ಚಿತ್ರದುರ್ಗ: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನ್ಮ ದಿನವಾದ ಸೆ.17 ರಿಂದ ಮಹಾತ್ಮ ಗಾಂಧಿಯವರ ಜನ್ಮ ದಿನವಾದ ಅ.2ರವರೆಗೆ ರಾಜ್ಯದಲ್ಲಿ ಸೇವಾ ಪಾಕ್ಷಕಿ ಅಭಿಯಾನವನ್ನು ರಾಜ್ಯವ್ಯಾಪಿ ಹಮ್ಮಿಕೊಳ್ಳಲಾಗಿದ್ದು, ಇದನ್ನು ಸರಿಯಾದ ರೀತಿಯಲ್ಲಿ ಆಯೋಜನೆ ಮಾಡುವುದರ ಮೂಲಕ ಜನತೆಯ ಮನದಲ್ಲಿ ಬಿಜೆಪಿಯನ್ನು ಮನೆಮಾತಾಗಿ ಮಾಡುವ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಕರೆ ನೀಡಿದರು.ಚಿತ್ರದುರ್ಗ ನಗರದ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ಸೋಮವಾರ ನಡೆದ ಸೇವಾ ಪಾಕ್ಷಕಿ ಅಭಿಯಾನದ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಪ್ರಾಕ್ಷಿಕದಲ್ಲಿ ಪಕ್ಷ ನೀಡಿರುವ ಕಾರ್ಯಕ್ರಮಗಳನ್ನು ಸರಿಯಾದ ರೀತಿಯಲ್ಲಿ ಮಾಡಬೇಕಿದೆ. ತಮ್ಮ ತಾಯಿಯ ಹೆಸರಿನಲ್ಲಿ ಸಸಿಗಳನ್ನು ನೆಡುವ ಸಮಯದಲ್ಲಿ ಬೇರೆ ಕಡೆಗಳಲ್ಲಿ ನೆಡದೆ ತಮ್ಮ ಮನೆಗಳ ಮುಂದೆ ಸಸಿಗಳನ್ನು ನೆಡುವುದರ ಮೂಲಕ ಅದನ್ನು ಸರಿಯಾದ ರೀತಿಯಲ್ಲಿ ಪೋಷಣೆಯನ್ನು ಮಾಡಬೇಕಿದೆ ಇದರಿಂದ ಮಾತ್ರ ಸಸಿಗಳು ಬೆಳೆಯವುದಕ್ಕೆ ಸಹಕಾರಿಯಾಗಲಿದೆ ಇದೇ ರೀತಿ ರಕ್ತದಾನ, ಆರೋಗ್ಯ ಶಿಬಿರವನ್ನು ಆಯೋಜನೆಯ ಮಾಡುವುದರ ಮೂಲಕ ಜನತೆಗೆ ಆರೋಗ್ಯದ ಬಗ್ಗೆ ಜಾಗೃತಿಯನ್ನು ಮೂಡಿಸಬೇಕಿದೆ ಎಂದರು.ಈಗಾಗಲೇ ನಗರದ ಹಲವಡೆಗಳಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಮಾಡಲಾಗಿದೆ. ನಗರದ ವಿವಿಧ ಬಡಾವಣೆಗಳಲ್ಲಿ ಸ್ವಚ್ಚತೆಯನ್ನು ಮಾಡಲಾಗಿದೆ. ಎಲ್ಲಿ ಕಸದ ರಾಶಿ ಇದ್ದೆಯೋ ಅಲ್ಲಿ ಸ್ವಚ್ಚತೆಯನ್ನು ಮಾಡುವುದರ ಮೂಲಕ ಜನತೆಗೆ ಪಕ್ಷ ಹತ್ತಿರವಾಗಬೇಕಿದೆ. ಬೇರೆ ಪಕ್ಷಗಳು ನಮ್ಮ ಪಕ್ಷದ ಬಗ್ಗೆ ಇಲ್ಲ ಸಲ್ಲದ ಬಗ್ಗೆ ಮಾತನಾಡುತ್ತಾರೆ ಇದರ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ಬೇರೆಯವರಿಗೆ ಸರಿಯಾದ ಉತ್ತರವನ್ನು ನೀಡಬೇಕಿದೆ ಇದಕ್ಕೆ ನಾವು ಸಿದ್ದರಿರಬೇಕಿದೆ ಎಂದರು. ಮಾಜಿ ಅಧ್ಯಕ್ಷರಾದ ಎ.ಮುರಳಿ ಮಾತನಾಡಿ, ದೇಶದ್ಯಂತ ಸೇವಾ ಪಾಕ್ಷಿಕ ಅಭೀಯಾನದಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಜನ್ಮ ದಿನವಾದ ಸೆ. 17 ರಿಂದ ಮಹಾತ್ಮ ಗಾಂಧಿಯವರ ಜನ್ಮ ದಿನವಾದ ಅಕ್ಟೋಬರ್ 2ರವರೆಗೆ ಅನೇಕ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸ್ವಚ್ಚತಾ ಅಭಿಯಾನ, ತಾಯಿಯ ಹೆಸರಿನಲ್ಲಿ ಒಂದು ಸಸಿ, ರಕ್ತದಾನ ಆರೋಗ್ಯ ಶಿಬಿರ ಕ್ರೀಡೆ ಹಾಗೂ ಚಿತ್ರಕಲಾ ಸ್ಪರ್ದೆಯಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕಿದೆ.
