ಮಂಗಳೂರು: ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 6 ದಿನಗಳಿಂದ ಅನಾಮಿಕ ತೋರಿಸಿದ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.7ನೇ ದಿನವಾದ ಮಂಗಳವಾರವೂ ಉತ್ಕನನ ಕಾರ್ಯ ಪುನರಾರಂಭಿಸಿದ ವಿಶೇಷ ತನಿಖಾ ತಂಡಕ್ಕೆ ಯಾವುದೇ ಮಾನವ ಅಸ್ಥಿಪಂಜರದ ಅವಶೇಷಗಳು ಕಂಡುಬಂದಿಲ್ಲ ಎನ್ನಲಾಗಿದೆ.ಭಾರೀ ಮಳೆಯ ನಡುವೆ ಸಾಕ್ಷಿ-ದೂರುದಾರ ತೋರಿಸಿರುವ 11 ಮತ್ತು 12ನೇ ಸ್ಥಳಗಳಲ್ಲಿ SITಯ ತನಿಖಾಧಿಕಾರಿ ಮತ್ತು ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅವರ ಮೇಲ್ವಿಚಾರಣೆಯಲ್ಲಿ ಇಂದು ಸಹ ಸಮಾಧಿ ಅಗೆಯುವ ಕಾರ್ಯ ನಡೆಸಲಾಯಿತು. ಆದರೆ ಯಾವುದೇ ಅವಶೇಷಗಳ ಕುರುಹು ಇಲ್ಲದ ಕಾರಣ SIT ಯ ಪ್ರಯತ್ನಗಳು ಯಾವುದೇ ಫಲಿತಾಂಶ ನೀಡಿಲ್ಲ. ಇಲ್ಲಿಯವರೆಗೆ SIT ಅಗೆದ 12 ಸ್ಥಳಗಳಲ್ಲಿ, ಕೇವಲ ಒಂದು ಸ್ಥಳದಲ್ಲಿ ಮಾತ್ರ ಮಾನವ ಅಸ್ಥಿಪಂಜರ ಪತ್ತೆಯಾಗಿದೆ ಎನ್ನಲಾಗಿದೆ.
ಏತನ್ಮಧ್ಯೆ, ಧರ್ಮಸ್ಥಳದಲ್ಲಿ ದಶಕದ ಹಿಂದೆ ನಾಪತ್ತೆಯಾಗಿದ್ದರು ಎನ್ನಲಾದ ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಅವರ ತಾಯಿ ಸುಜಾತಾ ಭಟ್ ಅವರ ವಕೀಲರು, ‘ಸೋಮವಾರ ದೂರುದಾರರು ತೋರಿಸಿದ ಸ್ಥಳಗಳನ್ನು ಅಗೆದ ನಂತರ ಮೂರು ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ’ ಎಂದು ಹೇಳಿಕೊಂಡಿದ್ದಾರೆ.ಸೋಮವಾರ ಪಾಯಿಂಟ್ 11ರಿಂದ 100 ಮೀಟರ್ ದೂರದಲ್ಲಿ ಮೂರು ಮಾನವ ಅಸ್ಥಿಪಂಜರ ಅವಶೇಷಗಳು ಪತ್ತೆಯಾಗಿವೆ. ಅವುಗಳಲ್ಲಿ ಒಂದು ಮಹಿಳೆಯದ್ದಾಗಿತ್ತು. ಅದೇ ಸ್ಥಳದಲ್ಲಿ ಮಹಿಳೆಯ ಸೀರೆ ಕೂಡ ಪತ್ತೆಯಾಗಿದೆ ಸುಜಾತ ಭಟ್ ಪರ ವಕೀಲ ಮಂಜುನಾಥ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿನ್ನೆಯ ಕಾರ್ಯಾಚರಣೆ ಯಶಸ್ವಿಯಾಗಿದೆ. ಏಕೆಂದರೆ ಎಸ್ಐಟಿ ಅನಾಮಿಕ ದೂರುದಾರನಿಗೆ ಹೊಸ ಜಾಗ ತೋರಿಸಲು ಅವಕಾಶ ನೀಡಿದೆ. ಇದರಿಂದ ನಿನ್ನೆಯ ಅಸ್ಥಿಪಂಜರ ಅಗೆಯುವ ಕಾರ್ಯ ಯಶಸ್ವಿಯಾಗಿತ್ತು. ಎಸ್ಐಟಿ ಸಹಿತ ಶೋಧ ನಡೆಸುತ್ತಿರುವ ತಂಡದ ಕಾರ್ಯಾಚರಣೆ ಶ್ಲಾಘನೀಯ ಅಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.”ದೂರುದಾರರು ಮೊದಲ ದಿನ ಮಾಡಿದ ಆರಂಭಿಕ ಅಳತೆಗೆ ಬದ್ಧರಾಗಿ, ಆ ಸ್ಥಳದಿಂದ ಮಾತ್ರ ಅವಶೇಷಗಳನ್ನು ಹೊರತೆಗೆಯಬೇಕೆಂದು ಒತ್ತಾಯಿಸುವುದು ಅವೈಜ್ಞಾನಿಕ ಮಾತ್ರವಲ್ಲ, ಅರ್ಥಹೀನವೂ ಆಗಿರುತ್ತದೆ. ಮೊದಲ ದಿನ ತೋರಿಸಿದ ಸ್ಥಳಗಳನ್ನು ಗುರುತಿಸುವ ಸ್ವಾತಂತ್ರ್ಯವಿರುವ ವ್ಯಕ್ತಿಗೆ, ಆರಂಭದಲ್ಲಿ ಗುರುತಿಸಿದ್ದು ನಂತರ ತಪ್ಪಾಗಿದೆ ಎಂದು ಕಂಡುಬಂದರೆ ತನ್ನನ್ನು ತಾನು ಸರಿಪಡಿಸಿಕೊಳ್ಳುವ ಸ್ವಾಭಾವಿಕ ಸ್ವಾತಂತ್ರ್ಯವೂ ಇರುತ್ತದೆ” ಎಂದು ಅವರು ಪ್ರತಿಪಾದಿಸಿದ್ದಾರೆ.
ಆಗಸ್ಟ್ 1 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾನವ ಅವಶೇಷಗಳ ಪತ್ತೆ ಪ್ರಕರಣ ಮತ್ತು ಆಗಸ್ಟ್ 4 ರಂದು ಜಯಂತ್ ಎಂಬ ವ್ಯಕ್ತಿ ದಾಖಲಿಸಿದ್ದ ದೂರನ್ನು ಎಸ್ಐಟಿಗೆ ಹಸ್ತಾಂತರಿಸಲಾಗಿದೆ.ಪೊಲೀಸ್ ಮಹಾ ನಿರ್ದೇಶಕ ಎಂಎ ಸಲೀಂ ಅವರು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಯುಡಿಆರ್ ಪ್ರಕರಣವನ್ನು ಹಸ್ತಾಂತರಿಸಲು ಆದೇಶಿಸಿದ್ದಾರೆ ಎಂದು ದಕ್ಷಿಣ ಕನ್ನಡ ಎಸ್ಪಿ ಡಾ. ಅರುಣ್ ಕೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



