ಬೆಂಗಳೂರು: ಮುಡಾದಿಂದ ಅಕ್ರಮವಾಗಿ 14 ಬದಲಿ ಸೈಟ್ ಪಡೆದ ಆರೋಪಸಂಬಂಧ ಸಲ್ಲಿಕೆಯಾಗಿರುವ ಮೇಲ್ಮನವಿಗಳ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ, ಅವರ ಸಹೋದರ ಬಿ.ಎಂ.ಮಲ್ಲಿಕಾರ್ಜುನಸ್ವಾಮಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಮೈಸೂರಿನ ವಿಜಯನಗರ ಠಾಣೆ ಇನ್ ಪೆಕ್ಟರ್ಗೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿಗೊಳಿಸಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಕೋರಿ ಮೂಲ ದೂರುದಾರ ಸ್ನೇಹಮಯಿ ಕೃಷ್ಣ ಹಾಗೂ ಪ್ರಕರಣವನ್ನು ಪೊಲೀಸ್ ತನಿಖೆಗೆ ಅನುಮತಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿದ್ದರಾಮಯ್ಯ ಮತ್ತು ವಿವಾದಿತ ಜಮೀನಿನ ಮೂಲ ಮಾಲೀಕ ಜೆ.ದೇವರಾಜು ವಿಭಾಗೀಯ ಪೀಠಕ್ಕೆ ಪ್ರತ್ಯೇಕ ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿಗಳು ಗುರುವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