ಜಿಲ್ಲಾ ಕೇಂದ್ರಗಳಲ್ಲಿ ಹಂತ 1ರಲ್ಲಿ ಸೆ. 17 ರಂದು ರಕ್ತದಾನ ಶಿಬಿರವನ್ನು ಆಯೋಜಿಸಲಾಗುವುದು, ಹಂತ 2ರಲ್ಲಿ ಸೆ.18 ರಿಂದ ಅ.2ರವರೆಗೆ ಮಂಡಲಗಳಲ್ಲಿ ರಕ್ತದಾನಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಸನ್ಮಾನ, ಸ್ವಚ್ಚಾತಾ ಅಭಿಯಾನದಲ್ಲಿ ಶಾಲಾ-ಕಾಲೇಜು,ಆಸ್ಪತ್ರೆ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ದೇವಸ್ಥಾನ, ಉದ್ಯಾನವನ ಐತಿಹಾಸಿಕ ಸ್ಥಳಗಳಲ್ಲಿ ಬೃಹತ್ ಮಟ್ಟದ ಸ್ವಚ್ಚತಾ ಅಭಿಯಾನ ಅಯೋಜಿಸಬೇಕಿದೆ ಇದಲ್ಲದೆ ಸಾರ್ವಜನಿಕರಿಗೆ ಸ್ಚಚ್ಚತೆಯೇ ಸೇವೆ ಎಂಬ ಪ್ರತಿಜ್ಞೆಯನ್ನು ಭೋಧಿಸುವುದು, ದಿವ್ಯಾಂಗರು ಮತ್ತು ಪ್ರಭುದ್ದರಿಗೆ ಸನ್ಮಾನ ನಡೆಸಲಾಗುವುದೆಂದು ತಿಳಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಮಾತನಾಡಿ, ಈ ಸೇವಾ ಪಾಕ್ಷಿಕದಲ್ಲಿ ಹಲವಾರು ಜನಪಯೋಗಿ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ಇದರಲ್ಲಿ ರಕ್ತದಾನ ಶಿಬಿರ, ಸ್ವಚ್ಚತಾ ಕಾರ್ಯಕ್ರಮ, ಆರೋಗ್ಯ ಶಿಬಿರ, ಮೋದಿಯವರ ಜೀವನ ಅಧಾರಿತ ಪ್ರದರ್ಶನ, ಪ್ರಬುದ್ಧರ ಗೋಷ್ಟಿ, ಸಾಕ್ಷ್ಯಚಿತ್ರ ವೀಕ್ಷಣೆ, ಪುಸ್ತಕ ವಿತರಣೆ, ಮೋದಿ ವಿಕಾಸ ಮ್ಯಾರಥಾನ್ ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಸೇವಾ ಪಾಕ್ಷಿಕ ಅಭಯಾನದಲ್ಲಿ ಬಿಜೆಪಿಯ ಎಲ್ಲಾ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಬೇಕೆಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ, ನಗರ ಮಂಡಲದ ಮಾಜಿ ಅಧ್ಯಕ್ಷ ಚಾಲುಕ್ಯ ನವೀನ್, ರೈತ ಮೋರ್ಚಾದ ಅಧ್ಯಕ್ಷ ವೆಂಕಟೇಶ್ ಯಾದವ್, ರಾಜ್ಯ ರೈತ ಮೋಚಾರ್ಯದ ಪ್ರದಾನ ಕಾರ್ಯದರ್ಶಿ ಮಲ್ಲಿಕಾರ್ಜನ್, ಗ್ರಾಮಾಂತರ ಮಂಡಲದ ಮಾಜಿ ಅಧ್ಯಕ್ಷ ಕಲ್ಲೇಶಯ್ಯ, ವಕ್ತಾರ ನಾಗರಾಜ್ ಬೇದ್ರೇ ಸೇರಿದಂತೆ ಇತರರು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







