಾನ್ಯವಾಗಿ ಮತ್ತು ಸರಳವಾಗಿ ಹೆಚ್ಚು ಶ್ರಮದಾಯಕ ಕೆಲಸ ಮಾಡುವ, ಕಡಿಮೆ ಹಣ ಗಳಿಸುವ, ಹೆಚ್ಚಿನ ಸುರಕ್ಷತೆ ಇಲ್ಲದ, ಸ್ವತಂತ್ರ ನಿರ್ಧಾರ ತೆಗೆದುಕೊಳ್ಳದ, ಮಾಲೀಕರ ಆಶಯಕ್ಕೆ ಅನುಗುಣವಾಗಿ ದುಡಿಯುವ,
ಬದುಕಿನ ಅನಿವಾರ್ಯತೆಗೆ ಶೋಷಣೆಗೆ ಒಳಗಾಗುವವರನ್ನು ಕಾರ್ಮಿಕರು ಎಂದು ಕರೆಯಲಾಗುತ್ತದೆ.

ಒಂದಷ್ಟು ಹಿಂದೆ ಕೆಲವು ಮನುಷ್ಯರನ್ನು ಗುಲಾಮರೆಂದು ಪರಿಗಣಿಸಿ ಪ್ರಾಣಿಗಳಂತೆ ಅವರವರ ದೈಹಿಕ ಸಾಮರ್ಥ್ಯಕ್ಕೆ ತಕ್ಕಂತೆ ವ್ಯಾಪಾರವೂ ಮಾಡಲಾಗುತ್ತಿತ್ತು. ಅವರ ಯಾವ ಮೂಲಭೂತ ಅಂಶಗಳನ್ನು ಪರಿಗಣಿಸಲಾಗುತ್ತಿರಲಿಲ್ಲ.
ಆದರೆ, ಈಗಿನ ಆಧುನಿಕ ಜಗತ್ತಿನಲ್ಲಿ ಇದು ಇಲ್ಲವಾಗಿದೆ.

ಆದರೂ,
ಕಾರ್ಮಿಕ ಶೋಷಣೆ ಬೇರೆ ಬೇರೆ ರೂಪದಲ್ಲಿ ಈಗಲೂ ಜೀವಂತವಿದೆ.‌ ಈ ಬಗ್ಗೆ ಹಿಂದಿನಿಂದಲೂ ಒಂದಷ್ಟು ಪ್ರತಿಭಟನೆಗಳು ಆಗುತ್ತಿದ್ದರೂ ಸಮಗ್ರವಾಗಿ ಜಗತ್ತಿನ ಗಮನಸೆಳೆದ ಕೀರ್ತಿ ಕಾರ್ಲ್ ಮಾರ್ಕ್ಸ್ ಅವರಿಗೆ ಸಲ್ಲುತ್ತದೆ.

ಕಾರ್ಮಿಕರ ಶೋಷಣೆ ನಿಲ್ಲಬೇಕು ನಿಜ, ಆದರೆ ಅದಕ್ಕಾಗಿ ಶ್ರೀಮಂತ ಉದ್ಯಮಿಗಳನ್ನು ದ್ವೇಷಿಸಬಾರದು. ಸಂಘರ್ಷಕ್ಕಿಂತ ಸಮನ್ವಯತೆಗೆ ಹೆಚ್ಚಿನ ಮಹತ್ವ ಕೊಡಬೇಕು.

ಅದರಲ್ಲೂ ಬದಲಾದ ಈ ಆಧುನಿಕ ಕಾಲ ಘಟ್ಟದಲ್ಲಿ ಬಂಡವಾಳ ಶಾಹಿಗಳು ಕೂಡ ಮುಖ್ಯರಾಗುತ್ತಾರೆ. ಶೋಷಣೆ ತಪ್ಪಿಸುವ ಮಾರ್ಗಗಳು ಮುಖ್ಯವಾಗಬೇಕೆ ಹೊರತು ಸೇಡಿನ ಕ್ರಮಗಳು ಮೇಲುಗೈ ಪಡೆಯಬಾರದು. ಅದು ನಕ್ಸಲಿಸಂ ಎಂಬ ಹಿಂಸಾತ್ಮಕ ಸಿದ್ದಾಂತಕ್ಕೆ ದಾರಿ ಮಾಡಿಕೊಡುತ್ತದೆ. ಅದು ತುಂಬಾ ಅಪಾಯಕಾರಿ.

ಈಗಲೂ ನಿಕೃಷ್ಟವಾಗಿ ಬದುಕುತ್ತಿರುವ ಕಾರ್ಮಿಕರು, ಅತ್ಯಂತ ಕಠಿಣ ಕೆಲಸಗಳಲ್ಲಿ ಜೀವದ ಹಂಗು ತೊರೆದು ದುಡಿಯುತ್ತಿರುವ ಕಾರ್ಮಿಕರು, ಲೈಂಗಿಕ ಶೋಷಣೆಗೆ ಒಳಗಾಗುತ್ತಿರುವ ಮಹಿಳಾ ಕಾರ್ಮಿಕರು,
ಹೋಟೆಲ್ ಮುಂತಾದ ಕಡೆ ಅಸಹನೀಯ ಕೆಲಸ ಮಾಡುತ್ತಿರುವ ಬಾಲ ಕಾರ್ಮಿಕರು ಮುಂತಾದವರ ಜೀವನಮಟ್ಟ ಸುಧಾರಿಸದೆ ದೇಶದ ಅಭಿವೃದ್ಧಿ ಸಾಧ್ಯವೇ ಇಲ್ಲ.

ಈ ಕಾರ್ಮಿಕ ದಿನದ ಸಂದರ್ಭದಲ್ಲಿ ನಮ್ಮ ವ್ಯವಸ್ಥೆಯಲ್ಲಿ, ಕಾರ್ಮಿಕರು, ಬಂಡವಾಳ ಶಾಹಿಗಳು, ವ್ಯಾಪಾರೋದ್ಯಮಿಗಳ ಮಧ್ಯೆ ಒಂದು ಸಮಾನತೆಯ ಮಾನವೀಯತೆಯ ಸಮನ್ವಯ ಸಾಧ್ಯವಾಗಲಿ ಮತ್ತು ಒಬ್ಬರಿಗೊಬ್ಬರು ಪ್ರೀತಿಸುವ ಗೌರವಿಸುವ ವ್ಯವಸ್ಥೆ ನಿರ್ಮಾಣವಾಗಲಿ ಎಂದು ಆಶಿಸುತ್ತಾ…….
****************************
ಹೊಟ್ಟೆ ಪಾಡಿನ ಕಾರ್ಮಿಕರಿಂದಲೇ ಚಲಿಸುತ್ತಿರುವ ದೇಶ………..

