Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ದಿನದ ವಿಶೇಷ»ಚಿತ್ರದುರ್ಗ ಜಿಲ್ಲಾ ಜನತಾದಳ (ಜಾತ್ಯಾತೀತ) ಚಿತ್ರದುರ್ಗ ನಗರದಲ್ಲಿ ಬೀದಿ ಗೀಳಿದು ಹೋರಾಟ
ದಿನದ ವಿಶೇಷ

ಚಿತ್ರದುರ್ಗ ಜಿಲ್ಲಾ ಜನತಾದಳ (ಜಾತ್ಯಾತೀತ) ಚಿತ್ರದುರ್ಗ ನಗರದಲ್ಲಿ ಬೀದಿ ಗೀಳಿದು ಹೋರಾಟ

Times of bayaluseemeBy Times of bayaluseemeJune 30, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಕಾಂಗ್ರೆಸ್ ಸರ್ಕಾರದಲ್ಲಿನ ವಸತಿ ಸಚಿವ ಜಮೀರ್ ಆಹಮದ್‍ರವರನ್ನು ಸಚಿವ ಸಂಪುಟದಿಂದ ವಜಾ ಗೊಳಿಸುವಂತೆ ಆಗ್ರಹಿಸಿಚಿತ್ರದುರ್ಗ ಜಿಲ್ಲಾ ಜನತಾದಳ (ಜಾತ್ಯಾತೀತ) ಚಿತ್ರದುರ್ಗ ನಗರದಲ್ಲಿ ಬೀದಿ ಗೀಳಿದು ಹೋರಾಟ, ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಲಾಯಿತು.
ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಪ್ರತಿಭಟನೆಯನ್ನು ನಡೆಸಿದ ಜೆಡಿಎಸ್‍ನ ಪದಾಧಿಕಾರಿಗಳು,ಕಾರ್ಯಕರ್ತರು ಓನಕೆ ಒಬವ್ವ ಪ್ರತಿಮೆ ಮುಂಭಾಗದಲ್ಲಿ ಮಾನವ ಸರಪಳಿ ಯನ್ನು ನಿರ್ಮಾಣ ಮಾಡಿ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಜಮೀರ ಆಹಮದ್ ವಿರುದ್ದ ಘೋಷಣೆ ಗಳನ್ನು ಕೂಗಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್, ಬಡವರಿಗೆ ಮನೆಗಳನ್ನು ಹಂಚುವ ಸಮಯದಲ್ಲಿಅವರಿಂದ ಹಣವನ್ನು ಪಡೆಯುತ್ತಿರುವ ಭ್ರಷ್ಠ ಸಚಿವನಾದ ಜಮೀರ್ ಆಹ್ಮದ್ ರವರನ್ನು ಸಿದ್ದರಾಮಯ್ಯರವರು ತಮ್ಮ ಸಚಿವಸಂಪುಟದಿಂದ ವಜಾಗೊಳಿಸಬೇಕಿದೆ. ಇನ್ನೂ ಮುಂದಾದರೂ ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿ ಕೆಲಸವನ್ನು ಮಾಡಬೇಕಿದೆಮತದಾರ ನಮಗೆ ಉತ್ತಮವಾದ ಸರ್ಕಾರವನ್ನು ನೀಡುತ್ತಾರೆ ಎಂಭ ಭರವಸೆಯ ಮೇರೆಗೆ ಕಾಂಗ್ರೆಸ್‍ಗೆ ಮತವನ್ನು ನೀಡಿದ್ದಾರೆ,ಆದರೆ ಕಾಂಗ್ರೆಸ್ ಮತದಾರರ ನಿರೀಕ್ಷೆಯನ್ನು ಹುಸಿಗೊಳಿಸುವದರ ಮೂಲಕ ಎಲ್ಲಡೆ ಭ್ರಷ್ಠಾಚಾರ ತುಂಬುವಂತೆ ಮಾಡಿದೆ

