ಚಿತ್ರದುರ್ಗ: ಬಿಜೆಪಿ ವತಿಯಿಂದ ಸೆ. 17 ರಿಂದ ನಡೆಯುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಹಮ್ಮಿಕೊಂಡಿರುವ ಸೇವಾ ಪಾಕ್ಷಕಿ ಅಭಿಯಾನದಡಿಯಲ್ಲಿ ಚಿತ್ರದುರ್ಗ ಗ್ರಾಮಾಂತರ ಮಂಡಲದಿಂದ ಚಿತ್ರದುರ್ಗ ತಾಲ್ಲೂಕಿನ ಗಂಜಿಗಟ್ಟೆ ಗ್ರಾಮದಲ್ಲಿ ಬುಧವಾರ ಸ್ವಚ್ಚತಾ ಕಾರ್ಯಕ್ರಮದಲ್ಲಿ ಬೆಟ್ಟದ ಮೇಲಿರುವ ಶ್ರೀ ಪಾಂಡು ರಂಗನಾಥಸ್ವಾಮಿ ದೇವಸ್ಥಾನದ ಕಲ್ಯಾಣಿಯನ್ನು ಸ್ವಚ್ಚ ಮಾಡಲಾಯಿತು. ಚಿತ್ರದುರ್ಗ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಕೆ.ನಾಗರಾಜ್ ಉಪ್ಪನಾಯಕನಹಳ್ಳಿ ಇವರು ಮಾತನಾಡಿ ನಮಗೆ ಸ್ವಚ್ಚತೆ ಅತಿ ಮುಖ್ಯವಾಗಿದೆ ಎಲ್ಲಿ ಸ್ವಚ್ಚತೆ ಇರುವುದಿಲ್ಲವೂ ಅಂತಹ ಪ್ರದೇಶಗಳಲ್ಲಿ ರೋಗಗಳು ಕಾಣುತ್ತವೆ, ನಮ್ಮ ಮನೆ, ಶಾಲೆ, ಆಸ್ಪತ್ರೆ, ಸೇರಿದಂತೆ ಎಲ್ಲಡೆ ಸಹಾ ಸ್ವಚ್ಚತೆಯನ್ನು ಕಾಪಾಡುವುದರ ಮೂಲಕ ನಮ್ಮ ಆರೋಗ್ಯವನ್ನು ನಾವೇ ಕಾಪಾಡಿಕೊಳ್ಳಬೇಕಿದೆ, ನಮ್ಮ ಮನೆಯ ಕಸವನ್ನು ಬೇರೆಯವರ ಮನೆ ಮುಂದೆ ಹಾಕದೇ ಅದನ್ನು ಕಸದ ಗಾಡಿಯಲ್ಲಿ ಅಥವಾ ಕಸದ ತೊಟ್ಟಿಯಲ್ಲಿ ಹಾಕುವುದರ ಮೂಲಕ ಸ್ವಚ್ಚತೆಯನ್ನು ಕಾಪಾಡಬೇಕಿದೆ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಚಿತ್ರದುರ್ಗ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಸಚಿನ್, ಯುವ ಮೋರ್ಚಾದ ಅಧ್ಯಕ್ಷ ಸಿದ್ದೇಶ್,ಗ್ರಾಮದ ಮುಖಂಡರಾದ ಆನಂದಪ್ಪ, ರಮೇಶ್ ಪಮಡರಹಳ್ಳಿ, ವಿನಯ ನಂದಿಪುರ, ರಾಘವೇಂದ್ರ ಗಂಜಿಗಟ್ಟೆ ಪ್ರಾಣೇಶ್ ಸೇರಿದಂತೆ ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