” ಅಣೋ ಏನಾದ್ರು ಕೆಲ್ಸ ಇದ್ರೇ ಹೇಳು ”

” ಏನ್ ಓದಿದಿಯಾ ಏನ್ ಕೆಲ್ಸ ಮಾಡ್ತೀಯಾ ”

” ಅಣೋ ಏಳನೇ ಕ್ಲಾಸು. ನೀನ್ ಏನ್ ಹೇಳಿದ್ರೂ ಆ ಕೆಲ್ಸ ಮಾಡ್ತೀನಿ ”

” ಆಯ್ತು ಅಲ್ಲಿ ಒಂದು ಹೋಟೆಲ್ ಇದೆ. ಸಪ್ಲೈಯರ್ ಕೆಲಸ ಮಾಡಬೇಕು. ನಿಯತ್ತಾಗಿರಬೇಕು. ಗೊತ್ತಾಯ್ತ. ಸಂಬಳ ಅವರು ಎಷ್ಟು ಕೊಟ್ರೆ ಅಷ್ಟು ಇಸ್ಕೋಬೇಕು ಆ ”

” ಆಯ್ತಣೋ ನೀನು ನನ್ನ ಪಾಲಿಗೆ ದೇವ್ರು ಕಣಣ್ಣ ”

ಇದು ಒಂದು ಸಾಂಕೇತಿಕ ಸಂಭಾಷಣೆಯ ತುಣುಕು ಮಾತ್ರ.

ಹೋಟೆಲ್ ಇರಲಿ, ಕಟ್ಟಡ ರಸ್ತೆ ನಿರ್ಮಾಣದ ಕೆಲವು ವಿಭಾಗಗಳೇ ಇರಲಿ, ಅಂಗಡಿ ವ್ಯಾಪಾರ, ಮನೆಗೆಲಸ, ವಾಚ್ ಮನ್, ಪ್ಯಾಕಿಂಗ್, ಮೂಟೆ ಹೊರುವುದು, ಕಸ ಗುಡಿಸುವುದು ಮುಂತಾದ ಎಲ್ಲಾ ಕೆಲಸಗಳಿಗೆ ಯಾವುದೇ ತರಬೇತಿ ತಾಂತ್ರಿಕತೆ, ಶಿಷ್ಟಾಚಾರ, ಅನುಭವ ಅರ್ಹತೆ ಇರುವುದಿಲ್ಲ. ಹೊಟ್ಟೆ ಪಾಡೇ ಬಹುಮುಖ್ಯ.

ಗಾರ್ಮೆಂಟ್ಸ್, ಅಡುಗೆ, ವಾಹನ ಚಾಲನೆ, ದಲ್ಲಾಳಿ, ಕಚೇರಿ ಸ್ವಾಗತಕಾರ ಮತ್ತು ಸಹಾಯಕ, ಸಿನಿಮಾ ನಾಟಕ ಧಾರಾವಾಹಿ ನಿರ್ಮಾಣದ ಕೆಲವು ವಿಭಾಗಗಳು, ವಿವಿಧ ವಸ್ತುಗಳ ಸಣ್ಣ ಪುಟ್ಟ ರಿಪೇರಿ ಮತ್ತು ವರ್ಕ್ ಶಾಪ್ ಮುಂತಾದ ಕೆಲಸಗಳು ಸ್ವಲ್ಪ ತರಬೇತಿ ಸ್ವಲ್ಪ ಅನುಭವದೊಂದಿಗೆ ಹೇಗೋ ನಿರ್ವಹಿಸುತ್ತಾರೆ.

ಈ ಎಲ್ಲಾ ಕಡೆಯೂ ಬಹುತೇಕ ಹೊಟ್ಟೆ ಪಾಡು ಮುಖ್ಯವಾಗಿರುತ್ತದೆಯೇ ಹೊರತು ಆ ಕೆಲಸದ ಆಸಕ್ತಿ, ವೃತ್ತಿಪರತೆ, ಕ್ರಿಯಾತ್ಮಕತೆ ಇರುವುದಿಲ್ಲ.

ಹಾಗೆಯೇ, ಸಣ್ಣ ಪುಟ್ಟ ಹೋಟೆಲುಗಳು, ಹಣ್ಣು ತರಕಾರಿ ಬಟ್ಟೆ ಚಪ್ಪಲಿಗಳು, ಬೀಡಿ ಸಿಗರೇಟು ಕಾಂಡಿಮೆಂಟ್ಸ್ ಮುಂತಾದ ವ್ಯಾಪಾರಗಳು ಸಹ ಯಾವುದೋ ಅನಿವಾರ್ಯ ಅಥವಾ ಕೌಟುಂಬಿಕ ನಿರ್ವಹಣೆಗೆ ಅದರ ಬಗ್ಗೆ ಹೆಚ್ಚಿನ ತಿಳಿವಳಿಕೆ ಇಲ್ಲದಿದ್ದರೂ ಹಣದ ಆಸೆಯಿಂದ ನಿರ್ವಹಿಸುತ್ತಾರೆ.

ಇಲ್ಲಿ ಎಲ್ಲಿಯೂ ನಿರ್ದಿಷ್ಟ ವಿದ್ಯಾರ್ಹತೆ, ವೃತ್ತಿಪರತೆ, ಆ ಕೆಲಸಗಳ ಮೇಲಿನ ಸಂಪೂರ್ಣ ನಿಯಂತ್ರಣ ಇರುವುದಿಲ್ಲ.

