Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ನಮ್ಮ ಅಣ್ಣ ಸಿಎಂ ಆಗಲ್ಲ ಎಂಬ ಸುಳಿವು ಕೊಟ್ರಾ ಡಿ.ಕೆ ಸುರೇಶ್..?
ಪ್ರಮುಖ ಸುದ್ದಿ

ನಮ್ಮ ಅಣ್ಣ ಸಿಎಂ ಆಗಲ್ಲ ಎಂಬ ಸುಳಿವು ಕೊಟ್ರಾ ಡಿ.ಕೆ ಸುರೇಶ್..?

Times of bayaluseemeBy Times of bayaluseemeJuly 12, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆತುರದಲ್ಲೂ ಇಲ್ಲ, ಆತಂಕದಲ್ಲೂ ಇಲ್ಲ ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ ಸುರೇಶ್ ಸ್ಪಷ್ಟಪಡಿಸಿದರು.ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಗಳವಿಲ್ಲ. ಕಾಂಗ್ರೆಸ್ ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳು, ಅಧ್ಯಕ್ಷರು ಹಾಗೂ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಕೂಡ ಈಗಾಗಲೇ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದು, ಸಿದ್ದರಾಮಯ್ಯ ಅವರು ನಾಯಕತ್ವದಲ್ಲಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ. ಆದರೂ ಮಾಧ್ಯಮಗಳಿಗೆ ಯಾಕೆ ಗೊಂದಲವಿದೆ ಎಂದು ಗೊತ್ತಿಲ್ಲ. ಶಿವಕುಮಾರ್ ಅವರು ಪಕ್ಷ ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಪಕ್ಷದ ಕಾರ್ಯಕರ್ತನಾಗಿ ಮುನ್ನಡೆಸುತ್ತಿದ್ದಾರೆ. ಪಕ್ಷದ ಸೂಚನೆಯಂತೆ ಅವರು ಕೆಲಸ ಮಾಡುತ್ತಿದ್ದಾರೆ. ಇದರ ಹೊರತಾಗಿ ಹೆಚ್ಚಿನ ವಿಚಾರ ಏನೂ ಇಲ್ಲ. ಸಧ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಪದೇ ಪದೆ ಈ ವಿಚಾರ ಯಾಕೆ ಚರ್ಚೆಯಾಗುತ್ತಿದೆ ಗೊತ್ತಿಲ್ಲ ಎಂದರು.
ಇದೇ ನನ್ನ ಕೊನೆ ಚುನಾವಣೆ ಎಂದಿದ್ದ ಸಿದ್ದರಾಮಯ್ಯ ಅವರು ಈಗ 2028ಕ್ಕೂ ನನ್ನದೇ ನೇತೃತ್ವದಲ್ಲಿ ಚುನಾವಣೆ ಎಂದು ಹೇಳಿರುವ ಬಗ್ಗೆ ಕೇಳಿದಾಗ, ಸಿದ್ದರಾಮಯ್ಯ ಅವರು ಹಿರಿಯ ನಾಯಕರು. ರಾಜಕೀಯದಲ್ಲಿ ನಿವೃತ್ತಿ ಇಲ್ಲ. ರಾಜಕೀಯ ಇಚ್ಛಾಶಕ್ತಿ ಇರಬೇಕು. ಮುಖ್ಯಮಂತ್ರಿಗಳಿಗೆ ಇಚ್ಛಾಶಕ್ತಿ ಇದೆ. ಹೀಗಾಗಿ ಅವರು ಕೆಲವು ವಿಚಾರವನ್ನು ನಿಮ್ಮ ಜೊತೆ ಹಂಚಿಕೊಂಡಿರಬಹುದು ಎಂದು ತಿಳಿಸಿದರು.

ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದ ಮೇಲೆ ಸಿಎಂ ಪದೇ ಪದೆ ನಾನೇ ಸಿಎಂ ಎಂದು ಹೇಳುವ ಅಗತ್ಯವಿದೆ ಎಂದು ಕೇಳಿದಾಗ, ಈ ವಿಚಾರವಾಗಿ ಮಾತನಾಡಲು ನಾನು ಬಹಳ ಸಣ್ಣವನು ಎಂದರು.ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತಡಿ.ಕೆ. ಶಿವಕುಮಾರ್ ಅವರಿಗೆ ಹೆಚ್ಚಿನ ಶಾಸಕರ ಬೆಂಬಲ ಇಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಶಾಸಕರ ಬೆಂಬಲ ಕೇಳುವ ಸಮಯವಲ್ಲ. ಸಿದ್ದರಾಮಯ್ಯ ಅವರು 2 ವರ್ಷಗಳಿಂದ ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಅವರು ಮುಂದುವರಿಯುತ್ತಿರುವಾಗ ಈ ವಿಚಾರ ಚರ್ಚೆಯಾಗುತ್ತಿರುವ ಬಗ್ಗೆ ನಮಗೆ ಗೊತ್ತಿಲ್ಲ. ನೀವು ಈ ವಿಚಾರ ಚರ್ಚೆ ಮಾಡುತ್ತಿರುವವರನ್ನೇ ಕೇಳಿ. ಶಿವಕುಮಾರ್ ಅವರದ್ದು ಬಲಾಬಲ ಪ್ರದರ್ಶನ ಮಾಡುವ ವ್ಯಕ್ತಿತ್ವವಿಲ್ಲ.

ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ.

