ಎ.ಎಚ್.ಭಾನುಮೂರ್ತಿ ನಿಧನ
ಹೊಳಲ್ಕೆರೆ: ತಾಲ್ಲೂಕಿನ ಆಡುನೂರು ಗ್ರಾಮದ ನಿವಾಸಿ, ವಾಣಿಜ್ಯ ತೆರಿಗೆ ಇಲಾಖೆಯ ಅಸಿಸ್ಟೆಂಟ್ ಕಮಿಷನರ್ ಹಾಗೂ ಮಾದಿಗ ಸಮುದಾಯದ ಒಳ ಮೀಸಲಾತಿ ಹೋರಾಟಗಾರರಾದ ಎ.ಎಚ್. ಭಾನುಮೂರ್ತಿ ಬುಧವಾರ ನಿಧನರಾಗಿದ್ದಾರೆ.
ಅನಾರೋಗ್ಯ ನಿಮಿತ್ತ ಕಳೆದ ಹತ್ತು ತಿಂಗಳಿಂದ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಇವರಿಗೆ ಪತ್ನಿ , ಪುತ್ರ, ಇಬ್ಬರು ಪುತ್ರಿಯರಿದ್ದಾರೆ. ಮೃತರ ಅಂತಿಮ ಸಂಸ್ಕಾರವನ್ನು ಆಡುನೂರು ಗ್ರಾಮದಲ್ಲಿ ದಿನಾಂಕ ಇಂದು ಮಧ್ಯಾಹ್ನ 3:30 ಗಂಟೆಗೆ ನೆರವೇರಿಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿರುವ ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ,ಕುಟುಂಬಸ್ಥರಿಗೆ ಮೃತರ ಅಗಲಿಕೆ ದುಃಖ ಭರಿಸುವ ಶಕ್ತಿಯನ್ನು ಬಸವಾದಿ ಶರಣರು ಕಾರುಣಿಸಲೆಂದು ಮಾಜಿ ಸಚಿವ ಎಚ್.ಆಂಜನೇಯ ಪ್ರಾರ್ಥಿಸಿದ್ದಾರೆ.
