Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಸಾರಿಗೆ ನೌಕರರಿಗೆ ಹೈಕೋರ್ಟ್ ತರಾಟೆ; ಮುಷ್ಕರ ಮುಂದುವರೆದರೆ ಬಂಧನದ ಎಚ್ಚರಿಕೆ

ವಾಣಿವಿಲಾಸ ಸಾಗರ ಜಲಾಶಯದ ಇಂದಿನ ನೀರಿನ ಮಟ್ಟ

ಮುನ್ನಾ ಬಾಯ್ MBBS ಸಿನಿಮಾ ನೋಡಿ ವೈದ್ಯನಾಗಿ ಮಾಡಿದ್ದು 50 ಅಪರೇಷನ್..!

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ದೇಶದ ಅಭ್ಯುದಯದಲ್ಲಿ ಶಾಸನ ಸಭೆಗಳ ಪಾತ್ರ ಮಹತ್ತರ – ಹೊರಟ್ಟಿ
ಪ್ರಮುಖ ಸುದ್ದಿ

ದೇಶದ ಅಭ್ಯುದಯದಲ್ಲಿ ಶಾಸನ ಸಭೆಗಳ ಪಾತ್ರ ಮಹತ್ತರ – ಹೊರಟ್ಟಿ

Times of bayaluseemeBy Times of bayaluseemeAugust 5, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಬೋಸ್ಟನ್ ಜಗತ್ತಿನ ಬಹುದೊಡ್ಡ ಪ್ರಜಾಪ್ರಭುತ್ವ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತದ ಸರ್ವಾಂಗೀಣ ಅಭ್ಯುದಯದಲ್ಲಿ ಶಾಸನ ಸಭೆಗಳ ಹಾಗೂ ಜನಪ್ರತಿನಿಧಿಗಳ ಪಾತ್ರ ಅತ್ಯಂತ ಮಹತ್ತರವಾದುದು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು.ಅಮೇರಿಕಾದ ಬೋಸ್ಟನ್ ನಗರದಲ್ಲಿ ರಾಜ್ಯ ಶಾಸಕರ ರಾಷ್ಟ್ರೀಯ ಸಮಾವೇಶ ಹಾಗೂ ರಾಷ್ಟೀಯ ಶಾಸಕರ ಸಮಾವೇಶ ಭಾರತ ಸಂಸ್ಥೆಗಳ ಆಶ್ರಯದಲ್ಲಿ ನಡೆಯುತ್ತಿರುವ ಶಾಸಕಾಂಗ ಶೃಂಗಸಭೆ 2025ರ ವಿಚಾರ ಗೋಷ್ಠಿಯಲ್ಲಿ ತಮ್ಮ ನಾಲ್ಕು ದಶಕಗಳ ಸಂಸದೀಯ ಅನುಭವಗಳನ್ನು ಬಸವರಾಜ ಹೊರಟ್ಟಿ ಹಂಚಿಕೊಂಡರು.ದೇಶದ ಉನ್ನತಿಯಲ್ಲಿ ಶಾಸನ ಸಭೆಗಳ ಹಾಗೂ ಜನಪ್ರತಿನಿಧಿಗಳ ಕ್ರೀಯಾಶೀಲತೆ ಹಾಗೂ ಪಕ್ಷಬೇಧವಿಲ್ಲದ ಅಭಿವೃದ್ದಿ ಪರ ಚಿಂತನೆಯಿಂದ ಮಾತ್ರ ರಾಷ್ಟ್ರದ ಭವಿಷ್ಯ ಉಜ್ವಲವಾಗಬಲ್ಲದು. ಶಾಸನ ಸಭೆಗಳ ಕಾರ್ಯ ಚಟುವಟಿಕೆಗಳು ಸಮಾಜದ ಮೂಲಭೂತ ಅವಶ್ಯಕತೆಗಳ ಮೇಲೆ ಕೇಂದ್ರಿಕೃತವಾಗಿ ದೇಶದಲ್ಲಿರುವ ಬಡತನ, ಜನರ ಸಂಕಷ್ಟ, ಬವಣೆಗಳ ನಿವಾರಣೆ ನಿಟ್ಟಿನಲ್ಲಿ ಚಿಂತನೆ ನಡೆಸುವ “ಚಿಂತಕರ ಚಾವಡಿ”ಗಳಾಗಿ ಪರಿವರ್ತನೆಯಾದಾಗ ಮಾತ್ರ ಪ್ರಜಾಪ್ರಭುತ್ವದ ನೈಜ ಆಶಯಗಳು ಈಡೇರಿಸಲು ಸಾಧ್ಯವಾಗುತ್ತದೆ ಎಂದರು.