ಕಾಂಗ್ರೆಸ್ ವರಿಷ್ಠರಿಗೆ ಗೌರವ ನೀಡುವ ವ್ಯಕ್ತಿತ್ವ ಹೊಂದಿರುವವರು. ಅವರು ಬೇರೆಯವರಿಗೆ ಮಾರ್ಗದರ್ಶಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.ಪ್ರತಿಯೊಬ್ಬರಿಗೂ ಒಬ್ಬೊಬ್ಬರು ಸಿಎಂ ಆಗಲಿ ಎಂದು ಆಸೆ ಪಡುತ್ತಾರೆ. ಪ್ರತಿ ಜಿಲ್ಲೆ, ಸಮುದಾಯದವರು ನಮ್ಮವರು ಸಿಎಂ ಆಗಲಿ ಎಂದು ಆಶಯ ವ್ಯಕ್ತಪಡಿಸುವುದು ಸಹಜ. ಇದು ಇಂದು ನಡೆದಿರುವ ವಿಚಾರವಲ್ಲ. ಪ್ರತಿ ಅವಧಿಯಲ್ಲೂ ಇಂತಹ ಬೆಳವಣಿಗೆ ನಡೆದುಕೊಂಡು ಬಂದಿದೆ. ಇಂತಹ ಅಭಿಪ್ರಾಯವನ್ನು ತಪ್ಪು ಎಂದು ಹೇಳಲು ಆಗುವುದಿಲ್ಲ” ಎಂದರು.
ಎರಡು ಬಾರಿ ಇಡಿ ವಿಚಾರಣೆ ವಿಚಾರವಾಗಿ ಮಾತನಾಡಿ ನನಗೆ ಕಾರಣ ಗೊತ್ತಿಲ್ಲ. ಆದರೆ ನನಗೆ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಮತ್ತೆ ವಿಚಾರಣೆಗೆ ಕರೆದಾಗ ಬರಬೇಕು ಎಂದು ತಿಳಿಸಿದ್ದಾರೆ. ಜವಾಬ್ದಾರಿಯುತ ಪ್ರಜೆಯಾಗಿ ವಿಚಾರಣೆಗೆ ಸಹಕಾರ ನೀಡಲು ಸಿದ್ಧನಿದ್ದೇನೆ ಎಂದು ತಿಳಿಸಿದರು.

ತಾವೇ ಹಾಕಿಕೊಂಡ ಲಕ್ಷ್ಮಣ ರೇಖೆ ಹೇಗೆ ದಾಟುತ್ತಾರೆ?

75 ವರ್ಷಕ್ಕೆ ನಿವೃತ್ತಿ ಪಡೆಯಬೇಕು ಎಂದು ಆರ್ ಎಸ್ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ಬಗ್ಗೆ ಕೇಳಿದಾಗ, ರಾಜಕಾರಣದಲ್ಲಿ ನಿವೃತ್ತಿ ಇಲ್ಲ ಎಂದು ನಾನು ಹೇಳಿದ್ದೇನೆ. ರಾಜಕೀಯ ಇಚ್ಛಾಶಕ್ತಿ ಜೊತೆಗೆ ಅವರವರು ಹಾಕಿಕೊಂಡಿರುವ ಲಕ್ಷ್ಮಣ ರೇಖೆಗಳನ್ನು ದಾಟುವುದು ಹೇಗೆ ಎಂಬುದು ಮುಖ್ಯ. ಯಾವಾಗಲೂ ಇನ್ನೊಬ್ಬರಿಗೆ ಮಾರ್ಗದರ್ಶಕರಾಗಿ ಮಾದರಿಯಾಗಿರಬೇಕು. ಈ ರೀತಿ ದಿಟ್ಟ ಹೆಜ್ಜೆ ಇಟ್ಟಾಗ ಅವರ ಹೆಸರು ಶಾಶ್ವತವಾಗಿ ಉಳಿಯುತ್ತದೆ ಎಂದು ತಿಳಿಸಿದರು

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
cm dks- suresh
Follow on Google News Follow on Instagram
Share. Facebook Twitter Telegram WhatsApp
Previous Articleಅಹಮದಾಬಾದ್ ವಿಮಾನ ದುರಂತಕ್ಕೆ ಕೊನೆಗೂ ಸಿಕ್ತು ಅಸಲಿ ಕಾರಣ..!
Next Article ಪ್ರತಿಯೊಂದು ಕ್ರೀಡೆಗೆ ಪ್ರೋತ್ಸಾಹ ನೀಡಿ ಬೆಳೆಸುವುದು ನಮ್ಮ ಜವಾಬ್ದಾರಿ – ಮಾದಾರ ಚನ್ನಯ್ಯ ಸ್ವಾಮೀಜಿ
Times of bayaluseeme
  • Website

Related Posts

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

July 27, 2025

ಪತ್ರಿಕೋದ್ಯಮ ಯಾರ ಪರವಾಗಿ ಕನ್ನಡಿ ಹಿಡಿಯುತ್ತಿದೆ ಎಂಬುದನ್ನು ಅರಿಯಬೇಕು – ಕೆ.ವಿ.ಪ್ರಭಾಕರ್

July 27, 2025

ನಟ ಪ್ರಥಮ್ ಗೆ ಜೀವ ಬೆದರಿಕೆ; ಘಟನೆಯಲ್ಲಿ ರಕ್ಷಕ್ ಬುಲೆಟ್ ಬಂದಿದ್ದೇಕೆ..?

July 27, 2025
Add A Comment
Leave A Reply Cancel Reply

Advertisement
Latest Posts

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.