ಚಿತ್ರದುರ್ಗ:ಚಿತ್ರದುರ್ಗ ನಗರದ ಮಾರುತಿ ನಗರ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಕೊಳಚೆ ಪ್ರದೇಶದಲ್ಲಿ ಡೆಂಗ್ಯೂ ಪತ್ತೆ ಹಿನ್ನಲೆಯಲ್ಲಿ ಶುಕ್ರವಾರ ಜಿಲ್ಲಾ ಸಿಎಂಡಿ ವಿಭಾಗದ ಎಸ್.ಅಶೋಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಡೆಂಗ್ಯೂ ಪತ್ತೆ ಹಿನ್ನಲೆಯಲ್ಲಿ ಆಶಾ ಕಾರ್ಯಕರ್ತರ ತಂಡ ರಚನೆ ಮಾಡಿ, ಸುಮಾರು ನೂರಕ್ಕೆ ಹೆಚ್ಚು ಮನೆಗಳನ್ನು ಭೇಟಿ, ಲಾರ್ವಾ ಸಮೀಕ್ಷೆ ಮಾಡಿ, ಪಾಸಿಟಿವ್ ಬಂದ ತಾಣಗಳು ಹಾಗೂ ಸ್ವಚ್ಛತೆ ಬಗ್ಗೆ ತಿಳುವಳಿಕೆ ನೀಡಲಾಯಿತು.
ನೀರನ್ನು ಶೇಖರಣೆ ಮಾಡುವ ಡ್ರಮ್ ತೊಟ್ಟಿಗಳು ಹಾಗೂ ಘನತ್ಯಾಜ್ಯ ವಸ್ತುಗಳು, ಟೈರ್, ಹೂವಿನ ಕುಂಡಗಳು ಇವೆಲ್ಲವನ್ನೂ ಪರಿಶೀಲಿಸಿ, ಡೆಂಗ್ಯೂ ಹರಡುವ ವಿಧಾನ, ಜ್ವರದ ಲಕ್ಷಣಗಳು, ತಡೆಗಟ್ಟುವ ಕ್ರಮ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಲಾಯಿತು.ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಾದ ಶೋಭಾ ಸೇರಿದಂತೆ ಮತ್ತಿತರರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