ಇದು ವೈಯಕ್ತಿಕ ವಿಷಯವಾದರೆ ಸಮಾಜದ ಮನಸ್ಥಿತಿ ಇನ್ನೂ ವಿಚಿತ್ರ. ಬಹಿರಂಗವಾಗಿ ಹೇಳುವುದು ಮಾತ್ರ ಯಾವ ಕೆಲಸವೂ ಮೇಲು ಕೀಳಲ್ಲ ಎಲ್ಲವೂ ಅದರದೇ ಪಾವಿತ್ರ್ಯತೆ ಹೊಂದಿದೆ. ಆದರೆ ಡಾಕ್ಟರ್ ಗೆ ಕೊಡುವ ಗೌರವ ಕೂಲಿಯವರಿಗೆ ಕೊಡುವುದಿಲ್ಲ, ವಕೀಲರಿಗೆ ಕೊಡುವ ಗೌರವ ಬಟ್ಟೆ ಇಸ್ತ್ರಿ ಮಾಡುವವರಿಗೆ ಕೊಡುವುದಿಲ್ಲ, ಶಿಕ್ಷಕರಿಗೆ ಕೊಡುವ ಗೌರವ ಚಪ್ಪಲಿ ಹೊಲೆಯುವವರಿಗೆ ಕೊಡುವುದಿಲ್ಲ, ಪೋಲಿಸರಿಗೆ ಕೊಡುವ ಗೌರವ ಬಟ್ಟೆ ಹೊಲಿಯುವವರಿಗೆ ಕೊಡುವುದಿಲ್ಲ, ಸೂಟು ಬೂಟಿನವರಿಗೆ ಕೊಡುವ ಗೌರವ ಪಂಚೆ ಕುರ್ತಾ ಅಥವಾ ಚಡ್ಡಿ ಬನಿಯನ್ ತೊಟ್ಟಿರುವ ರೈತರಿಗೆ ಕೊಡುವುದಿಲ್ಲ. ಧರ್ಮಾಧಿಕಾರಿಗಳಿಗೆ ಕೊಡುವ ಗೌರವ ಮನೆಗೆಲಸದವರಿಗೆ ಕೊಡುವುದಿಲ್ಲ. ಕಾರಿನಲ್ಲಿ ಓಡಾಡುವವರಿಗೆ ಕೊಡುವ ಮರ್ಯಾದೆ ಸೈಕಲ್ಲು ಬಸ್ಸಿನಲ್ಲಿ ಓಡಾಡುವವರಿಗೆ ಕೊಡುವುದಿಲ್ಲ. ಏಕೆ ಈ ಆತ್ಮವಂಚನೆ. ವೃತ್ತಿ ಏನೇ ಆಗಿರಲಿ ಮನುಷ್ಯ ಒಂದೇ ಅಲ್ಲವೇ, ಅರ್ಹತೆ, ಸಂಬಳ, ನಿಪುಣತೆ ಏನೇ ಇರಲಿ ವ್ಯಕ್ತಿ ಗೌರವ ಒಂದೇ ಇರಬೇಕಲ್ಲವೇ ?

ಇದು ಎಲ್ಲರ ಮನಸ್ಸಿನಲ್ಲೂ ಇರುವುದರಿಂದಲೇ ಕೆಲಸಗಳಲ್ಲೂ ಸಹ ಮೇಲು ಕೀಳು ಸೃಷ್ಟಿಯಾಗಿದೆ.

ಇನ್ನು ನಿರುದ್ಯೋಗ ಹೆಚ್ಚಾದಂತೆ ಓದಿಗೂ ವೃತ್ತಿಗೂ ಸಂಬಂಧವೇ ಇಲ್ಲದ ಹೊಟ್ಟೆ ಪಾಡಿಗಾಗಿ ಕಾಟಾಚಾರಕ್ಕೆ ತಾತ್ಕಾಲಿಕವಾಗಿ ಯಾವ ಯಾವುದೋ ಕೆಲಸಗಳನ್ನು ಮಾಡುವ ಮತ್ತೊಂದು ವರ್ಗವೂ ಇದೆ. ಸ್ನಾತಕೋತ್ತರ ಪದವೀಧರರು ಸೇಲ್ಸ್ ಮನ್ ಆಗಿ ಬಟ್ಟೆ ಚಪ್ಪಲಿ ಅಂಗಡಿಗಳಲ್ಲಿ,
ಸಿನಿಮಾ ಟಿಕೆಟ್ ಕೌಂಟರಿನಲ್ಲಿ ಅಥವಾ ಇನ್ನೂ ಕೆಳ ಹಂತದಲ್ಲಿ ಕೆಲಸ ಮಾಡುವುದು ಒಂದು ಕಡೆ,
ಹತ್ತನೇ ತರಗತಿ ಫೇಲ್ ಆದವರು ದುಡ್ಡಿನ ಬಲದಿಂದ ದೊಡ್ಡ ದೊಡ್ಡ ಶಿಕ್ಷಣ ಸಂಸ್ಥೆಗಳನ್ನು ತೆರೆದು ಅದಕ್ಕೆ ಡಾಕ್ಟರೇಟ್ ಪಡೆದವರನ್ನು ಸಹಾಯಕರಾಗಿ ನೇಮಿಸಿಕೊಂಡು ಅವರಿಗೆ ಪಾಠ ಹೇಳಿಕೊಡುವ ವಿಚಿತ್ರ ಸನ್ನಿವೇಶಗಳು ಇನ್ನೊಂದು ಕಡೆ ಸಹ ಈ ವ್ಯವಸ್ಥೆಯಲ್ಲಿದೆ.

ವೃತ್ತಿ ಪರತೆ, ವೃತ್ತಿ ನೈಪುಣ್ಯತೆ, ತಮಗೆ ಅತ್ಯಂತ ಸಂತೋಷಕರ ವೃತ್ತಿ, ತಮ್ಮ ಸಾಧನೆಯ ಗುರಿ ಹೊಂದಿರುವ ವೃತ್ತಿ ಸಿಗುವುದು ತುಂಬಾ ಅಪರೂಪ.

ನಮ್ಮ ವ್ಯಕ್ತಿತ್ವ ನಾವು ಮಾಡುವ ಕೆಲಸದಲ್ಲಿ ಉಪಯೋಗಕ್ಕೆ ಬಂದರೆ ಅದು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಹೊಟ್ಟೆ ಪಾಡಿಗೆ ಮಾಡುವಾಗ ನಿರಾಸಕ್ತಿ,‌ ಅಸಹನೆ, ಬೇಜವಾಬ್ದಾರಿ, ಕಾಮ್ ಚೋರ್ ಸ್ವಭಾವ ಮುಂತಾದ ಗುಣಲಕ್ಷಣಗಳು ಅದರ ಗುಣಮಟ್ಟವನ್ನೇ ಕುಗ್ಗಿಸುತ್ತದೆ. ಇದು ದೇಶದ ಒಟ್ಟು ಉತ್ಪನ್ನಗಳು ಮತ್ತು ಸೇವೆಗಳ ‌ತೃಪ್ತಿದಾಯಕ ಮಟ್ಟ ಮುಟ್ಟದಿರಲು ಕಾರಣವಾಗಿದೆ.