ಮುಂದಿನ ದಿನಮಾನದಲ್ಲಿ ಕಾಂಗ್ರೆಸ್‍ಗೆ ರಾಜ್ಯದಲ್ಲಿ 50 ಸ್ಥಾನವೂ ಸಹಾ ಬರುವುದಿಲ್ಲ ಎಂದು ಭವಿಷ್ಯ ನುಡಿದರು.
ಚಿತ್ರದುರ್ಗ ಜಿಲ್ಲಾ ಜನತಾದಳ (ಜಾತ್ಯಾತೀತ)ದ ಜಿಲ್ಲಾಧ್ಯಕ್ಷರಾದ ಎಂ.ಜಯ್ಯಣ್ಣ ಮಾತನಾಡಿ, ರಾಜ್ಯದಲ್ಲಿ ಆಡಳಿತವನ್ನು
ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಠಾಚಾರದ ಬಗ್ಗೆ ಅವರ ಪಕ್ಷದ ಶಾಸಕರೇ ವಾಗ್ದಾಳಿಯನ್ನುನಡೆಸಿದ್ದಾರೆ. ಬಡವರು ಮನೆಯನ್ನು ಪಡೆಯಲು ಲಂಚವನ್ನು ನೀಡಬೇಕು ಲಂಚವನ್ನು ನೀಡಿದರೆ ಮಾತ್ರ ಮನೆಯನ್ನುನೀಡಲಾಗುತ್ತದೆ ಎಂದು ಹಿರಿಯ ಶಾಸಕರು ದೂರಿದ್ದಾರೆ ಇದರ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ಪಕ್ಷದ ಹೈಕಮಾಂಡಿಗೂ ಸಹಾ ಅದನ್ನೇ ಹೇಳಿದ್ದಾರೆ. ಪಕ್ಷದ ಶಾಸಕರೇ ಸಚಿವರ ಮೇಲೆ ಆರೋಪವನ್ನು ಮಾಡಿದ್ದಾರೆ. ಭ್ರಷ್ಠಾಚಾರವನ್ನು ಮಾಡಿರುವ ಬಗ್ಗೆ ತಿಳಿಸಿದ್ದಾರೆ, ಇವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿದರು

ರಾಜ್ಯದಲ್ಲಿ ಅಭೀವೃಧ್ದಿ ಕಾರ್ಯಗಳು ಕುಂಠಿತವಾಗಿದೆ ಅಭೀವೃದ್ದಿಗೆ ಹಣ ಇಲ್ಲದೆ ಇದ್ದ ಹಣವನ್ನೆಲ್ಲಾ ತಮ್ಮ ಗ್ಯಾರೆಂಟಿಗಳಿಗೆನೀಡುವುದರ ಮೂಲಕ ಶಾಸಕರ ಅನುದಾನಕ್ಕೆ ಕತ್ತರಿಯನ್ನು ಹಾಕಿದ್ದಾರೆ. ಇದನ್ನು ಕಾಂಗ್ರೆಸ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ,ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಗೌರವ ತರಬೇಕಾದರೆ ಸಚಿವ ಜಮೀರ ಆಹಮದ್‍ರವರನ್ನು ಸಚಿವ ಸಂಪುಟದಿಂದ ಅಲ್ಲದೆ ಕಾಂಗ್ರೆಸ್ಪಕ್ಷದಿಂದಲೇ ಉಚ್ಚಾಟನೆಯನ್ನು ಮಾಡುವಂತೆ ಒತ್ತಾಯಿಸಿದ್ದು, ಮತದಾರರು ನಿಮ್ಮ ಮಾತನ್ನು ನಂಬಿ 136 ಜನ ಶಾಸಕರನ್ನುಆಯ್ಕೆ ಮಾಡಿದ್ದಾರೆ ಅದನ್ನು ಉಳಿಸಿಕೊಳ್ಳುವ ಕಾರ್ಯವನ್ನು ಮಾಡಬೇಕಿದೆ ಎಂದು ಕರೆ ನೀಡಿದರು.ರಾಜ್ಯದಲ್ಲಿ ಸಾಕಷ್ಟು ಆಭೀವೃದ್ದಿ ಕಾರ್ಯವನ್ನು ಮಾಡಬೇಕೆಂದು ಕೇಂದ್ರ ಸಚಿವರಾದ ಕುಮಾರಸ್ವಾಮಿ ಯವರು ಮುಂದಾಗಿದ್ದಾರೆ,