ಸಾಮಾನ್ಯ ಜನರ ಬದುಕು, ಬವಣೆಗಳ ಬಗೆ ತಿಳಿದುಕೊಳ್ಳಲು ಜನಪ್ರತಿನಿಧಿಗಳು ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಹೊಂದುವುದು ಅವಶ್ಯಕವಾಗಿದೆ. ಇದರಿಂದ ನಿಜರೂಪದಲ್ಲಿ ಸಾರ್ವಜನಿಕರ ಬದುಕು ಹಸನಗೊಳಿಸಲು ಸಾಧ್ಯ ಎಂದರು.ಜಾತಿ, ಧರ್ಮ ಲಿಂಗಗಳ ಬೇಧವಿಲ್ಲದೆ ಜನರ ಮತಗಳಿಂದ ಜನಪ್ರತಿನಿಧಿಯಾಗುವ ಅವಕಾಶ ಪ್ರಜಾಪ್ರಭುತ್ವ ಕಲ್ಪಿಸಿಕೊಟ್ಟಿದ್ದು, ಪ್ರತಿಯೊಬ್ಬ ಜನಪ್ರತಿನಿಧಿಯು ವಿಶ್ವಾಸರ್ಹತೆಯಿಂದ ಔದಾರ್ಯವನ್ನು ಮೆರೆದು ದೇಶದ ಅಭ್ಯುದಯಕ್ಕೆ ಕಟಿಬದ್ದರಾಗಿ ಸಂಸದೀಯ ಮೌಲ್ಯಗಳ ರಕ್ಷಣೆಗೆ ಮುಂದಾಗಬೇಕಿದೆ. ಇಂದಿನ ಆಧುನಿಕ ದಿನಮಾನಗಳಲ್ಲಿ ಅಭಿವೃದ್ದಿಯೇ ಪ್ರತಿಯೊಬ್ಬರ ಮೂಲ ಮಂತ್ರವಾಗಬೇಕಿದೆ ಎಂದು ಬಸವರಾಜ ಹೊರಟ್ಟಿ, ನಾಡಿನ ಸುಸ್ಥಿರ ಹಾಗೂ ಸಮಗ್ರ ಬೆಳವಣಿಗೆಯಲ್ಲಿ ಶಾಸನ ಸಭೆಗಳು ಹಾಗೂ ಜನಪ್ರತಿನಿಧಿಗಳ ಪಾತ್ರ ಹಿಂದೆಂದಿಗಿಂತಲೂ ಇಂದು ಹೆಚ್ಚಾಗಿದ್ದು, ಪ್ರತಿಯೊಬ್ಬ ಜನಪ್ರತಿನಿಧಿಯು ಆಧುನಿಕ ಸಂವಹನ ತಂತ್ರಗಾರಿಕೆಗಳನ್ನು ಅಳವಡಿಸಿಕೊಂಡು ಅಭಿವೃದ್ದಿ ಬಗೆಗೆ ಬದ್ಧತೆ ಹೊಂದಿ ದೇಶದ ಏಳಿಗೆಗೆ ಶ್ರಮಿಸಲು ಮುಂದಾಗಬೇಕಿದೆ ಎಂದರು.ಶಾಸನ ಸಭೆಗಳು ಆಧುನಿಕ ತಂತ್ರಜ್ಞಾನಕ್ಕೆ ಪೂರಕವಾಗಿ ತಮ್ಮನ್ನು ಸನ್ನದ್ಧಗೊಳಿಸಿಕೊಂಡು ದೇಶದ ಅಗತ್ಯ ಬೇಡಿಕೆಗಳ ಈಡೇರಿಕೆಗೆ ಪಣ ತೊಡಬೇಕಾದ ಅವಶ್ಯಕತೆ ಇದೆ, ದೇಶದ ಸರ್ವಾಂಗೀಣ ಅಭಿವೃದ್ದಿಗೆ ಪ್ರತಿಯೊಬ್ಬ ಜನಪ್ರತಿನಿಧಿಯು ನಿರ್ಧಿಷ್ಠ ನೀತಿ ಸಂಹಿತೆಗಳನ್ನು ಅಳವಡಿಸಿಕೊಂಡು ಅವುಗಳನ್ನು ಸಮರ್ಪಕವಾಗಿ ಕಾರ್ಯ ರೂಪಗೊಳಿಸುವಲ್ಲಿ ಸಂಕಲ್ಪ ಬದ್ಧರಾಗುವ ಮೂಲಕ ದೇಶದ ಒಳಿತಿಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುವ ಅಗತ್ಯತೆಯನ್ನು ಬಸವರಾಜ ಹೊರಟ್ಟಿ ಪ್ರತಿಪಾದಿಸಿದರು.