ತಳಮಟ್ಟದಲ್ಲಿ ಬಹಳಷ್ಟು ಯುವಕರನ್ನು ನೋಡಿದ್ದೇನೆ. ಭವಿಷ್ಯದಲ್ಲಿ ಹಲವಾರು ಸಾಧನೆಯ ಕನಸುಗಳನ್ನು ಕಾಣುವ ಅವರು ಕೆಲವೇ ವರ್ಷಗಳಲ್ಲಿ ಯಾವುದೋ ಅನಿವಾರ್ಯತೆಗೆ ಬಲಿಯಾಗಿ ಹೊಟ್ಟೆ ಪಾಡಿಗಾಗಿ ಇನ್ನೇನೋ ಕೆಲಸವನ್ನು ಮಾಡುತ್ತಾ ನಿರಾಸೆಯಿಂದ ಬದುಕಿನ ವಿಫಲತೆಯನ್ನು ಹಳಿಯುತ್ತಾ ಜೀವನ ಮಾಡುತ್ತಿದ್ದಾರೆ.

ಚಪ್ಪಲಿ ಹೊಲೆಯುವುದು ಕನಿಷ್ಠ ಕೆಲಸವಲ್ಲದಿದ್ದರೂ ಪದವೀಧರರೊಬ್ಬರು ಅದನ್ನು ಮಾಡುವಾಗ ಅನುಭವಿಸುವ ಮಾನಸಿಕ ಹಿಂಸೆ ಅದನ್ನು ಅನುಭವಿಸುವವರೇ ಬಲ್ಲರು.

ಹೊಟ್ಟೆ ತುಂಬಿಸಿಕೊಳ್ಳುವುದು ಬಡವರ ಜೀವನದ ಧ್ಯೇಯ, ಸ್ವಂತ ಮನೆ ಕಟ್ಟಿಕೊಳ್ಳುವುದು ಮಧ್ಯಮ ವರ್ಗದವರ ಧ್ಯೇಯ, ಸಾಧನೆಯ ಬಗ್ಗೆ ಯೋಚಿಸುವುದು ಯಾವಾಗ…..

ಕಾರ್ಮಿಕ ದಿನದ ಈ ಸಂದರ್ಭದಲ್ಲಿ ನಮ್ಮ ಇಡೀ ಸಮಾಜ ಈ ನಿಟ್ಟಿನಲ್ಲಿ ಯೋಚಿಸಿ ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ಪ್ರಯತ್ನಿಸಲಿ ಎಂದು ಆಶಿಸುತ್ತಾ…….

ಪ್ರಬುಧ್ಧ ಮನಸ್ಸು ಪ್ರಬುಧ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಎಚ್. ಕೆ.
9663750451…..
9844013068…….
[02/05, 5:48 pm] immagepark9: ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ…..

ಆದರೆ,
ಭಾರತದ ಸಂಸ್ಕೃತಿಯ ಹಿನ್ನೆಲೆಯಲ್ಲಿ
ಖ್ಯಾತ ಮನಃಶಾಸ್ತ್ರಜ್ಞ ಯಾರಿರಬಹುದು ?

ನನ್ನ ದೃಷ್ಟಿಯಲ್ಲಿ ಅದು ಸಿದ್ದಾರ್ಥನೆಂಬ ಗೌತಮ ಬುದ್ಧ……………

ಜನಸಂಖ್ಯೆಯೇ ಅತಿ ವಿರಳವಾಗಿದ್ದ, ಸಂಪರ್ಕ ಸಂವಹನಗಳು ಅತ್ಯಂತ ಕಡಿಮೆ ಪ್ರಮಾಣದಲ್ಲಿದ್ದ, ಆಧುನಿಕ ತಂತ್ರಜ್ಞಾನದ ಯಾವ ಲಕ್ಷಣಗಳೂ ಗೋಚರಿಸದ, ಬದುಕಿನ ಸಂಕೀರ್ಣತೆಯಿಂದ ದೂರವಿದ್ದ, ಆ ಕಾಲದಲ್ಲಿಯೇ ಮನುಷ್ಯನ ಮನಸ್ಸುಗಳ ಜಾಡು ಹಿಡಿದು ಅಲ್ಲಿನ ತವಕ ತಲ್ಲಣಗಳಿಗೆ ಉತ್ತರ ಹುಡುಕಲು ಪ್ರಯತ್ನಿಸಿದ ಗೌತಮ ಅಸಾಮಾನ್ಯನೇ ಹೌದು……

ನಿಜಕ್ಕೂ ಈಗ ನಾವೆಲ್ಲರೂ ಚಿತ್ರಪಟ, ಶಿಲ್ಪ ಕಲೆಗಳಲ್ಲಿ ನೋಡುತ್ತಿರುವ ಆ ಸೌಮ್ಯ ಮೂರ್ತಿ ಬುದ್ಧ ಅಷ್ಟೊಂದು ಸೌಮ್ಯನೇ ? ಅಷ್ಟೊಂದು ಶಾಂತ ಸ್ವಭಾವದವನೆ ?
ಅಥವಾ ಎಲ್ಲರೂ ಭಾವಿಸಿರುವಂತೆ ಆತನ ಜ್ಞಾನೋದಯದ ನಂತರ ಮೂಡಿದ ಭಾವ ಈ ಪ್ರಶಾಂತತೆಯೇ ? ಅಥವಾ ಯಾರೋ ಕಲಾವಿದರ ಕಲ್ಪನೆಯಲ್ಲಿ ಮೂಡಿದ ಚಿತ್ರವೇ ?….

ಏಕೆಂದರೆ,
ಬದುಕಿನ ಅನುಭವದಲ್ಲಿ ಬುದ್ದನೆಂಬ ವ್ಯಕ್ತಿ ಹೇಳಿರುವ ಸಂದೇಶಗಳು ನಿಜಕ್ಕೂ ಅತ್ಯಂತ ಪರಿಣಾಮಕಾರಿ ಅದ್ಭುತ, ಆಶ್ಚರ್ಯ ಮತ್ತು ವಾಸ್ತವಕ್ಕೆ ತೀರಾ ಹತ್ತಿರವಿದೆ…..

ಒಬ್ಬ ವ್ಯಕ್ತಿಯ ಜೀವನದಲ್ಲಿ ಅಲ್ಲೋಲ ಕಲ್ಲೋಲ ಉಂಟುಮಾಡುವ , ತೀಕ್ಷ್ಣ ಏರಿಳಿತಗಳಿಗೆ ಕಾರಣವಾಗುವ, ಸುಲಭವಾಗಿ ಪರಿಹಾರ ಕಾಣದೆ ಕಾಡುವ ದ್ವಂಧ್ವಗಳು, ಅಸಹಾಯಕ ಮನಸ್ಥಿತಿಯ, ಒಳ್ಳೆಯ, ಕೆಟ್ಟ, ವಿಕೃತ ಭಾವನೆಗಳನ್ನು ಅನುಭವಿಸಿದರೆ ಮಾತ್ರ ಸಿಗಬಹುದಾದ ಜ್ಞಾನ ಪಡೆದಿದ್ದವನು ಗೌತಮ…..

