ಚಿತ್ರದುರ್ಗದ ಕಾವಡಿಗರಹಟ್ಟಿಯಲ್ಲಿ ಕಲುಷಿತ ನೀರು ಸಮಸ್ಯೆಯಿಂದಾಗಿ ನೂರಾರು ಮಂದಿ ಆಸ್ಪತ್ರೆ ಸೇರಿದ್ದರು, 6 ಮಂದಿ ಮೃತಪಟ್ಟಿದ್ದರು. ಅದು ಒಂದು ರೀತಿ ಪರಿಸರ ಸ್ವಚ್ಛತೆ ಇಲ್ಲದ ಕಾರಣದಿಂದ ಘಟನೆ ಸಂಭವಿಸಿತು ಎಂದು ನಟ ಅಹಿಂಸಾ ಚೇತನ್ ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಗಣಿಬಾಧಿತ ಹೋರಾಟ ಸಮಿತಿಯಿಂದ ಆಯೋಜಿಸಿದ್ದ ಗಣಿಬಾಧಿತ ಪ್ರದೇಶಗಳ ಜನರ ಸಂಕಷ್ಟಗಳು, ಪರಿಸರ ಅಸಮತೋಲನ ಮತ್ತು ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿಯಲ್ಲಿ ಗಣಿಗಳ ಮಹತ್ವ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾವಾಡಿಗರಹಟ್ಟಿ ದುರ್ಘಟನೆ ಬಗ್ಗೆ ಪ್ರಸ್ತಾಪ ಮಾಡಿದರು. ಇನ್ನು ಸಿದ್ದರಾಮಯ್ಯ ಅವರು ಶಪಥ ಮಾಡಿ ಬಳ್ಳಾರಿಗೆ ಪಾದಯಾತ್ರೆ ಮಾಡಿ ದೇಶದಲ್ಲಿ ಸಂಚಲನ ಸೃಷ್ಟಿಸಿ ಬಳಿಕ ರಾಜ್ಯದ ಸಿಎಂ ಆದರೂ. ಆದರೆ ಮುಖ್ಯಮಂತ್ರಿಯಾದ ಬಳಿಕ ಗಣಿ ಧಣಿಗಳ ವಿರುದ್ಧ ಕ್ರಮ ತೆಗೆದುಕೊಳ್ಳದೆ ಮೌನವಹಿಸಿದ್ದು ವಿಷಾದನೀಯ ಎಂದರು. ಸಿಎಂ ಸಿದ್ದರಾಮಯ್ಯ ಅವರಿಗೆ ಗಣಿಗಾರಿಕೆಗೆ ಏನೋ ಒಂದು ನಂಟಿದೆ ಎಂದು ಆರೋಪಿಸಿದರು. ಸಿಎಂ ಸಿದ್ದರಾಮಯ್ಯ ಸಿಂಗಲ್ ವಿಂಡೋ ಎಂದು ಘೋಷಣೆ ಮಾಡಿ ಈಗ ಗಣಿಗಾರಿಕೆ ಮಾಡುವವರಿಗೆ ಸಹಾಯ ಮಾಡಿದ್ದಾರೆ. ಆದರೆ ಸರ್ಕಾರ ಇದನ್ನು ಮತ್ತೊಮ್ಮೆ ಪರಿಶೀಲಿಸಬೇಕು. ಪದೇಪದೇ ತಪ್ಪು ಮಾಡಿ ಗಣಿಗಾರಿಕೆ ಮಾಡುತ್ತಿರುವವರಿಗೆ ಲೈಸೆನ್ಸ್ ಕೊಡಬಾರದು. ಪರಿಸರಕ್ಕೆ ಗಣಿಗಾರಿಕೆ ಅನ್ನೋದು ಅತ್ಯಂತ ಅಪಾಯಕಾರಿಯಾಗಿದೆ. ಕೊಡಗು, ಸಂಡೂರು, ಚಿತ್ರದುರ್ಗದಲ್ಲಿ ಗಣಿಗಾರಿಕೆಯಿಂದ ಹಲವು ಸಮಸ್ಯೆಗಳು ಆಗುತ್ತಿವೆ. ಗಣಿಗಾರಿಕೆ ಮಾಡುವವರಿಗೆ ಸರ್ಕಾರ ಸಹಾಯ ಮಾಡದೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸರ್ಕಾರ ಬೇಕು. ಮುಂದಿನ ದಿನಗಳಲ್ಲಿ ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.ಸಂವಾದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗಣಿಬಾಧಿತ ಹೋರಾಟ ಸಮಿತಿಯ ಉಪಾಧ್ಯಕ್ಷ ಹಾಗೂ ಸದಸ್ಯರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







