ಚಿತ್ರದುರ್ಗ: ವೀರಶೈವ ಲಿಂಗಾಯತ ಸಮಾಜ ಬಾಂಧವರಲ್ಲಿ ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ
ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕ (ಜಾತಿ ಗಣತಿ) ಸಮೀಕ್ಷೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿರ್ಣಯದ ಮೇರೆಗೆ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ವೀರಶೈವ ಲಿಂಗಾಯತ ಜಾತಿ ಕಾಲಂನಲ್ಲಿ ಲಿಂಗಾಯತ ಅಥವಾ ವೀರಶೈವ ಅಂತಾ ಬರಿಸಿ ಉಪಜಾತಿ ಕಾಲಂನಲ್ಲಿ ನಿಮ್ಮ ನಿಮ್ಮ ಉಪಜಾತಿಗಳ ಹೆಸರನ್ನು ಬರೆಸಿ ಅಲಕ್ಷ ಮಾಡಬೇಡಿ ಎಂದು ಅಖಿಲ ಭಾರತ ವೀರಶೈವ ಮಹಾ ಸಭಾದ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ಮಹಡಿ ಶಿವಮೂರ್ತಿ ಸಮಾಜ ಬಾಂಧವರಲ್ಲಿ ಮನವಿ ಮಾಡಿದ್ದಾರೆ.ಎರಡನೇ ಬಾರಿ ಸಮೀಕ್ಷೆ ನಡೆದಿರುವುದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪನವರ ಮತ್ತು ಪದಾಧಿಕಾರಿಗಳ ಒತ್ತಾಯದ ಮೇರೆಗೆ ಈ ಹಿನ್ನಲೆಯಲ್ಲಿ ಸಮಾಜ ಬಂದುಗಳೇ ಈ ರೀತಿಯಾಗಿ ಬರೆಸಿದಾಗ ಕರ್ನಾಟಕ ರಾಜ್ಯದಲ್ಲಿ ವೀರಶೈವ ಲಿಂಗಾಯತರ ಸಂಖ್ಯೆ ಎಷ್ಟು ಇದೆ ಅನ್ನುವುದು ನಿಖರವಾಗಿ ಗೊತ್ತಾಗುವುದು ಮತ್ತು ಆರ್ಥಿಕ ಸ್ಥಿತಿಗತಿ ಬಗ್ಗೆಯೂ ಗೊತ್ತಾಗುತ್ತದೆ ಇದನ್ನು ಅಲಕ್ಷ ಮಾಡಬೇಡಿ ಸಮಾಜ ಬಂಧುಗಳಲ್ಲಿ ಮನವಿ ಮಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