ಆತನ ಚಿಂತನೆಗಳು ಮನುಷ್ಯನ ಮೆದುಳು ಮನಸ್ಸುಗಳನ್ನು ಅತ್ಯಂತ ಹತ್ತಿರದಿಂದ ಗ್ರಹಿಸಿರುವಂತೆ ಭಾಸವಾಗುತ್ತದೆ.
ಆ ಕಾರಣದಿಂದಾಗಿಯೇ ಬುದ್ಧ ಭಾರತೀಯ ಮನಸ್ಸುಗಳ ಅತ್ಯಂತ ಮಹತ್ವದ ಮನಶಾಸ್ತ್ರಜ್ಞ ಎಂದು ಹೇಳಿರುವುದು…..

ಬುದ್ದನ ಜ್ಞಾನ,
ಕೇವಲ ಓದು, ಅಧ್ಯಯನ, ಚಿಂತನೆಗಳಿಂದ ಮಾತ್ರ ರೂಪಗೊಳ್ಳದೆ ಅನುಭವಗಳ ಕುಲುಮೆಯಲ್ಲಿ ಮೂಡಿದ ಅರಿವು. ಅದೇ ಕಾರಣಕ್ಕಾಗಿ ಹಲವಾರು ಶತಮಾನಗಳ ನಂತರವೂ ಬುದ್ಧ ಮುಖ್ಯವಾಗುತ್ತಿರುವುದು….

ಬುದ್ಧ ಪೂರ್ಣಿಮೆಯ ಸಂದರ್ಭದಲ್ಲಿ,
ಬುದ್ದನ ಧ್ಯಾನದಲ್ಲಿ,
ಬುದ್ಧನ ಸಂದೇಶಗಳನ್ನು ಮನಃಶಾಸ್ತ್ರೀಯ ದೃಷ್ಟಿಕೋನದಿಂದ ನೋಡಿದರೆ ನಮಗೆ ನಾವು ಹೆಚ್ಚು ಸ್ಪಷ್ಟವಾಗಬಹುದು………
ಅದಕ್ಕಿಂತ ಮುಖ್ಯವಾಗಿ ನಮ್ಮ ಮಾನಸಿಕ ನೋವುಗಳನ್ನು ಕಡಿಮೆ ಮಾಡಿಕೊಂಡು ಸಂತೋಷ ನೆಮ್ಮದಿಯ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಸಹಾಯಕವಾಗಬಹುದು ಎಂಬ ಆಶಯದಿಂದ…………

ಬುದ್ದತ್ವದೆಡೆಗೆ ಹೆಜ್ಜೆ ಹಾಕುತ್ತಾ…..

ಬುದ್ದ ಪೂರ್ಣಿಮೆಯ ಬೆಳದಿಂಗಳಲ್ಲಿ ಬುದ್ದನನ್ನೇ ಹುಡುಕುತ್ತಾ…..

ಈ ನೆಲದ ನಿಜವಾದ ಮಣ್ಣಿನ ಮಗ ಬುದ್ದ,
ಈ ಮಣ್ಣಿನ ವಾಸ್ತವದ ಸಾಂಸ್ಕೃತಿಕ ವಕ್ತಾರ ಬುದ್ಧ….

ಬುದ್ದನಂತ ಕೆಲವು ಚಿಂತಕರು ಈ ಜಗತ್ತಿನಲ್ಲಿ ಆಗಿಹೋಗಿದ್ದಾರೆ. ಆದರೆ ಬುದ್ದನ ಹೆಚ್ಚುಗಾರಿಗೆ ಆತನ ಪ್ರಜ್ಞೆ ಟಿಸಿಲೊಡೆಯುವುದು ಸ್ವತಃ ತನ್ನ ದೇಹ ಮತ್ತು ಮನಸ್ಸುಗಳ ದಂಡನೆಯಿಂದ.

ಅಂದರೆ ಅದು ಎರವಲು ಜ್ಞಾನವಲ್ಲ ಆಂತರ್ಯದ ಸೃಷ್ಟಿ. ಬಹುಶಃ ಆ ಕಾರಣದಿಂದಲೇ ಬುದ್ದ ಈಗಲೂ ಸಾಕಷ್ಟು ಜನರ ಬೆಳಗಿನ ಶುಭೋದಯದ ಮೊದಲ ಬೆಳಕು…..

ಬುದ್ದ ಬದುಕನ್ನು ಹುಡುಕಿದರೆ ನಾವು ಬುದ್ದನನ್ನು ಹುಡುಕುತ್ತಿದ್ದೇವೆ. ಬುದ್ದನಿಗೆ ಬದುಕಿನ ಜ್ಞಾನೋದಯವಾದರೆ ನಮಗೆ ಬುದ್ಧ ಸಿಗುತ್ತಲೇ ಇಲ್ಲ. ಕಾರಣ ಬುದ್ದ ನಮ್ಮೊಳಗೆ ಇಳಿಯಲು ಸ್ಥಳಾವಕಾಶವೇ ಇಲ್ಲದಂತಾಗಿದೆ…..

ಕ್ರಿಸ್ತ ಪೂರ್ವದ ಬುದ್ದ – 21 ನೆಯ ಶತಮಾನದ ನಾವು ಈ ಬೆಳದಿಂಗಳಲ್ಲಿ ಮುಖಾಮುಖಿಯಾದಾಗ….

ಧ್ಯಾನಸ್ಥ ಬುದ್ದ ಟ್ರಾಫಿಕ್ ನಲ್ಲಿ ಕಳೆದುಹೋದ…..
ನಿಸ್ವಾರ್ಥ ಬುದ್ದ ಭ್ರಷ್ಟಾಚಾರದಲ್ಲಿ ಮುಳುಗಿಹೋದ….
ಅಹಿಂಸೆಯ ಬುದ್ದ ಪರಮಾಣು ಬಾಂಬುಗಳಲ್ಲಿ ಅಡಗಿಹೋದ…
ಜ್ಞಾನದ ಬದ್ದ ಅಂಕಗಳಲ್ಲಿ ಮರೆಯಾಗಿ ಹೋದ….
ನಿರ್ಲಿಪ್ತ ಬುದ್ದ ಹಣ ಆಸ್ತಿ ಜಮೀನುಗಳಲ್ಲಿ ಹುದುಗಿ ಹೋದ…..