ಆದರೆ ರಾಜ್ಯ ಸರ್ಕಾರ ಸಹಕಾರ ನಿಡುತ್ತಿಲ್ಲ ರಾಜ್ಯದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವುದರ ಮೂಲಕ
ನಿರುದ್ಯೋಗವನ್ನು ಹೋಗಲಾಡಿಸುವ ಕಾರ್ಯವನ್ನು ಮಾಡಲು ಮುಂದಾದರೆ ಸಿದ್ದರಾಮಯ್ಯ ಸಹಕಾರವನ್ನು ನೀಡದೆ ತಿರಸ್ಕಾರಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಕುಮಾರಸ್ವಾಮಿಗೆ ಒಳ್ಳೇಯ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಅನುಮತಿಯನ್ನು ನೀಡುತ್ತಿಲ್ಲ ಅಭೀವೃಧ್ದಿಯಲ್ಲಿ ರಾಜಕೀಯವನ್ನು ಬೆರಸಬೇಡಿ ಬಡ ಜನರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಿ ಎಂದು ಜಯ್ಯಣ್ಣ ತಿಳಿಸಿದರು.
ಈ ಪ್ರತಿಭಟನೆಯಲ್ಲಿ ಜೆಡಿಎಸ್,ನ ಮಾಜಿ ಜಿಲ್ಲಾಧ್ಯಕ್ಷರಾದ ಯಶೋಧರ್, ಜಿಲ್ಲಾ ಮಹಾ ಪ್ರಧಾನ ಕಾರ್ಯ ದರ್ಶಿ ಗೋಪಾಲಸ್ವಾಮಿ ನಾಯ್ಕ್, ಕಾರ್ಯಾದ್ಯಕ್ಷ ಜಿ,ಬಿ. ಶೇಖರ್, ಹಿರಿಯೂರು ಪರಾಜಿತ ಅಭೈರ್ತಿ ರವಿಂದ್ರಪ್ಪ, ಮೊಳಕಾಲ್ಮೂರು ವೀರಭದ್ರಪ್ಪ, ತಾಲ್ಲೂಕು ಘಟಕದ ಅಧ್ಯಕ್ಷರಾದ ಸಣ್ಣ ತಿಮ್ಮಪ್ಪ, ಗಣೇಶ್ ಮೂರ್ತಿ, ಪರಮೇಶ್ವರಪ್ಪ, ಪಿಟಿತಿಪ್ಪೇಸ್ವಾಮಿ, ಕರಿಬಸಪ್ಪ, ಹನುಮಂತರಾಯಪ್ಪ,ಪಕ್ಷದ ಮುಖಂಡರಾದ ಚಿದಾನಂದ, ಶಂಕರಮೂರ್ತಿ, ಮಂಜುನಾಥ್, ಅಬ್ಬು, ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ನಸ್ರುಲ್ಲಾ ಸದಸ್ಯ ರಾದ ದೀಪು, ಮಾಜಿ ಸದಸ್ಯರಾದ ತಿಪ್ಪೇಸ್ವಾಮಿ, ಜಾಲಿಕಟ್ಟೆ ರುದ್ರಣ್ಣ, ಲಿಂಗರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
chitradurga janatadala straike
Follow on Google News Follow on Instagram
Share. Facebook Twitter Telegram WhatsApp
Previous Articleಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಸಿಎಂ ಸಿದ್ದರಾಮಯ್ಯ
Next Article ಸಂವಿಧಾನದಲ್ಲಿ ಜಾತ್ಯತೀತ ಪದ ಸೇರಿಸಿದ್ದು ಕಾಂಗ್ರೆಸ್, ಅಂಬೇಡ್ಕರ್ ಅಲ್ಲ – ಸಂಸದ ಕಾರಜೋಳ ಹೇಳಿಕೆ
Times of bayaluseeme
  • Website

Related Posts

ಇತ್ತೀಚಿಗೆ ಹೃದಯಾಘಾತಕ್ಕೆ ಕಾರಣಗಳು ಏನು…? ಸಿನಿಮಾ ನಟ, ನಟಿಯರಿಗೆ ಯಾಕೆ ಹೆಚ್ಚು ಹೃದಯಾಘಾತ ಆಗುತ್ತವೆ ಎಂಬುದಕ್ಕೆ ಇಲ್ಲಿದೆ ಕಾರಣ

July 27, 2025

ಧೂಮಪಾನ ಚಟವಿದ್ದರೆ ಇಂದೇ ಬಿಟ್ಟುಬಿಡಿ…. ಧೂಮಪಾನದಿಂದ ಆಗುವ ಪರಿಣಾಮಗಳು ಏನು..?

July 26, 2025

ಉಚಿತ ಕಿವಿಯ ಶ್ರವಣ ತಪಾಸಣೆ, ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ

July 25, 2025
Add A Comment
Leave A Reply Cancel Reply

Advertisement
Latest Posts

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.