*ತಾಲೂಕ ಕಚೇರಿ ಮೇಲೆ ಲೋಕಾಯುಕ್ತ ದಾಳಿ – ಭ್ರಷ್ಟಾಚಾರದ ದೂರು ಕೇಳಿ ಬಂದ ಹಿನ್ನಲೆ ಲೋಕಾ ದಾಳಿ*
ಚಿತ್ರದುರ್ಗ: ಚಳ್ಳಕೆರೆ ಸಬ್ ರಿಜಿಸ್ಟ್ರಾರ್ ಹಾಗೂ ತಾಲೂಕು ಕಚೇರಿಯ ಸಿಬ್ಬಂದಿಗಳ ಮೇಲೆ ಭ್ರಷ್ಟಾಚಾರದ ದೂರುಗಳು ಕೇಳಿ ಬಂದ ಹಿನ್ನಲೆ ಇಂದು ತಾಲೂಕು ಕಚೇರಿ ಹಾಗೂ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.
ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಆಸ್ತಿ ನೋಂದಣಿ ಸೇರಿದಂತೆ ಹಲವು ಸೇವೆ ನೀಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ನೂರಾರು ದೂರುಗಳು ಲೋಕಾಯುಕ್ತಕ್ಕೆ ನೀಡಿದ ಹಿನ್ನಲೆ ಲೋಕಾಯುಕ್ತ ಎಸ್ಪಿ ವಾಸುದೇವ್ ನೇತೃತ್ವದಲ್ಲಿ ಇಂದು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿ ನಡೆಸಿದರು. ಎರಡು ತಂಡಗಳಲ್ಲಿ ಆಗಮಿಸಿದ ಅಧಿಕಾರಿಗಳು ತಾಲೂಕು ಕಚೇರಿ ಹಾಗೂ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕಡತ ಪರಿಶೀಲನೆ ನಡೆಸಿ ತಾಲೂಕು ಕಚೇರಿ ಸಿಬ್ಬಂದಿಗೆ ಚಳಿ ಬಿಡಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