ಎಲ್ಲಿಯಾದರೂ ಸಿಕ್ಕಾನೆಯೇ ಬುದ್ದ……

ಸುಖ ಭೋಗಗಳನ್ನು ತ್ಯಜಿಸಿ ಇನ್ನೇನೋ ಹುಡುಕುತ್ತಾ ಸಿದ್ದಾರ್ಥ ಎಂಬ ಮನುಷ್ಯ ಬುದ್ಧನಾದ…….

ಬುದ್ದನನ್ನು ಹುಡುಕುತ್ತಾ ಮತ್ತೊಬ್ಬ ಸುಖ ಭೋಗಗಳ ದಾಸನಾದ…

ಸಿದ್ದಾರ್ಥನನ್ನು ಹುಡುಕಬಹುದು, ಆತ ಸಿಗುತ್ತಾನೆ.
ಆದರೆ ಬುದ್ದನನ್ನು ಹುಡುಕುವುದೆಲ್ಲಿ,
ಒಳಗೋ ಹೊರಗೋ…….

ಕ್ರಿಸ್ತ ಪೂರ್ವದ ಬುದ್ಧನೆಲ್ಲಿ,
2026 ರ ಬುದ್ದು ( ದಡ್ಡ ) ಎಲ್ಲಿ,

ಸ್ವಂತ ಮನೆಯಲ್ಲಿ ಕುಳಿತು ಆಹಾರ ಸೇವಿಸುತ್ತಾ ಟಿವಿ ನೋಡುತ್ತಾ ಬುದ್ದನನ್ನು ಹುಡುಕಿದನೊಬ್ಬ….

ಲೈಬ್ರರಿಯಲ್ಲಿ ಕುಳಿತು ಪುಸ್ತಕ ಓದುತ್ತಾ, ಬರೆಯುತ್ತಾ ಹುಡುಕಿದ ಬುದ್ದನನ್ನು ಇನ್ನೊಬ್ಬ…..

ಅಧ್ಯಯನ ಮಾಡುತ್ತಾ, ಚಿಂತಿಸುತ್ತಾ ಉಪನ್ಯಾಸ ನೀಡುತ್ತಾ ಬುದ್ದನನ್ನು ಹುಡುಕಿದ ಮಗದೊಬ್ಬ….

ಪ್ರಶಸ್ತಿಗಾಗಿ, ಪ್ರಚಾರಕ್ಕಾಗಿ, ಪ್ರಖ್ಯಾತಿಗಾಗಿ, ಬುದ್ದಿಯ ಪ್ರದರ್ಶನಕ್ಕಾಗಿ ಹುಡುಕುತ್ತಲೇ ಇದ್ದಾರೆ ಅನೇಕ ಸಿದ್ದಾರ್ಥರು ಬುದ್ದನನ್ನು…….

ಸಿಕ್ಕಾನೆಯೇ ಬುದ್ದ……

ಕಾಡು ಮೇಡುಗಳಲ್ಲಿ ಅಲೆದು, ದೇಹ ಮನಸ್ಸುಗಳನ್ನು ದಂಡಿಸಿ, ಚರ್ಚೆ ಸಂವಾದ ಮಂಥನಗಳನ್ನು ಮಾಡಿ, ಧ್ಯಾನದ ಉತ್ತುಂಗ ತಲುಪಿ ಬುದ್ದನಾದವನನ್ನು ಹುಡುಕುವುದು ಸುಲಭವೇ……

ಬೆಳಗಿನ ತಿಂಡಿ, ಮಧ್ಯಾಹ್ನದ ಊಟ, ಸಂಜೆಯ ಉಪಹಾರ, ರಾತ್ರಿಯ ಭೋಜನ ಮಾಡಿ, ಬೆಚ್ಚಗಿನ ಮನೆಯಲ್ಲಿ, ಕುಟುಂಬದೊಂದಿಗೆ, ನಾಳಿನ ಯೋಚನೆಗಳೊಂದಿಗೆ, ಸ್ನಾನ ಶೌಚಗಳ ಅನುಕೂಲದೊಂದಿಗೆ, ಮೈಥುನದ ಸುಖದೊಳಗೆ, ಮೊಬೈಲ್ ಮಾಯೆಯೊಳಗೆ ಸಿಕ್ಕಾನೆಯೇ ಬುದ್ದ…..

ದೇಹದಲ್ಲಿ ಅಡಗಿದ್ದಾನೆಯೇ ಬುದ್ದ,
ಮನಸ್ಸಿನಲ್ಲಿ ಅಡಗಿದ್ದಾನೆಯೇ ಬುದ್ದ,
ಹೃದಯದಲ್ಲಿ ಅಡಗಿದ್ದಾನೆಯೇ ಬುದ್ದ,…

ಜ್ಞಾನದಿಂದ ಸಿಗುವನೇ ಬುದ್ದ,
ಭಕ್ತಿಯಿಂದ ಸಿಗುವನೇ ಬುದ್ದ,
ಕರ್ಮದಿಂದ ಸಿಗುವನೇ ಬುದ್ದ,
ಯೋಗ ಧ್ಯಾನಗಳಿಂದ ಸಿಗುವನೇ ಬುದ್ದ……

ಇವುಗಳಿಂದ ದೇವರನ್ನು ಹುಡುಕಬಹುದು,
ಆದರೆ ಬುದ್ದನನ್ನು ಹುಡುಕಬಹುದೇ….

ಹೌದು, ಬುದ್ದನನ್ನು ಹುಡುಕಬಹುದು, ಎಲ್ಲಿ ? ಹೇಗೆ ?….

ಮಾನವೀಯ ಮೌಲ್ಯಗಳಲ್ಲಿ ಬುದ್ದನನ್ನು ಹುಡುಕಬಹುದು…..

