Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
ಪ್ರಮುಖ ಸುದ್ದಿ

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Times of bayaluseemeBy Times of bayaluseemeJuly 27, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಚಿತ್ರದುರ್ಗ: ಎಲ್ಲಾ ರಂಗಗಳಲ್ಲಿಯೂ ಪೈಪೋಟಿಯಿರುವುದರಿಂದ ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವಂತೆಅಪರಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮುಸ್ಲಿಂ ಸಮುದಾಯದವರಿಗೆ ಕರೆ ನೀಡಿದರು.
ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಪಡೆದಿರುವ ಜಿಲ್ಲೆಯ ಮುಸ್ಲಿಂ ಸಮುದಾಯದವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ದಿ ಸಂಘ ಜಿಲ್ಲಾ ಶಾಖೆಯಿಂದ ಅಹಮದ್ಪ್ಯಾಲೇಸ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಮಾತನಾಡಿದರು.
ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಶಿಕ್ಷಣಕ್ಕೆ ಎಲ್ಲಾ ಜಾತಿ ಧರ್ಮದವರಿಗೂ ಸಮಾನತೆ ಕಲ್ಪಿಸಿದ್ದಾರೆ. ಶಿಕ್ಷಣದಿಂದ ಮಾತ್ರ ಜಾತಿ ತಾರತಮ್ಯವಿಲ್ಲದೆ ಐಕ್ಯತೆಯಿಂದ ಬದುಕಲು ಸಾಧ್ಯ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಭಿವೃದ್ದಿನಿಗಮದಿಂದಸಾಕಷ್ಟು ಸೌಲಭ್ಯಗಳಿವೆ. ಚಿಕ್ಕಂದಿನಲ್ಲಿಯೇ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಿ ಕೆಲಸಕ್ಕೆ ಕಳಿಸಬೇಡಿ. ಮನೆಯಲ್ಲಿ ಓದುವ ವಾತಾವರಣವಿಲ್ಲದಿದ್ದರೆ ವಸತಿ ಶಾಲೆಗಳಿವೆ. ಮಕ್ಕಳನ್ನು ಅಲ್ಲಿಗೆ ಸೇರಿಸಿಶಿಕ್ಷಣವಂತರನ್ನಾಗಿಸಿ ಎಂದು ಹೇಳಿದರು.ಆಧುನಿಕ ತಂತ್ರಜ್ಞಾನದಲ್ಲಿ ಗುಡಿ ಕೈಗಾರಿಕೆಗಳು ನಿಲ್ಲುತ್ತಿವೆ. ವಿದ್ಯೆ ಕಲಿತ ಮನೆಯಲ್ಲಿ ಸಾಮಾಜಿಕ ಸಂಘರ್ಷವಿರುವುದಿಲ್ಲ.ಸಮಸ್ಯೆಗಳಿಂದ ಹೊರ ಬರಬಹುದು. ಶಿಕ್ಷಣದ ಜೊತೆ ಗುರು-ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಮಕ್ಕಳಿಗೆ ಕಲಿಸುವುದುತಂದೆ-ತಾಯಿಗಳ ಕರ್ತವ್ಯ. ವಿದ್ಯೆ ಸಾಧಕನ ಸ್ವತ್ತೆ ವಿನಃ ಎಂದಿಗೂ ಸೋಮಾರಿಯ ಸ್ವತ್ತಾಗುವುದಿಲ್ಲ. ವಿದ್ಯಾವಂತರಿಗೆಲ್ಲಾ ಸರ್ಕಾರಿನೌಕರಿ ಸಿಗುವುದು ಕಷ್ಟ. ಸ್ವ-ಉದ್ಯೋಗ ಕೈಗೊಂಡು ಸ್ವಾವಲಂಭಿಗಳಾಗಿ ಬದುಕಲು ಅನೇಕ ದಾರಿಗಳಿವೆ ಎಂದು ತಿಳಿಸಿದರು.ಮಕ್ಕಳು ಮೊಬೈಲ್‍ಗೆ ದಾಸರಾಗುವ ಬದಲು ಉತ್ತಮ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಂಡರೆ ಜ್ಞಾನ ವೃದ್ದಿಯಾಗುತ್ತದೆ.

ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸುವುದರಿಂದ ಇತರೆ ಮಕ್ಕಳಿಗೆ ಉತ್ತೇಜನ ನೀಡಿದಂತಾಗುತ್ತದೆ. ಬೆಂಗಳೂರಿನಲ್ಲಿರುವ ಹಜ್ಭವನದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಅರಿವು ಯೋಜನೆಯಡಿ ವಿದ್ಯಾರ್ಥಿ ವೇತನ ಸಿಗುತ್ತದೆ. ಸರ್ಕಾರನಿಮ್ಮ ಜೊತೆಗಿದೆ. ಶಿಕ್ಷಣದ ಜೊತೆ ನೈಪುಣ್ಯ ವೃತ್ತಿಯಲ್ಲಿ ತೊಡಗಿಕೊಂಡರೆ ಸುಂದರವಾದ ಬದುಕು ಕಟ್ಟಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬಹುದು ಎಂದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ ಮುಸ್ಲಿಂರು ಮಕ್ಕಳ ಶಿಕ್ಷಣಕ್ಕೆ ಮಾನ್ಯತೆ ಕೊಡುವುದಿಲ್ಲ. ಚಿಕ್ಕಂದಿನಲ್ಲಿಯೇಗ್ಯಾರೆಜ್ ಇಲ್ಲವೇ ಬೇರೆ ಬೇರೆ ಕೆಲಸಗಳಿಗೆ ಕಳಿಸುತ್ತಾರೆಂಬತಪ್ಪು ಕಲ್ಪನೆಯಿತ್ತು. ಈಗ ಕಾಲ ಬದಲಾಗಿದೆ. ಸರ್ಕಾರದ ಅನೇಕಯೋಜನೆಗಳ ಪ್ರಯೋಜನ ಪಡೆದುಕೊಂಡು ಹೆಣ್ಣು ಮಕ್ಕಳಿಗೂ ಶಿಕ್ಷಣ ಕೊಡಿಸಬೇಕೆಂಬ ಛಲ ಪೋಷಕರುಗಳಲ್ಲಿ ಮೂಡಿದೆ.ಕುರಾನ್‍ನಲ್ಲಿ ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಬೇಕೆಂಬಸಂದೇಶವಿದೆ. ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಿದರೆಪೋಷಕರುಗಳಿಗೆ ಖುಷಿಯಾಗುತ್ತದೆ. ಮಕ್ಕಳನ್ನು ಶಾಲೆಗೆ ಕಳಿಸುವುದಷ್ಟೆ ಅಲ್ಲ. ಅವರ ಚಲನವಲನಗಳ ಮೇಲೆ ನಿಗಾ ಇಡುವುದುಹೆತ್ತವರ ಜವಾಬ್ದಾರಿಯಾಗಬೇಕೆಂದು ಸಲಹೆ ನೀಡಿದರು.

ನಿವೃತ್ತ ನೌಕರರನ್ನು ನಿಮ್ಮ ಸಂಘದಲ್ಲಿ ಸೇರಿಸಿಕೊಳ್ಳಿ. ಆಗ ಇನ್ನು ಹೆಚ್ಚಿನ ಚಟುವಟಿಕೆಗಳನ್ನು ನಡೆಸಲು ಸಹಾಯವಾಗಲಿದೆ.ಸರ್ಕಾರಿ ನೌಕರಿಗಾಗಿಯೇ ಶಿಕ್ಷಣ ಪಡೆಯಬೇಡಿ. ಸ್ವಾವಲಂಭಿಗಳಾಗಿ ಬದುಕಲು ಶಿಕ್ಷಣ ಮುಖ್ಯ ಎಂದು ನುಡಿದರು.ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ಮಾತನಾಡುತ್ತ ಪ್ರತಿಯೊಂದು ಮಗುವಿನಲ್ಲಿಯೂ ಒಂದೊಂದುರೀತಿಯ ಪ್ರತಿಭೆಯಿರುತ್ತದೆ. ಗುರುತಿಸುವ ಕೆಲಸವಾಗಬೇಕು. ಸಾಧನೆ ಮಾಡುವವರ ಕಡೆ ಎಲ್ಲರೂ ತಿರುಗಿನೋಡುವುದು ಸಹಜ.ನಿರಂತರ ಶಿಕ್ಷಣದಿಂದ ಜ್ಞಾನ ಬೆಳೆಯುತ್ತದೆ. ಇದರಿಂದ ಸಮಸ್ಯೆಗೆ ಪರಿಹಾರಗಳನ್ನುಕಂಡುಕೊಳ್ಳಬಹುದು. ಎಲ್ಲಾ ಜಾತಿಧರ್ಮದವರು ಅನ್ಯೋನ್ಯತೆಯಿಂದ ಬಾಳಬೇಕಾದರೆ ಶಿಕ್ಷಣ ಬಹಳ ಮುಖ್ಯ. ಎಲ್ಲಾ ರಂಗಗಳಲ್ಲಿಯೂ ಸಾಧನೆ ಮಾಡುವಅವಕಾಶವಿದೆ ಎಂದು ಹೇಳಿದರು.

ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ದಿ ಸಂಘದಅಧ್ಯಕ್ಷ ಇಕ್ಬಾಲ್ ಮಾತನಾಡಿ ಮಕ್ಕಳನ್ನು ಆದಷ್ಟು ಮೊಬೈಲ್‍ನಿಂದ ದೂರವಿರಿಸಿ. ನಮ್ಮ ಸಮುದಾಯದ ಮಕ್ಕಳು ಉನ್ನತ ಶಿಕ್ಷಣಪಡೆದು ದೊಡ್ಡ ದೊಡ್ಡ ಹುದ್ದೆಗಳಿಗೆ ಹೋಗಬೇಕೆಂಬ ಆಸೆಯಿಟ್ಟುಕೊಂಡಿದ್ದೇವೆ. ಕಠಿಣ ಪರಿಶ್ರಮದಿಂದ ಮಾತ್ರ ಸಾಧ್ಯ. ಅರ್ಧದಲ್ಲಿಯೇಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ಹೊಣೆಗಾರಿಕೆ ಪೋಷಕರುಗಳ ಮೇಲಿದೆ. ಪರಿಸರಕ್ಕೆ ಹಾನಿಕಾರಕವಾದವಸ್ತುಗಳನ್ನು ಬಳಸಬೇಡಿ. ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಚವಾಗಿಟ್ಟುಕೊಳ್ಳಿ.ಇದರಿಂದ ಮನಸ್ಸುನಿರ್ಮಲವಾಗಿರುತ್ತದೆಂದರು.ಸಂಘದ ಪ್ರಧಾನ ಕಾರ್ಯದರ್ಶಿ ತಾಜೀರ್‍ಭಾಷ ಪ್ರಾಸ್ತಾವಿಕವಾಗಿ ಮಾತನಾಡಿದರು.ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಕ್ರಷರ್ ಮತ್ತು ಕ್ವಾರಿ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಅಬುಲ್ಮಜೀದ್, ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ದಿ ಸಂಘದಉಪಾಧ್ಯಕ್ಷ ನಯಾಜ್‍ಖಾನ್, ಪ್ರಾಥಮಿಕ ಶಾಲಾಶಿಕ್ಷಕರ ಸಂಘದ ಅಧ್ಯಕ್ಷ ಮಹಾಂತೇಶ್, ಹಿರಿಯೂರು ನಗರಸಭೆಕಮಿಷನರ್ ವಸೀಂ, ಕೆ.ಪಿ.ಟಿ.ಸಿ.ಎಲ್. ಇಂಜಿನಿಯರ್ ಸಾಜಿಯಾಪರ್ವಿನ್, ಡಾ.ಇಫ್ತಿಯಾರ್, ಮಹಮದ್ ಆಲಿ, ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರ ಸಹೋದರಿ ವೀಣ, ಹನೀಸ್ ಸೈಯದ್ ಖುದ್ದೂಸ್ ವೇದಿಕೆಯಲ್ಲಿದ್ದರು.
ಸಂಘಧ ಕಾರ್ಯದರ್ಶಿ, ಕಾರ್ಯಾಧ್ಯಕ್ಷ ಹಾಗೂ ಪದಾಧಿಕಾರಿಗಳು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ರುಮಿನ್‍ಉದ್ದೀನ್, ಆಯಿಷಾ ಹುಸೇನ್ ಪ್ರಾರ್ಥಿಸಿದರು. ಆರ್.ಎಂ.ಮಹಮದ್‍ಖಾನ್ ಸ್ವಾಗತಿಸಿದರು. ಉಮರ್‍ಬಾಷಾ
ವಂದಿಸಿದರು. ಮಹಮದ್ ಖಾಜಾಹುಸೇನ್ ಕೆ ಇದ್ದರು..

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
compulasory education to womans
Follow on Google News Follow on Instagram
Share. Facebook Twitter Telegram WhatsApp
Previous Articleಪತ್ರಿಕೋದ್ಯಮ ಯಾರ ಪರವಾಗಿ ಕನ್ನಡಿ ಹಿಡಿಯುತ್ತಿದೆ ಎಂಬುದನ್ನು ಅರಿಯಬೇಕು – ಕೆ.ವಿ.ಪ್ರಭಾಕರ್
Next Article ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ
Times of bayaluseeme
  • Website

Related Posts

ಪತ್ರಿಕೋದ್ಯಮ ಯಾರ ಪರವಾಗಿ ಕನ್ನಡಿ ಹಿಡಿಯುತ್ತಿದೆ ಎಂಬುದನ್ನು ಅರಿಯಬೇಕು – ಕೆ.ವಿ.ಪ್ರಭಾಕರ್

July 27, 2025

ನಟ ಪ್ರಥಮ್ ಗೆ ಜೀವ ಬೆದರಿಕೆ; ಘಟನೆಯಲ್ಲಿ ರಕ್ಷಕ್ ಬುಲೆಟ್ ಬಂದಿದ್ದೇಕೆ..?

July 27, 2025

ಏರ್ ಇಂಡಿಯಾ ದುರಂತ; ಮೃತಪಟ್ಟ 147 ಕುಟುಂಬಗಳಿಗೆ ಮಧ್ಯಂತರ ಪರಿಹಾರ ಬಿಡುಗಡೆ

July 27, 2025
Add A Comment
Leave A Reply Cancel Reply

Advertisement
Latest Posts

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.