Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»Blog»ಡಾ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗೆ ‘‘ಸಾಮರಸ್ಯ’’ ಪ್ರಶಸ್ತಿ
Blog

ಡಾ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗೆ ‘‘ಸಾಮರಸ್ಯ’’ ಪ್ರಶಸ್ತಿ

Times of bayaluseemeBy Times of bayaluseemeMay 20, 2025No Comments1 Min Read
Share WhatsApp Facebook Twitter Telegram Copy Link
Follow Us
Google News Flipboard
ಡಾ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ
Share
Facebook Twitter LinkedIn Pinterest Email Copy Link
ಚಿತ್ರದುರ್ಗ: ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಡಾ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಈ ಬಾರಿ ಉಡುಪಿಯ ಅಮೋಘ ಸಾಂಸ್ಕತಿಕ- ಸಾಮಾಜಿಕ-ಸಾಹಿತ್ಯಿಕ ಸಂಸ್ಥೆ ಕೊಡ ಮಾಡುವ ಪ್ರತಿಷ್ಟಿತ ‘‘ಸಾಮರಸ್ಯ’’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಉಡುಪಿಯ ಎಂ.ಜಿ.ಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ 24ರ ಶನಿವಾರ ಸಂಜೆ 4 ಗಂಟೆಗೆ ನೆರವೇರಲಿದೆ.
ಚಿತ್ರದುರ್ಗದ ಶ್ರೀಶಿವಶರಣ ಮಾದಾರ ಚನ್ನಯ್ಯ ಗುರುಪೀಠವು ಹೆಸರಿನಿಂದ ಜಾತಿ ಸೂಚಕವಾಗಿದ್ದರೂ ಪೀಠಧ್ಯಕ್ಷರಾದ ಸ್ವಾಮೀಜಿಯವರು ಸಮಾಜದ ಎಲ್ಲ ಜಾತಿ ವರ್ಗಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಸಮಾಜದಲ್ಲಿ ನೆಲೆಯೂರಿರುವ ಮೇಲು-ಕೀಳು ಭಾವನೆಗಳು ಮೂಢನಂಬಿಕೆ ಕಂದಾಚಾರ ಜಾತೀಯತೆ ನಿರ್ಮೂಲನೆಗೆ ಸದಾ ಶ್ರಮಿಸುತ್ತಿದ್ದಾರೆ.
ಮಾನವ ಸಂಘ ಜೀವಿ ಸಮಾಜದಲ್ಲಿ ಸಹಬಾಳ್ವೆ ನಡೆಸುವಾಗ ಎಲ್ಲ ಜಾತಿ ವರ್ಗಗಳ ಜನರು ಪರಸ್ಪರ ಹೊಂದಿಕೊಂಡು ಬಾಳಿದಾಗ ಮಾತ್ರ ಮಾನವನ ಅಭ್ಯುದಯ ಸಾಧ್ಯ ಎಂದು ಬಲವಾಗಿ ಪ್ರತಿಪಾದಿಸಿಕೊಂಡು ಬರುತ್ತಿದ್ದಾರೆ. ಶ್ರೀಗಳ ಈ ಸಾಮಾಜಿಕ ಸಾಮರಸ್ಯದ ನಿರಂತರ ಬದ್ಧತೆಯನ್ನು ಗುರುತಿಸಿ ಪ್ರಶಸ್ತಿಗೆ ಪರಿಗಣಿಸಲಾಗಿದೆ ಎಂದು ಅಮೋಘ ಸಂಸ್ಥೆ  ತಿಳಿಸಿದೆ.
ಸಮಾರಂಭದಲ್ಲಿ ಖ್ಯಾತ ಸಂಶೋಧಕರಾದ ಡಾ.ಪಾದೇಕಲ್ಲು ವಿಷ್ಣು ಭಟ್, ಮಣಿಪಾಲ ಮಾಹೆ ಉಪ ಕುಲಾಪತಿಗಳಾದ ಡಾ.ಎಚ್.ಎಸ್. ಬಲ್ಲಾಳ್, ಸಾಮಾಜಿಕ ಕಾರ್ಯಕರ್ತ ವಾದಿರಾಜ್, ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಎಂಜಿಎಂ ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಲಕ್ಷ್ಮಿ ನಾರಾಯಣ ಕಾರಂತ, ಲೇಖಕಿ ಪಾರ್ವತಿ ಬಿ.ಐತಾಳ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
‘‘ಸಾಮರಸ್ಯ’’ ಪ್ರಶಸ್ತಿ ಡಾ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ
Follow on Google News Follow on Instagram
Share. Facebook Twitter Telegram WhatsApp
Previous Articleಮಳೆ ವರದಿ: ಚಿತ್ರದುರ್ಗ ಜಿಲ್ಲೆಯಲ್ಲಿ 3.4 ಮಿ.ಮೀ ಮಳೆ
Next Article ಚಿತ್ರದುರ್ಗ: ಉತ್ತಮ ಉದ್ಯೋಗದ ಭವಿಷ್ಯಕ್ಕಾಗಿ ಜಿಟಿಟಿಸಿ ಕೋರ್ಸ್
Times of bayaluseeme
  • Website

Related Posts

RCB ತಂಡದ ಆಟಗಾರನ ರೇಪ್ ಕೇಸ್; ಈಗ ಪೋಕ್ಸೋ ಅಡಿ FIR..?

July 26, 2025

ದಿ ರಾಮೇಶ್ವರಂ ಕೆಫೆಯ ಪೊಂಗಲ್ ನಲ್ಲಿ ಸಿಕ್ಕಿದ್ದೇನು ಗೊತ್ತೆ..?

July 25, 2025

ಈ ಬಾರಿ ಕೋಟೆ ನಾಡಿನಲ್ಲಿ 18 ದಿನ ನಡೆಯಲಿರುವ ಹಿಂದೂ ಮಹಾಗಣಪತಿ ಉತ್ಸವ

July 25, 2025
Add A Comment
Leave A Reply Cancel Reply

Advertisement
Latest Posts

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.