ಪ್ರೀತಿಯಲ್ಲಿ,
ತ್ಯಾಗದಲ್ಲಿ,
ಕರುಣೆಯಲ್ಲಿ,
ವಿನಯದಲ್ಲಿ,
ಸಭ್ಯತೆಯಲ್ಲಿ,
ಕ್ಷಮಾಗುಣದಲ್ಲಿ,
ಸ್ನೇಹದಲ್ಲಿ,
ಸಂಬಂಧಗಳಲ್ಲಿ,
ತಾಳ್ಮೆಯಲ್ಲಿ,
ಸಂಯಮದಲ್ಲಿ,
ಧೈರ್ಯದಲ್ಲಿ,
ನಿರಂತರ ಪ್ರಯತ್ನದಲ್ಲಿ,……

ಬುದ್ದ ಸಿಕ್ಕರೂ ಸಿಗಬಹುದು…

ವೈರಸ್ಸಿನ ಭಯದಲ್ಲಿ,
ಸಾವಿನ ಆತಂಕದಲ್ಲಿ,
ಸೋಲುವ ಭೀತಿಯಲ್ಲಿ,
ಕುಟುಂಬದ ಮೋಹದಲ್ಲಿ,
ಹಣದ ದಾಹದಲ್ಲಿ,
ಅಧಿಕಾರದ ಗುಂಗಿನಲ್ಲಿ,
ಪ್ರಚಾರದ ಅಮಲಿನಲ್ಲಿ,
ಸಾಧನೆಯ ಅಹಂಕಾರದಲ್ಲಿ….

ಬುದ್ದನನ್ನು ಹುಡುಕುವ ನಾಟಕವೇಕೆ……

ನಾನು ಸಹ ಹುಡುಕುತ್ತಲೇ ಇದ್ದೇನೆ ಬುದ್ದನನ್ನು,
ನನ್ನೊಳಗಿನ ಬೆಳಕನ್ನು ಬೆಳಗಿಸುವಾ ಬುದ್ದನನ್ನು….

ಸಿಕ್ಕಿಲ್ಲ ಆತ ಇನ್ನೂ……
*******************************
ಯಾರೋ ನೀನು ಸಿದ್ಧಾರ್ಥ,

ಒಂದು ರಾಜ್ಯದ ರಾಜಕುಮಾರನಂತೆ,
ಕಷ್ಟ, ನೋವು, ಬೇಸರ ಏನೂ ಗೊತ್ತಿಲ್ಲದೆ ಬೆಳೆದ ಯುವರಾಜನಂತೆ,

ಹೆಂಡತಿ – ಮಕ್ಕಳೊಂದಿಗೆ ಹಾಯಾಗಿದ್ದ ಸುಖಪುರುಷನಂತೆ,

ಆದರೆ ಅದೇನಾಯಿತೋ ಸಿದ್ಧಾರ್ಥ ನಿನಗೆ,

ಒಮ್ಮೆ ರಾಜ್ಯವನ್ನೆಲ್ಲಾ ಸುತ್ತಾಡುವಾಗ ಜನರ ಬದುಕು ನೋಡಿ ಗಾಬರಿಯಾದೆಯಂತೆ,

ಕಷ್ಟ, ನೋವು, ರೋಗ, ಸಾವುಗಳು ನಿನ್ನನ್ನು ಕಾಡಲಾರಂಬಿಸಿದವಂತೆ,

ಅದಕ್ಕೆ ಕಾರಣಗಳೇನು, ಪರಿಹಾರಗಳೇನು ಎಂದು ಮನಸ್ಸು ನಿನ್ನನ್ನು ಗಲಿಬಿಲಿಗೊಳಿಸಿತಂತೆ,

ಆಗ ಒಂದು ದಿನ ಇದ್ದಕ್ಕಿದ್ದಂತೆ ರಾಜ್ಯ, ಸಂಸಾರ, ಸುಖ ಭೋಗ ಎಲ್ಲಾ ತೊರೆದು ರಾತ್ರೋರಾತ್ರಿ ಹೊರಟೆಯಂತೆ,

ಬೀದಿಬೀದಿಗಳನ್ನ, ರಾಜ್ಯ ಪ್ರದೇಶಗಳನ್ನ, ಅಲೆಮಾರಿಯಂತೆ ಸುತ್ತಾಡಿದೆಯಂತೆ,

ಮಹಾನ್ ಪಂಡಿತ, ಪಾಮರ, ಜ್ಞಾನಿಗಳನ್ನು ಭೇಟಿ ಮಾಡಿ ಚರ್ಚಿಸಿದೆಯಂತೆ,

ಭಿಕ್ಷುಕನಂತೆ ಭಿಕ್ಷೆ ಬೇಡಿ ತಿಂದು ಬದುಕಿದೆಯಂತೆ,

ಉಪವಾಸವಿದ್ದು ತಿಂಗಳುಗಟ್ಟಲೆ ದೇಹ ದಂಡಿಸಿದೆಯಂತೆ,

ವರ್ಷಾನುಗಟ್ಟಲೆ ಕಾಡು ಮೇಡುಗಳಲ್ಲಿ ಅಲೆದು ಧ್ಯಾನ, ತಪಸ್ಸು ಮಾಡಿದೆಯಂತೆ,

ಒಂದು ದಿನ ನಿನಗೆ ಭೋದಿವೃಕ್ಷದ ಕೆಳಗೆ ಜ್ಞಾನೋದಯವಾಯಿತಂತೆ…….

ಅಬ್ಬಾ,….

ಅದೇನು ಜ್ಞಾನೋದಯವಾಯಿತೋ ಅಥವಾ ನೀನೇ ಜ್ಞಾನವಾದೆಯೋ,
ಅಲ್ಲಿಂದ ಆದೆ ನೋಡು ನೀನು ಗೌತಮ ಬುದ್ದ,

ಯಪ್ಪಾ,
ಅದೇನು ಚಿಂತನೆ, ಅದೇನು ಜ್ಞಾನ, ಅದೇನು ಅರಿವು,

ಯಾವ ಡಾಕ್ಟರುಗಳು, ಯಾವ ಮನಶಾಸ್ತ್ರಜ್ಞರು, ಯಾವ ಜೀವ ವಿಜ್ಞಾನಿಗಳಿಗೂ,
ಸಾಧ್ಯವಾಗದ ಮನುಷ್ಯನ ಆತ್ಮ, ಮೆದುಳು, ಮನಸ್ಸು, ಭಾವನೆ, ಜೀವನಕ್ರಮವನ್ನು
ಅರೆದು ಕುಡಿದು ಅದರ ಎಲ್ಲವನ್ನೂ ತೆರೆದಿಟ್ಟ ಮಹಾನ್ ವ್ಯಕ್ತಿಯಾದೆ,

ಜನರ ಬದುಕು ಇಷ್ಟೊಂದು ಸಂಕೀರ್ಣವಾಗಿರದ, ನಾಗರಿಕತೆಯ ಮೊದಲ ಮೆಟ್ಟಿಲು ಏರುತ್ತಿದ್ದ,
ಆ ದಿನಗಳಲ್ಲೇ ಮನುಷ್ಯ ಜನಾಂಗದ ಇಡೀ ವ್ಯಕ್ತಿತ್ವವನ್ನು ಅನಾವರಣಗೊಳಿಸಿದ ಅದ್ಭುತ ವ್ಯಕ್ತಿಯಾದೆ,

ನಿನ್ನ ಒಂದೊಂದು ಮಾತುಗಳು ಅರಗಿಸಿಕೊಳ್ಳುವುದೇ ಕಷ್ಟ,

ಕಲ್ಲಿನ ಕೆತ್ತನೆಯಿಂದ ಹಿಡಿದು ಫೇಸ್ ಬುಕ್ – ವಾಟ್ಸ್ ಆ್ಯಪ್ – ಎಕ್ಸ್ ತನಕ ಎಲ್ಲಾ ಸ್ಥಳಗಳಲ್ಲಿ ನಿನ್ನ ಮಾತುಗಳಿಗೇ ಪ್ರಥಮ ಸ್ಥಾನ.