ಅಮೇರಿಕಾದ ಬೋಸ್ಟನ್‌ನಲ್ಲಿ ಶಾಸಕಾಂಗ ಶೃಂಗಸಭೆ ನಡೆಸುವಲ್ಲಿ ಬಹುವಾಗಿ ಶ್ರಮಿಸಿರುವ ಡಾ. ರಾಹುಲ್ ಕರಾಡ್ ಹಾಗೂ ತಂಡವನ್ನು ಇದೇ ವೇಳೆ ಸಭಾಪತಿ ಬಸವರಾಜ ಹೊರಟ್ಟಿ ಅಭಿನಂದಿಸಿದರು.ಮೂರು ದಿನಗಳ ಕಾಲ ನಡೆಯುತ್ತಿರುವ ಶೃಂಗ ಸಭೆಯಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ, ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ, ಶಾಸನ ಸಭೆಗಳಿಗೆ ಅರ್ಥಿಕ ಸ್ವಾಯತ್ತತೆ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಶೃಂಗ ಸಭೆಯಲ್ಲಿ ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದಗಳು ಜರುಗಲಿವೆ.ಭಾರತ ದೇಶದ ಸಂಸದರು, ವಿವಿಧ ರಾಜ್ಯಗಳ ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಸಚಿವರುಗಳು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ದಿಗಳು ಸೇರಿದಂತೆ ಸುಮಾರು 15,000 ಕ್ಕೂ ಹೆಚ್ಚು ಗಣ್ಯರು ಪಾಲ್ಗೊಂಡಿದ್ದಾರೆ.ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದ ತಂಡ ಶೃಂಗ ಸಭೆಯ ಅಂಗವಾಗಿ ಅಮೇರಿಕಾದ ಮ್ಯಾಸಚೂಸೆಟ್ಸ್ ಸ್ಟೇಟ್ ಹೌಸ್ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಹಾರ್ವರ್ಡ್ ವಿಶ್ವವಿದ್ಯಾಲಯ ಭೇಟಿ ನೀಡಿ ಅಮೇರಿಕಾದಲ್ಲಿರುವ ಭಾರತೀಯ ಮೂಲದ ಶೈಕ್ಷಣಿಕ ತಜ್ಞರೊಂದಿಗೆ ಸಂವಾದ ನಡೆಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
country horatti legislative
Follow on Google News Follow on Instagram
Share. Facebook Twitter Telegram WhatsApp
Previous Articleಸಚಿವ ಶಿವಾನಂದ ಪಾಟೀಲ್‌ಗೆ ಸುಪ್ರೀಂ ತರಾಟೆ; 1 ಲಕ್ಷ ದಂಡ..!
Next Article ನಾನು ಮಿನಿಸ್ಟರಲ್ಲ ಸ್ವಾಮಿ, ಆರ್ಡಿನರಿ MLA ಶಾಸಕ ಎಂ.ಚಂದ್ರಪ್ಪ ಹೀಗೆ ಅಂದಿದ್ದೇಕೆ..?
Times of bayaluseeme
  • Website

Related Posts

ಸಾರಿಗೆ ನೌಕರರಿಗೆ ಹೈಕೋರ್ಟ್ ತರಾಟೆ; ಮುಷ್ಕರ ಮುಂದುವರೆದರೆ ಬಂಧನದ ಎಚ್ಚರಿಕೆ

August 6, 2025

ಮುನ್ನಾ ಬಾಯ್ MBBS ಸಿನಿಮಾ ನೋಡಿ ವೈದ್ಯನಾಗಿ ಮಾಡಿದ್ದು 50 ಅಪರೇಷನ್..!

August 6, 2025

ಹೆಬ್ಬಾಳದ ಹೊಸ ಮೇಲ್ಸೇತುವೆ ಮೇಲೆ ಡಿಕೆ ಶಿವಕುಮಾರ್ ಜಾಲಿ ರೈಡ್

August 6, 2025
Add A Comment
Leave A Reply Cancel Reply

Advertisement
Latest Posts

ಸಾರಿಗೆ ನೌಕರರಿಗೆ ಹೈಕೋರ್ಟ್ ತರಾಟೆ; ಮುಷ್ಕರ ಮುಂದುವರೆದರೆ ಬಂಧನದ ಎಚ್ಚರಿಕೆ

ವಾಣಿವಿಲಾಸ ಸಾಗರ ಜಲಾಶಯದ ಇಂದಿನ ನೀರಿನ ಮಟ್ಟ

ಮುನ್ನಾ ಬಾಯ್ MBBS ಸಿನಿಮಾ ನೋಡಿ ವೈದ್ಯನಾಗಿ ಮಾಡಿದ್ದು 50 ಅಪರೇಷನ್..!

ಹೆಬ್ಬಾಳದ ಹೊಸ ಮೇಲ್ಸೇತುವೆ ಮೇಲೆ ಡಿಕೆ ಶಿವಕುಮಾರ್ ಜಾಲಿ ರೈಡ್

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.