ಅಷ್ಟೇ ಏಕೆ, ಪಾಶ್ಚಾತ್ಯ, ಪೌರಾತ್ಯ ಸಂಸ್ಕೃತಿಗಳನ್ನ,
ವಿಶ್ವದ ಬಹುತೇಕ ಧರ್ಮಗಳನ್ನು, ಅಸಾಮಾನ್ಯ ಗ್ರಂಥಗಳನ್ನು, ಅನೇಕ ದೇಶಗಳ ಸಂವಿಧಾನಗಳನ್ನ,
ಓದಿ ಅರ್ಥ್ಯೆಸಿಕೊಂಡಿದ್ದ ಬಾಬಾ ಅಂಬೇಡ್ಕರ್ ಅವರೇ ನಿನಗೆ ಶರಣಾದರೆಂದರೆ ನೀನೇನು ಮನುಷ್ಯನೇ,

ಪ್ರಕೃತಿಯ ಅದ್ಭುತ, ಆಶ್ಚರ್ಯಕರ, ಸೃಷ್ಟಿಯಾದ ಗೌತಮ ಬುದ್ದನೇ,
ನಿನ್ನನ್ನು ಒಂದೇ ಒಂದು ಬಾರಿ ನೋಡಬೇಕೆನಿಸಿದೆ, ಮಾತನಾಡಬೇಕಿನಿಸಿದೆ,

ಈ ಹುಚ್ಚರ ಸಂತೆಯಲ್ಲಿ ನಿನ್ನನ್ನು ನಿಲ್ಲಿಸಿ ಎಲ್ಲರಿಗೂ ಹೇಳಬೇಕಿದೆ,

ಮನುಷ್ಯರೆಂದರೆ ಏನೆಂದು ಈ ಅನಾಗರಿಕರಿಗೆ,

ಬಾರೋ ಗೌತಮ ಬುದ್ದನಾದ ಸಿದ್ಧಾರ್ಥನೇ, ಮತ್ತೊಮ್ಮೆ ಹುಟ್ಟಿ ಬಾ,

ನನಗೆ ಯೋಗ್ಯತೆ ಇಲ್ಲದಿದ್ದರೂ ಹೇಳುತ್ತಿದ್ದೇನೆ,
ಎಲ್ಲರಿಗೂ ಬುದ್ದ ಪೂರ್ಣಿಮೆಯ ಶುಭಾಶಯಗಳು…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಎಚ್. ಕೆ.
9663750451……
9844013068……

Buddha Purnima Kannada Gautama Buddha Teachings. ಅಹಿಂಸೆ ಆಧ್ಯಾತ್ಮಿಕ ಲೇಖನ ಕಾರ್ಮಿಕ ದಿನ ಗೌತಮ ಬುದ್ಧ ಜ್ಞಾನ ಜ್ಞಾನೋದಯ ಬುದ್ಧ ಪೂರ್ಣಿಮೆ ಬುದ್ಧ ಪೂರ್ಣಿಮೆ 2026 ಬುದ್ಧನ ಸಂದೇಶಗಳು ಮನಃಶಾಸ್ತ್ರ ಮೇ ದಿನ. ರೈತ ವಿವೇಕಾನಂದ ಎಚ್. ಕೆ. ಶ್ರಮಜೀವಿ ಸಾಮಾಜಿಕ ಕಳಕಳಿ ಸಿದ್ಧಾರ್ಥ
Follow on Facebook Follow on Instagram
Share. Facebook Twitter WhatsApp Telegram
Previous Articleಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆ -ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಕ್ರೋಶ
Next Article ಇಂದು ದಿನಾಂಕ 03/05/2026 ರ ನಿತ್ಯ ಭವಿಷ್ಯ 👇
Times Of Bayaluseeme Staff
  • Website

Related Posts

ಗ್ಯಾಸ್ಟ್ರಿಕ್ ಮತ್ತು ಮುಟ್ಟಿನ ನೋವಿಗೆ ರಾಮಬಾಣ ‘ಇಂಗು’: ಬಳಸುವ ಸರಿಯಾದ ವಿಧಾನ ಇಲ್ಲಿದೆ!

June 16, 2026

ಮಳೆಗಾಲದಲ್ಲಿ ದಿನಕ್ಕೊಂದು ಕಪ್ ತುಳಸಿ ಚಹಾ ಕುಡಿದರೆ ಈ 6 ಕಾಯಿಲೆಗಳು ಹತ್ತಿರವೂ ಸುಳಿಯಲ್ಲ!

June 10, 2026

ಉಜ್ವಲ ಗ್ರಾಹಕರಿಗೆ ಬಿಗ್ ಶಾಕ್: ಇನ್ಮುಂದೆ ವರ್ಷಕ್ಕೆ ಕೇವಲ 4 ಸಿಲಿಂಡರ್‌ಗೆ ಮಾತ್ರ ಸಬ್ಸಿಡಿ!

June 9, 2026
Add A Comment
Leave A Reply Cancel Reply

Advertisement
Latest Posts

17/06/2026 ರ ನಿತ್ಯ ಭವಿಷ್ಯ (ಬುಧವಾರ)

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ; 15 ಲಕ್ಷ ಗಿಡ ನೆಡಲು ಬಿಡಿಎ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

16/06/2026 ರ ನಿತ್ಯ ಭವಿಷ್ಯ

ಗ್ಯಾಸ್ಟ್ರಿಕ್ ಮತ್ತು ಮುಟ್ಟಿನ ನೋವಿಗೆ ರಾಮಬಾಣ ‘ಇಂಗು’: ಬಳಸುವ ಸರಿಯಾದ ವಿಧಾನ ಇಲ್ಲಿದೆ!

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.